Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ

ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ

ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಾ.ಅಂಬೇಡ್ಕರ್ ಬರೆದ ಸಂವಿಧಾನದಿಂದ ಭಾರತ ಸಧೃಡ
(ರಾಜ್ಯ ) ಜಿಲ್ಲೆ

ಡಾ.ಅಂಬೇಡ್ಕರ್ ಬರೆದ ಸಂವಿಧಾನದಿಂದ ಭಾರತ ಸಧೃಡ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

೭೯ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಶಾಸಕ ಅಶೋಕ ಮನಗೂಳಿ ಅಭಿಮತ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಸ್ವತಂತ್ರ ಪೂರ್ವದಲ್ಲಿ ೨೦೦ವರ್ಷಗಳ ಕಾಲ ಆಳಿದ ಬ್ರಿಟಿಷರ ವಿರುದ್ಧ ಶಾಂತಿ ಮತ್ತು ಕ್ರಾಂತಿಯಿಂದ ದೇಶಕ್ಕಾಗಿ ಹೋರಾಡಿದ ಹೋರಾಟಗಾರರನ್ನು, ವೀರಯೋಧರನ್ನು ಇಂದು ನಾವೆಲ್ಲರೂ ಸ್ಮರಿಸಿಕೊಳ್ಳಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಂಡ ೭೯ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಭಾರತವು ಇಂದು ಸಧೃಡವಾಗಿ, ಆರ್ಥಿಕವಾಗಿ ಸಬಲವಾಗಿದೆ ಎಂದರೆ ಅದಕ್ಕೆ ಕಾರಣ ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನ. ದೇಶಾಭಿಮಾನ, ರಾಷ್ಟ್ರಾಭಿಮಾನ ನಮ್ಮ ರಕ್ತದ ಕಣ ಕಣದಲ್ಲೂ ಅಳವಡಿಸಿಕೊಳ್ಳುವ ಮೂಲಕ ರಾಷ್ಟ್ರ ಪ್ರೇಮಿಯಾಗಿ ಮೆರೆಯಬೇಕು ಎಂದರು.
ಈ ವೇಳೆ ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ಮಾತನಾಡಿ, ಸಿಂದಗಿ ನೆಲದಲ್ಲಿ ಆದರ್ಶ ವ್ಯಕ್ತಿಗಳಾಗಿ, ಮಹನೀಯರು ಹುಟ್ಟಿ ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡು ಸಿಂದಗಿಯ ಹೆಸರನ್ನು ಬೆಳೆಸಿದ ಮಹನೀಯರನ್ನು ಅಜರಾಮರವಾಗಿಸುವ ನಿಟ್ಟಿನಲ್ಲಿ ಪುರಸಭೆ ವತಿಯಿಂದ ಪಟ್ಟಣದ ಪ್ರಮುಖ ರಸ್ತೆಗಳಿಗೆ ಸಾಧಕರ ಹೆಸರನ್ನಿಡಲಾಗುವುದು. ಸಿಂದಗಿ ಕೆರೆಗೆ ನೀರು ಹರಿಸಿ ಆಧುನಿಕ ಭಗೀರಥರಾದ ಮಾಜಿ ಸಚಿವ ದಿ.ಎಂ.ಸಿ.ಮನಗೂಳಿ ಅವರ ಹೆಸರನ್ನು ಸಿಂದಗಿ ಕೆರೆಗೆ ಇಡಲಾಗಿದೆ ಎಂದರು.
ಈ ವೇಳೆ ಸರಕಾರಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಓದಿ ಅತೀ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ಇದೇ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿ ಕರೆಪ್ಪ ಬೆಳ್ಳಿ ದ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಪಟ್ಟಣದ ಪ್ರಮುಖ ರಸ್ತೆಗಳಿಗೆ ಸಾಧಕರ ಹೆಸರನ್ನಿಡಲು ನಾಮಕರಣದ ಫಲಕ ಹಾಗೂ ಮೂರು ಜನ ವಿಶೇಷ ಚೇತನರಿಗೆ ತ್ರಿಚಕ್ರ ವಾಹನವನ್ನು ಶಾಸಕ ಅಶೋಕ ಮನಗೂಳಿ ಹಾಗೂ ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ವಿತರಣೆ ಮಾಡಿದರು.
ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ, ಗೃಹರಕ್ಷಕ ದಳ ಸೇರಿದಂತೆ ವಿವಿಧ ಶಾಲಾ ಮಕ್ಕಳಿಂದ ನಡೆದ ಕವಾಯತ್‌ನ್ನು ತೆರೆದ ವಾಹನದಲ್ಲಿ ಶಾಸಕರು ವೀಕ್ಷಿಸಿದರು.
ಈ ವೇಳೆ ತಾಪಂ ಇಓ ರಾಮು ಅಗ್ನಿ, ಸಿಪಿಐ ನಾನಾಗೌಡ ಪೊಲೀಸ್‌ಪಾಟೀಲ, ಪುರಸಭೆ ಮುಖ್ಯಾಧಿಕಾರಿ ಎಸ್.ರಾಜಶೇಖರ, ಕ್ಷೇತ್ರ ಶಿಕ್ಷಣಾಧಿಕಾರಿ ಮಹಾಂತೇಶ ಯಡ್ರಾಮಿ, ನೌಕರರ ಸಂಘದ ತಾಲೂಕಾಧ್ಯಕ್ಷ ಅಶೋಕ ತೆಲ್ಲೂರ, ಯೋಜನಾ ಪ್ರಾಧಿಕಾರ ಅದ್ಯಕ್ಷ ಬಸವರಾಜ ಕಾಂಬಳೆ ವೇದಿಕೆಯ ಮೇಲಿದ್ದರು.
ದೈ.ನಿರ್ದೇಶಕ ಡಾ.ರವಿ ಗೋಲಾ, ಶಿಕ್ಷಕ ಎಂ.ಆರ್.ಡೋಣಿ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ

ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ

ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ

ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವೂ ಮುಖ್ಯ :ಡೋಣುರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ
    In (ರಾಜ್ಯ ) ಜಿಲ್ಲೆ
  • ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ
    In (ರಾಜ್ಯ ) ಜಿಲ್ಲೆ
  • ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವೂ ಮುಖ್ಯ :ಡೋಣುರ
    In (ರಾಜ್ಯ ) ಜಿಲ್ಲೆ
  • ಸಾವಿಲ್ಲದ, ಕೊನೆಯಿಲ್ಲದ ಭಾಷೆ ಕನ್ನಡ :ಡಾ.ನಾಗರಾಜ
    In (ರಾಜ್ಯ ) ಜಿಲ್ಲೆ
  • ಪರೀಕ್ಷೆ ವೆಬ್ ಕಾಸ್ಟಿಂಗ್ ಕೇಂದ್ರ ಕ್ಕೆ ಜಿಪಂ ಸಿಇಒ ರಿಷಿ ಆನಂದ ಭೇಟಿ
    In (ರಾಜ್ಯ ) ಜಿಲ್ಲೆ
  • ಉಚಿತ ತರಬೇತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೧೦೭ ಪ್ರಕರಣಗಳು ನ್ಯಾಯಾಲಯದಲ್ಲಿ ಇತ್ಯರ್ಥ
    In (ರಾಜ್ಯ ) ಜಿಲ್ಲೆ
  • ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆ: ನಿಷೇಧಾಜ್ಞೆ ಜಾರಿ
    In (ರಾಜ್ಯ ) ಜಿಲ್ಲೆ
  • ಎಸ್‌ಎಸ್‌ಎಲ್‌ಸಿಪರೀಕ್ಷಾ ಕೇಂದ್ರಗಳಿಗೆ ಡಿಸಿ ಡಾ.ಆನಂದ ಕೆ. ಭೇಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.