Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ

ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭೌತಿಕ ಅಂಧತ್ವವನ್ನು ಮೀರಿ ಅಂಧರಿಗೆ ಬೆಳಕಾದ ಪುಟ್ಟರಾಜರು
(ರಾಜ್ಯ ) ಜಿಲ್ಲೆ

ಭೌತಿಕ ಅಂಧತ್ವವನ್ನು ಮೀರಿ ಅಂಧರಿಗೆ ಬೆಳಕಾದ ಪುಟ್ಟರಾಜರು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಭಕ್ತಿ ಸಾಹಿತ್ಯೋತ್ಸವ | ದಯಾನಂದ ನೂಲಿ ಗೆ ಪಂ.ಪುಟ್ಟರಾಜ ಸಾಹಿತ್ಯ ಪುರಸ್ಕಾರ ಪ್ರಶಸ್ತಿ ಪ್ರದಾನ

ಬೆಳಗಾವಿ: ಪಂ.ಪುಟ್ಟರಾಜರು ಕನ್ನಡ ನಾಡು ಕಂಡ ಅಪರೂಪದ ಮಾಣಿಕ್ಯವಾಗಿದ್ದರು. ಕಣ್ಣಿದ್ದವರಿಗಿಂತ ಅಸಾಧ್ಯವಾದ ಧಿವ್ಯದೃಷ್ಠಿ ಹೊಂದಿದ್ದರು. ಭೌತಿಕ ಅಂಧತ್ವವನ್ನ ಮೀರಿ ಸಾವಿರಾರು ಅಂಧರ ಬೆಳಕಾಗಿ, ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಿದರು. ಸಾಹಿತ್ಯ, ಸಂಗೀತಕ್ಕೂ ಅಪಾರ ಸೇವೆ ಸಲ್ಲಿಸಿದ ಅವರು ಕನ್ನಡ, ಹಿಂದಿ, ಸಂಸ್ಕೃತ ಸೇರಿ ೮೫ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿರುವುದು ಸಾಮಾನ್ಯ ಸಂಗತಿಯಲ್ಲ. ಅಂತಹವರ ಹೆಸರಿನಲ್ಲಿ ೨೩ ವರ್ಷಗಳಿಂದ ಸಾಹಿತ್ಯ ಪುರಸ್ಕಾರ ರಾಜ್ಯ ಪ್ರಶಸ್ತಿ ನೀಡುತ್ತಾ ಬಂದಿರುವ ಸೇವಾ ಸಮಿತಿಯ ಕಾರ್ಯ ಶ್ಲಾಘನೀಯವಾಗಿದೆ ಎಂದು ಕಾರಂಜಿ ಮoದಂ ಗುರುಸಿದ್ಧ ಸ್ವಾಮೀಜಿ ಹೇಳಿದರು.
ಗದುಗಿನ ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯು ಬೆಳಗಾವಿಯ ಸರಸ್ವತಿ ವಾಚನಾಲಯದಲ್ಲಿ ಆಯೋಜಿಸಿದ್ದ ‘ಪದ್ಮಭೂಷಣ’ ಡಾ. ಪಂ. ಪುಟ್ಟರಾಜ ಶಿವಯೋಗಿ ಭಕ್ತಿ ಸಾಹಿತ್ಯೋತ್ಸವ-೨೩ ಉಧ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯವನ್ನು ವಹಿಸಿ ಅವರು ಆಶೀರ್ವವಚನ ನೀಡಿದರು.
ಭಕ್ತಿ ಸಾಹಿತ್ಯೋತ್ಸವದ ಪ್ರಮುಖ ಭಾಗವಾದ, ಡಾ. ಪಂ. ಪುಟ್ಟರಾಜ ಸಾಹಿತ್ಯ ಪುರಸ್ಕಾರ ರಾಜ್ಯ ಪ್ರಶಸ್ತಿ ಪುರಸ್ಕೃತ ಮರುಳಶಂಕರದೇವರು ಅನುಭಾವ ಯಾತ್ರೆ ಕೃತಿ ಕರ್ತರಾದ, ಚಿಕ್ಕೋಡಿಯ ಖ್ಯಾತ ವೈದ್ಯ ಡಾ. ದಯಾನಂದ ಈ. ನೂಲಿ ಇವರಿಗೆ ರಾಜ್ಯ ಪ್ರಶಸ್ತಿ ಪ್ರದಾನಿಸಿ ಗೌರವಿಸಲಾಯಿತು.
ಪ್ರಶಸ್ತಿ ಪುರಸ್ಕೃತ ಕೃತಿ ಕುರಿತು, ಯರಗಟ್ಟಿಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಹ ಪ್ರಾಧ್ಯಾಪಕ, ಸಾಹಿತಿ ಡಾ. ರಾಜಶೇಖರ ಬಿರಾದಾರ ಕೃತಿ ಅಂತರಂಗವನ್ನು ತೆರೆದಿಟ್ಟರು.
ಪುಟ್ಟರಾಜ ಸಾಹಿತ್ಯ ಪುರಸ್ಕಾರ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ. ದಯಾನಂದ ನೂಲಿಯವರು, ಶರಣ ಚಿಂತನೆಗಳು ಸಾರ್ವಕಾಲಿಕ ಮತ್ತು ಸಾರ್ವತ್ರಿಕ ಮಹತ್ವ ಹೊಂದಿದ್ದು, ಅಧನಿಕ ಧಾವಂತದ ಬದುಕಿಗೆ ಏಕಮೇವ ಪರಿಹಾರಗಳಾಗಿವೆ ಎಂದರು.
ಮುಖ್ಯ ಅತಿಥಿಯಾಗಿ ಗೋಕಾಕದ ಶರಣ ಮಹಾಂತೇಶ ಗಂಗಪ್ಪಣ್ಣ ತಾಂವಶಿಯವರು ಮಾತನಾಡಿದರು.
ಶಿವಪಂಚಾಕ್ಷರಿ ಸ್ವಾಮಿಗಳು ಜಗದ್ಗುರು ದುರದುಂಡೇಶ್ವರ ಶಾಖಾಮಠ ವೇದಿಕೆಯಲ್ಲಿ ಇದ್ದರು. ದಾವಣಗೆರೆ ಶಿವಬಸಯ್ಯ ಚರಂತಿಮಠ ಪೂಜ್ಯರ ಕುರಿತು ಉಪನ್ಯಾಸ ನೀಡಿದರು.
ಡಾ. ಸುಮಾ ಹಡಪದ ಹಳಿಯಾಳ, ಪಂ. ರಾಜಪ್ರಭು ಧೋತ್ರೆ ಬೆಳಗಾವಿ, ವಿದ್ಯಾ ಮಗದುಮ ಗೋಕಾಕ ಇವರುಗಳ ವಚನ ಭಕ್ತಿಗೀತ ಸಂಗೀತ ನಡೆಯಿತು. ವಾಮನ್ ವಾಗೂಕರ್ ಶಿವಾಜಿ ಜಾಧವ ದಿನೇಶ ಜುಗುಳಿ ಸಾಥ್ ನೀಡಿದರು. ಉಮಾ ಸಂಗೀತ ಪ್ರತಿಷ್ಠಾನ ಕಲಾವಿದರು ಪ್ರಾರ್ಥಿಸಿದರು.
ಡಾ. ಪಂ.ಪುಟ್ಟರಾಜ ಸೇವಾ ಸಮಿತಿ ಸಂಸ್ಥಾಪಕ ರಾಜ್ಯಾಧ್ಯಕ್ಷ ವೇ.ಚನ್ನವೀರಸ್ವಾಮಿ ಹಿರೇಮಠ (ಕಡಣಿ) ಪ್ರಾಸ್ತಾವಿಕವಾಗಿ ಮಾತನಾಡಿ, ೬ನೆಯ ಭಕ್ತಿ ಸಾಹಿತ್ಯ ಸಮ್ಮೇಳನವನ್ನು ಮುಂದಿನ ವರ್ಷ ಅದ್ದೂರಿಯಾಗಿ ಹಮ್ಮಿಕೊಳ್ಳುವುದಾಗಿ ಹೇಳಿದರು.
ಗಿರಿಜಾ ಮುಳಗುಂದ ಸ್ವಾಗತಿಸಿದರು. ಸಮಿತಿಯ ರಾಜ್ಯ ಕಾರ್ಯದರ್ಶಿ ಪ್ರೊ. ಮಂಜುಶ್ರೀ ಹಾವಣ್ಣವರ ವಂದಿಸಿದರು. ಸೋಮಶೇಖರ ಮಗದುಮ್ ಗೋಕಾಕ ನಿರೂಪಿಸಿದರು.

BIJAPUR NEWS public news udaya rashmi udayarashminews.com
Share. Facebook Twitter Pinterest Email Telegram WhatsApp
  • Website

Related Posts

ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ

ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು

ಅರ್ಜುನ ನೆನಪಿಸಲು ಇದೇ 30 ರಂದು ಬರ್ತಿದೆ ‘ಮಾವುತ’

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ
    In (ರಾಜ್ಯ ) ಜಿಲ್ಲೆ
  • ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು
    In (ರಾಜ್ಯ ) ಜಿಲ್ಲೆ
  • ಅರ್ಜುನ ನೆನಪಿಸಲು ಇದೇ 30 ರಂದು ಬರ್ತಿದೆ ‘ಮಾವುತ’
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಜಲಾಶಯ ಭದ್ರತೆ ಪರೀಕ್ಷಿಸಿದ ಕಮಾಂಡೆಂಟ್ 
    In (ರಾಜ್ಯ ) ಜಿಲ್ಲೆ
  • ಟೆಂಡರ್ ರದ್ದಿಗೆ ಆಗ್ರಹಿಸಿ ದಿನಗೂಲಿ ನೌಕರರ ಸಂಘದಿಂದ ಧರಣಿ
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಮತ್ತು ನೇತ್ರ ಉಚಿತ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಸಂಗಮೇಶ್ವರ ಜಾತ್ರಾ ಮಹೋತ್ಸವದಲ್ಲಿ ಪಲ್ಲಕ್ಕಿ ಉತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.