Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಸಹಕಾರಿ

ಅಕ್ರಮ ಪಡಿತರ ಸಾಗಾಟ: ಆಹಾರ ಇಲಾಖೆ ದಾಳಿ

ರಾಷ್ಟ್ರೀಯ ಲೋಕ ಅದಾಲತ್:೩೭೭೬ ಪ್ರಕರಣಗಳು ಇತ್ಯರ್ಥ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶ್ರೀ ಬಸವೇಶ್ವರ ಕೋ- ಆಪರೇಟಿವ್ಹ್ ಬ್ಯಾಂಕಿಗೆ ೧ ಕೋಟಿ ಲಾಭ
(ರಾಜ್ಯ ) ಜಿಲ್ಲೆ

ಶ್ರೀ ಬಸವೇಶ್ವರ ಕೋ- ಆಪರೇಟಿವ್ಹ್ ಬ್ಯಾಂಕಿಗೆ ೧ ಕೋಟಿ ಲಾಭ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಶ್ರೀ ಬಸವೇಶ್ವರ ಕೋ-ಆಪರೇಟಿವ್ಹ್ ಬ್ಯಾಂಕಿನ ಅಧ್ಯಕ್ಷ ಲೋಕನಾಥ ಅಗರವಾಲ ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪಟ್ಟಣದ ಶ್ರೀಬಸವೇಶ್ವರ ಕೋ-ಆಪರೇಟಿವ್ಹ್ ಬ್ಯಾಂಕು ಎಲ್ಲ ಸದಸ್ಯರ, ಬ್ಯಾಂಕಿನ ಸಿಬ್ಬಂದಿ ಹಾಗೂ ನಿರ್ದೇಶಕರ ಶ್ರಮದಿಂದ ೨೦೨೪-೨೫ ನೇ ಹಣಕಾಸು ವರ್ಷದಲ್ಲಿ ಒಟ್ಟು ರೂ.೩೫,೧೩೨.೩೭ ವ್ಯವಹಾರ ಮಾಡಿ ೧.೧ ಕೋಟಿ ರೂಪಾಯಿ ಆದಾಯ ಗಳಿಸಿದೆ ಎಂದು ಶ್ರೀಬಸವೇಶ್ವರ ಕೋ-ಆಪರೇಟಿವ್ಹ್ ಬ್ಯಾಂಕಿನ ಅಧ್ಯಕ್ಷ ಲೋಕನಾಥ ಅಗರವಾಲ ಹೇಳಿದರು.
ಪಟ್ಟಣದ ಪಂಚಾಚಾರ್ಯ ಜನಕಲ್ಯಾಣ ಮಂಟಪದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಬ್ಯಾಂಕಿನ ೬೧ ನೇ ಸರ್ವ ಸದಸ್ಯರ ವಾರ್ಷಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಮ್ಮ ಬ್ಯಾಂಕಿನಲ್ಲಿ ಪ್ರಸ್ತುತ ೩,೨೫೬ ಸಾಮಾನ್ಯ ಸದಸ್ಯರು, ೩,೨೭೨ ಸಹ ಸದಸ್ಯರನ್ನು ಹೊಂದಿದೆ. ಒಟ್ಟು ರೂ. ೩೪೮.೮೨ ಲಕ್ಷ ಶೇರು ಬಂಡವಾಳ, ೪೧೦.೧೩ ಲಕ್ಷ ಕಾಯ್ದಿಟ್ಟ ನಿಧಿ ಹಾಗೂ ಇತರೇ ನಿಧಿಗಳು ಸೇರಿ ಒಟ್ಟು ೯೫೬.೪೯ ಲಕ್ಷ ರೂ. ಹೊಂದಿದೆ. ಗ್ರಾಹಕರಿಂದ ರೂ.೧೦,೩೩೮.೧೯ ಲಕ್ಷ ಠೇವುಗಳು ಹೊಂದಿದೆ. ದುಡಿಯುವ ಬಂಡವಾಳ ರೂ. ೧೨,೦೯೦.೯೭ ಲಕ್ಷ ಇದೆ. ೨೦೨೫ರ ವರ್ಷಾಂತ್ಯಕ್ಕೆ ಸಾಲಗಾರರಿಂದ ಬರತಕ್ಕ ಸಾಲ ಬಾಕಿ ೬,೮೩೧.೬೨ ಲಕ್ಷವಿದೆ. ಇದರ ಪೈಕಿ ಒಟ್ಟು ೮೧ ಸಾಲಗಾರರಿಂದ ಮುದ್ದತ್ ಮೀರಿದ ಬರತಕ್ಕ ಮೊತ್ತ ೩೫೫.೪೨ ಲಕ್ಷವಿದೆ. ಇದು ಶೇ.೫.೨೦ ರಷ್ಟಿದೆ. ಪ್ರಸ್ತಕ ಸಾಲಿನಲ್ಲಿ ರೂ. ೭೫೬.೩೨ ಲಕ್ಷ ಸಾಲ ವಿತರಿಸಲಾಗಿದ. ಅನುತ್ಪಾದಕ ಸಾಲದ ಮೊತ್ತ ೮೫.೮೫ ರಷ್ಟಿದೆ. ಜುಲೈ ೧ ರಿಂದ ಬ್ಯಾಂಕಿನ ಎಲ್ಲ ಸದಸ್ಯ ಸಾಲಗಾರರಿಗೆ ಅಪಘಾತ ವಿಮಾ ರಕ್ಷಣೆ ಹಾಗೂ ಲಾಕರ್ ವಿಮಾ ರಕ್ಷಣೆ ಒದಗಿಸಲಾಗಿದೆ. ಬ್ಯಾಂಕಿನಲ್ಲಿ ಆರ್ಟಿಜಿಎಸ್, ನೆಪ್ಟ್ ಸೌಲಭ್ಯವಿದೆ. ಮುಂದಿನ ದಿನಗಳಲ್ಲಿ ಎಟಿಎಂ, ಯುಪಿಆರ್ ಮೊಬೈಲ್ ಬ್ಯಾಂಕ್ ಸೌಲಭ್ಯ ಆರಂಭಿಸಲಾಗುವದು ಎಂದರು.
ಗ್ರಾಹಕರು ತಾವು ಪಡೆದ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡುವ ಮೂಲಕ ಬ್ಯಾಂಕಿನ ಅಭಿವೃದ್ಧಿಗೆ ಸಹಕಾರ ನೀಡಬೇಕು.ಸಕಾಲದಲ್ಲಿ ಸಾಲ ಮರುಪಾವತಿ ಮಾಡುವದರಿಂದ ಉಳಿದ ಸದಸ್ಯರಿಗೆ ಸಾಲ ಸೌಲಭ್ಯ ನೀಡಲು ಅನುಕೂಲವಾಗುತ್ತದೆ. ಬ್ಯಾಂಕಿನಿಂದ ಸಿಗುವ ಸೌಲಭ್ಯಗಳನ್ನು ಎಲ್ಲರೂ ಸದ್ಭಳಕೆ ಮಾಡಿಕೊಳ್ಳಬೇಕೆಂದರು.
ಸಾಮಾನ್ಯ ಸಭೆಯನ್ನು ಉದ್ಘಾಟಿಸಿದ ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ ಮಾತನಾಡಿ, ಈ ಬ್ಯಾಂಕು ಎಲ್ಲರ ಸಹಕಾರದಿಂದ ಲಾಭಾಂಶದಲ್ಲಿ ನಡೆಯುತ್ತಿರುವದು ಸಂತಸದಾಯಕ ಸಂಗತಿ. ಆಡಳಿತ ಮಂಡಳಿಯವರು ನಿಸ್ವಾರ್ಥವಾಗಿ ಸೇವೆ ಸಲ್ಲಿಸಿದರೆ ಸಹಕಾರಿಗಳು ಮಾತ್ರ ಉಳಿಯಲು ಸಾಧ್ಯ. ಈ ಬ್ಯಾಂಕಿನ ಆಡಳಿತ ಮಂಡಳಿಯ ನಿಸ್ವಾರ್ಥ ಸೇವೆಯಿಂದ ಪ್ರಗತಿಯಾಗುತ್ತಿರುವದು ಶ್ಲಾಘನೀಯ ಎಂದರು.
ರಾಜ್ಯ ವಿಮಾ ಸಹಕಾರ ಮಹಾಮಂಡಳ ಅಧ್ಯಕ್ಷ ಶಿವನಗೌಡ ಬಿರಾದಾರ, ಪಿಕೆಪಿಎಸ್ ಬ್ಯಾಂಕಿನ ಅಧ್ಯಕ್ಷ ಸಂಗನಗೌಡ ಚಿಕ್ಕೊಂಡ ಮಾತನಾಡಿದರು.
ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಸಿ.ಎಸ್.ತಳ್ಳೊಳ್ಳಿ ಅವರು ಬ್ಯಾಂಕಿನ ವಾರ್ಷಿಕ ವರದಿ ವಾಚಿಸಿದರು.
ವೇದಿಕೆಯಲ್ಲಿ ಜನತಾ ಬಜಾರ ಅಧ್ಯಕ್ಷ ಬಾಲಚಂದ್ರ ಮುಂಜಾನೆ, ಬ್ಯಾಂಕಿನ ಉಪಾಧ್ಯಕ್ಷರಾದ ಬಸವರಾಜ ಗೊಳಸಂಗಿ, ನಿರ್ದೇಶಕರಾದ ಶಂಕರಗೌಡ ಬಿರಾದಾರ, ಉಮೇಶ ಹಾರಿವಾಳ, ಅನಿಲ ದುಂಬಾಳಿ, ಜಗದೀಶ ಕೊಟ್ರಶೆಟ್ಟಿ, ಸಿದ್ರಾಮಪ್ಪ ಕಿಣಗಿ, ಶ್ರೀಶೈಲ ಪತ್ತಾರ, ಶಿವಾನಂದ ಪಟ್ಟಣಶೆಟ್ಟಿ, ನೀಲಪ್ಪ ನಾಯಕ, ಕಮಲಾಬಾಯಿ ತಿಪ್ಪನಗೌಡರ, ಸುರೇಖಾ ಪಡಶೆಟ್ಟಿ, ಯಮನಪ್ಪಗೌಡ ಪಾಟೀಲ, ಭೀಮನಗೌಡ ಪಾಟೀಲ, ರಾಜಶೇಖರ ಗುತ್ತರಗಿಮಠ, ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಸಿ.ಎಸ್.ತಳ್ಳೊಳ್ಳಿ ಇದ್ದರು. ಎಸ್.ಎಸ್.ಮಂಟೂರ ಪ್ರಾರ್ಥಿಸಿದರು. ಶಂಕರಗೌಡ ಬಿರಾದಾರ ಸ್ವಾಗತಿಸಿದರು. ಲೆಕ್ಕಿಖ ರಾಘವೇಂದ್ರ ಚಿಕ್ಕೊಂಡ ನಿರೂಪಿಸಿದರು. ಜಗದೀಶ ಕೊಟ್ರಶೆಟ್ಟಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಸಹಕಾರಿ

ಅಕ್ರಮ ಪಡಿತರ ಸಾಗಾಟ: ಆಹಾರ ಇಲಾಖೆ ದಾಳಿ

ರಾಷ್ಟ್ರೀಯ ಲೋಕ ಅದಾಲತ್:೩೭೭೬ ಪ್ರಕರಣಗಳು ಇತ್ಯರ್ಥ

ಪೊಲೀಸ್ ವೈಫಲ್ಯ ಖಂಡಿಸಿ ಸೆ.೧೯ಕ್ಕೆ ಕಾಲ್ನಡಿಗೆ ಜಾಥಾ :ಕೂಚಬಾಳ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಸಹಕಾರಿ
    In (ರಾಜ್ಯ ) ಜಿಲ್ಲೆ
  • ಅಕ್ರಮ ಪಡಿತರ ಸಾಗಾಟ: ಆಹಾರ ಇಲಾಖೆ ದಾಳಿ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಲೋಕ ಅದಾಲತ್:೩೭೭೬ ಪ್ರಕರಣಗಳು ಇತ್ಯರ್ಥ
    In (ರಾಜ್ಯ ) ಜಿಲ್ಲೆ
  • ಪೊಲೀಸ್ ವೈಫಲ್ಯ ಖಂಡಿಸಿ ಸೆ.೧೯ಕ್ಕೆ ಕಾಲ್ನಡಿಗೆ ಜಾಥಾ :ಕೂಚಬಾಳ
    In (ರಾಜ್ಯ ) ಜಿಲ್ಲೆ
  • ಇಂದು ಪಠ್ಯಪೂರಕ ಚಟುವಟಿಕೆಗಳ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಮಳೆಯಿಂದ ಮನೆಯೊಳಗೆ ನೀರು ನುಗ್ಗಿ ವಸ್ತುಗಳ ಹಾನಿ!
    In (ರಾಜ್ಯ ) ಜಿಲ್ಲೆ
  • ಸಂಗೀತ ಲೋಕದ ಮೇರು ಶಿಖರ ಪಂ.ಪುಟ್ಟರಾಜ ಗವಾಯಿಗಳು
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಗೆ ಮತ್ತೆ ಅಪಾರ ಪ್ರಮಾಣದ ನೀರು!
    In (ರಾಜ್ಯ ) ಜಿಲ್ಲೆ
  • ಸಿದ್ದಸಿರಿ ಸೌಹಾರ್ದ ಸಹಕಾರಿಯಿಂದ ರೂ.25 ಲಕ್ಷ ದೇಣಿಗೆ
    In (ರಾಜ್ಯ ) ಜಿಲ್ಲೆ
  • ಮುಂಗಾರು ಬೆಳೆಹಾನಿಪುನಃ ಪರಿಶೀಲಿಸಿದ ಎಸಿ ವಸ್ತ್ರದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.