Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೃಷ್ಟಿಯ ಮೊದಲ ದಿನವೇ ಯುಗಾದಿ

ಯುದ್ಧಗಳು ಮಾನವ ನಿರ್ಮಿತ ವಿಪತ್ತು

ಧರ್ಮಸ್ಥಳ ಯೋಜನೆಯಿಂದ ನಿರ್ಗತಿಕರಿಗೆ ಆಶ್ರಯ :ನಟರಾಜ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸತ್ಯ ತತ್ವಗಳನ್ನು ಜಗತ್ತಿಗೆ ಸಾರಿದ ಬಸವಾದಿ ಶರಣರು
(ರಾಜ್ಯ ) ಜಿಲ್ಲೆ

ಸತ್ಯ ತತ್ವಗಳನ್ನು ಜಗತ್ತಿಗೆ ಸಾರಿದ ಬಸವಾದಿ ಶರಣರು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ೧೨ನೇ ಶತಮಾನದ ಬಸವಾದಿ ಶರಣರು ಭೌತಿಕ, ಅಧ್ಯಾತ್ಮೀಕ ಸತ್ಯ ತತ್ವಗಳನ್ನು ಜಗತ್ತಿಗೆ ನೀಡಿದ ಮಹಾತ್ಮರು ಎಂದು ಉಪನ್ಯಾಸಕಿ ಶಿಲ್ಪಾ ಭಸ್ಮೆ ಹೇಳಿದರು.
ನಗರದ ವೀರಶೈವ ಸಭಾಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಜಿಲ್ಲಾ ಘಟಕದ ವತಿಯಿಂದ ಮಾಸಿಕ ಶಿವಾನುಭವ ಗೊಷ್ಠಿಯಲ್ಲಿ ಶರಣ ಘಟವಾಳಯ್ಯನವರ ಬದುಕು ಮತ್ತು ಅನುಭಾವ ಕುರಿತು ಉಪನ್ಯಾಸ ನೀಡಿದ ಅವರು ಬಸವಾದಿ ಶರಣರ ವಚನಕಾರರಲ್ಲಿ ಶರಣ ಘಟವಾಳಯ್ಯನವರು ಪ್ರಮುಖರು. ಅವರ ವಚನಗಳಲ್ಲಿ ಆತ್ಮ ಸಾಕ್ಷಾತ್ಕಾರ, ಜ್ಞಾನ ಸಾಕ್ಷಾತ್ಕಾರ, ನಡೆ, ನುಡಿ, ಸತ್ಯ, ಶುದ್ಧ ಕಾಯಕ ಅರ್ಥಹೀನ ಬದುಕಿನ ಡಾಂಬೀಕ ಭಕ್ತಿ ಹೀಗೆ ಅವರ ವಚನಗಳಲ್ಲಿ ಕಾಣುತ್ತೇವೆ. ಚಿಕ್ಕಯ್ಯಪ್ರೀಯ ಸಿದ್ಧಲಿಂಗ ಎಂಬ ಅಂಕಿತ ನಾಮದಿಂದ ೧೪೭ ವಚನಗಳನ್ನು ರಚಿಸಿದ್ದಾರೆ. ಚರಿತ್ರೆಕ್ಕಿಂತ ಸಾಧನೆ ಮುಖ್ಯ. ಶರಣರನ್ನು ನೆನೆಯುವುದು ಜನಾಂಗದ ಉನ್ನತಿಗಾಗಿ ಎಂದು ಹೇಳಿದರು.
ಜಿಲ್ಲಾ ಅಧ್ಯಕ್ಷ ವಿ.ಸಿ. ನಾಗಠಾಣ ಮಾತನಾಡಿ ಶರಣರಲ್ಲಿ ಅಗ್ರಸ್ಥಾನ ಪಡೆದವರು ಘಟವಾಳಯ್ಯನವರು ಸಮರ್ಪಕವಾದ ಚಿಂತನೆಯಿಂದ ವಚನ ರಚಿಸಿದ್ದಾರೆ. ಇಂದು ಶರಣ ತತ್ವ ಸಿದ್ದಾಂತ ನಾವೆಲ್ಲಾ ಒಂದಾಗಿ ಅನುಸರಿಸಿ ಬಾಳಬೇಕು ಮುನ್ನಡೆಯಬೇಕು ಎಂದರು.
ಇದೇ ಸಂದರ್ಭದಲ್ಲಿ ಇತ್ತೀಚೆಗೆ ವಿಜಯಪುರ ಮಹಾನಗರಪಾಲಿಕೆಯ ಮಹಾಪೌರರಾಗಿ ಆಯ್ಕೆಯಾದ ಎಸ್.ಎಂ. ಕರಡಿ ಅವರನ್ನು ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಅಧ್ಯಕ್ಷ ವಿ.ಸಿ. ನಾಗಠಾಣ ಹಾಗೂ ಪದಾಧಿಕಾರಿಗಳು ಗೌರವಪೂರ್ವಕವಾಗಿ ಸನ್ಮಾನಿಸಿದರು.
ಮುಖ್ಯ ಅತಿಥಿಗಳಾಗಿ ಶಿವಲೀಲಾ ಮಠಪತಿ ಮಾತನಾಡುತ್ತ ಶರಣ ಘಟವಾಳಯ್ಯನವರ ನಿಷ್ಟುರತೆ, ಗುರು, ಲಿಂಗ, ಜಂಗಮ ಏಕಾಗ್ರತೆ, ಧ್ಯಾನ, ನಿಯಮ ಆಚರಣೆ ಅವರಲ್ಲಿತ್ತು ಎಂದರು.
ಕಾರ್ಯಕ್ರಮದಲ್ಲಿ ಅಪ್ಪಾಸಾಹೇಬ ಕೋರಿ, ಗಂಗಾಧರ ಸಾಲಕ್ಕಿ, ಎಂ.ಎಂ. ಅವರಾದಿ, ಕಾಶೀನಾಥ ಅಣೆಪ್ಪನವರ, ವಿವೇಕಾನಂದ ಹುಂಡೇಕಾರ, ಬಿ.ವಿ. ಪಟ್ಟಣಶೆಟ್ಟಿ, ಪಿ.ಎನ್. ಕೌಜಲಗಿ, ಶಶಿಧರ ಶಿರಹಟ್ಟಿ ಉಪಸ್ಥಿತರಿದ್ದರು. ಮಹಾಸಭೆಯ ಪ್ರಧಾನ ಕಾರ್ಯದರ್ಶಿ ಬಿ.ಟಿ. ಈಶ್ವರಗೊಂಡ ಸ್ವಾಗತಿಸಿದರು. ಸಾಹಿತಿ ಸಂಗಮೇಶ ಬದಾಮಿ ನಿರೂಪಿಸಿದರು. ಮಹಾಸಭೆಯ ಉಪಾಧ್ಯಕ್ಷ ಸಹದೇವ ನಾಡಗೌಡರ ವಂದಿಸಿದರು.
ಕಾರ್ಯಕ್ರಮದಲ್ಲಿ ಶರಣರು, ಶರಣೆಯರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೃಷ್ಟಿಯ ಮೊದಲ ದಿನವೇ ಯುಗಾದಿ

ಯುದ್ಧಗಳು ಮಾನವ ನಿರ್ಮಿತ ವಿಪತ್ತು

ಧರ್ಮಸ್ಥಳ ಯೋಜನೆಯಿಂದ ನಿರ್ಗತಿಕರಿಗೆ ಆಶ್ರಯ :ನಟರಾಜ್

ಪುರೋಹಿತ ವರ್ಗಕ್ಕೆ ಪ್ರತ್ಯೇಕ ಮಂಡಳಿ ರಚಿಸಲು ಒತ್ತಾಯಿಸಿ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೃಷ್ಟಿಯ ಮೊದಲ ದಿನವೇ ಯುಗಾದಿ
    In ವಿಶೇಷ ಲೇಖನ
  • ಯುದ್ಧಗಳು ಮಾನವ ನಿರ್ಮಿತ ವಿಪತ್ತು
    In ವಿಶೇಷ ಲೇಖನ
  • ಧರ್ಮಸ್ಥಳ ಯೋಜನೆಯಿಂದ ನಿರ್ಗತಿಕರಿಗೆ ಆಶ್ರಯ :ನಟರಾಜ್
    In (ರಾಜ್ಯ ) ಜಿಲ್ಲೆ
  • ಪುರೋಹಿತ ವರ್ಗಕ್ಕೆ ಪ್ರತ್ಯೇಕ ಮಂಡಳಿ ರಚಿಸಲು ಒತ್ತಾಯಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ವೈದ್ಯಕೀಯ ವೃತ್ತಿಯಲ್ಲಿ ನ್ಯಾಯಸಮ್ಮತ ಪ್ರ್ಯಾಕ್ಟಿಸ್ ಮಾಡಿ :ಡಾ.ಅರುಣ
    In (ರಾಜ್ಯ ) ಜಿಲ್ಲೆ
  • ಪಂ.ಪುಟ್ಟರಾಜ ಸೇವಾ ಸಮಿತಿ ರಾಜ್ಯಾಧ್ಯಕ್ಷರಾಗಿ ವಿನಾಯಕ ಪಿ.ಬಿ. ನೇಮಕ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಬದುಕಿನಲ್ಲಿ ಯುಗಾದಿ ಹಬ್ಬದ ಸಂಭ್ರಮ
    In ವಿಶೇಷ ಲೇಖನ
  • ಮುಳ್ಳಾಗದಿರಲಿ ಬದುಕಿಗೆ ಅಹಂಕಾರ
    In ವಿಶೇಷ ಲೇಖನ
  • ವೈದ್ಯಕೀಯ ಸ್ನಾತಕೋತ್ತರ ಪರೀಕ್ಷೆ: ಡಾ.ಸಮೃದ್ಧಿ ಗಡ್ಡದ ರಾಜ್ಯಕ್ಕೆ ಪ್ರಥಮ
    In (ರಾಜ್ಯ ) ಜಿಲ್ಲೆ
  • ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.