Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಷ್ಯಾ ವಿಶ್ವ ಯುವ ಶೃಂಗ ಸಭೆಯಲ್ಲಿ ವಿಜಯಪುರದ ಶಿಫಾ ಭಾಗಿ

ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ಗೆ ರೂ.3೦ ಲಕ್ಷಕ್ಕೂ ಅಧಿಕ ಲಾಭ

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದಂಡದ ಮೊತ್ತದಲ್ಲಿ ಶೇ.50 ರಿಯಾಯಿತಿ ನೀಡಿ ಸರ್ಕಾರ ಆದೇಶ
(ರಾಜ್ಯ ) ಜಿಲ್ಲೆ

ದಂಡದ ಮೊತ್ತದಲ್ಲಿ ಶೇ.50 ರಿಯಾಯಿತಿ ನೀಡಿ ಸರ್ಕಾರ ಆದೇಶ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತ

ಉದಯರಶ್ಮಿ ದಿನಪತ್ರಿಕೆ

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ಸರ್ಕಾರವು 2025ನೇ ಆಗಸ್ಟ್ 21 ರಂದು ಆದೇಶ ಹೊರಡಿಸಿದೆ.
ಈ ರಿಯಾಯಿತಿಯು 2025ನೇ ಆಗಸ್ಟ್ 23 ರಿಂದ ಸೆಪ್ಟೆಂಬರ್ 12 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ.
ಸರ್ಕಾರದ ಆದೇಶದ ದಿನಾಂಕ:11.02.2023ರ ಒಳಗಾಗಿ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಒಂದು ಬಾರಿಯ ಕ್ರಮವಾಗಿ (one time measure) ಮಾತ್ರ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು.
ಸರ್ಕಾರದ ದಿನಾಂಕ: 03-03-2023ರ ಆದೇಶದಲ್ಲಿ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಿನಾಂಕ:11.02.2023ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ. ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು.
ಸರ್ಕಾರದ ದಿನಾಂಕ 05-07-2023 ರ ಆದೇಶದಲ್ಲಿ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಿನಾಂಕ:11.02.2023 ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ಆದೇಶಿಸಲಾಗಿತ್ತು ಹಾಗೂ ಈ ರಿಯಾಯಿತಿಯು ದಿನಾಂಕ:09.09.2023 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ತಿಳಿಸಲಾಗಿತ್ತು.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳ ದಿನಾಂಕ 26-06-2025 ಮತ್ತು ದಿನಾಂಕ 12-08-2025 ಪತ್ರಗಳಲ್ಲಿ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50%ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ದಿನಾಂಕ:05.07.2025 ರಿಂದ 11.07.2025ರವರೆಗೆ ಕಾಲಾವಕಾಶವನ್ನು ಕಲ್ಪಿಸಿ ಆದೇಶ ಹೊರಡಿಸುವಂತೆ ಕೋರಲಾಗಿತ್ತು. ಮುಂದುವರೆದು ಸದರಿ ಅವಧಿಯು ಮುಕ್ತಾಯವಾಗಿರುವುದರಿಂದ ಸದರಿ ಕಾಲಾವಕಾಶವನ್ನು ದಿನಾಂಕ:23.08.2025 ರಿಂದ 12.09.2025ರವರೆಗೆ ಕಲ್ಪಿಸುವಂತೆ ಕೋರಿರುತ್ತಾರೆ.
ಬೆಂಗಳೂರು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ದಿನಾಂಕ 04-03-2025 ರ ಪ್ರಸ್ತಾವನೆಯಲ್ಲಿ ಪೊಲೀಸ್ ಇಲಾಖೆಯ ಸಂಚಾರಿ e-Challan ಗಳಲ್ಲಿ ಶೇ.50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಹಾಗೂ ಸಾರಿಗೆ ಇಲಾಖೆಯಲ್ಲಿ 2018-19ನೇ ಸಾಲಿನ ಪೂರ್ವದಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ವಾಹನ ಮಾಲೀಕರುಗಳಿಂದ ಶೇ.50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಅವಕಾಶ ಕಲ್ಪಿಸುವಂತೆ ಕೋರಿರುತ್ತಾರೆ.
ಸದರಿ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ಸರ್ಕಾರವು ಈ ರಿಯಾಯಿತಿಯು 2025ನೇ ಆಗಸ್ಟ್ 23 ರಿಂದ ಸೆಪ್ಟೆಂಬರ್ 12 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಆದೇಶಿಸಲಾಗಿದೆ ಎಂದು ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿಗಳು ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಷ್ಯಾ ವಿಶ್ವ ಯುವ ಶೃಂಗ ಸಭೆಯಲ್ಲಿ ವಿಜಯಪುರದ ಶಿಫಾ ಭಾಗಿ

ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ಗೆ ರೂ.3೦ ಲಕ್ಷಕ್ಕೂ ಅಧಿಕ ಲಾಭ

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಷ್ಯಾ ವಿಶ್ವ ಯುವ ಶೃಂಗ ಸಭೆಯಲ್ಲಿ ವಿಜಯಪುರದ ಶಿಫಾ ಭಾಗಿ
    In (ರಾಜ್ಯ ) ಜಿಲ್ಲೆ
  • ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ಗೆ ರೂ.3೦ ಲಕ್ಷಕ್ಕೂ ಅಧಿಕ ಲಾಭ
    In (ರಾಜ್ಯ ) ಜಿಲ್ಲೆ
  • ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!
    In (ರಾಜ್ಯ ) ಜಿಲ್ಲೆ
  • ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ
    In (ರಾಜ್ಯ ) ಜಿಲ್ಲೆ
  • ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೀಳು ಮಟ್ಟದ ರಾಜಕೀಯಕ್ಕೆ ನಾಂದಿ ಹಾಡಿದ ಭೂಸನೂರ
    In (ರಾಜ್ಯ ) ಜಿಲ್ಲೆ
  • ಭಾರತ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿದ ಪ್ರಶಿಕ್ಷಣಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ನೆಚ್ಚಿನ ಶಿಕ್ಷಕಿಯ ವರ್ಗಾವಣೆಗೆ ಕಣ್ಣೀರಿಟ್ಟ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ರೈತರ ಬೇಡಿಕೆಯಂತೆ ಪರಿಹಾರ ದರ ನಿಗದಿಗೆ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.