Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಷ್ಯಾ ವಿಶ್ವ ಯುವ ಶೃಂಗ ಸಭೆಯಲ್ಲಿ ವಿಜಯಪುರದ ಶಿಫಾ ಭಾಗಿ

ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ಗೆ ರೂ.3೦ ಲಕ್ಷಕ್ಕೂ ಅಧಿಕ ಲಾಭ

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜನಪದ ಕಲೆ ಗ್ರಾಮೀಣ ಸಂಸ್ಕೃತಿ, ಪರಂಪರೆಯ ಪ್ರತೀಕ
(ರಾಜ್ಯ ) ಜಿಲ್ಲೆ

ಜನಪದ ಕಲೆ ಗ್ರಾಮೀಣ ಸಂಸ್ಕೃತಿ, ಪರಂಪರೆಯ ಪ್ರತೀಕ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕನ್ನಡ ಜಾನಪದ ಪರಿಷತ್ತಿನ ತಾಲೂಕು ಗೌರವಾಧ್ಯಕ್ಷ ಅಭಿನವ ಮುರುಗೇಂದ್ರ ಶಿವಾಚಾರ್ಯರ ಅಭಿಮತ

ಉದಯರಶ್ಮಿ ದಿನಪತ್ರಿಕೆ

ಇಂಡಿ: ಜನಪದ ಕಲೆ ಮತ್ತು ಕಲಾವಿದರು ಗ್ರಾಮೀಣ ಭಾರತದ ತಾಯಿ ಬೇರುಗಳಿದ್ದಂತೆ. ಜನಜೀವನ ಮತ್ತು
ಸಾಂಸ್ಕೃತಿಕ ಪರಂಪರೆ ಬಿಂಬಿಸುವ ಜನಪದ ಕಲೆಗಳು ಗ್ರಾಮೀಣ ಭಾರತದ ಜೀವಾಳವಾಗಿವೆ ಎಂದು ಕನ್ನಡ ಜಾನಪದ ಪರಿಷತ್ತಿನ ತಾಲೂಕ ಗೌರವಾಧ್ಯಕ್ಷ ಅಭಿನವ ಮುರುಗೇಂದ್ರ ಶಿವಾಚಾರ್ಯರು ಹೇಳಿದರು.
ಶುಕ್ರವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್, ಯುಬಿಎಸ್ ಶಾಲೆಯಲ್ಲಿ ಕನ್ನಡ ಜಾನಪದ ಪರಿಷತ್ತು ಇಂಡಿ ಘಟಕದ ವತಿಯಿಂದ ಹಮ್ಮಿಕೊಂಡ “ವಿಶ್ವ ಜಾನಪದ ದಿನಾಚರಣೆ”ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜನಪದ ಕಲೆಗಳು ಗ್ರಾಮೀಣ ಜನರ ಜೀವನ ವಿಧಾನ, ನಂಬಿಕೆ, ಮೌಲ್ಯಗಳನ್ನು ಪ್ರತಿಬಿಂಬಿಸುತ್ತವೆ. ಅವು
ಮನರಂಜನೆ ನೀಡುವ ಜತೆಗೆ ಸಾಮಾಜಿಕ ಬಾಂಧವ್ಯವನ್ನು ವೃದ್ಧಿಗೊಳಿಸಿ, ಮುಂದಿನ ಪೀಳಿಗೆಗೆ ಸಾಂಸ್ಕೃತಿಕ ಪರಂಪರೆಯನ್ನು ಕೊಂಡೊಯ್ಯುತ್ತವೆ ಎಂದು ಹೇಳಿದರು.
ಉಪನ್ಯಾಸ ನೀಡಿ ಮಾತನಾಡಿದ ಶಿಕ್ಷಕ ಸಂತೋಷ ಬಂಡೆ, ನಮ್ಮ ಸನಾತನ ಜನಪದ ಕಲೆಯು ಗ್ರಾಮೀಣ ಸಂಸ್ಕೃತಿ, ಪರಂಪರೆಯ ಪ್ರತೀಕ. ಗ್ರಾಮೀಣ ಜನರ ದೈನಂದಿನ ಬದುಕಿನಲ್ಲಿ ಜನಪದ ಕಲೆ ಹಾಸುಹೊಕ್ಕಾಗಿದೆ. ಸಾಹಿತ್ಯ ಮತ್ತು ಕಲೆಗಳ ಮೂಲ ಬೇರುಗಳು ಜಾನಪದದಲ್ಲಿವೆ. ಆದ್ದರಿಂದ ಇಂದಿನ ಮಕ್ಕಳು ಆಧುನಿಕ ಅಬ್ಬರಗಳಿಗೆ ಮಾರುಹೋಗದೆ ಜನಪದ ಸಂಸ್ಕೃತಿ ಉಳಿಸಿ ಬೆಳೆಸಲು ಶ್ರಮಿಸಬೇಕು ಎಂದು ಹೇಳಿದರು.
ಕನ್ನಡ ಜಾನಪದ ಪರಿಷತ್ತಿನ ತಾಲೂಕಾಧ್ಯಕ್ಷ ಪಂಡಿತ ಅವಜಿ ಮಾತನಾಡಿ, ಸಮೃದ್ಧ ಬದುಕಿಗೆ ಮನುಷ್ಯ ಸಂಬಂಧ, ಪ್ರೀತಿ, ವಾತ್ಸಲ್ಯ, ಉತ್ಸಾಹ ಬೇಕು. ಇಂತಹ ಉತ್ಸಾಹದ ಬದುಕನ್ನು ಜಾನಪದ ಸಾಹಿತ್ಯ ನಮಗೆ ನೀಡುತ್ತದೆ. ಬದುಕಿನ ಜೀವಸೆಲೆಯಾಗಿರುವ ಜನಪದ ಸಾಹಿತ್ಯ, ಸಂಸ್ಕೃತಿಯ ಮಹತ್ವವನ್ನು ಅರಿತು ಸಾಧನೆಗೆ ಮುಂದಾಗಬೇಕು ಎಂದು ಹೇಳಿದರು.
ಶಿಕ್ಷಕ ಎಸ್ ಆರ್ ಚಾಳೇಕರ ಪ್ರಾಸ್ತಾವಿಕವಾಗಿ ಮಾತನಾಡಿ, ಜನಪದ ಕಲೆಗಳು ಸಮಾಜದ ಸಾಂಸ್ಕೃತಿಕ, ಆರ್ಥಿಕ ಅಭಿವೃದ್ಧಿಯಲ್ಲಿ ಮಹತ್ವವಾಗಿದ್ದು, ಅವನ್ನು ಸಂರಕ್ಷಿಸಿ, ಉತ್ತೇಜಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.
ಮುಖ್ಯ ಶಿಕ್ಷಕ ಅನಿಲ ಪತಂಗಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕರಾದ ವ್ಹಿ ವೈ ಪತ್ತಾರ, ಎಸ್ ಎಸ್ ಅರಬ ಹಾಗೂ ಶಾಲಾ ಶಿಕ್ಷಕರು, ಮಕ್ಕಳು ಭಾಗವಹಿಸಿದ್ದರು. ಸಾಗರ ಮಾನೆ ತಂಡದಿಂದ ಜಾನಪದ ಕಾರ್ಯಕ್ರಮಗಳು ಜರುಗಿದವು. ತಾಲೂಕ ಕಜಾಪ ಪ್ರಧಾನ ಕಾರ್ಯದರ್ಶಿ ಜಟ್ಟಪ್ಪ ಮಾದರ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕಿ ಸಾವಿತ್ರಿ ಸಂಗಮದ ಸ್ವಾಗತಿಸಿದರು. ಶಿಕ್ಷಕಿ ಎಸ್ ಡಿ ಬಿರಾದಾರ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಷ್ಯಾ ವಿಶ್ವ ಯುವ ಶೃಂಗ ಸಭೆಯಲ್ಲಿ ವಿಜಯಪುರದ ಶಿಫಾ ಭಾಗಿ

ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ಗೆ ರೂ.3೦ ಲಕ್ಷಕ್ಕೂ ಅಧಿಕ ಲಾಭ

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಷ್ಯಾ ವಿಶ್ವ ಯುವ ಶೃಂಗ ಸಭೆಯಲ್ಲಿ ವಿಜಯಪುರದ ಶಿಫಾ ಭಾಗಿ
    In (ರಾಜ್ಯ ) ಜಿಲ್ಲೆ
  • ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ಗೆ ರೂ.3೦ ಲಕ್ಷಕ್ಕೂ ಅಧಿಕ ಲಾಭ
    In (ರಾಜ್ಯ ) ಜಿಲ್ಲೆ
  • ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!
    In (ರಾಜ್ಯ ) ಜಿಲ್ಲೆ
  • ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ
    In (ರಾಜ್ಯ ) ಜಿಲ್ಲೆ
  • ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೀಳು ಮಟ್ಟದ ರಾಜಕೀಯಕ್ಕೆ ನಾಂದಿ ಹಾಡಿದ ಭೂಸನೂರ
    In (ರಾಜ್ಯ ) ಜಿಲ್ಲೆ
  • ಭಾರತ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿದ ಪ್ರಶಿಕ್ಷಣಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ನೆಚ್ಚಿನ ಶಿಕ್ಷಕಿಯ ವರ್ಗಾವಣೆಗೆ ಕಣ್ಣೀರಿಟ್ಟ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ರೈತರ ಬೇಡಿಕೆಯಂತೆ ಪರಿಹಾರ ದರ ನಿಗದಿಗೆ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.