Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಷ್ಯಾ ವಿಶ್ವ ಯುವ ಶೃಂಗ ಸಭೆಯಲ್ಲಿ ವಿಜಯಪುರದ ಶಿಫಾ ಭಾಗಿ

ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ಗೆ ರೂ.3೦ ಲಕ್ಷಕ್ಕೂ ಅಧಿಕ ಲಾಭ

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮನೆಗಳ ತೆರವಿಗೆ ಸುಪ್ರೀಂಕೋರ್ಟ್ ಆದೇಶ :ಪುರಸಭೆ ಗಡುವು
(ರಾಜ್ಯ ) ಜಿಲ್ಲೆ

ಮನೆಗಳ ತೆರವಿಗೆ ಸುಪ್ರೀಂಕೋರ್ಟ್ ಆದೇಶ :ಪುರಸಭೆ ಗಡುವು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿಯ ಸೋಂಪುರ ರಸ್ತೆಯಲ್ಲಿರುವ ಸರ್ವೇ ನಂ.೮೪೨/ ೨೨ ೨ಎಕರೆ ೧೦ಗುಂಟೆ ಜಮೀನು | ಆತಂಕದಲ್ಲಿ ೮೦ಕ್ಕೂ ಅಧಿಕ ಸಂತ್ರಸ್ತ ಕುಟುಂಬಗಳು

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಪಟ್ಟಣದ ಸೋಂಪುರ ರಸ್ತೆಯಲ್ಲಿರುವ ಸರ್ವೇ ನಂ.೮೪೨/ ೨೨ ೨ಎಕರೆ ೧೦ಗುಂಟೆಯ ಜಮೀನಿನಲ್ಲಿ ಕಳೆದ ಹಲವು ವರ್ಷಗಳಿಂದ ಪುರಸಭೆ ನೀಡಿದ ನಿವೇಶನದಲ್ಲಿ ಜೀವಿಸುತ್ತಿರುವ ೮೦ಕ್ಕೂ ಅಧಿಕ ಕುಟುಂಬಗಳ ಮನೆಗಳನ್ನು ತೆರವುಗೊಳಿಸುವ ಆದೇಶವನ್ನು ಸುಪ್ರೀಂ ಕೋರ್ಟ್ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಪುರಸಭೆ ಕಾರ್ಯಾಲಯದ ವತಿಯಿಂದ ನೋಟಿಸ್ ನೀಡಿ ಆ.೨೩ರರೊಳಗೆ ಮನೆಗಳನ್ನು ತೆರವುಗೊಳಿಸಬೇಕು ಎಂದು ಗಡುವು ನೀಡಿದೆ. ಈ ಜಾಗೆಯಲ್ಲಿ ವಾಸಿಸುವ ಎಲ್ಲ ಜನರಿಗೆ ನೋಟಿಸ್ ನೀಡಲಾಗಿದೆ. ಕೋರ್ಟ್ ಆದೇಶಯಿರುವುದರಿಂದ ಈ ಜಾಗೆಯನ್ನು ತೆರವುಗೊಳಿಸುವುದು ಅನಿವಾರ್ಯವಾಗಿದೆ. ಹಾಗಾಗಿ ನಿವಾಸಿಗಳು ಸಹಕರಿಸಿ ಎಂದು ಸ್ಥಳದಲ್ಲಿನ ನಿವಾಸಿಗಳಿಗೆ ಮನವಿ ಮಾಡಿಕೊಂಡರು. ಅವರ ಮಾತನ್ನು ಕೇಳಿದ ನಿವಾಸಿಗರು ನಾವು ದಿನಗೂಲಿ ಕೆಲಸ ಮಾಡಿ ಬದುಕು ಸಾಗಿಸುವವರು ನಮಗೆ ಸ್ವಲ್ಪ ವಿಷಕೊಟ್ಟು ಮನೆಗಳನ್ನು ತೆರವುಗೊಳಿಸಿ ಎಂದು ಕಣ್ಣೀರಿಟ್ಟರು. ಈ ವೇಳೆ ಇಂಡಿ ಎಸಿ ಅನುರಾಧಾ ವಸ್ತçದ ಮಾತನಾಡಿ, ಈಗಾಗಲೇ ಪುರಸಭೆ ಮುಖ್ಯಾಧಿಕಾರಿಗಳು ಕೋರ್ಟ್ಗೆ ತೆರವುಗೊಳಿಸಲಾಗುವುದು ಎಂದು ಒಪ್ಪಿಗೆ ಪತ್ರ ನೀಡಿ ಸಮಯವಕಾಶ ತೆಗೆದುಕೊಂಡಿದ್ದಾರೆ. ಹೀಗಾಗಿ ಕೋರ್ಟ್ ಆದೇಶಕ್ಕೆ ಎಲ್ಲರೂ ತಲೆ ಬಾಗಲೆಬೇಕು ಎಂದು ತಿಳಿಸಿದರು. ಈ ಜಮೀನಿನ ವಿವಾದ ಇಂದು ನಿನ್ನೆಯದಲ್ಲ. ಸುಮಾರು ವರ್ಷಗಳಿಂದ ನಡೆದರೂ ಪುರಸಭೆ ಪ್ರತಿನಿಧಿಗಳು ಇದರ ಕುರಿತು ಬಗೆಹರಿಸುವ ಕಾರ್ಯಕ್ಕೆ ಬರಬೇಕಾಗಿತ್ತು. ಈಗಲಾದರೂ ನಿರ್ಣಯಕ್ಕೆ ಬರಬೇಕು ಎಂದು ಡಿವೈಎಸ್‌ಪಿ ಜಗದೀಶ ಎಚ್.ಎಸ್ ಕೇಳಿಕೊಂಡರು. ಪುರಸಭೆ ಸದಸ್ಯ ಶಾಂತವೀರ ಬಿರಾದಾರ ಮಾತನಾಡಿ, ಪುರಸಭೆಯಿಂದ ಆಗಿರುವ ನಿರ್ಲಕ್ಷ್ಯತನದಿಂದ ಇಲ್ಲಿ ವಾಸಿಸುವ ಬಡವರು ಬಲಿಪಶುವಾಗಿದ್ದಾರೆ. ಪುರಸಭೆ ಹೆಸರಿನಲ್ಲಿರುವ ಜಮೀನುಗಳನ್ನು ಮಾರಾಟ ಮಾಡಿ ಅದರಿಂದ ಬಂದ ಹಣವನ್ನು ೮೪೨/೨೨ ಮಾಲೀಕರಿಗೆ ಪರಿಹಾರ ನೀಡುವ ವ್ಯವಸ್ಥೆ ಮಾಡಬೇಕು. ನಿವಾಸಿಗಳಿಗೆ ಪುರಸಭೆ ಮುಖ್ಯಾಧಿಕಾರಿ ಏಕಾಏಕಿ ಮನೆ ತೆರವುಗೊಳಿಸಬೇಕು ಎಂದು ಹೇಳಿದರೆ ಎಲ್ಲಿಗೆ ಹೋಗಬೇಕು ಅವರಿಗೆ ಇನ್ನಷ್ಟು ೧೨-೧೫ದಿನಗಳವರೆಗೆ ಸಮಯವಕಾಶ ನೀಡಬೇಕೆಂದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಷ್ಯಾ ವಿಶ್ವ ಯುವ ಶೃಂಗ ಸಭೆಯಲ್ಲಿ ವಿಜಯಪುರದ ಶಿಫಾ ಭಾಗಿ

ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ಗೆ ರೂ.3೦ ಲಕ್ಷಕ್ಕೂ ಅಧಿಕ ಲಾಭ

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಷ್ಯಾ ವಿಶ್ವ ಯುವ ಶೃಂಗ ಸಭೆಯಲ್ಲಿ ವಿಜಯಪುರದ ಶಿಫಾ ಭಾಗಿ
    In (ರಾಜ್ಯ ) ಜಿಲ್ಲೆ
  • ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ಗೆ ರೂ.3೦ ಲಕ್ಷಕ್ಕೂ ಅಧಿಕ ಲಾಭ
    In (ರಾಜ್ಯ ) ಜಿಲ್ಲೆ
  • ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!
    In (ರಾಜ್ಯ ) ಜಿಲ್ಲೆ
  • ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ
    In (ರಾಜ್ಯ ) ಜಿಲ್ಲೆ
  • ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೀಳು ಮಟ್ಟದ ರಾಜಕೀಯಕ್ಕೆ ನಾಂದಿ ಹಾಡಿದ ಭೂಸನೂರ
    In (ರಾಜ್ಯ ) ಜಿಲ್ಲೆ
  • ಭಾರತ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿದ ಪ್ರಶಿಕ್ಷಣಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ನೆಚ್ಚಿನ ಶಿಕ್ಷಕಿಯ ವರ್ಗಾವಣೆಗೆ ಕಣ್ಣೀರಿಟ್ಟ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ರೈತರ ಬೇಡಿಕೆಯಂತೆ ಪರಿಹಾರ ದರ ನಿಗದಿಗೆ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.