Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಷ್ಯಾ ವಿಶ್ವ ಯುವ ಶೃಂಗ ಸಭೆಯಲ್ಲಿ ವಿಜಯಪುರದ ಶಿಫಾ ಭಾಗಿ

ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ಗೆ ರೂ.3೦ ಲಕ್ಷಕ್ಕೂ ಅಧಿಕ ಲಾಭ

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೋರಟಗಿ ಬಳಿಯ ಘತ್ತರಗಿ ಬ್ಯಾರೇಜ ಕಂ ಬ್ರಿಡ್ಜ್ ಜಲಾವೃತ!
(ರಾಜ್ಯ ) ಜಿಲ್ಲೆ

ಮೋರಟಗಿ ಬಳಿಯ ಘತ್ತರಗಿ ಬ್ಯಾರೇಜ ಕಂ ಬ್ರಿಡ್ಜ್ ಜಲಾವೃತ!

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಭಕ್ತರು ಸುರಕ್ಷಿತವಾಗಿ ಮರಳಿ ಸ್ವಗ್ರಾಮಕ್ಕೆ ತೆರಳಲು ಉಪವಿಭಾಗಾಧಿಕಾರಿ ಅನುರಾಧಾ ವಸ್ತ್ರದ ಎಚ್ಚರಿಕೆಯ ಸೂಚನೆ

ಉದಯರಶ್ಮಿ ದಿನಪತ್ರಿಕೆ

ಮೋರಟಗಿ: ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಶುಕ್ರವಾರ ರಾತ್ರಿ ೨.೨೦ ಲಕ್ಷ ಕಿಂತಲೂ ಅಧಿಕ ಕ್ಯುಸೆಕ್ಸ್ ನೀರು ಹರಿಬಿಟ್ಟಿದ್ದರಿಂದ ಭೀಮೆಯ ವಡಿಲು ತುಂಬಿ ತುಳುಕುತ್ತಿದೆ ಸಾರ್ವಜನಿಕರು ನದಿಯ ಅಕ್ಕಪಕ್ಕ ಸಂಚರಿಸಬಾರದು ಮೈಮರೆತರೆ ಪ್ರಾಣಕ್ಕೆ ಅಪಾಯ ಕಟ್ಟಿಟ್ಟಬುತ್ತಿ. ದೇವಿಯ ದರ್ಶನಕ್ಕೆ ಬಂದಂತ ಭಕ್ತರು ಸುರಕ್ಷಿತವಾಗಿ ಸ್ವಗ್ರಾಮಕ್ಕೆ ತೆರಳಬೇಕು ಎಂದು ಇಂಡಿ ಉಪವಿಭಾಗಾಧಿಕಾರಿ ಅನುರಾಧಾ ವಸ್ತ್ರದ ಎಚ್ಚರಿಕೆ ನೀಡಿದರು.
ಕೆಬಿಜೆಎನ್‌ಎಲ್ ಅಧಿಕಾರಿಗಳೊಂದಿಗೆ ಸಂಪರ್ಕಿಸಿ ಸಮೀಪದ ಬಗಲೂರ ಹಾಗೂ ಘತ್ತರಗಿ ಮದ್ಯದಲ್ಲಿ ನಿರ್ಮಿಸಲಾದ ಬ್ಯಾರೇಜ ಕಂ ಬ್ರಿಡ್ಜಗೆ ಬೇಟಿನೀಡಿ ನೀರಿನ ಪ್ರಮಾಣ ಪರಿಶೀಲಿಸಿ ಅವರು ಮಾತನಾಡಿದರು.
ಕಳೆದ ಒಂದು ವಾರದಿಂದ ನಮ್ಮ ರಾಜ್ಯ ಸೇರಿದಂತೆ ಮಹರಾಷ್ಟç ರಾಜ್ಯದಲ್ಲಿ ಅಧಿಕ ಮಳೆಯಾದ್ದರಿಂದ ಶುಕ್ರವಾರ ರಾತ್ರಿ ಉಜನಿ ಜಲಾಶಯದಿಂದ ಎರಡು ಲಕ್ಷದ ಇಪ್ಪತ್ತು ಸಾವಿರ ಕ್ಯೂಸೆಸ್ ನೀರನ್ನು ಹರಿಬಿಟ್ಟಿದ್ದಾರೆ ನದಿಯ ದಡದ ಗ್ರಾಮಗಳಾದ ಶಿರಸಗಿ, ಹಾವಳಗಿ, ಬಗಲೂರ ಗ್ರಾಮದ ಸಾರ್ವಜನಿಕರು ಸಣ್ಣಪುಟ್ಟ ಮಕ್ಕಳು, ದನಕರಗಳು, ನದಿಯ ದಡದ ಕಡೆಗೆ ಬರದ ಹಾಗೆ ನಿಗಾ ವಹಿಸಬೇಕು ವಿಶೇಷವಾಗಿ ಯುವಕರು ಇನಷ್ಠಾಗ್ರಾಮ್ ರೀಲ್ಸ, ಸೆಲ್ಪಿ ಪೋಟೋ ತೆಗೆದುಕೊಳ್ಳುವ ಭರದಲ್ಲಿ ಯಾಮಾರಿದರೆ ಅನಾಹುತ ತಪ್ಪಿದ್ದಲ್ಲ ಎಂದು ಹೇಳಿದ ಅವರು ದ್ವೀಚರ್ಕ ವಾಹನ, ಅಟೋರಿಕ್ಷಾ, ಜೀಪ ಟ್ಯಾಕ್ಷಿ ಸೇರಿದಂತೆ ಎಲ್ಲ ಖಾಸಗಿ ವಾಹನಗಳನ್ನು ನಿರ್ಭಂದಿಸಲಾಗಿದೆ ಅಮವಾಸೆಗೆ ಬಂದAತ ಭಕ್ತರಿಗೆ ದೇವಿಯ ದರ್ಶನ ಸಿಗದಿದ್ದರೂ ಪರವಾಗಿಲ್ಲ ಮುಂದಿನ ಅಮವಾಸೆಗೆ ಖಂಡಿತವಾಗಿ ದೇವಿಯ ದರ್ಶನ ಪಡೆಯಬಹುದು ಎಂದರು.
ನದಿ ಪರಿಶೀಲನೆ ಸಂದರ್ಭದಲ್ಲಿ ತಹಸೀಲ್ದಾರ್ ಧನಪಾಲ ಶೆಟ್ಟಿ, ಸಿಂದಗಿ ಸಿಪಿಐ ನಾನಾಗೌಡ ಪೋಲಿಸಪಾಟೀಲ, ಕಂದಾಯ ನಿರೀಕ್ಷಕ ಆರ್ ಆಯ್ ಅತ್ತಾರ, ಗ್ರಾಮ ಲೆಕ್ಕಾಧಿಕಾರಿ ಅಕ್ಕಮ್ಮ ಗಸ್ಥಿ, ಪೋಲೀಸ ಸಿಬ್ಬಂದಿಗಳಾದ ಭಿಮು ಲಮಾಣಿ, ನಿಂಗಪ್ಪ ಪೂಜಾರಿ, ಈರಣ್ಣ ಕೋಟ್ಯಾಳ, ಸೇರಿದಂತೆ ಕೆಬಿಜೆಎನ್‌ಎಲ್ ಅಧಿಕಾರಿಗಳು ಇದ್ದರು.

“ಉಜನಿ ಜಲಾಶಯದಿಂದ ಗುರುವಾರ ಒಂದು ಲಕ್ಷದ ಹನ್ನೊಂದು ಸಾವಿರದ ಆರುನೂರು ಕ್ಯೂಸೆಸ್ ನೀರು ಬಿಡಲಾಗಿತ್ತು ಶುಕ್ರವಾರ ರಾತ್ರಿ ಎರಡು ಲಕ್ಷ ಇಪ್ಪತ್ತು ಸಾವಿರ ಕ್ಯೂಸೆಸ್ ನೀರನ್ನು ಬಿಟ್ಟಿದ್ದಾರೆ ರವಿವಾರ ಸಾಯಂಕಾಲ ಅಥವಾ ಸೋಮುವಾರ ಬೆಳಿಗ್ಗೆ ನೀರಿನ ಪ್ರಮಾಣ ಕಡಿಮೆ ಆಗುವ ಎಲ್ಲ ಸಾದ್ಯತೆ ಇದೆ ನೀರಿನ ಪ್ರಮಾಣ ಕಡಿಮೆಯಾಗುವರೆಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು.”

– ಸಿದ್ರಾಮ ಶೀಲವಂತ
ಎಇ, ಕೆಬಿಜೆಎನ್‌ಎಲ್, ಇಂಡಿ

ನಿರಾಸೆಗೊಂಡ ಭಾಗ್ಯವಂತಿ ಭಕ್ತರು

ಅಫಜಲಪೂರ ತಾಲೂಕಿನ ಶ್ರೀಕ್ಷೆತ್ರ ಘತ್ತರಗಿ ಗ್ರಾಮದಲ್ಲಿ ಭದ್ರನೆಲೆಯಾಗಿ ನೆಲಸಿದ ಶ್ರೀಭಾಗ್ಯವಂತಿ ದೇವಿಯ ದರ್ಶನಕ್ಕೆ ಪ್ರತಿ ಶುಕ್ರವಾರ ನೂರಾರು ಭಕ್ತರು ಆಗಮಿಸಿದರೆ ಅಮವಾಸೆಗೆ ವಿಶೇಷವಾಗಿ ಮಹಾರಾಷ್ಟ್ರ, ಆಂದ್ರ, ತೆಲಂಗಾಣದಿಂದ ವಾಹನ ಮುಗಿಸಿಕೊಂಡ ಸಾವಿರಾರು ಭಕ್ತರು ಬರುವುದು ಸರ್ವೆ ಸಾಮಾನ್ಯ ಬ್ಯಾರೇಜ ಕಂ ಬ್ರಿಡ್ಜ ಸಂಪೂರ್ಣ ಜಲಾವ್ರತ ಅಗಿದ್ದರಿಂದ ಬಂದಂತ ಭಕ್ತರು ಮೋರಟಗಿ ಹೆದ್ದಾರಿ ಪಕ್ಕದಲ್ಲಿ ನಿಂತು ಕೈಮುಗಿದು ಮರಳಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಷ್ಯಾ ವಿಶ್ವ ಯುವ ಶೃಂಗ ಸಭೆಯಲ್ಲಿ ವಿಜಯಪುರದ ಶಿಫಾ ಭಾಗಿ

ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ಗೆ ರೂ.3೦ ಲಕ್ಷಕ್ಕೂ ಅಧಿಕ ಲಾಭ

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಷ್ಯಾ ವಿಶ್ವ ಯುವ ಶೃಂಗ ಸಭೆಯಲ್ಲಿ ವಿಜಯಪುರದ ಶಿಫಾ ಭಾಗಿ
    In (ರಾಜ್ಯ ) ಜಿಲ್ಲೆ
  • ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ಗೆ ರೂ.3೦ ಲಕ್ಷಕ್ಕೂ ಅಧಿಕ ಲಾಭ
    In (ರಾಜ್ಯ ) ಜಿಲ್ಲೆ
  • ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!
    In (ರಾಜ್ಯ ) ಜಿಲ್ಲೆ
  • ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ
    In (ರಾಜ್ಯ ) ಜಿಲ್ಲೆ
  • ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೀಳು ಮಟ್ಟದ ರಾಜಕೀಯಕ್ಕೆ ನಾಂದಿ ಹಾಡಿದ ಭೂಸನೂರ
    In (ರಾಜ್ಯ ) ಜಿಲ್ಲೆ
  • ಭಾರತ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿದ ಪ್ರಶಿಕ್ಷಣಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ನೆಚ್ಚಿನ ಶಿಕ್ಷಕಿಯ ವರ್ಗಾವಣೆಗೆ ಕಣ್ಣೀರಿಟ್ಟ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ರೈತರ ಬೇಡಿಕೆಯಂತೆ ಪರಿಹಾರ ದರ ನಿಗದಿಗೆ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.