Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆಗಳು ಸಹಕಾರಿ
(ರಾಜ್ಯ ) ಜಿಲ್ಲೆ

ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆಗಳು ಸಹಕಾರಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬೆಳಗಾವಿ ವೃತ್ತ ಮಟ್ಟದ ಅರಣ್ಯ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ನಿವೃತ್ತ ಐಎಎಸ್ ಅಧಿಕಾರಿ ಅಶೋಕ ದಳವಾಯಿ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಅರಣ್ಯ ರಕ್ಷಣೆ ಮಾಡುವ ಮಹತ್ತರ ಜವಾಬ್ದಾರಿಯನ್ನು ನಿಭಾಯಿಸುವ ಅರಣ್ಯ ಇಲಾಖೆಯ ಅಧಿಕಾರಿ-ಸಿಬ್ಬಂದಿಗಳು ತಮ್ಮ ಕರ್ತವ್ಯದೊಂದಿಗೆ ಸಾಂಸ್ಕೃತಿಕ ಹಾಗೂ ಕ್ರೀಡೆಗಳಲ್ಲಿ ಭಾಗವಹಿಸುವುದು ಅಗತ್ಯವಾಗಿದೆ. ಎಲ್ಲರೂ ಆಟೋಟಗಳಲ್ಲಿ ಪಾಲ್ಗೊಳ್ಳುವ ಮೂಲಕ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಂಡು ಕ್ರೀಡಾ ಸ್ಪೂರ್ತಿ ಮೆರೆಯಬೇಕು. ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆಗಳು ಸಹಕಾರಿಯಾಗಿವೆ ಎಂದು ನಿವೃತ್ತ ಐಎಎಸ್ ಅಧಿಕಾರಿಯಾದ ಅಶೋಕ ದಳವಾಯಿ ಅವರು ಹೇಳಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಬೆಳಗಾವಿ ವೃತ್ತ ಮಟ್ಟದ ಅರಣ್ಯ ಕ್ರೀಡಾಕೂಟಕ್ಕೆ ಚಾಲನೆ ನೀಡಿ, ಮಾತನಾಡಿದ ಅವರು, ಕಾಯಕವೇ ಕೈಲಾಸ ಎಂಬ ಬಸವಾದಿ ಶರಣರ ನುಡಿಯಂತೆ ನಾವು ನಿರ್ವಹಿಸುವ ಕಾರ್ಯವನ್ನು ಅತ್ಯಂತ ನೈತಿಕವಾಗಿ, ಶ್ರದ್ಧೆಯಿಂದ ನಿರ್ವಹಿಸಬೇಕು. ಅರಣ್ಯ ಇಲಾಖೆ ಅರಣ್ಯೀಕರಣಕ್ಕಾಗಿ ಹಗಲಿರುಳು ಶ್ರಮಿಸುತ್ತಿದೆ. ಕೆಲಸಗಳ ಒತ್ತಡದ ಮಧ್ಯೆಯೂ ಇಂತಹ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ಆತ್ಮಸ್ಥೈರ್ಯ, ಮುಂದಾಳತ್ವ, ಪರಸ್ಪರ ಪರಿಚಯ ವೃದ್ಧಿಗೆ ಸಹಾಯಕವಾಗಿವೆ. ಕ್ರೀಡಾ ನಿಯಮಗಳಿಗೆ, ನಿರ್ಣಾಯಕರ ನಿರ್ಣಯಕ್ಕೆ ಬದ್ಧರಾಗಿ ನೈಜ ಕ್ರೀಡಾ ಮನೋಭಾವ ಹೊಂದಬೇಕು. ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಹಿರಿಮೆ-ಗರಿಮೆ ಹೆಚ್ಚಿಸುವಂತೆ ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾತ್ರಾಳ-ಬಾಲಗಾಂವ-ಗುರುದೇವ ಆಶ್ರಮದ ಶ್ರೀ ಅಮೃತಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು.
ಕಾರ್ಯಕ್ರಮದಲ್ಲಿ ಖ್ಯಾತ ಸೈಕಲಿಸ್ಟ್ ಸುಜಲ್ ಸಾಗರ ಜಾಧವ ಅವರನ್ನು ಸನ್ಮಾನಿಸಲಾಯಿತು.
ಮುಧೋಳ ಪ್ರಾದೇಶಿಕ ವಲಯದ ಗಸ್ತು ಅರಣ್ಯ ಪಾಲಕರಾದ ಫಕೀರಪ್ಪ ವಿಠ್ಠಲ ಭಾಂಗಿ, ಬೆಳಗಾವಿ ಪ್ರಾದೇಶಿಕ ವಲಯದ ಗಸ್ತು ಅರಣ್ಯ ಪಾಲಕರಾದ ಮಲ್ಲಿಕಾರ್ಜುನ ಬಿ. ಜ್ಯೋತೆನ್ನವರ, ಬೆಳಗಾವಿಯ ಕಾರ್ಯಯೋಜನೆ ಮತ್ತು ಅರಣ್ಯ ಸಮಿಕ್ಷೆಯ ಉಪ ವಲಯದ ಅರಣ್ಯ ಅಧಿಕಾರಿ ವ ಮೋಜಣಿದಾರ ಸಂಜಯಕುಮಾರ ಬಿಜಕಲ್ ಬಿ., ರಾಮದುರ್ಗ ಪ್ರಾದೇಶಿಕ ವಲಯದ ಗಸ್ತು ಅರಣ್ಯ ಪಾಲಕರಾದ ಮಹಾಂತೇಶ ತೇಲಿ, ಆಲಮಟ್ಟಿ ಕೆ.ಬಿ.ಜೆ.ಎನ್.ಎಲ್ ವಲಯ ಅರಣ್ಯ ಅಧಿಕಾರಿಯಾದ ರಾಜಶೇಖರ ಲಮಾಣಿಯವರು ಕ್ರೀಡಾ ಜ್ಯೋತಿಯೊಂದಿಗೆ ಆಗಮಿಸಿದರು.
ಬೆಳಗಾವಿ ಪ್ರಾದೇಶಿಕ ವಿಭಾಗ, ಬೆಳಗಾವಿ ಸಾಮಾಜಿಕ ವಿಭಾಗ, ವಿಜಯಪುರ ಅರಣ್ಯ ವಿಭಾಗ, ಬಾಗಲಕೋಟ ಅರಣ್ಯ ವಿಭಾಗ, ಗೋಕಾಕ ಅರಣ್ಯ ವಿಭಾಗ ತಂಡಗಳು ಆಕರ್ಷಕ ಪಥಸಂಚಲನ ನಡೆಸಿದವು.
ಈ ಸಂದರ್ಭದಲ್ಲಿ ಕ್ರೀಡಾ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಬೆಳಗಾವಿ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚವ್ಹಾಣ, ವಿಜಯಪುರ ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಲ್ಲಿನಾಥ ಕುಸನಾಳ, ಆಲಮಟ್ಟಿ ಕೆ.ಬಿ.ಜೆ.ಎನ್.ಎಲ್‌ನ ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ಕೆ.ಬಗಾಯತ್, ಬೆಳಗಾವಿ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮರಿಯಾ ಕ್ರಿಸ್ತುರಾಜು, ಕೃಷಿ ಜಂಟಿ ನಿರ್ದೇಶಕರಾದ ಶಿವನಗೌಡ ಪಾಟೀಲ, ಬಾಗಲಕೋಟೆಯ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರುದ್ರನ್ ಪಿ.ಎಸ್, ಗೋಕಾಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರ ಪ್ರಿಯದರ್ಶಿ, ಬಾಗಲಕೋಟೆ ಸಾಮಾಜಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎಸ್.ಗೊರವರ, ಬೆಳಗಾವಿಯ ವಿಶಾಲ ಪಾಟೀಲ, ಬೆಳಗಾವಿ ಅರಣ್ಯ ಸಂಚಾರಿಗಳ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರುದ್ರಪ್ಪ ಕಬಾಡಗಿ, ವಿಜಯಪುರ ಪ್ರಾದೇಶಿಕ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಭಾಗ್ಯವಂತ ಮಸೂದಿ, ವಿಜಯಪುರ ಸಾಮಾಜಿಕ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎ.ಎಸ್.ಪಾಕ್, ಆಲಮಟ್ಟಿ ಕೆ.ಬಿ.ಜೆ.ಎನ್.ಎಲ್‌ನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಆರ್.ಆರ್. ಚವ್ಹಾಣ, ಇಂಡಿ ಪ್ರಾದೇಶಿಕ ವಲಯದ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಜಿ.ಸಂಗಾಲಕ, ವಿಜಯಪುರದ ವಲಯ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ ಆಜೂರ, ಬಸವನ ಬಾಗೇವಾಡಿಯ ವಲಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಶಾಂತ ಗಾಣಿಗೇರ, ಕ್ರೀಡಾಧಿಕಾರಿ ರಾಜಶೇಖರ ದೈವಾಡಿ, ಉಪ ವಲಯ ಅಧಿಕಾರಿ ವಿರೇಶ ಆಂದೋಲಿ, ಇಂಡಿ ವಲಯ ಸಮಾಜಿಕ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಧೂಳೆ, ಗಸ್ತು ಅರಣ್ಯ ಪಾಲಕ ಧನರಾಜ ಮುಜಗೊಂಡ ಸೇರಿದಂತೆ ಕ್ರೀಡಾಪಟುಗಳು, ಇಲಾಖೆಯ ಅಧಿಕಾರಿ, ಸಿಬ್ಬಂದಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!
    In (ರಾಜ್ಯ ) ಜಿಲ್ಲೆ
  • ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ
    In (ರಾಜ್ಯ ) ಜಿಲ್ಲೆ
  • ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೀಳು ಮಟ್ಟದ ರಾಜಕೀಯಕ್ಕೆ ನಾಂದಿ ಹಾಡಿದ ಭೂಸನೂರ
    In (ರಾಜ್ಯ ) ಜಿಲ್ಲೆ
  • ಭಾರತ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿದ ಪ್ರಶಿಕ್ಷಣಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ನೆಚ್ಚಿನ ಶಿಕ್ಷಕಿಯ ವರ್ಗಾವಣೆಗೆ ಕಣ್ಣೀರಿಟ್ಟ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ರೈತರ ಬೇಡಿಕೆಯಂತೆ ಪರಿಹಾರ ದರ ನಿಗದಿಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಯಲ್ಲಿ ಮತ್ತೆ ಹೆಚ್ಚಾದ ಒಳ ಹರಿವು
    In (ರಾಜ್ಯ ) ಜಿಲ್ಲೆ
  • ಹಳ್ಳ ದಾಟಲು ಹರಸಾಹಸ ಪಟ್ಟ ಶಿಕ್ಷಕರು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.