ಚಡಚಣ: ದೇಶಕ್ಕೆ ಗಾಂಧೀಜಿ ಮತ್ತು ಲಾಲ ಬಹಾದ್ದೂರ ಶಾಸ್ತ್ರಿ ಅವರ ಕೊಡುಗೆ ಅಪಾರವಾಗಿದೆ ಎಂದು ನಂದರಗಿ ಗ್ರಾಪಂ ಸದಸ್ಯ ಅಪುಗೌಡ ಚ.ಪಾಟೀಲ ಹೇಳಿದರು.
ಚಡಚಣ ತಾಲೂಕಿನ ನಂದರಗಿ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ ಬಹಾದ್ದೂರ ಶಾಸ್ತ್ರಿ ಅವರ ಜಯಂತಿನ್ನುದ್ದೇಸಿ ಮಾತನಾಡಿದ ಅವರು, ದೇಶಕ್ಕೆ ಗಾಂಧೀಜಿ ಮತ್ತು ಲಾಲ ಬಹಾದ್ದೂರ ಅವರ ಕೊಡುಗೆ ನಾವು ನಿಜಕ್ಕೂ ಸ್ಮರಿಸುವಂಥದ್ದು,ದೇಶದ ಯುವ ಪೀಳಿಗೆ ಅವರ ಆಚಾರ ವಿಚಾರಗಳನ್ನು ,ಧೈರ್ಯ ಸಾಹಸವನ್ನು, ತತ್ವಾದರ್ಶಗಳನ್ನು ಇಂದಿನ ಯುವ ಪೀಳಿಗೆ ಅಳವಡಿಸಿಕೊಳ್ಳಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು,ಸರ್ವ ಸದಸ್ಯರು ಅಭಿವೃದ್ಧಿ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment