Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಂದಿ ಸಕ್ಕರೆ ಕಾರ್ಖಾನೆಯಲ್ಲಿ ₹12.33 ಕೋಟಿ ಕಬ್ಬು ತೂಕ ವಂಚನೆ

ಶಾಸಕ ಕಟಕಧೋಂಡ ಗೆ ಸಚಿವ ಸ್ಥಾನ ನೀಡಲು ಆಗ್ರಹ

ಪಂಚಮಸಾಲಿ ಸಮಾಜಕ್ಕೆ ನ್ಯಾಯ ಒದಗಿಸಲು ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮುಖ್ಯಾಧಿಕಾರಿಗೆ ಸದಸ್ಯರಿಂದ ನೋಟಿಸ್ ಕುರಿತು ಆಕ್ಷೇಪ
(ರಾಜ್ಯ ) ಜಿಲ್ಲೆ

ಮುಖ್ಯಾಧಿಕಾರಿಗೆ ಸದಸ್ಯರಿಂದ ನೋಟಿಸ್ ಕುರಿತು ಆಕ್ಷೇಪ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆ | ಸಂತೆ ಹಾಗೂ ಮಾರಾಟ ಕುರಿತಾದ ಟೆಂಡರ್ ಕರೆಯಲು ಸದಸ್ಯರ ಒತ್ತಾಯ | ಕಾಂಗ್ರೆಸ್ ಸದಸ್ಯರಲ್ಲಿಯೇ ಪರಸ್ಪರ ವಾಗ್ವಾದ | ಕಾಂಗ್ರೆಸ್ ಸದಸ್ಯ ಬಶೀರ್ ಅಹ್ಮದ್ ಬೇಪಾರಿಯಿಂದ ಅನುಚಿತ, ಅಸಭ್ಯ ಪದಗಳ ಬಳಕೆ

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಮಹಿಳಾ ಸದಸ್ಯರ ಮೌನ, ಕೆಲವೇ ಬೆರಳೆಣಿಕೆಯ ಸದಸ್ಯರು ಚರ್ಚೆಯಲ್ಲಿ ಭಾಗಿ, ಇಂತಹ ಹಲವು ವಿಶೇಷಗಳ ನಡುವೆ ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಸಾಮಾನ್ಯ ಸಭೆ ಜರುಗಿತು.
ಪಟ್ಟಣದ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಬೆಳಿಗ್ಗೆ ಆರಂಭಗೊಂಡ ಸಾಮಾನ್ಯ ಸಭೆಯಲ್ಲಿ ಹಿಂದಿನ ಐದು ತಿಂಗಳ ಜಮಾ ಖರ್ಚು, ಸಂತೆ ಲೀಲಾವು ಟೆಂಡರ್, ಇ-ಖಾತಾ ಉತಾರಿ ಕುರಿತು ಚರ್ಚೆ ಆರಂಭಗೊಂಡಿತು.
ಈ ಸಂದರ್ಭದಲ್ಲಿ ಸಭೆಯ ನೋಟಿಸ್ ಕುರಿತಾಗಿ ಕಾಂಗ್ರೆಸ್ ಸದಸ್ಯ ಬಶೀರ್‌ಅಹ್ಮದ್ ಬೇಪಾರಿ ಆರಂಭದಲ್ಲಿಯೇ ಆಕ್ಷೇಪ ವ್ಯಕ್ತಪಡಿಸಿದರು. ನಾಮ ನಿರ್ದೇಶಿತ ಸದಸ್ಯರಿಗೆ ಹಿಂದಿನ ಸಭೆಯ ಕುರಿತು ಮಾಹಿತಿ ನೀಡದ ಹಾಗೂ ಸಹಿ ಪಡೆಯದ ವಿಷಯಗಳಿಗೆ ಸಂಬಂಧಿಸಿದಂತೆ ಆಕ್ರೋಶ ವ್ಯಕ್ತಪಡಿಸಿ ನಾಮ ನಿರ್ದೇಶಿತ ಸದಸ್ಯ ರಾಜು ಮೆಟಗಾರ ಸಭೆಯಿಂದ ಹೊರನಡೆದರು. ನಂತರ ಸಂತೆ ಹಾಗೂ ಮಾರಾಟದ ಕುರಿತಾಗಿ ಟೆಂಡರ್ ಕರೆಯದೇ ಇರುವ ವಿಷಯವಾಗಿ ಚರ್ಚೆ ಆರಂಭಗೊಂಡು ಸದಸ್ಯರಾದ ಕಾಸುಗೌಡ ಜಲಕತ್ತಿ, ಕಾಸು ಜಮಾದಾರ, ಬಶೀರ್ ಅಹ್ಮದ್ ಬೇಪಾರಿ, ಉಮೇಶ ರೂಗಿ ಮಾತನಾಡಿ, ಕಳೆದ ದಿನಗಳಿಂದ ಸಂಗ್ರಹಿಸಿದ ಸಂತೆ ಹಾಗೂ ಮಾರಾಟದ ಕರಸಂಗ್ರಹದ ಮಾಹಿತಿ ನೀಡಲು ಸದಸ್ಯರು ಆಗ್ರಹಿಸಿದರು.
ವಿವಿಧ ವಾರ್ಡಗಳಲ್ಲಿ ೨ ಲಕ್ಷ ರೂ.ಗಳ ವೆಚ್ಚದಲ್ಲಿ ಕೈಗೊಂಡ ಕಾಮಗಾರಿ ಕುರಿತು ಸದಸ್ಯರು ಮುಖ್ಯಾಧಿಕಾರಿಗಳ ನಡುವೆ ಚರ್ಚೆ ಜರುಗಿತು. ಈ ಸಂದರ್ಭದಲ್ಲಿ ಸಿ.ಸಿ.ಕ್ಯಾಮೆರಾ ಅಗತ್ಯತೆ, ಅಳವಡಿಕೆ ಕುರಿತು ಸದಸ್ಯರು ಸೂಚಿಸಿದರು. ಜೊತೆಗೆ ೭ ಲಕ್ಷ ರೂ.ಗಳ ವೆಚ್ಚದಲ್ಲಿ ಪಟ್ಟಣ ಪಂಚಾಯಿತಿಗೆ ಒದಗಿಸಲಾದ ಪೀಠೋಪಕರಣಗಳ ರಶೀದಿಯನ್ನು ಮುಂದಿನ ಸಭೆಯಲ್ಲಿ ನೀಡಲು ಕಾಂಗ್ರೆಸ್ ಸದಸ್ಯರು ಒತ್ತಾಯಿಸಿದರು.
ಪಟ್ಟಣ ಪಂಚಾಯಿತಿ ಸದಸ್ಯರ ಗಮನಕ್ಕೆ ತಾರದೇ ಮುಖ್ಯಾಧಿಕಾರಿಗಳು ತಾವೇ ನಿರ್ಧಾರ ಕೈಗೊಳ್ಳುವದು ಹಾಗೂ ಉತಾರಿ ನೀಡುವ ಸಂದರ್ಭದಲ್ಲಿ ಅನಗತ್ಯ ಹಣ ಪಡೆಯಲಾಗುತ್ತಿರುವ ವಿಷಯಗಳ ಕುರಿತು ಕಾಂಗ್ರೆಸ್ ಸದಸ್ಯರು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
ನಾಮ ನಿರ್ದೇಶಿತ ಸದಸ್ಯರ ಸಹಿತ ೨೦ ಜನ ಸದಸ್ಯ ಬಲದಲ್ಲಿ ಕೇವಲ ೧೬ ಜನ ಸದಸ್ಯರ ಹಾಜರಿದ್ದರು. ಸಭೆಯಲ್ಲಿ ಅಧ್ಯಕ್ಷೆ, ಉಪಾಧ್ಯಕ್ಷ ಸಹಿತ ಮಹಿಳಾ ಸದಸ್ಯರು ಮೌನದ ಮೊರೆಹೋದರು. ಕೆಲವು ವಿಷಯಗಳ ಚರ್ಚೆಯಲ್ಲಿ ಕಾಂಗ್ರೆಸ್ ಸದಸ್ಯರು ಮಹಿಳಾ ಸದಸ್ಯರಿದ್ದಾರೆ ಎಂಬುದನ್ನು ಗಮನಿಸದೇ ಅನುಚಿತ, ಅವಾಚ್ಯ ಶಬ್ಧಗಳ ಬಳಕೆ ಮಾಡಿದ್ದು ಕಂಡು ಬಂದಿತು.
ಸಭೆಯಲ್ಲಿ ಅಧ್ಯಕ್ಷೆ ಜಯಶ್ರೀ ದೇವಣಗಾಂವ, ಉಪಾಧ್ಯಕ್ಷ ರಮೇಶ ಮಸಬಿನಾಳ, ಮುಖ್ಯಾಧಿಕಾರಿ ಎಸ್.ಎಸ್.ಬಾಗಲಕೋಟ, ಸದಸ್ಯರಾದ ಶಾಂತಯ್ಯ ಜಡಿಮಠ, ಕಾಸುಗೌಡ ಬಿರಾದಾರ(ಜಲಕತ್ತಿ), ಸಿಂಧೂರ ಡಾಲೇರ, ನಾಮ ನಿರ್ದೇಶಿತ ಸದಸ್ಯರಾದ ರಾಜು ಮೆಟಗಾರ, ಹುಸೇನ್ ಕೊಕಟನೂರ, ಸುನೀಲ ಕನಮಡಿ ಹಾಗೂ ಮಹಿಳಾ ಸದಸ್ಯರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಂದಿ ಸಕ್ಕರೆ ಕಾರ್ಖಾನೆಯಲ್ಲಿ ₹12.33 ಕೋಟಿ ಕಬ್ಬು ತೂಕ ವಂಚನೆ

ಶಾಸಕ ಕಟಕಧೋಂಡ ಗೆ ಸಚಿವ ಸ್ಥಾನ ನೀಡಲು ಆಗ್ರಹ

ಪಂಚಮಸಾಲಿ ಸಮಾಜಕ್ಕೆ ನ್ಯಾಯ ಒದಗಿಸಲು ಆಗ್ರಹ

ಹೆಣ್ಣುಮಕ್ಕಳಿಗೆ ತೊಂದರೆ ನೀಡುವ ಪುಂಡರ ಮೇಲೆ ಕ್ರಮಕ್ಕೆ ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಂದಿ ಸಕ್ಕರೆ ಕಾರ್ಖಾನೆಯಲ್ಲಿ ₹12.33 ಕೋಟಿ ಕಬ್ಬು ತೂಕ ವಂಚನೆ
    In (ರಾಜ್ಯ ) ಜಿಲ್ಲೆ
  • ಶಾಸಕ ಕಟಕಧೋಂಡ ಗೆ ಸಚಿವ ಸ್ಥಾನ ನೀಡಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಪಂಚಮಸಾಲಿ ಸಮಾಜಕ್ಕೆ ನ್ಯಾಯ ಒದಗಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಹೆಣ್ಣುಮಕ್ಕಳಿಗೆ ತೊಂದರೆ ನೀಡುವ ಪುಂಡರ ಮೇಲೆ ಕ್ರಮಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರ ಕೂಡಲೇ ಶಿಕ್ಷಣ ಕ್ಷೇತ್ರದ ಸಮಸ್ಯೆಗಳತ್ತ ಗಮನಹರಿಸಲಿ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಿಸಿದ ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಮುಂಗಾರು ಹಂಗಾಮಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಜಾರಿ
    In (ರಾಜ್ಯ ) ಜಿಲ್ಲೆ
  • ಕಿತ್ತೂರ ರಾಣಿ ಚನ್ನಮ್ಮ ವಿವಿ ಸ್ನಾತಕೋತ್ತರ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಾಸಕ ಶಿವಾನಂದರಿಗೆ ಅಧಿಕಾರಿಗಳಿಂದ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಸ್ನಾತಕ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.