ಉದಯರಶ್ಮಿ ದಿನಪತ್ರಿಕೆ
ಸಿಂದಗಿ:ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮಹಾವಿದ್ಯಾಲಯಗಳ ತಾಲೂಕಾ ಮಟ್ಟದ ಗುಂಪು ಆಟಗಳಲ್ಲಿ ಬಾಲಕರ ಕಬಡ್ಡಿ ಪ್ರಥಮ, ಬಾಲಕರ ವ್ಹಾಲಿಬಾಲ್ ಪ್ರಥಮ, ಬಾಲಕಿಯರ ಕಬಡ್ಡಿ ಪ್ರಥಮ, ಬಾಲಕಿಯರ ಖೋಖೋ ಪ್ರಥಮ, ಬಾಲಕರ ಟೆನಿಕ್ವಾಯಿಟ್ ಪ್ರಥಮ ಹಾಗೂ ಬಾಲಕಿಯರ ಟೆನಿಕ್ವಾಯಿಟ್ ದ್ವಿತೀಯ, ಬಾಲಕರ ಖೋಖೋ ದ್ವಿತೀಯ ಸ್ಥಾನಗಳನ್ನು ಪಟ್ಟಣದ ಆರ್.ಡಿ.ಪಾಟೀಲ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ೪೫ಜನ ವಿದ್ಯಾರ್ಥಿಗಳು ಸಮಗ್ರ ವೀರಾಗ್ರಣೆ ಪ್ರಶಸ್ತಿಯನ್ನು ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರ ಸಾಧನೆಗೆ ಮಾರ್ಗದರ್ಶನ ನೀಡಿದ ದೈಹಿಕ ಉಪನ್ಯಾಸಕ ಗವಿಸಿದ್ದಪ್ಪ ಆನೆಗುಂದಿ ಹಾಗೂ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಚೇರಮನ್ನರಾದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು, ಆಡಳಿತ ಮಂಡಳಿಯ ಸರ್ವ ಸದಸ್ಯರು, ಪ್ರಾಚಾರ್ಯ ಭೀಮನಗೌಡ ಸಿಂಗನಳ್ಳಿ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದಿಸಿ ಹರ್ಷವ್ಯಕ್ತಪಡಿಸಿದ್ದಾರೆ.