Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿ ಅತಿಕ್ರಮಣ!

ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ನ್ಯಾ.ಕೌಶಿಕ್

ಮಾ.೨೪ ರಂದು ಪೂರ್ವಭಾವಿ ಸಭೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿಯಿಂದ ರಾಜಕೀಯ
(ರಾಜ್ಯ ) ಜಿಲ್ಲೆ

ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿಯಿಂದ ರಾಜಕೀಯ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಧರ್ಮಸ್ಥಳ ಮತ್ತು ಚಾಮುಂಡಿ ಬೆಟ್ಟದ ವಿಷಯದಲ್ಲಿ ಬಿಜೆಪಿಯ ನಡವಳಿಕೆ “ಬೂಟಾಟಿಕೆ” | ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ

ಮೈಸೂರು: ಬಿಜೆಪಿಯ “ಧರ್ಮಸ್ಥಳ ಚಲೋ” ರ್‍ಯಾಲಿ “ರಾಜಕೀಯ ಲಾಭಕ್ಕಾಗಿ” ಎಂದು ಟೀಕಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇದರಿಂದ ವಿರೋಧ ಪಕ್ಷಕ್ಕೆ ಯಾವುದೇ ರಾಜಕೀಯ ಲಾಭವಾಗುವುದಿಲ್ಲ ಎಂದು ಸೋಮವಾರ ಹೇಳಿದ್ದಾರೆ.
ಧರ್ಮಸ್ಥಳ ಮತ್ತು ಚಾಮುಂಡಿ ಬೆಟ್ಟದ ವಿಷಯದಲ್ಲಿ ಬಿಜೆಪಿಯ ನಡವಳಿಕೆ “ಬೂಟಾಟಿಕೆ” ಎಂದು ಕರೆದ ಮುಖ್ಯಮಂತ್ರಿ, ಅವರು ಮಾಡುತ್ತಿರುವ “ಬೂಟಾಟಿಕೆ”ಯಿಂದ ಹಿಂದೂಗಳು ತಮ್ಮೊಂದಿಗೆ ಬರುತ್ತಾರೆ ಎಂದು ಭಾವಿಸಿದ್ದಾರೆ. ಆದರೆ ಅದು ತಪ್ಪು ಎಂದು ತಿರುಗೇಟು ನೀಡಿದರು.
ಧರ್ಮಸ್ಥಳದ ವಿರುದ್ಧ ಪಿತೂರಿ ಮತ್ತು ಅಪಪ್ರಚಾರ ಖಂಡಿಸಿ ಬಿಜೆಪಿ ಧರ್ಮಸ್ಥಳಕ್ಕೆ ಯಾತ್ರೆ ಕೈಗೊಂಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ರಾಜಕೀಯವಾಗಿ ಯಾತ್ರೆ ಕೈಗೊಂಡಿದೆ. ಅವರಿಗೆ ರಾಜಕೀಯ ಲಾಭ ಸಿಗುತ್ತದೆ ಎಂದು ಭಾವಿಸಿದ್ದಾರೆ. ಆದರೆ ಅದು ಸಿಗುವುದಿಲ್ಲ. ಏಕೆಂದರೆ ಧರ್ಮಸ್ಥಳದ ಬಗ್ಗೆ ನಮಗೆ ಅಪಾರವಾದ ಗೌರವವಿದೆ. ಎಸ್ಐಟಿ ರಚಿಸಿದಾಗ ವಿರೋಧ ಮಾಡದೆ ಇದ್ದವರು, ನಂತರದಲ್ಲಿ ಏನೂ ಸಿಗುವುದಿಲ್ಲ ಎಂದು ತಿಳಿದು ವಿರೋಧಿಸುತ್ತಿದ್ದಾರೆ. ಇದು ಢೋಂಗಿತನ ಎಂದು ವಾಗ್ದಾಳಿ ನಡೆಸಿದರು.
ಇನ್ನು ಚಾಮುಂಡಿ ಬೆಟ್ಟ ಮತ್ತು ದೇವಾಲಯದ ವಿಷಯದಲ್ಲಿ ‘ಚಾಮುಂಡಿ ಚಲೋ’ ಮಾಡಬೇಕಾಗುತ್ತದೆ ಎಂದು ಬಿಜೆಪಿ ಎಚ್ಚರಿಸಿರುವ ಕುರಿತ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ಇಂತಹ ಕೆಲಸಗಳನ್ನು ಮಾಡುವುದರಿಂದ ಹಿಂದುತ್ವ ಬಲಗೊಳ್ಳುತ್ತದೆ ಮತ್ತು ಹಿಂದೂಗಳು ತಮ್ಮೊಂದಿಗೆ ಬರುತ್ತಾರೆ ಎಂದು ಬಿಜೆಪಿ ಭಾವಿಸಿದೆ” ಎಂದರು.

“ನಾನೂ ಒಬ್ಬ ಹಿಂದೂ.. ನಮ್ಮ ಹಳ್ಳಿಯಲ್ಲಿ ನಾವು ರಾಮ ಮಂದಿರವನ್ನು ನಿರ್ಮಿಸಿಲ್ಲವೇ? ಹಿಂದುಗಳೆಂದರೆ ರಾಜಕೀಯ, ಅಪಪ್ರಚಾರ ಮಾಡುವುದಲ್ಲ, ಸುಳ್ಳು ಹೇಳುವುದಲ್ಲ. ಯಾರೇ ಆದರೂ ಮನಷ್ಯತ್ವವಿರಬೇಕು. ಬಿಜೆಪಿಯವರು ದಸರಾ ಹಬ್ಬದಲ್ಲೂ ರಾಜಕಾರಣ ಮಾಡುತ್ತಿದ್ದಾರೆ. ಸುಳ್ಳು ಹೇಳುವುದು ಬಿಟ್ಟು ಬೇರೇನಾದರೂ ಅವರಿಗೆ ಬರುತ್ತದೆಯೇ?”

– ಸಿದ್ದರಾಮಯ್ಯ
ಮುಖ್ಯಮಂತ್ರಿ

ಬೂಕರ್ ಪ್ರಶಸ್ತಿ ಎಷ್ಟು ಜನರಿಗೆ ಬಂದಿದೆ?

“ಬಾನು ಮುಷ್ತಾಕ್ ಒಬ್ಬ ಕನ್ನಡ ಬರಹಗಾರ್ತಿ. ಅವರು ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತರು ಎಂಬ ಕಾರಣಕ್ಕೆ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಲಾಗಿದೆ. ಈ ಪ್ರಶಸ್ತಿ ಎಷ್ಟು ಜನರಿಗೆ ಬಂದಿದೆ? ಅವರ ಸಾಧನೆಗೆ ಗೌರವವಾಗಿ, ದಸರಾ ಉದ್ಘಾಟನೆಗೆ ಅವರನ್ನು ಆಹ್ವಾನಿಸಲಾಗಿದೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ದಸರಾ ಹಬ್ಬ ನಾಡ ಹಬ್ಬ

ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿ ಅಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, “ಇದು ಹಿಂದೂಗಳ ಆಸ್ತಿಯೇ ಇರಬಹುದು. ಆದರೆ ದಸರಾ ಒಂದು ನಾಡ ಹಬ್ಬ (ರಾಜ್ಯ ಹಬ್ಬ), ಇದನ್ನು ಎಲ್ಲಾ ಹಿಂದೂಗಳು, ಮುಸ್ಲಿಮರು, ಕ್ರಿಶ್ಚಿಯನ್ನರು, ಬೌದ್ಧರು, ಸಿಖ್ಖರು, ಜೈನರು ಒಟ್ಟಾಗಿ ಆಚರಿಸುತ್ತಾರೆ. ನಾವು ಸಹ ಅದೇ ರೀತಿ ಆಚರಿಸುತ್ತಿದ್ದೇವೆ ಎಂದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿ ಅತಿಕ್ರಮಣ!

ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ನ್ಯಾ.ಕೌಶಿಕ್

ಮಾ.೨೪ ರಂದು ಪೂರ್ವಭಾವಿ ಸಭೆ

ಎಸ್.ಎಸ್.ಎಲ್.ಸಿ ಪರೀಕ್ಷೆ : ಪರೀಕ್ಷಾ ಕೇಂದ್ರ ಸುತ್ತ ನಿಷೇಧಾಜ್ಞೆ ಜಾರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿ ಅತಿಕ್ರಮಣ!
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ನ್ಯಾ.ಕೌಶಿಕ್
    In (ರಾಜ್ಯ ) ಜಿಲ್ಲೆ
  • ಮಾ.೨೪ ರಂದು ಪೂರ್ವಭಾವಿ ಸಭೆ
    In (ರಾಜ್ಯ ) ಜಿಲ್ಲೆ
  • ಎಸ್.ಎಸ್.ಎಲ್.ಸಿ ಪರೀಕ್ಷೆ : ಪರೀಕ್ಷಾ ಕೇಂದ್ರ ಸುತ್ತ ನಿಷೇಧಾಜ್ಞೆ ಜಾರಿ
    In (ರಾಜ್ಯ ) ಜಿಲ್ಲೆ
  • ನೌಕರರ ಸಮರ್ಪಕ ಕೆಲಸದಿಂದ ದೇಶದ ಅಭಿವೃದ್ದಿ ಸಾಧ್ಯ
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ದತೆ :ಬಿಇಓ ಸಯಿದಾ ಮುಜಾವರ
    In (ರಾಜ್ಯ ) ಜಿಲ್ಲೆ
  • ಮಾನವ-ಪ್ರಾಣಿ ಸಂಘರ್ಷ ತಡೆಗೆ ಸ್ಥಳೀಯರ ಸಹಕಾರ ಅತ್ಯಗತ್ಯ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಯಶಸ್ಸು ಕಂಡ ಲೋಕ ಅದಾಲತ್
    In (ರಾಜ್ಯ ) ಜಿಲ್ಲೆ
  • ಪ್ರಗತಿ ಹಂತದ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಿ
    In (ರಾಜ್ಯ ) ಜಿಲ್ಲೆ
  • ಮಾದರಿ ನೀತಿ ಸಂಹಿತೆ ಜಾರಿಗೆ ಕಾರ್ಯಪ್ರವೃತ್ತ :ಜ್ಯೋತಿಗಿರೀಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.