Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶೇಷಚೇತನ ಮಕ್ಕಳನ್ನು ಗೌರವದಿಂದ ಕಾಣಿ :ಬಿಇಓ ತಳವಾರ

ಸಾಮಾಜಿಕ ಸಾಮರಸ್ಯ ಮೂಡಿಸುವ ಭಗವದ್ಗೀತಾ :ಹೆಗಡೆ

ವಕೀಲಿಕೆಯು ಪಕ್ಷಗಾರರಿಗೆ ನ್ಯಾಯ ಕೊಡಿಸೊ ಕಾರ್ಯಗೈವ ಏಕೈಕ ವೃತ್ತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರಜಾಪ್ರಭುತ್ವ ವ್ಯವಸ್ಥೆ ಹಾಳಾಗಿದೆ :ಸಭಾಪತಿ ಹೊರಟ್ಟಿ
(ರಾಜ್ಯ ) ಜಿಲ್ಲೆ

ಪ್ರಜಾಪ್ರಭುತ್ವ ವ್ಯವಸ್ಥೆ ಹಾಳಾಗಿದೆ :ಸಭಾಪತಿ ಹೊರಟ್ಟಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ಸರ್ಕಾರ ಮುಳುಗಡೆ ಕೆಲಸ ಪೂರ್ಣಗೊಳಿಸಬೇಕು. ಸರ್ಕಾರ ಅನುದಾನ ನೀಡುತ್ತಿಲ್ಲ, ಕೆಲಸಗಳಾಗುತ್ತಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆ ಹಾಳಾಗಿದೆ. ಹಣಕ್ಕಾಗಿ ಮತ ಮಾರಿಕೊಂಡವರು ಚುನಾಯಿತ ಸದಸ್ಯರಿಂದ ಯಾವ ಅಭಿವೃದ್ಧಿ ನಿರೀಕ್ಷಿಸಲು ಸಾಧ್ಯ? ದುಡ್ಡಿಗಾಗಿ ವೋಟು ಹಾಕಿದವರು ಅಭಿವೃದ್ಧಿ ಕೇಳಲು ಹೇಗೆ ಸಾಧ್ಯ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನಿಸಿದರು.
ನಗರದ ಕಡಪಟ್ಟಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಅವರು ರಮಾನಿವಾಸ ನಿರೀಕ್ಷಣಾ ಮಂದಿರದಲ್ಲಿ ಸೋಮವಾರ ಸುದ್ದಿಗಾರ ರೊಂದಿಗೆ ಮಾತನಾಡಿದರು.
ಅಭಿವೃದ್ಧಿ ಕೆಲಸಗಳನ್ನು ಕೇಳುವ ನೈತಿಕತೆಯನ್ನು ಹಣ ಪಡೆದ ಮತದಾರರು ಕಳೆದುಕೊಂಡಿದ್ದಾರೆ ಎಂದು ಹೇಳಿದರು.
ಕೃಷ್ಣಾ ಮೇಲ್ದಂಡೆ ಯೋಜನೆಯ ಪುನರ್ವಸತಿ ಕೇಂದ್ರಗಳಲ್ಲಿ ಶಾಲೆಗಳ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಸರ್ಕಾರಕ್ಕೆ ಮಾಹಿತಿ ನೀಡಿದ್ದೇನೆ. ಯಾವುದೇ ಕೆಲಸವಾಗುತ್ತಿಲ್ಲ ಎಂದು ಶಾಸಕ ಜಗದೀಶ ಗುಡಗುಂಟಿ ಸಭಾಪತಿಗಳ ಗಮನ ಸೆಳೆದಾಗ ಸಭಾಪತಿಗಳು ಈ ರೀತಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.
ನಂತರ ಹಿರಿಯ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಹೊರಟ್ಟಿ ಅವರು, ಸಮಸ್ಯೆಯ ಕುರಿತು ಕ್ರಮ ಜರುಗಿಸುವಂತೆ ಸೂಚನೆ ನೀಡಿದರು.
ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದಾಗಿ ಉತ್ತರ ಕರ್ನಾಟಕದ ಕೆಲಸಗಳಾಗುತ್ತಿಲ್ಲ. ರಾಜಕಾರಣಿಗಳು ತಮ್ಮ ಕ್ಷೇತ್ರಗಳ ಅಭಿವೃದ್ಧಿಯ ಬಗ್ಗೆ ಮುತುವರ್ಜಿ ವಹಿಸಬೇಕು ಎಂದು ಸಲಹೆ ನೀಡಿದರು.
ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆ ಗಳಲ್ಲಿ ವೈದ್ಯರ ಕೊರತೆ ಉಂಟಾಗಿದೆ. ಈ ಕುರಿತು ತಾವು ಹೋದ ಕಡೆಗೆಲ್ಲ ದೂರುಗಳು ಕೇಳಿ ಬಂದಿವೆ. ಸರ್ಕಾರಕ್ಕೆ ಈ ಕುರಿತು ಶೀಘ್ರವಾಗಿ ಮಾತನಾಡುತ್ತೇನೆ. ಕೂಡಲೇ ಕ್ರಮ ಜರುಗಿಸುವಂತೆ ತಿಳಿಸುತ್ತೇ ನೆ. ಶಿಕ್ಷಕರ ಕೊರತೆ ಶಾಲಾ ಕಟ್ಟಡಗಳ ದುರಸ್ತಿ ಇನ್ನಿತರೆ ಕೆಲಸಗಳಾಗಬೇಕಿದೆ. ಅದಕ್ಕಾಗಿ ಸರ್ಕಾರದ ಗಮನ ಸೆಳೆಯುತ್ತೇನೆ ಎಂದು ಭರವಸೆ ನೀಡಿದರು.
ರಸ್ತೆಗಳ ದುಃಸ್ಥಿತಿ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರದ ಗಮನಕ್ಕೆ ತರುತ್ತೇನೆ. ತಾವು ಶಿಕ್ಷಣ ಮಂತ್ರಿಗಳಿದ್ದಾಗ ಶಿಕ್ಷಕರ ನೇಮಕಾತಿ, ವರ್ಗಾವಣೆ ನೀತಿ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಸದ್ಯ ಮಂತ್ರಿಗಳಿಗೆ ಮಾಹಿತಿ ನೀಡುವ ಕೆಲಸ ಮಾಡಲು ಮಾತ್ರ ನಮ್ಮಿಂದ ಸಾಧ್ಯ ವಾಗುತ್ತದೆ ಎಂದು ಹೇಳಿದರು.
ಕಡಪಟ್ಟಿ ಬಸವಣ್ಣದೇವರು ಕುಲದೇವತೆ ಆಗಿರುವುದರಿಂದ ದೇವರದರ್ಶನಕ್ಕೆ ಬಂದಿದ್ದಾಗಿ ತಿಳಿಸಿರು. ಶಾಸಕ ಜಗದೀಶ ಗುಡಗುಂಟಿ, ಎಸಿ ಶ್ವೇತಾ ಬೀಡಿಕರ, ತಹಸೀಲ್ದಾರ ಅನೀಲ ಬಡಿಗೇರ, ಪಿಎಸ್‌ಐ ಅನೀಲ ಕುಂಬಾರ, ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು. ಉತ್ತರ ಕರ್ನಾಟಕಕ್ಕೆ ಅನ್ಯಾಯ, ಕಿಡಿ
96 ಜನ ಶಾಸಕರಿರುವ ಉತ್ತರ ಕರ್ನಾಟಕಕ್ಕೆ ನಿಗದಿತ ಅಭಿವೃದ್ಧಿ ಕಾರ್ಯಗಳಾಗುತ್ತಿಲ್ಲ ಎಂಬ ದೂರು ಗಳು ಕೇಳಿ ಬರುತ್ತಿವೆ. ರಾಜಕೀಯ ಇಚ್ಛಾಶಕ್ತಿ ಬೇಕು. ದಕ್ಷಿಣ ಕರ್ನಾಟಕದ ಶಾಸಕರಂತೆ ತಮ್ಮ ಕ್ಷೇತ್ರಗಳ ಅಭಿವೃದ್ಧಿಗೆ ಸಮಯ ನೀಡಬೇಕು. ಸರ್ಕಾರದ ಕಡೆಯಿಂದ ಕೆಲಸ ಮಾಡಿಸಿಕೊಳ್ಳಬೇಕು ಎಂದು ಹೇಳಿದ ಅವರು, ಉಡುಪಿ, ಬೆಂಗಳೂರು, ಮೈಸೂರು ಮುಂತಾದ ಕ್ಷೇತ್ರಗಳಂತೆ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿಯೂ ಅಭಿವೃದ್ಧಿ ಆಗಬೇಕು. ಹಣ ಪಡೆದ ಮತದಾರರು ಕೆಲಸ ಕೇಳುವ ನೈತಿಕತೆ ಕಳೆದುಕೊಂಡಿದ್ದಾರೆ. ನಾನು ಸಮಸ್ಯೆಗಳ ಬಗ್ಗೆ ಬಗ್ಗೆ ಸರ್ಕಾರ ಸರ್ಕಾರದ ಗಮನ ಸೆಳೆಯಬಹುದು. ಕೆಲಸ ಮಾಡುವಂತೆ ಒತ್ತಾಯಿಸಬಹುದು ಅಷ್ಟೇ ಅಲ್ಲವೇ ಎಂದು ಮಾರ್ಮಿಕವಾಗಿ ನುಡಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶೇಷಚೇತನ ಮಕ್ಕಳನ್ನು ಗೌರವದಿಂದ ಕಾಣಿ :ಬಿಇಓ ತಳವಾರ

ಸಾಮಾಜಿಕ ಸಾಮರಸ್ಯ ಮೂಡಿಸುವ ಭಗವದ್ಗೀತಾ :ಹೆಗಡೆ

ವಕೀಲಿಕೆಯು ಪಕ್ಷಗಾರರಿಗೆ ನ್ಯಾಯ ಕೊಡಿಸೊ ಕಾರ್ಯಗೈವ ಏಕೈಕ ವೃತ್ತಿ

ಮಾನವೀಯತೆಯ ಗ್ರಂಥಾಲಯದಂತಿದ್ದ ಅಟಲ್ ಜೀ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶೇಷಚೇತನ ಮಕ್ಕಳನ್ನು ಗೌರವದಿಂದ ಕಾಣಿ :ಬಿಇಓ ತಳವಾರ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಸಾಮರಸ್ಯ ಮೂಡಿಸುವ ಭಗವದ್ಗೀತಾ :ಹೆಗಡೆ
    In (ರಾಜ್ಯ ) ಜಿಲ್ಲೆ
  • ವಕೀಲಿಕೆಯು ಪಕ್ಷಗಾರರಿಗೆ ನ್ಯಾಯ ಕೊಡಿಸೊ ಕಾರ್ಯಗೈವ ಏಕೈಕ ವೃತ್ತಿ
    In (ರಾಜ್ಯ ) ಜಿಲ್ಲೆ
  • ಮಾನವೀಯತೆಯ ಗ್ರಂಥಾಲಯದಂತಿದ್ದ ಅಟಲ್ ಜೀ
    In ವಿಶೇಷ ಲೇಖನ
  • ಲೋಕಾಯುಕ್ತ ಅಧಿಕಾರಿಗಳ ದಾಳಿ :ದಾಖಲೆಗಳ ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಹಾಗೂ ಪತ್ರಕರ್ತರ ಓಟಕ್ಕೆ ಅದ್ಭುತ ಪ್ರತಿಕ್ರಿಯೆ ವ್ಯಕ್ತ
    In (ರಾಜ್ಯ ) ಜಿಲ್ಲೆ
  • ಗುರು ಎಂದು ಚೈತನ್ಯ ಸ್ವರೂಪ :ಶಿವಬಸಯ್ಯ ಸ್ವಾಮಿ
    In (ರಾಜ್ಯ ) ಜಿಲ್ಲೆ
  • ಪರಿಪೂರ್ಣ ವ್ಯಕ್ತಿತ್ವ ವಿಕಸನಕ್ಕೆ ಎನ್‌ಎಸ್‌ಎಸ್‌ ಶಿಬಿರ ಸಹಕಾರಿ
    In (ರಾಜ್ಯ ) ಜಿಲ್ಲೆ
  • ಅದ್ಧೂರಿ ಗುರುವೀರಘಂಟೈ ಮಡಿವಾಳೇಶ್ವರ ಜೋಡು ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಮಕ್ಕಳನ್ನು ಪ್ರಬುದ್ದ ನಾಗರಿಕರಾಗಿ ನಿರ್ಮಾಣ ಮಾಡಿ :ಬಿಇಓ‌ ತಳವಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.