ಉದಯರಶ್ಮಿ ದಿನಪತ್ರಿಕೆ
ಚಿಮ್ಮಡ: ಗ್ರಾಮದಲ್ಲಿ ಸೆ. ೪ ರಂದು ನಡೆಯಲಿರುವ ಕಿಚಡಿ ಜಾತ್ರೆಗಾಗಿ ನಿರ್ಮಿಸಲಾದ ಬೃಹತ್ ರಥದ ಕಳಶ ಹಾಗೂ ಉಚ್ಚಾಯಿ (ಉತ್ಸವ ಮೂರ್ತಿ)ಯ ಪುರ ಪ್ರವೇಶ ಕಾರ್ಯಕ್ರಮ ಸೋಮವಾರ ನಡೆಯಿತು.
ಸ್ಥಳಿಯ ವಿರಕ್ತಮಠದ ಶ್ರೀ ಪ್ರಭು ಮಹಾಸ್ವಾಮಿಗಳ ಹಾಗೂ ಶ್ರೀ ಜನಾರ್ಧನ ಮಹಾರಾಜರ ಸಾನಿಧ್ಯದಲ್ಲಿ ನಡೆದ ವಿಶೇಷ ಪೂಜೆಯೊಂದಿಗೆ ಸ್ಥಳಿಯ ಬಸ್ ನಿಲ್ದಾಣದ ಮಹಾದ್ವಾರದಿಂದ ನೂರಾರು ಮಹಿಳೆಯರಿಂದ ಆರತಿ ಕುಂಭ, ಸಕಲ ವಾದ್ಯ ವೃಂದಗಳೊಂದಿಗೆ ಗ್ರಾಮದ ಶ್ರೀ ಪ್ರಭುಲಿಂಗೇಶ್ವರ ದೇವಸ್ಥಾನದ ವರೆಗೆ ಮೆರವಣಿಗೆ ಮೂಲಕ ತರಲಾಯಿತು ಪ್ರಭುಲಿಂಗ ಸೇವಾ ಸಮೀತಿಯ ಪ್ರಮುಖರಾದ ರಾಮಣ್ಣ ಮುಗಳಖೋಡ, ಪುಂಡಲಿಕಪ್ಪಾ ಪೂಜಾರಿ, ಅಣ್ಣಪ್ಪಗೌಡ ಪಾಟೀಲ, ಬಾಳಪ್ಪ ಹಳಿಂಗಳಿ, ರಾಚಯ್ಯ ಮಠಪತಿ, ರಾಮಣ್ಣ ಬಗನಾಳ, ಗುರಪ್ಪ ಬಳಗಾರ, ಗ್ರಾ.ಪಂ. ಮಾಜಿ ಅಧ್ಯಕ್ಷ ಗುರಲಿಂಗಪ್ಪ ಪೂಜಾರಿ, ಪರಪ್ಪಾ ಪಾಲಭಾವಿ, ಬೀರಪ್ಪ ಹಳೆಮನಿ, ಪ್ರಕಾಶ ಪಾಟೀಲ, ಬಸವರಾಜ ಕುಂಚನೂರ, ಅಶೋಕ ಧಡೂತಿ, ಆನಂದ ಕವಟಿ, ಅಶೋಕ ಮೋಟಗಿ, ಪ್ರಭು ಮುಧೋಳ, ಅವ್ವನಪ್ಪ ಮುಗಳಖೋಡ ಸೇರಿದಂತೆ ಹಲವಾರು ಜನ ಪ್ರಮುಖರು ಭಾಗವಹಿಸಿದ್ದರು.