Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೇಡಿಕೆ ಈಡೇರಿಕೆಗೆ ಬಂಜಾರ ಸಮಾಜದ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಬೇಡಿಕೆ ಈಡೇರಿಕೆಗೆ ಬಂಜಾರ ಸಮಾಜದ ಪ್ರತಿಭಟನೆ

By No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಒಳಮೀಸಲಾತಿ ಹಂಚಿಕೆ ವಿಚಾರದಲ್ಲಾದ ತಾರತಮ್ಯಕ್ಕೆ ತೀವ್ರ ಖಂಡನೆ | ಲಂಬಾಣಿ, ಭೋವಿ, ಕೊರಮ, ಕೊರಚ ಸಮುದಾಯಗಳಿಗೆ ನ್ಯಾಯ ಒದಗಿಸುವಂತೆ ಆಗ್ರಹ

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪಟ್ಟಣದಲ್ಲಿ ಕರ್ನಾಟಕ ಪ್ರದೇಶ ಬಂಜಾರ ಸೇವಾ ಸಂಘ ಹಾಗೂ ತಾಲೂಕು ಬಂಜಾರ ಸಂಘದಿಂದ ಒಳಮೀಸಲಾತಿ ಹಂಚಿಕೆ ವಿಚಾರದಲ್ಲಿ ಸರ್ಕಾರದ ತಾರತಮ್ಯವನ್ನು ಖಂಡಿಸಿ ಲಂಬಾಣಿ, ಭೋವಿ, ಕೊರಮ, ಕೊರಚ ಸಮುದಾಯಗಳಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಬುಧವಾರ ಬೃಹತ್ ಪ್ರತಿಭಟನೆ ಬಂಜಾರ ಸಮಾಜ ಬಾಂಧವರು ಮಾಡಿದರು.
ಪಟ್ಟಣದ ಸಂತ ಸೇವಾಲಾಲ ವೃತ್ತದಿಂದ ಪ್ರತಿಭಟನೆ ಮೆರವಣಿಗೆ ಆರಂಭಿಸಿದ ಸಮಾಜ ಬಾಂಧವರು ಡಾ.ಬಿ.ಆರ್.ಅಂಬೇಡ್ಕರ ವೃತ್ತದ ಮಾರ್ಗವಾಗಿ ಗಣಪತಿ ವೃತ್ತದ ಮೂಲಕ ಬಸವೇಶ್ವರ ವೃತ್ತದವರೆಗೂ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಆಗಮಿಸಿ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದರು.
ಬಸವೇಶ್ವರ ವೃತ್ತದಲ್ಲಿ ಜರುಗಿದ ಪ್ರತಿಭಟನೆ ಸಭೆ ಉದ್ದೇಶಿಸಿ ಕರ್ನಾಟಕ ಪ್ರದೇಶ ಬಂಜಾರಾ ಸೇವಾ ಸಂಘದ ಜಿಲ್ಲಾಧ್ಯಕ್ಷ ಡಾ.ಬಸವರಾಜ ಚವ್ಹಾಣ, ತಾಲೂಕಾಧ್ಯಕ್ಷ ಬಾಳು ರಾಠೋಡ ಮಾತನಾಡಿ, ಒಳಮೀಸಲಾತಿ ಕುರಿತು ನೀಡಿದ ವರದಿ ಅವೈಜ್ಞಾನಿಕ, ದೋಷಪೂರಿತವಾಗಿರುವ ವರದಿಯನ್ನು ಸರ್ಕಾರ ಜಾರಿಗೆ ತರಲು ಹೊರಟಿರುವದು ಬಂಜಾರ ಸಮಾಜ ಸೇರಿದಂತೆ ೬೩ ಸಮಾಜ ಬಾಂಧವರಿಗೆ ಅನ್ಯಾಯವಾಗುತ್ತಿದೆ. ರಾಜ್ಯದಲ್ಲಿ ಬಸವ ತತ್ವದ ಕಾಯಕದ ತತ್ವ ಅಳವಡಿಸಿಕೊಂಡಿರುವ ಬಂಜಾರ ಸಮಾಜ ಬಾಂಧವರಿಗೆ ಈಚೆಗೆ ಸರ್ಕಾರ ಒಳಮೀಸಲಾತಿ ಕುರಿತು ತೆಗೆದುಕೊಂಡ ನಿರ್ಣಯ ಅನ್ಯಾಯವಾಗಿದೆ. ರಾಜ್ಯದಲ್ಲಿ ನಮ್ಮ ಸಮಾಜಕ್ಕೆ ಒಂದು ಲೋಕಸಭೆಗೆ ಟಿಕೆಟ್ ನೀಡಲಿಲ್ಲ. ನಮ್ಮ ಸಮಾಜದಿಂದ ಹೆಚ್ಚು ಜನರು ಶಾಸಕರು ಆಯ್ಕೆಯಾದರೂ ಒಂದು ಸಚಿವ ಸ್ಥಾನ ನೀಡಿಲ್ಲ. ಇದೀಗ ಒಳಮೀಸಲಾತಿಯಲ್ಲಿಯೂ ನಮ್ಮ ಸಮಾಜಕ್ಕೆ ಸರ್ಕಾರ ಅನ್ಯಾಯ ಮಾಡಲು ಹೊರಟಿದೆ. ಸೆ.೬ ರಂದು ಜಿಲ್ಲಾ ಮಟ್ಟದಲ್ಲಿ, ಸೆ.೧೦ ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಮ್ಮ ಬಾಂಧವರು ಸರ್ಕಾರದ ವಿರುದ್ಧ ಹೋರಾಟ ಮಾಡಲಿದ್ದಾರೆ. ಸರ್ಕಾರಕ್ಕೆ ಇದಕ್ಕೆ ಸ್ಪಂದಿಸಿ ಸಮಾಜಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸದೇ ಹೋದರೆ ಮುಂಬರುವ ದಿನಗಳಲ್ಲಿ ಎಲ್ಲ ಶಾಸಕರ ಮನೆಗ ಮುಂದೆ ಹೋರಾಟ ಹಮ್ಮಿಕೊಳ್ಳುವ ಮೂಲಕ ಸಮಾಜದ ಹಕ್ಕನ್ನು ಕೇಳುತ್ತೇವೆ ಎಂದರು.
ಜಿಪಂ ಮಾಜಿ ಸದಸ್ಯ ಮಲ್ಲಿಕಾರ್ಜುನ ನಾಯಕ ಮಾತನಾಡಿ, ಒಳಮೀಸಲಾತಿಯಲ್ಲಿ ನಮ್ಮ ಸಮಾಜಕ್ಕೆ ಅನ್ಯಾಯವಾಗಿದೆ. ೨೦೧೧ ರ ಜನಗಣತಿ ಪ್ರಕಾರ ರಾಜ್ಯದಲ್ಲಿ ೨೫ಲಕ್ಷ ಬಂಜಾರ ಸಮಾಜ ಬಾಂಧವರು ಇದ್ದಾರೆ. ಸರ್ಕಾರ ಇದೀಗ ತಮ್ಮ ಸಮೀಕ್ಷೆಯಲ್ಲಿ ೧೧ ಲಕ್ಷ ತೋರಿಸಿದೆ. ಸರ್ಕಾರ ಸರಿಯಾಗಿ ಸಮೀಕ್ಷೆ ಮಾಡದೇ ನಮ್ಮ ಸಮಾಜಕ್ಕೆ ಅನ್ಯಾಯ ಮಾಡಿದೆ. ನಮ್ಮ ವಿಜಯಪುರ ಜಿಲ್ಲೆಯಲ್ಲಿಯೇ ೩.೧೪ ಲಕ್ಷ ಸಮಾಜ ಬಾಂಧವರು ಇದ್ದಾರೆ. ಸರ್ಕಾರ ಇದನ್ನು ಅರಿತುಕೊಂಡು ನಮ್ಮ ಸಮಾಜಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕೆಂದು ಆಗ್ರಹಿಸಿದರು.
ಪುರಸಭೆ ಸದಸ್ಯ ನೀಲು ನಾಯಕ ಮಾತನಾಡಿ, ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಜಾತಿ ಜನಾಂಗದಲ್ಲಿ ಒಳಮೀಸಲಾತಿ ತರುವ ಮೂಲಕ ಜಗಳ ಹಚ್ಚುವ ಕಾರ್ಯ ಮಾಡುತ್ತಿದೆ. ಸರ್ಕಾರ ಒಳಮೀಸಲಾತಿ ಕೈಬಿಟ್ಟು ಮೊದಲಿನಂತೆ ಇರುವ ಮೀಸಲಾತಿಯನ್ನು ಮುಂದುವರಿಸಬೇಕು. ನಮ್ಮ ಸಮಾಜ ಬಾಂಧವರು ಶ್ರಮಜೀವಿಗಳಾಗಿದ್ದಾರೆ. ತಾಂಡಾದಲ್ಲಿ ರಸ್ತೆ, ಕುಡಿಯುವ ನೀರು, ವಾಸಕ್ಕೆ ಯೋಗ್ಯವಾದ ಮನೆಗಳು ನಮ್ಮ ಬಾಂಧವರಿಗೆ ಇಲ್ಲ. ಇದನ್ನು ಸರ್ಕಾರ ಅರಿತುಕೊಂಡು ಸಮಾಜಕ್ಕೆ ನ್ಯಾಯ ಒದಗಿಸಬೇಕು. ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷವಾಗುತ್ತಿದೆ. ನಮ್ಮ ಸಮಾಜಕ್ಕೆ ನ್ಯಾಯ ಒದಗಿಸದೇ ಹೋದರೆ ಸರ್ಕಾರಕ್ಕೆ ಮೂರಾಬಟ್ಟೆ ಆರಂಭವಾಗುವದರಲ್ಲಿ ಸಂದೇಹವಿಲ್ಲ ಎಂದರು.
ಕೇಸರಟ್ಟಿಯ ಸೋಮಲಿಂಗ ಸ್ವಾಮೀಜಿ ಮಾತನಾಡಿ, ಸರ್ಕಾರ ನಮ್ಮ ಜನರ ಸ್ಥಿತಿಗತಿ ಅರಿತುಕೊಳ್ಳದೇ ಸರಿಯಾಗಿ ಸಮೀಕ್ಷೆ ಮಾಡದೇ ಒಳಮೀಸಲಾತಿ ಜಾರಿಗೆ ತರಲು ಹೊರಟಿದೆ. ಇದರಿಂದಾಗಿ ನಮ್ಮ ಜನಾಂಗ ಸೇರಿದಂತೆ ೬೩ ಜನಾಂಗಗಳಿಗೆ ಅನ್ಯಾಯವಾಗುತ್ತಿದೆ. ಸರ್ಕಾರ ಎರಡು ಜಾತಿಗಳಿಗೆ ಮಾತ್ರ ಒಲೈಕೆ ಮಾಡಲು ಹೊರಟಂತೆ ಇದೆ.ಡಾ.ಅಂಬೇಡ್ಕರ ಆಶಯದಂತೆ ಎಲ್ಲ ಜನಾಂಗಕ್ಕೂ ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ನ್ಯಾಯ ಸಿಗುವಂತೆ ಸಿಎಂ ಸಿದ್ದರಾಮಯ್ಯನವರು ಗಮನ ಹರಿಸಬೇಕು. ಹಿಂದೆ ಬೊಮ್ಮಾಯಿ ಸರ್ಕಾರ ನಮ್ಮ ಸಮಾಜಕ್ಕೆ ಅನ್ಯಾಯ ಮಾಡಿದಾಗ ಬಿಜೆಪಿ ಸರ್ಕಾರ ಹಟಾವೋ ಬಂಜಾರಾ ಬಚಾವೋ ಹೋರಾಟ ಮಾಡಲಾಗಿತ್ತು. ಈಗಿನ ಕಾಂಗ್ರೆಸ್ ಸರ್ಕಾರವು ನಮ್ಮ ಸಮಾಜಕ್ಕೆ ನ್ಯಾಯ ಒದಗಿಸದೇ ಹೋದರೆ ಕಾಂಗ್ರೆಸ ಹಟಾವೋ ಬಂಜಾರಾ ಬಚಾವೋ ಹೋರಾಟ ಆರಂಭಿಸಬೇಕಾಗುತ್ತದೆ. ನಾವು ಮೀಸಲಾತಿ ಬಿಕ್ಷೆ ಬೇಡುತ್ತಿಲ್ಲ. ಸಮಾಜದ ಹಕ್ಕು ಬೇಡುತ್ತಿದ್ದೇವೆ ಎಂದರು.
ಮುಖಂಡ ರವಿ ರಾಠೋಡ ಮಾತನಾಡಿದರು.
ಮನವಿ ಪತ್ರವನ್ನು ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಸ್ವೀಕರಿಸಿದರು.
ಪ್ರತಿಭಟನೆಯಲ್ಲಿ ಮಹೇಂದ್ರ ನಾಯಕ, ಸಂತೋಷ ನಾಯಕ, ಸುರೇಶ ನಾಯಕ, ರಾಜು ನಾಯಕ, ಶಿವಾಜಿ ಲಮಾಣಿ, ಅರವಿಂದ ನಾಯಕ, ಮೋಹನ ರಜಪೂತ, ರುಕ್ಮಿಣಿ ರಾಠೋಡ, ಭಾಗ್ಯ ರಾಠೋಡ, ಶ್ರೀದೇವಿ ಲಮಾಣಿ, ರವಿ ಲಮಾಣಿ, ಅಪ್ಪು ನಾಯಕ, ನೇಮು ಲಮಾಣಿ, ಹೇಮು ಚವ್ಹಾಣ, ಈಶ್ವರ ಜಾಧವ, ಪುನೀತ ಲಮಾಣಿ, ಹರಿಲಾಲ ನಾಯಕ, ಶ್ರೀಕಾಂತ ರಾಠೋಡ, ಬಾಬು ನಾಯಕ, ಶಿವು ಪವಾರ, ಪ್ರಕಾಶ ರಾಠೋಡ, ನಾನು ರಾಠೋಡ, ಶಿವಾಜಿ ರಾಠೋಡ, ಕಿರಣ ಚವ್ಹಾಣ, ವಿನೋದ ಚವ್ಹಾಣ, ಗಣೇಶ ಚವ್ಹಾಣ, ಆನಂದ ಚವ್ಹಾಣ, ರಾಮು ರಾಠೋಡ, ಮಲ್ಲು ರಾಠೋಡ, ವಿನೋದ ರಾಠೋಡ, ಅಶೋಕ ಕಾರಬಾರಿ, ಅನಿಲ ಚವ್ಹಾಣ, ಮನೋಜ ಚವ್ಹಾಣ, ರಾಮು ಜಾಧವ ಸೇರಿದಂತೆ ಅನೇಕರು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026
    In ದಿನಪತ್ರಿಕೆ
  • ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ
    In (ರಾಜ್ಯ ) ಜಿಲ್ಲೆ
  • ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ
    In (ರಾಜ್ಯ ) ಜಿಲ್ಲೆ
  • ರೈತನ ಬೆಳೆ ಮಣ್ಣುಪಾಲು ಕಣ್ಣೀರು ಮಾತ್ರ ರೈತನ ಪಾಲು :ಕೋನಳ್ಳಿ
    In (ರಾಜ್ಯ ) ಜಿಲ್ಲೆ
  • ರಂಗಭೂಮಿ ಕಲಾವಿದ ರಾಜಕುಮಾರ್ ಗೆ ನಾಟಕ ಅಕಾಡೆಮಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಶ್ರಾವಣ ಸದ್ವಿಚಾರ
    In (ರಾಜ್ಯ ) ಜಿಲ್ಲೆ
  • ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ
    In (ರಾಜ್ಯ ) ಜಿಲ್ಲೆ
  • ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಕಲಾ, ಸಾಂಸ್ಕೃತಿಕ ತಂಡಗಳ ಧನಸಹಾಯಅರ್ಜಿ ಸಲ್ಲಿಕೆಗೆ ಸೆ.೪ವರೆಗೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.