Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ

ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಲುವೆಗೆ ನೀರು ಹರಿಸಿ ಕೆರೆಗಳ ಭರ್ತಿಗೆ ರೈತರ ಆಗ್ರಹ
(ರಾಜ್ಯ ) ಜಿಲ್ಲೆ

ಕಾಲುವೆಗೆ ನೀರು ಹರಿಸಿ ಕೆರೆಗಳ ಭರ್ತಿಗೆ ರೈತರ ಆಗ್ರಹ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ಕೃಷಿ ಚಟುವಟಿಕೆ ಹಾಗೂ ಕುಡಿಯುವ ನೀರಿನ ಅನುಕೂಲಕ್ಕಾಗಿ ಚಿಮ್ಮಲಗಿ ಮುಖ್ಯ ಕಾಲುವೆಯ ನಾಗಠಾಣ ಉಪಕಾಲುವೆಗೆ ನೀರು ಹರಿಸಿ ಈ ಭಾಗದ ಕೆರೆಗಳ ಭರ್ತಿಗೆ ಶಾಸಕ ರಾಜುಗೌಡ ಪಾಟೀಲ (ಕುದರಿ ಸಾಲವಾಡಗಿ) ಆಸಕ್ತಿ ವಹಿಸಿ ಕೂಡಲೇ ಕ್ರಮಕೈಗೊಳ್ಳಲು ಮುಂದಾಗಬೇಕು ಎಂದು ರೈತರು, ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಮಂಗಳವಾರ ಪತ್ರಿಕೆಯೊಂದಿಗೆ ತಾಲ್ಲೂಕು ರೈತಸಂಘದ ಅಧ್ಯಕ್ಷ ಅಜೀಜ್ ಯಲಗಾರ ಹಾಗೂ ಬಸವರಾಜ ಕಲ್ಲೂರ (ಮುಳಸಾವಳಗಿ) ಮಾತನಾಡಿ, ತಾಲ್ಲೂಕಿನಲ್ಲಿ ಹರಿಯುವ ಮುಳವಾಡ ಏತ ನೀರಾವರಿ ಕಾಲುವೆಗೆ ಸತತವಾಗಿ ನೀರು ಹರಿಸಲಾಗುತ್ತಿದೆ. ಆದರೆ ತಾಲ್ಲೂಕಿನ ಗಂಗನಳ್ಳಿ ಗ್ರಾಮದವರೆಗೆ ನೀರು ಸಂಪರ್ಕಿಸುವ ನಾಗಠಾಣ ಉಪಕಾಲುವೆ ನೀರು ಹರಿಯದೇ ಭಣಗುಡುತ್ತಿದೆ. ಈ ಕಾಲುವೆಯ ನೀರಿನ ಮೇಲೆ ಅವಲಂಬಿತವಾದ ಕೃಷಿಕರು ವ್ಯವಸ್ಥೆಯ ತಾರತಮ್ಯ ನೀತಿಯಿಂದ ನೀರಿಗಾಗಿ ಪರಿತಪಿಸುವಂತಾಗಿದೆ.
ಚಿಮ್ಮಲಗಿ ಏತ ನೀರಾವರಿಯ ನಾಗಠಾಣ ಉಪಕಾಲುವೆಯಲ್ಲಿ ಸುಮಾರು ೧೪೬ ಕಿ.ಮೀ ನೀರು ಹರಿಯಬೇಕು. ನಿನ್ನೆಯಷ್ಟೇ ಮಾಜಿಶಾಸಕ ಸೋಮನಗೌಡ ಪಾಟೀಲ ಸಾಸನೂರ ಕೆಬಿಜೆಎನ್‌ಎಲ್ ಅಧಿಕಾರಿಗಳಲ್ಲಿ ಮನವಿಮಾಡಿ ೨ ಮೋಟಾರ್‌ಗಳ ಮೂಲಕ ನೀರು ಹರಿಸಲು ಕ್ರಮಕೈಗೊಂಡಿದ್ದಾರೆ. ಆದರೆ ಕಾಲುವೆಯ ಕೊನೆಯ ಹಂತದವರೆಗೆ ನೀರು ತಲುಪಬೇಕೆಂದರೇ ಕನಿಷ್ಟ ೩ ಮೋಟಾರ್‌ಗಳು ಕಾರ್ಯನಿರ್ವಹಿಸಬೇಕಾಗಿದೆ. ಆದರೆ ಇನ್ನೊಂದು ಮೋಟರು ಚಾಲನೆಗೆ ಟಿ.ಸಿ ಹಾಗೂ ತಾಂತ್ರಿಕ ಕೊರತೆ ಇದೆ ಎಂದು ಅಧಿಕಾರಿಗಳು ಸಬೂಬು ಹೇಳುತ್ತಿದ್ದಾರೆ. ಅಲ್ಲದೇ ಕಳೆದ ಕೆಲವು ದಿನಗಳ ಹಿಂದೆ ಧರಣಿ ಕುಳಿತ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಕೆಬಿಜೆಎನ್‌ಎಲ್ ಅಧಿಕಾರಿಗಳು ಕಾಲುವೆಗೆ ನೀರು ಹರಿಸಲು ನೀರು ನಿರ್ವಹಣಾ ಸಲಹಾ ಸಮೀತಿಯ ಅಧ್ಯಕ್ಷರಿಗೆ ಈ ಭಾಗದ ಶಾಸಕರು ಸೂಚಿಸಬೇಕು ಆಗ ಮಾತ್ರ ನಾವು ಕ್ರಮ ಕೈಗೊಳ್ಳಲು ಸಾಧ್ಯ ಎಂಬ ಮಾತನ್ನು ಹೇಳಿದ್ದರು. ಈಗ ನಮ್ಮ ಭಾಗದ ಶಾಸಕರು ಕಾಲುವೆಗೆ ನೀರು ಹರಿಸಲು ಸಮೀತಿಯ ಅಧ್ಯಕ್ಷರಾದ ತಿಮ್ಮಾಪೂರ ಅವರಿಗೆ ಒತ್ತಡಹಾಕಬೇಕು. ಇದರಿಂದ ಈ ಭಾಗದ ಕೆರೆಗಳು ಭರ್ತಿಯಾಗಲು ಸಾಧ್ಯ ಎಂದರು.
ಕಾಲುವೆಗಳಿಗೆ ತಕ್ಷಣವೇ ದೇವರಹಿಪ್ಪರಗಿ-ಗಂಗನಳ್ಳಿ ನಡುವಿನ ಕಾಲುವೆಗೆ ನೀರು ಹರಿಸಲು ಶಾಸಕ ರಾಜುಗೌಡ ಪಾಟೀಲರು ಕ್ರಮ ಕೈಗೊಳ್ಳಬೇಕು ಎಂದು ಶಾಂತಗೌಡ ಮೂಲಿಮನಿ, ಶಂಕರಗೌಡ ಕೋಟಿಖಾನಿ, ಸಾಹೇಬಗೌಡರೆಡ್ಡಿ (ಕಡ್ಲೇವಾಡ ಪಿಸಿಎಚ್) ಶ್ರೀಮಂತ ತಳವಾರ (ನಿವಾಳಖೇಡ), ಬಾಶೇಸಾಬ್ ಬಿಜಾಪುರ, ಅಮೀನ್ ಕಲಾಲ್ ಸೇರಿದಂತೆ ವಿವಿಧ ಗ್ರಾಮಗಳ ರೈತರು ಆಗ್ರಹಿಸಿದ್ದಾರೆ.

BIJAPUR NEWS public public news udayarashminews.com
Share. Facebook Twitter Pinterest Email Telegram WhatsApp
  • Website

Related Posts

ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ

ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು

ಅರ್ಜುನ ನೆನಪಿಸಲು ಇದೇ 30 ರಂದು ಬರ್ತಿದೆ ‘ಮಾವುತ’

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ
    In (ರಾಜ್ಯ ) ಜಿಲ್ಲೆ
  • ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು
    In (ರಾಜ್ಯ ) ಜಿಲ್ಲೆ
  • ಅರ್ಜುನ ನೆನಪಿಸಲು ಇದೇ 30 ರಂದು ಬರ್ತಿದೆ ‘ಮಾವುತ’
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಜಲಾಶಯ ಭದ್ರತೆ ಪರೀಕ್ಷಿಸಿದ ಕಮಾಂಡೆಂಟ್ 
    In (ರಾಜ್ಯ ) ಜಿಲ್ಲೆ
  • ಟೆಂಡರ್ ರದ್ದಿಗೆ ಆಗ್ರಹಿಸಿ ದಿನಗೂಲಿ ನೌಕರರ ಸಂಘದಿಂದ ಧರಣಿ
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಮತ್ತು ನೇತ್ರ ಉಚಿತ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಸಂಗಮೇಶ್ವರ ಜಾತ್ರಾ ಮಹೋತ್ಸವದಲ್ಲಿ ಪಲ್ಲಕ್ಕಿ ಉತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.