Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿ ಅತಿಕ್ರಮಣ!

ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ನ್ಯಾ.ಕೌಶಿಕ್

ಮಾ.೨೪ ರಂದು ಪೂರ್ವಭಾವಿ ಸಭೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿಕ್ಷಕರು ಮಕ್ಕಳ ಶ್ರೇಯೋಭಿವೃದ್ದಿಗೆ ಕರ್ತವ್ಯ ನಿರ್ವಹಿಸುವವರು
(ರಾಜ್ಯ ) ಜಿಲ್ಲೆ

ಶಿಕ್ಷಕರು ಮಕ್ಕಳ ಶ್ರೇಯೋಭಿವೃದ್ದಿಗೆ ಕರ್ತವ್ಯ ನಿರ್ವಹಿಸುವವರು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಶಿಕ್ಷಕರ ದಿನೋತ್ಸವದಲ್ಲಿ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ದೇವರ ಸ್ವರೂಪದಲ್ಲಿ ಶಿಕ್ಷಕರನ್ನು ಪೂಜಿಸುವ ದೇಶ ನಮ್ಮ ಭಾರತ ದೇಶವಾಗಿದೆ ಎಂದು ಜಮಖಂಡಿಯ ಓಲೆಮಠದ ಆನಂದ ದೇವರು ಸ್ವಾಮೀಜಿ ಹೇಳಿದರು.
ನಗರದ ತೊರವಿ ರಸ್ತೆಯಲ್ಲಿರುವ ಜಿ.ಕೆ‌.ಪಾಟೀಲ ಸಮುದಾಯ ಭವನದಲ್ಲಿ ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗ್ರಾಮೀಣವಲಯದ ವತಿಯಿಂದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಶುಕ್ರವಾರ ಏರ್ಪಡಿಸಿದ ಶಿಕ್ಷಕರ ದಿನೋತ್ಸವ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿ ಅವರು ಮಾತನಾಡಿದರು.
ಒಬ್ಬ ಆಶ್ಯಕ್ತನನ್ನು ಸಶಕ್ತನನ್ನಾಗಿ ಮಾಡುವ ಶಕ್ತಿ ಗುರುವಿಗಿದೆ. ಶಿಕ್ಷಕ, ರೈತ, ಸೈನಿಕ ಈ ಮೂವರು ದೇಶಕ್ಕೆ ಅಮೂಲ್ಯವಾದ ರತ್ನಗಳಾಗಿವೆ. ಯಾವ ಸ್ವಾರ್ಥವನ್ನು ಬಯಸದೇ ಅಕ್ಷರ ಕಲಿಸುವ ಮನೋಭಾವ ಉಳ್ಳವರಾಗಿದ್ದಾರೆ ಎಂದರು.
ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ ಮಾತನಾಡಿ ಶಿಕ್ಷಕರ ಸ್ಥಾನ ವಿಶೇಷವಾದುದು, ಜಗತ್ತಿಗೆ ದಿವ್ಯ ಜ್ಞಾನ ಕೊಡುವ ಕಾರ್ಯ ಶಿಕ್ಷಕರ ಮೇಲಿದೆ. ತಂದೆ ತಾಯಿ ನಂತರದ ಸ್ಥಾನ ಗುರುವಿಗಿದೆ. ದೇವರ ಸಮಾನರಾದ ಶಿಕ್ಷಕ ಎಲ್ಲರಿಗಿಂತ ಹೆಚ್ಚಿನ ಸ್ಥಾನ ಸಮಾಜದಲ್ಲಿ ಹೊಂದಿದ್ದಾರೆ. ಒಬ್ಬ ವ್ಯಕ್ತಿಯನ್ನು ವಿಶೇಷ ಗೌರವಾನ್ವಿತ ವ್ಯಕ್ತಿಯನ್ನಾಗಿ ರೂಪಿಸುವ ಸಾಮರ್ಥ್ಯ ಶಿಕ್ಷಕರಿಗೆ ಮಾತ್ರ ಇದೆ ಎಂದರು.
ಪ್ರಾಸ್ಥಾವಿಕವಾಗಿ ಮಾತನಾಡಿದ ಬಿಇಓ ಬಸವರಾಜ ತಳವಾರ, ಶಿಕ್ಷಕ ವೃತ್ತಿಗಿಂತ ಪವಿತ್ರ ವೃತ್ತಿ ಬೆರೊಂದಿಲ್ಲ. ಭೂಮಿಗೆ ಜೀವ ತುಂಬಿಕೊಂಡು ಬಂದ ಮಗುವಿನ ಭವಿಷ್ಯ ನಿರ್ಮಾಣ ಮಾಡುವ ಕಾರ್ಯ ಶಿಕ್ಷಕರ ಮೇಲಿದೆ. ಆ ಮಗು ಸುಭದ್ರ ಬದುಕು ಕಟ್ಟಿಕೊಳ್ಳಲು ಉತ್ತಮ‌ ಶಿಕ್ಷಣವನ್ನು ನೀಡಬೇಕು. ಸರ್ಕಾರದ ಯೋಜನೆಗಳನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ತಲುಪಿಸುವ ಕಾರ್ಯ ನಾವು ಮಾಡಬೇಕಾಗಿದೆ ಎಂದರು.
ತಹಶಿಲ್ದಾರ ಪ್ರಶಾಂತ ಚನಗೊಂಡ, ಸಚಿವರ ಆಪ್ತ ಸಹಾಯಕ ಸಂತೋಷ ಲೋಕುರೆ ಮಾತನಾಡಿದರು.
ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಸಾವಿತ್ರಿಬಾಯಿ ಪುಲೆ ಭಾವಚಿತ್ರಕ್ಕೆ ಗಣ್ಯರಿಂದ ಪುಷ್ಪಾರ್ಚನೆ ಮಾಡಲಾಯಿತು. ವೇದಿಕೆಯು ಗ್ರಾಮೀಣ ಸೊಗಡಿನ ಹಸಿರು ತೋರಣಗಳಿಂದ ಶೃಂಗಾರಗೊಂಡಿತ್ತು.
ತಿಕೋಟಾ ತಾಲ್ಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ, ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಡಿ.ಮೊಸಲಗಿ ಜಿಲ್ಲಾ ಶಿಕ್ಷಕ ಸಂಘದ ಅಧ್ಯಕ್ಷ ಅರ್ಜುನ ಲಮಾಣಿ, ಪ್ರಪುಲಕುಮಾರ ಮಂಗನವರ, ಶಿವಗೊಂಡ ಬಿರಾದಾರ, ಎಂ.ಕೆ.ಬಿರಾದಾರ, ಎ.ಬಿ.ಧಡಕೆ, ನೀಲಾ ಇಂಗಳೆ, ಬಿ.ಎಸ್.ಮಠ, ವಸಂತ ನಾಯಕ, ಸಂದೀಪ ದೇಶಪಾಂಡೆ, ಹಣಮಂತ ಕುಡಚಿ, ಎಂ.ಎನ್.ನಾಯಕ, ರಮೇಶ ಜಾಧವ, ಚನ್ನಯ್ಯ ಮಠಪತಿ, ಮುತ್ತು ಪುಜಾರಿ, ಅಶೋಕ ಭಜಂತ್ರಿ, ಉದಯ ಕೊಟ್ಯಾಳ, ಅಕ್ಕೂಬಾಯಿ ನಾಯಕ, ಎಂ.ಎಸ್‌‌ ಟಕ್ಕಳಕಿ, ಹಣಮಂತ ಕೊಣದಿ, ಸಿ.ಟಿ. ಜತ್ತಿ, ಪುಷ್ಪಾ ಗಚ್ಚಿನಮಠ, ಅಶೋಕ ಚನಬಸಗೋಳ, ಅಶೋಕ ಬೂದಿಹಾಳ, ರಾಜಶೇಖರ ಬನಸೋಡೆ, ಎನ್.ಜಡ. ಹೊನಸೂರೆ, ಮಲ್ಲಿಕಾರ್ಜುನ ಮಾದರ, ಹುಸೇನ್, ಗಜಾನಂದ ಜುಂಜರವಾಡ ಇದ್ದರು.
ಪ್ರಾರ್ಥನೆಯನ್ನು ಮೆಹತಾಬ ಕಾಗವಾಡ, ಸ್ವಾಗತವನ್ನು ಪ್ರಭು ಬಿರಾದಾರ, ನಿರೂಪಣೆಯನ್ನು ಬಿ.ಎಸ್.ಉಪಾಸೆ, ಡಿ.ಆರ್.ಹಿರೇಮಠ, ಎಸ್.ಜಿ.ಕರ್ಕಿ, ಸಂತೋಷ ಬಗಲಿ, ವಂದನಾರ್ಪನೆಯನ್ನು ಬಿ.ಎನ್.ತೇಲಿ ನೆರವೇರಿಸಿದರು.

“ಶಿಕ್ಷಕರು ಮಕ್ಕಳ ಶ್ರೇಯೋಭಿವೃದ್ದಿಗೆ ಕರ್ತವ್ಯ ನಿರ್ವಹಿಸುವವರಾಗಿದ್ದಾರೆ. ಶಿಕ್ಷಕರು ಸದಾ ತಾಯಿ ಹೃದಯದವರಾಗಿದ್ದಾರೆ. ನಮ್ಮ ಗ್ರಾಮೀಣ ಮಕ್ಕಳ ಬದುಕು ಕಟ್ಟಿಕೊಡುವವರಾಗಿದ್ದಾರೆ. ನಿಮ್ಮ ಕಾರ್ಯ ಮೆಚ್ಚುವಂತದ್ದು, ಬಬಲೇಶ್ವರ, ತಿಕೋಟಾ ಹಾಗೂ ವಿಜಯಪುರ ಗ್ರಾಮೀಣ ವಲಯದಲ್ಲಿ ಕರ್ತವ್ಯ ನಿರ್ವಹಿಸುವ ಶಿಕ್ಷಕರು ಮಕ್ಕಳ ಹಿತ ಬಯಸಿ ಕೆಲಸ ಮಾಡುತ್ತಾರೆ. ಸಂಬಳಕ್ಕಾಗಿ ಕೆಲಸ ಮಾಡದೆ ಮಕ್ಕಳ ಹಿತಕೊಸ್ಕರ ಕರ್ತವ್ಯ ನಿರ್ವಹಿಸುತ್ತಾರೆ.”

– ಸಂಗಮೇಶ ಬಬಲೇಶ್ವರ
ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿ ಅತಿಕ್ರಮಣ!

ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ನ್ಯಾ.ಕೌಶಿಕ್

ಮಾ.೨೪ ರಂದು ಪೂರ್ವಭಾವಿ ಸಭೆ

ಎಸ್.ಎಸ್.ಎಲ್.ಸಿ ಪರೀಕ್ಷೆ : ಪರೀಕ್ಷಾ ಕೇಂದ್ರ ಸುತ್ತ ನಿಷೇಧಾಜ್ಞೆ ಜಾರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿ ಅತಿಕ್ರಮಣ!
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ನ್ಯಾ.ಕೌಶಿಕ್
    In (ರಾಜ್ಯ ) ಜಿಲ್ಲೆ
  • ಮಾ.೨೪ ರಂದು ಪೂರ್ವಭಾವಿ ಸಭೆ
    In (ರಾಜ್ಯ ) ಜಿಲ್ಲೆ
  • ಎಸ್.ಎಸ್.ಎಲ್.ಸಿ ಪರೀಕ್ಷೆ : ಪರೀಕ್ಷಾ ಕೇಂದ್ರ ಸುತ್ತ ನಿಷೇಧಾಜ್ಞೆ ಜಾರಿ
    In (ರಾಜ್ಯ ) ಜಿಲ್ಲೆ
  • ನೌಕರರ ಸಮರ್ಪಕ ಕೆಲಸದಿಂದ ದೇಶದ ಅಭಿವೃದ್ದಿ ಸಾಧ್ಯ
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ದತೆ :ಬಿಇಓ ಸಯಿದಾ ಮುಜಾವರ
    In (ರಾಜ್ಯ ) ಜಿಲ್ಲೆ
  • ಮಾನವ-ಪ್ರಾಣಿ ಸಂಘರ್ಷ ತಡೆಗೆ ಸ್ಥಳೀಯರ ಸಹಕಾರ ಅತ್ಯಗತ್ಯ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಯಶಸ್ಸು ಕಂಡ ಲೋಕ ಅದಾಲತ್
    In (ರಾಜ್ಯ ) ಜಿಲ್ಲೆ
  • ಪ್ರಗತಿ ಹಂತದ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಿ
    In (ರಾಜ್ಯ ) ಜಿಲ್ಲೆ
  • ಮಾದರಿ ನೀತಿ ಸಂಹಿತೆ ಜಾರಿಗೆ ಕಾರ್ಯಪ್ರವೃತ್ತ :ಜ್ಯೋತಿಗಿರೀಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.