ಉದಯರಶ್ಮಿ ದಿನಪತ್ರಿಕೆ
ಚಡಚಣ: ಉಮರಜ ಗ್ರಾಮದ ಸರಕಾರಿ ಪ್ರೌಢ ಶಾಲೆಯ ಆವರಣದಲ್ಲಿ ನಡೆದ ಪ್ರಸಕ್ತ ಸಾಲಿನ ಪ್ರೌಢ ಶಾಲೆಗಳ ವಲಯ ಮಟ್ಟದ ಕ್ರೀಡಾಕೂಟದಲ್ಲಿ ನಿವರಗಿ ಗ್ರಾಮದ ಶ್ರೀ ಸಂಗಮೇಶ್ವರ ಪ್ರೌಢ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಗೆಲುವು ಸಾಧಿಸುವ ಮೂಲಕ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಜಗದೀಶ ವಾಘಮೋರೆ ಉದ್ದ ಜಿಗಿತದಲ್ಲಿ ಪ್ರಥಮ, ಗುಂಡು ಎಸೆತದಲ್ಲಿ ಪ್ರಥಮ ಹಾಗೂ ೧೦೦ ಮೀ ಓಟದಲ್ಲಿ ಪ್ರಥಮ, ಸಮಿತ ಚೌಡಕಿ ೧೫೦೦ ಮೀ ಹಾಗೂ ೩೦೦೦ ಮೀ ಓಟದಲ್ಲಿ ದ್ವಿತೀಯ, ಕಿರಣ ಡೊಳ್ಳಿ ತ್ರಿವಿಧ ಜಿಗಿತದಲ್ಲಿ ದ್ವಿತೀಯ, ಬಾಲಕರ ೪*೧೦೦ ಮೀ ರೀಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಮುಖ್ಯ ಗುರುಗಳು, ಸಿಬ್ಬಂದಿ ವರ್ಗ, ಆಡಳಿತ ಮಂಡಳಿ, ವಿದ್ಯಾರ್ಥಿಗಳು ಸೇರಿದಂತೆ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.