Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಸವನ ಬಾಗೇವಾಡಿಯಲ್ಲಿ ಆರ್.ಎಸ್.ಎಸ್. ಭವ್ಯ ಪಥಸಂಚಲನ

ವ್ಯಕ್ತಿ ನಿರ್ಮಾಣದಿಂದ ರಾಷ್ಟ್ರ ನಿರ್ಮಾಣ ಮಾಡುವ ಆರೆಸ್ಸೆಸ್

ರಂಗಕರ್ಮಿ ರಾಜು ತಾಳಿಕೋಟೆ ಇನ್ನು ನೆನಪು ಮಾತ್ರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»Uncategorized»ಸಿಂದಗಿ ನಗರಕ್ಕೆ ರೂ.೧೦೦ ಕೋಟಿ ವಿಶೇಷ ಅನುದಾನ
Uncategorized

ಸಿಂದಗಿ ನಗರಕ್ಕೆ ರೂ.೧೦೦ ಕೋಟಿ ವಿಶೇಷ ಅನುದಾನ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ ನಗರಸಭೆಯಾಗಿ ಮೇಲ್ದರ್ಜೆಗೇರಿದ ಹಿನ್ನೆಲೆ ಸಂಭ್ರಮಾಚರಣೆಯಲ್ಲಿ ಶಾಸಕ ಅಶೋಕ ಮನಗೂಳಿ ಭರವಸೆ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಸಿಂದಗಿ ಪುರಸಭೆ ನಗರಸಭೆಯಾಗಿ ಮೇಲ್ದರ್ಜೆಗೇರಿದ ಹಿನ್ನೆಲೆಯಲ್ಲಿ ಪುರಸಭೆ ಮತ್ತು ಮನಗೂಳಿ ಅವರ ಅಭಿಮಾನಿಗಳು ನಗರದಲ್ಲಿ ಶಾಸಕ ಅಶೋಕ ಮನಗೂಳಿ ಅವರ ಅದ್ದೂರಿ ಮೆರವಣಿಗೆ ಮಾಡಿದರು.
ಮೆರವಣಿಗೆಯ ಬಳಿಕ ಸ್ವಾಮಿ ವಿವೇಕಾನಂದ ವೃತ್ತದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಶಾಸಕ ಅಶೋಕ ಮನಗೂಳಿ ಮಾತನಾಡಿ, ಬರುವ ೨೦೨೮ರ ಚುನಾವಣೆಯ ಒಳಗಾಗಿ ಸಿಂದಗಿ ನಗರಕ್ಕೆ ಸರ್ಕಾರದಿಂದ ರೂ.೧೦೦ಕೋಟಿ ವಿಶೇಷ ಅನುದಾನ ತೆಗೆದುಕೊಂಡು ಬರುವ ಮೂಲಕ ಪಟ್ಟಣದ ರಸ್ತೆಗಳನ್ನು ಸಿ.ಸಿ ರಸ್ತೆಗಳನ್ನಾಗಿ ಮಾಡುತ್ತೇನೆ. ನಗರಸಭೆಯಾದ ಮೇಲೆ ಸಿಂದಗಿಯ ವಾತಾವರಣ ಬದಲಾವಣೆ ಮಾಡಬೇಕೆನ್ನುವ ಕನಸನ್ನು ಹೊತ್ತಿದ್ದೇನೆ. ಎಸಿ ಕಛೇರಿ ಮತ್ತು ಕೆಇಬಿ ಇಇ ಕಛೇರಿ ತರುವ ಪ್ರಯತ್ನದಲ್ಲಿದ್ದೇನೆ. ಸಿಂದಗಿ ಸುಂದರ ನಗರವನ್ನಾಗಿ ಮಾಡುವೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ, ಪುರಸಭೆ ಮಾಜಿ ಸದಸ್ಯ ರಾಜಶೇಖರ ಕೂಚಬಾಳ, ಅಲಮೇಲ ಪಟ್ಟಣ ಪಂಚಾಯತ್ ಅಧ್ಯಕ್ಷ ಸಾಧಿಕ ಸುಂಬಡ ಅವರು ಮಾತನಾಡಿದರು.
ಇದಕ್ಕೂ ಮುನ್ನ ಗುತ್ತಿಗೆದಾರ ದಯಾನಂದ ಬಿರಾದಾರ ಅವರ ಮೆನಯಲ್ಲಿ ಶಾಸಕ ಅಶೋಕ ಮನಗೂಳಿ ಅವರಿಗೆ ಸನ್ಮಾನ ಮಾಡಲಾಯಿತು. ಅಲ್ಲಿಂದ ಸಾರೋಟ್ ಮೆರವಣಿಗೆ ಡಾ.ಎಂ.ಎಂ.ಕಲಬುರ್ಗಿ ರಸ್ತೆಯ ಮಾರ್ಗವಾಗಿ ಬಸವೇಶ್ವರ ವೃತ್ತದಿಂದ ಮಾಜಿ ಸಚಿವ ದಿ.ಎಂ.ಸಿ.ಮನಗೂಳಿ ರಸ್ತೆಯಿಂದ ಸ್ವಾಮಿ ವಿವೇಕಾನಂದ ವೃತ್ತದವರೆಗೆ ನಡೆಯಿತು.
ಮೆರವಣಿಗೆಯಲ್ಲಿ ಕಾಂಗ್ರೆಸ್ ಪಕ್ಷದ ಧ್ವಜ, ದಿ.ಸಚಿವ ಮಾಜಿ ಎಂ.ಸಿ.ಮನಗೂಳಿ, ಶಾಸಕ ಅಶೋಕ ಮನಗೂಳಿ ಮತ್ತು ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ಅವರ ಭಾವಚಿತ್ರಗಳು ಅಭಿಮಾನಿಗಳ ಕೈಯಲ್ಲಿ ರಾರಾಜಿಸಿದವು.
ಮೆರವಣಿಗೆ ನೇತೃತ್ವವನ್ನು ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ವಹಿಸಿಕೊಂಡಿದ್ದರು. ಸಾರೋಟದಲ್ಲಿ ಶಾಸಕ ಅಶೋಕ ಮನಗೂಳಿ ಅವರ ಜೊತೆಗೆ ಪುರಸಭೆ ಉಪಾಧ್ಯಕ್ಷ ಸಂದೀಪ ಚೌರ, ಆಲಮೇಲ ಪಟ್ಟಣ ಪಂಚಾಯತ್ ಸಾದಿಕ ಸುಂಬಡ ಇದ್ದರು.
ಪ್ರಮುಖ ವೃತ್ತಗಳಲ್ಲಿ ಜೆಸಿಬಿ ಮೂಲಕ ಶಾಸಕರ ಮೇಲೆ ಪುಷ್ಪಾರ್ಚನೆ ಮಾಡುವ ಮೂಲಕ ಸ್ವಾಗತಿಸಿದ ನೋಟ ಜನಮನ ಸೆಳೆಯಿತು. ಮೆರವಣಿಗೆಯು ಡೊಳ್ಳು ಕುಣಿತ, ಡಿಜೆ ಮೂಲಕ ಹಬ್ಬದ ವಾತಾವರಣ ನಿರ್ಮಾಣಗೊಂಡಿತ್ತು. ಮೆರವಣಿಗೆ ಉದ್ದಕ್ಕೂ ಅವರ ಅಭಿಮಾನಿಗಳು, ಸ್ನೇಹಿತರು, ಹಿತೈಷಿಗಳು, ಉಮೇಶ ಜೋಗೂರ ಸೇರಿದಂತೆ ಟಿಎಸ್‌ಪಿಎಸ್ ಮಂಡಳಿಯ ನಿರ್ದೇಶಕರು, ಸಿಬ್ಬಂದಿಗಳು ಸನ್ಮಾನಿಸಿ ಗೌರವಿಸಿದರು.
ಮೆರವಣಿಗೆಯಲ್ಲಿ ಪುರಸಭೆಯ ಸದಸ್ಯರು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಪುರಸಭೆ ಕಾರ್ಯಾಲಯದ ಸಿಬ್ಬಂದಿ, ತಾಲೂಕಿನ ಸುತ್ತಮುತ್ತಲಿನ ಅವರ ಅಭಿಮಾನಿಗಳು ಭಾಗವಹಿಸಿದ್ದರು.

BIJAPUR NEWS patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಸವನ ಬಾಗೇವಾಡಿಯಲ್ಲಿ ಆರ್.ಎಸ್.ಎಸ್. ಭವ್ಯ ಪಥಸಂಚಲನ

ವ್ಯಕ್ತಿ ನಿರ್ಮಾಣದಿಂದ ರಾಷ್ಟ್ರ ನಿರ್ಮಾಣ ಮಾಡುವ ಆರೆಸ್ಸೆಸ್

ರಂಗಕರ್ಮಿ ರಾಜು ತಾಳಿಕೋಟೆ ಇನ್ನು ನೆನಪು ಮಾತ್ರ

ರೈತರಿಗೆ ಕೂಡಲೇ ಪರಿಹಾರ ನೀಡಿ :ಸಂಗಮೇಶ ಸಗರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಸವನ ಬಾಗೇವಾಡಿಯಲ್ಲಿ ಆರ್.ಎಸ್.ಎಸ್. ಭವ್ಯ ಪಥಸಂಚಲನ
    In (ರಾಜ್ಯ ) ಜಿಲ್ಲೆ
  • ವ್ಯಕ್ತಿ ನಿರ್ಮಾಣದಿಂದ ರಾಷ್ಟ್ರ ನಿರ್ಮಾಣ ಮಾಡುವ ಆರೆಸ್ಸೆಸ್
    In (ರಾಜ್ಯ ) ಜಿಲ್ಲೆ
  • ರಂಗಕರ್ಮಿ ರಾಜು ತಾಳಿಕೋಟೆ ಇನ್ನು ನೆನಪು ಮಾತ್ರ
    In (ರಾಜ್ಯ ) ಜಿಲ್ಲೆ
  • ರೈತರಿಗೆ ಕೂಡಲೇ ಪರಿಹಾರ ನೀಡಿ :ಸಂಗಮೇಶ ಸಗರ
    In (ರಾಜ್ಯ ) ಜಿಲ್ಲೆ
  • ಕ್ರೀಡೆಗಳಿಂದ ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿ ಕೃಷ್ಣ ಕುಂಬಾರ ಗೆ ಸಾಧನೆಯ ಗರಿ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ ಪಟ್ಟಣದ ಬಸ್ ನಿಲ್ದಾಣಕ್ಕೆ ಬೇಕು ಕಾಯಕಲ್ಪ :ಮನವಿ
    In (ರಾಜ್ಯ ) ಜಿಲ್ಲೆ
  • ಕಂಪೆನಿ ಸರ್ಕಾರಕ್ಕೆ ಸಿಂಹ ಸ್ವಪ್ನವಾಗಿದ್ದ ದೇಶಭಕ್ತ ಸಂಗೊಳ್ಳಿ ರಾಯಣ್ಣ
    In (ರಾಜ್ಯ ) ಜಿಲ್ಲೆ
  • ಶೈಲಾ ಸುಳೆಭಾವಿ ಗೆ ಪಿಎಚ್ಡಿ ಪದವಿ
    In (ರಾಜ್ಯ ) ಜಿಲ್ಲೆ
  • ಸಂಖ್ಯಾಬಲದಿಂದ ಸಿಎಂ ಹುದ್ದೆ ನಿರ್ಧಾರ ಆಗಲ್ಲ :ಡಿಕೆಶಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.