Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಾನಾ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಸಚಿವ ಎಂ.ಬಿ.ಪಾಟೀಲ

ಐಟಿಐ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

ಜಾಗೃತಿ ಸಮಿತಿ ಸದಸ್ಯತ್ವಕ್ಕೆ ಅರ್ಹರಿಂದ ಅರ್ಜಿ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸೇವಾ ಮನೋಭಾವನೆ ಮೂಲಕ ಮಕ್ಕಳಲ್ಲಿ ಕನಸುಗಳನ್ನು ಬಿತ್ತಿ
(ರಾಜ್ಯ ) ಜಿಲ್ಲೆ

ಸೇವಾ ಮನೋಭಾವನೆ ಮೂಲಕ ಮಕ್ಕಳಲ್ಲಿ ಕನಸುಗಳನ್ನು ಬಿತ್ತಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಟ್ಟಂಗಿಹಾಳದ ಎಕ್ಸಲಂಟ್ ಕೋಚಿಂಗ್ ಕ್ಲಾಸಿಸ್‌ನಲ್ಲಿ ನಡೆದ ಶಿಕ್ಷಕರ ದಿನೋತ್ಸವದಲ್ಲಿ ವಾಗ್ಮಿ ಅಶೋಕ ಹಂಚಲಿ ಶಿಕ್ಷಕರಿಗೆ ಸಲಹೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಾಸ್ತವದಲ್ಲಿ ಶಿಕ್ಷಕರು ವಿಶ್ವಗುರು ಭಾರತದ ಕಲ್ಪನೆಯನ್ನು ಬಿತ್ತಿದರೆ ಭವಿಷ್ಯದಲ್ಲಿ ಭಾರತವು ಮತ್ತೊಮ್ಮೆ ವಿಶ್ವಗುರುವಾಗುತ್ತದೆ. ಅದರ ಜೊತೆಗೆ ಮಕ್ಕಳ ಭವಿಷ್ಯವೂ ಕೂಡ ಉಜ್ವಲವಾಗುತ್ತದೆ. ಆ ನಿಟ್ಟಿನಲ್ಲಿ ಶಿಕ್ಷಕರು ಶ್ರಮವಹಿಸಬೇಕು. ಸೇವಾ ಮನೋಭಾವನೆಯ ಮೂಲಕ ಮಕ್ಕಳಲ್ಲಿ ಕನಸುಗಳನ್ನು ಬಿತ್ತಿ, ಸಂಸ್ಕಾರದ ಗೊಬ್ಬರ ಹಾಕಿ, ಶ್ರೇಷ್ಠತೆಯ ಫಸಲು ತೆಗೆಯಬೇಕು ಎಂದು ಖ್ಯಾತ ವಾಗ್ಮಿ ಅಶೋಕ ಹಂಚಲಿ ಹೇಳಿದರು.
ಇಟ್ಟಂಗಿಹಾಳದಲ್ಲಿರುವ ಎಕ್ಸಲಂಟ್ ಕೋಚಿಂಗ್ ಕ್ಲಾಸಿಸ್‌ನಲ್ಲಿ ಜರುಗಿದ ಶಿಕ್ಷಕರ ದಿನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಭಾರತ ವಿಶ್ವಗುರುವಾಗಿಸುವಲ್ಲಿ ಶಿಕ್ಷಕರ ಪಾತ್ರ ಎನ್ನುವ ವಿಷಯದ ಕುರಿತು ಅವರು ಉಪನ್ಯಾಸ ನೀಡಿದರು.
ನಮ್ಮ ದೇಶದ ಭವ್ಯ ಪರಂಪರೆ ಹಾಗೂ ಹೋರಾಟದ ಯಶೋಗಾಥೆಯನ್ನು ಮಕ್ಕಳಿಗೆ ಪ್ರತಿದಿನವೂ ಜ್ಞಾಪಿಸಿದಾಗ ಅವರಲ್ಲಿ ದೇಶಾಭಿಮಾನ ಮೂಡುತ್ತದೆ. ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬಿತ್ತಿದಾಗ ಅದರ ಲಾಭ ಭವಿಷ್ಯದ ಭಾರತಕ್ಕೆ ದೊರೆಯುತ್ತದೆ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಚೇರಮನ್ ಬಸವರಾಜ್ ಕೌಲಗಿ ಮಾತನಾಡಿ, ದೇಶದ ಭವಿಷ್ಯ ನಿರ್ಮಾಣ ಮಾಡುವುದರಲ್ಲಿ ಶಿಕ್ಷಕರ ಪಾತ್ರ ದೊಡ್ಡದಾಗಿದೆ. ಶಿಕ್ಷಕರು ಸದಾ ಜ್ಞಾನವನ್ನು ಆಸ್ವಾಧಿಸುವ ಕಾರ್ಯ ಮಾಡಬೇಕು. ಹಾಗೆ ಪಡೆದುಕೊಂಡ ಜ್ಞಾನವನ್ನು ಮಕ್ಕಳಿಗೆ ಹಂಚಬೇಕು ಆಗ ಮಾತ್ರ ಯಶಸ್ವಿ ಶಿಕ್ಷಕರಾಗಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ವಿಡಿಸಿಸಿ ಬ್ಯಾಂಕ್‌ನ ನಿವೃತ್ತ ವ್ಯವಸ್ಥಾಪಕ ವಿ ಡಿ ಮಾದನಶೆಟ್ಟಿ, ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಗೌರವ ಸದಸ್ಯ ರಾಜಶೇಖರ ಕೌಲಗಿ, ಎಕ್ಸಲಂಟ್ ವಿಜ್ಞಾನ ಪ ಪೂ ಕಾಲೇಜಿನ ಉಪ ಪ್ರಾಂಶುಪಾಲ ಮಂಜುನಾಥ ಜುನಗೊಂಡ ಮಾತನಾಡಿದರು.
ಗಾಯಕ ವಿರೇಶ ವಾಲಿ ಸಂಗೀತ ಕಾರ್ಯಕ್ರಮ ಹಾಗೂ ನಟರಾಜ ಡಾನ್ಸ ಅಕಾಡೆಮಿಯ ಪೂರ್ವಿ ತಳವಾರ ತಂಡದಿಂದ ಭರತನಾಟ್ಯ ಕಾರ್ಯಕ್ರಮ ನೆರವೇರಿಸಲಾಯಿತು.
ಶಿಕ್ಷಕ ಹರೀಶ ಹಗದಪ್ಪನವರ ಮಠ ನಿರೂಪಿಸಿದರು, ಸಂಜೀವ ಜ್ಯೋಶಿ ಸ್ವಾಗತಿಸಿದರು, ಪಿ.ಕೆ.ಖೇಡಗಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಾನಾ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಸಚಿವ ಎಂ.ಬಿ.ಪಾಟೀಲ

ಐಟಿಐ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

ಜಾಗೃತಿ ಸಮಿತಿ ಸದಸ್ಯತ್ವಕ್ಕೆ ಅರ್ಹರಿಂದ ಅರ್ಜಿ ಆಹ್ವಾನ

ಜಿಲ್ಲಾ ಉಸ್ತುವಾರಿ ಸಚಿವರ ನಿವಾಸಕ್ಕೆ ಜನಗಣತಿ ಅಧಿಕಾರಿಗಳು ಭೇಟಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಾನಾ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಐಟಿಐ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಜಾಗೃತಿ ಸಮಿತಿ ಸದಸ್ಯತ್ವಕ್ಕೆ ಅರ್ಹರಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಜಿಲ್ಲಾ ಉಸ್ತುವಾರಿ ಸಚಿವರ ನಿವಾಸಕ್ಕೆ ಜನಗಣತಿ ಅಧಿಕಾರಿಗಳು ಭೇಟಿ
    In (ರಾಜ್ಯ ) ಜಿಲ್ಲೆ
  • ವನಜಾಕ್ಷಿ ಗುಗ್ಗರಿ ಅವರಿಗೆ ಪಿಎಚ್ಡಿ ಪದವಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026
    In ದಿನಪತ್ರಿಕೆ
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.