ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಸತ್ಯಸೃತಿ ಎಂ ಅವರು ಸಲ್ಲಿಸಿದ್ದ “ಜಂಬುನಾಥ ಕಂಚ್ಯಾಣಿ ಅವರ ಜೀವನ ಮತ್ತು ಸಾಹಿತ್ಯ” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್ಡಿ ಪದವಿ ನೀಡಿದೆ.
ಸತ್ಯಸೃತಿ ಎಂ ಅವರು ಕನ್ನಡ ವಿಭಾಗದ ಪ್ರೊ.ಮಹೇಶ ಚಿಂತಾಮಣಿ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ಸತ್ಯಸೃತಿ ಎಂ ಅವರನ್ನು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್ ಲಕ್ಕಣ್ಣನವರ ಅಭಿನಂದಿಸಿದ್ದಾರೆ.