ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಸೆಪ್ಟೆಂಬರ್ ೧೭ರಂದು ಡಾ.ಬಿ.ಆರ್.ಅಂಬೇಡ್ಕರ್ ಒಳಾಂಗಣ ಕ್ರೀಡಾಂಗಣದಲ್ಲಿ ಹಿರಿಯ ನಾಗರಿಕರಿಗೆ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.
ಸಾಂಸ್ಕೃತಿಕ ಸ್ಪರ್ಧೆಗಳಾದ ಗಾಯನ ಹಾಗೂ ಏಕ ಪಾತ್ರಾಭಿನಯ ಸ್ಪರ್ಧೆ ಹಾಗೂ ಕ್ರೀಡಾ ಸ್ಪರ್ಧೆಗಳಾದ ಮ್ಯೂಸಿಕಲ್ ಚೇರ್, ಬಿರುಸಿನ ನಡಿಗೆಗೆ , ಬಕೆಟ್ನಲ್ಲಿ ಬಾಲ್ ಎಸೆಯುವುದು ಮಹಿಳೆ ಹಾಗೂ ಪುರಷರು ಭಾಗವಹಿಸಬಹುದಾಗಿದ್ದು, ೬೦ ರಿಂದ ೭೦ ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.
ಹೆಚ್ಚಿನ ಮಾಹಿತಿಗೆ: ವಿಜಯಪುರ ಜಿಲ್ಲಾ ಸಂಯೋಜಕರಾದ ಪ್ರತಿಭಾ ಮಾದರ ಮೊ: ೯೬೦೬೧೫೧೧೪೯, ವಿಜಯಪುರ ತಾಲೂಕ ಪಂಚಾಯತಿಯ ಸಂಯೋಜಕರಾದ ರವಿ ರಾಠೋಡ ಮೊ: ೯೦೩೫೫೫೩೩೩೭, ಇಂಡಿ ತಾಲೂಕ ಪಂಚಾಯತಿಯ ಸಂಯೋಜಕರಾದ ಪರಶುರಾಮ ಭೋಸಲೆ ಮೊ: ೯೯೭೨೪೪೧೪೬೪, ಸಿಂದಗಿ ತಾಲೂಕ ಪಂಚಾಯತಿಯ ಸಂಯೋಜಕರಾದ ಮೊ: ಮುತ್ತುರಾಜ ಸಾತಿಹಾಳ ಮೊ: ೯೯೮೦೦೧೯೬೩೫, ಮುದ್ದೇಬಿಹಾಳ ತಾಲೂಕ ಪಂಚಾಯತಿಯ ಸಂಯೋಜಕರಾದ ಎಸ್.ಕೆ.ಘಾಟಿ ಮೊ: ೯೭೪೦೬೮೨೯೭೯ ಹಾಗೂ ಬಸವನ ಬಾಗೇವಾಡಿ ತಾಲೂಕ ಪಂಚಾಯತಿಯ ಸಂಯೋಜಕರಾದ ಶೀವಲೀಲಾ ಬಿರಾದಾರ ಮೊ: ೮೭೨೨೧೩೫೬೬೦ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.