Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಮೂಹ ಮಾಧ್ಯಮಗಳ ಪ್ರಭಾವದಿಂದ ಸಂಸ್ಕೃತಿ-ಮೌಲ್ಯಗಳ ಅಧಃಪತನ
(ರಾಜ್ಯ ) ಜಿಲ್ಲೆ

ಸಮೂಹ ಮಾಧ್ಯಮಗಳ ಪ್ರಭಾವದಿಂದ ಸಂಸ್ಕೃತಿ-ಮೌಲ್ಯಗಳ ಅಧಃಪತನ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ನಡೆದ ಮಾಸಿಕ ಉಪನ್ಯಾಸ ಗೋಷ್ಠಿಯಲ್ಲಿ ಪ್ರೊ. ಎಂ.ಎಸ್.ಖೊದ್ನಾಪೂರ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಇಂದಿನ ಸಮೂಹ ಮಾಧ್ಯಮಗಳ ಮಿತಿಮೀರಿದ ಪ್ರಭಾವದಿಂದ ಮತ್ತು ಮೋಬೈಲ್, ವ್ಯಾಟ್ಸಾಪ್, ಫೇಸ್‌ಬುಕ್, ಕಂಪ್ಯೂಟರ್ ಮತ್ತು ಟಿ.ವ್ಹಿ ಧಾರಾವಾಹಿಗಳ ಪ್ರಭಾವದಿಂದ ನಮ್ಮ ಜೀವನ, ಸಂಸ್ಕೃತಿ-ಮೌಲ್ಯಗಳು ಅಧಃಪತನಗೊಳ್ಳುತ್ತಿದೆ ಎಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಪ್ರೊ. ಎಂ.ಎಸ್.ಖೊದ್ನಾಪೂರ ಅಭಿಪ್ರಾಯಪಟ್ಟರು.
ಅವರು ನಗರದ ನವರಸಪುರದ ಸೇನಾ ನಗರದ ಶಿವಾಲಯದಲ್ಲಿ ಸೋಮವಾರ ದಂದು ‘ಬೆಳದಿಂಗಳ ಬೆಳಕಿನೆಡೆಗೆ” ಮಾಸಿಕ ಉಪನ್ಯಾಸ ಗೋಷ್ಠಿಯಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡುತ್ತಿದ್ದರು.
ಕೇವಲ ಹಣ ಗಳಿಕೆಯತ್ತ ಸಾಗುತ್ತಾ ಸಂಸಾರವೆಂಬ ಸಾಗರದಲ್ಲಿ ಎಲ್ಲದಕ್ಕೂ ನಾನು, ನನ್ನದು ಮತ್ತು ನನ್ನಿಂದ ಎಂಬ ಮಮಕಾರಗಳಿಂದ ನಾವು ಇಂದು ಧಾರ್ಮಿಕ, ನೈತಿಕ ಮತ್ತು ಮೌಲ್ವಿಕ ಚಿಂತನೆಗಳಿಲ್ಲದೇ ಜೀವನವನ್ನು ವೃಥಾ ಹಾಳು ಮಾಡಿಕೊಳ್ಳುತ್ತಿದ್ದೇವೆ. ಅದಕ್ಕಾಗಿ ನಾವೆಲ್ಲರೂ ಇಂದು ಸಂಸಾರವೆಂಬ ಭವಸಾಗರದಿಂದ ಹೊರಬಂದು ನಿಜಗುಣ ಶಿವಯೋಗಿಗಳ ಅಮೃತವಾಣಿ “ಕೆಡುವ ಶರೀರ ಸಾಫಲ್ಯವಾಗುವುದು-ಪರರ ಹಿತ” ಎಂಬಂತೆ ಸನ್ಮಾರ್ಗದ ದಾರಿ ಕಂಡುಕೊಂಡು ನಮ್ಮ ಬದುಕು ಸುಂದರ ಮತ್ತು ನೆಮ್ಮದಿಯುತವಾಗಲು ಇಂತಹ ಸತ್ಸಂಗ ಭಾಗವಹಿಸಿ ಶರಣರ ಜೀವನಾದರ್ಶಗಳನ್ನು ಅರಿತುಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಇನ್ನೊರ್ವ ಅತಿಥಿ, ಪ್ರಸಿದ್ಧ ಭಜನಾಕಾರ ವಿಠ್ಠಲ ಕನಮಡಿ ಅವರು “ಮಾನವನ ಸಾರ್ಥಕ ಬದುಕಿಗೆ ಶರಣರ ಮತ್ತು ಧಾರ್ಮಿಕ ಚಿಂತನೆಗಳು” ವಿಷಯ ಕುರಿತು ಮಾತನಾಡಿದರು.
ಇದೇ ಸಂದರ್ಭದಲ್ಲಿ ಸಾಧಕ ವಿಭೂಷಣ ಪ್ರಶಸ್ತಿ ಪುರಸ್ಕೃತ ಪ್ರೊ. ಎಂ.ಎಸ್.ಖೊದ್ನಾಪೂರ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಂಶುಪಾಲ ಕೆ.ಜೆ.ಕೋಟ್ಯಾಳ ಮತ್ತು ದೇವಸ್ಥಾನದ ನಿರ್ದೇಶಕ ಎಂ.ಎಸ್.ಪತ್ತಾರ ಮಾತನಾಡಿದರು.
ವೇದಿಕೆಯ ಮೇಲೆ ದೇವಸ್ಥಾನ ನಿರ್ದೇಶಕಿ ಮಂಜುಳಾ ನಿಂಬಾಳಕರ ಇನ್ನಿತರರು ಸಹ ವೇದಿಕೆಯ ಮೇಲಿದ್ದರು.
ಕಾರ್ಯಕ್ರಮದಲ್ಲಿ ಶಿವಾಲಯ ದೇವಸ್ಥಾನದ ಅಧ್ಯಕ್ಷ ಗುರುಬಸಯ್ಯ ಹಿರೇಮಠ, ಉಪಾಧ್ಯಕ್ಷ ಬಿ.ಡಿ.ಕಡಕೋಳ, ಪ್ರೊ. ಬಿ.ವ್ಹಿ.ಕುಂಬಾರ, ನಿಂಗಪ್ಪ ನಿಂಬಾಳಕರ, ಡಾ. ರಾಜಕುಮಾರ ಜೊಲ್ಲೆ, ರಾಜಶೇಖರ ಉಮರಾಣಿ, ವಿಠ್ಠಲ ಜಗತಾಪ, ಪ್ರೊ. ಬಿ.ಎಸ್.ಬೆಳಗಲಿ, ಬಸಯ್ಯಶಾಸ್ತ್ರಿ ಮಠಪತಿ, ಶಿವಯೋಗೆಪ್ಪ ಹತ್ತಿ, ಲಕ್ಷ್ಮಿ ದೇವಸ್ಥಾನದ ಕಾರ್ಯದರ್ಶಿ ಶೋಭಾ ಚವ್ಹಾಣ, ಆರ್.ಎಸ್.ಕಪಾಳಿ, ಅಲ್ಲಮಪ್ರಭು ಶಿರಹಟ್ಟಿ, ಸಾಬು ಅಗ್ರಾಣಿ, ಶಾಂತಾ ಕಪಾಳಿ, ಪ್ರೊ. ಸುನೀತಾ ವಳಸಂಗ, ಪ್ರಫುಲ ನಿಂಬಾಳಕರ ಇನ್ನಿತರರು ಉಪಸ್ಥಿತರಿದ್ದರು.
ಶಕುಂತಲಾ ಅಂಕಲಗಿ ಪ್ರಾರ್ಥಿಸಿದರು. ಗುರುಬಸಯ್ಯ ಹಿರೇಮಠ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ.ಬಸವರಾಜ ಕುಂಬಾರ ಕಾರ್ಯಕ್ರಮ ನಿರೂಪಿಸಿದರು. ರಾಜಶೇಖರ ಉಮರಾಣಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!
    In (ರಾಜ್ಯ ) ಜಿಲ್ಲೆ
  • ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ
    In (ರಾಜ್ಯ ) ಜಿಲ್ಲೆ
  • ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೀಳು ಮಟ್ಟದ ರಾಜಕೀಯಕ್ಕೆ ನಾಂದಿ ಹಾಡಿದ ಭೂಸನೂರ
    In (ರಾಜ್ಯ ) ಜಿಲ್ಲೆ
  • ಭಾರತ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿದ ಪ್ರಶಿಕ್ಷಣಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ನೆಚ್ಚಿನ ಶಿಕ್ಷಕಿಯ ವರ್ಗಾವಣೆಗೆ ಕಣ್ಣೀರಿಟ್ಟ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ರೈತರ ಬೇಡಿಕೆಯಂತೆ ಪರಿಹಾರ ದರ ನಿಗದಿಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಯಲ್ಲಿ ಮತ್ತೆ ಹೆಚ್ಚಾದ ಒಳ ಹರಿವು
    In (ರಾಜ್ಯ ) ಜಿಲ್ಲೆ
  • ಹಳ್ಳ ದಾಟಲು ಹರಸಾಹಸ ಪಟ್ಟ ಶಿಕ್ಷಕರು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.