ಚಿಮ್ಮಡದ ಸರಕಾರಿ ಗೋಮಾಳ ಜಮೀನು ಖಾಸಗಿ ವ್ಯಕ್ತಿಗಳ ಹೆಸರಿಗೆ ಪರಭಾರೆ
ಉದಯರಶ್ಮಿ ದಿನಪತ್ರಿಕೆ
ಚಿಮ್ಮಡ: ಗ್ರಾಮದ ಸರಕಾರಿ ಗೋಮಾಳ ಜಮೀನು ಖಾಸಗಿ ವ್ಯಕ್ತಿಗಳ ಹೆಸರಿಗೆ ಪರಭಾರೆ ಮಾಡಿಕೊಂಡಿರುವ ಭೂಗಳ್ಳರನ್ನು ಹಾಗೂ ಅವರಿಗೆ ಸಹಕಾರ ನೀಡಿದ ಅಧಿಕಾರಿಗಳನ್ನು ಬಂಧಿಸುವಂತೆ ಆಗ್ರಹಿಸಿ ಗ್ರಾಮದ ಪ್ರಮುಖರು ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರರವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.
ಗ್ರಾಮದ ವ್ಯಾಪ್ತಿಯಲ್ಲಿರುವ ಸರ್ವೆ ನಂ. ೫೯/೧ ರಲ್ಲಿನ ಸುಮಾರು ೧೯ ಎಕರೆ ೨೩ ಗುಂಟೆ ಜಮೀನು ಸರಕಾರ ಜಾನುವಾರುಗಳನ್ನು ಮೇಯಿಸಲು (ಗೋಮಾಳ) ಮೀಸಲಿರಿಸಿತ್ತು ಅದಕ್ಕೆ ಧಾಖಲೆಗಳಲ್ಲಿ ಗುರುಚರಣ (ಸರಕಾರಿ ಜಮೀನು) ಎಂದು ನೊಂದನಿಯಾಗಿರುತ್ತದೆ ಈ ಭಾಗದಲ್ಲಿ ಬಹುತೇಕ ಗೋಮಾಳ ಜಾಗೆಗಳಿಗೆ ಗುರುಚರಣ ಎಂದೇ ದಾಖಲಾಗಿರುತ್ತವೆ ಇದನ್ನೇ ದುರುಪಯೋಗ ಪಡೆದುಕೊಂಡ ಶಿವಮೊಗ್ಗದ ಶ್ರೀ ಗುರುಚರಣ ಬಿನ್ ಮುರುಳಪ್ಪ ಎನ್ನುವ ವ್ಯಕ್ತಿ ಆ.೧೪ರಂದು ಶಿವಮೊಗ್ಗದ ಉಪನೊಂದನಾಧಿಕಾರಿ ಕಛೇರಿಯಲ್ಲಿ ತಮ್ಮ ಹೆಸರಿಗೆ ಮುಕ್ತ್ಯಾರ ಪತ್ರ (ಜಿಪಿಎ) ಮಾಡಿಕೊಂಡಿದ್ದಾರೆ, ನಂತರ ದಿನಾಂಕ ೨೬-೮-೨೦೨೫ರಂದು ಒಟ್ಟು ಮುಕ್ತ್ಯಾರ ಪತ್ರದನ್ವಯ ಮುಧೋಳ ಉಪನೊಂದನಾಧಿಕಾರಿ ಕಛೇರಿಯಲ್ಲಿ ಮುಧೋಳ ತಾಲೂಕಿನ ಮುಗಳಖೋಡದ ಶ್ರೀಶೈಲ ದುಂಡಪ್ಪ ಪಶ್ಚಾಪೂರರವರ ಹೆಸರಿಗೆ ಖರೀದಿ ನೊಂದಣಿ ಮಾಡಿಕೊಟ್ಟಿದ್ದು ಈ ಸರಕಾರಿ ಜಮೀನು ಕಬಳಿಸುತ್ತಿರುವ ಭೂಗಳ್ಳರನ್ನು ಹಾಗೂ ಪ್ರಕರಣದಲ್ಲಿ ಭಾಗಿಯಾದ ಉಪ ನೊಂದಣಾಧಿಕಾರಿಗಳನ್ನು, ದಸ್ತು ಬರಹಗಾರ, ಹಾಗೂ ಈ ಪ್ರಕರಣಕ್ಕೆ ಸಂಬಂದಿಸಿದಂತೆ ಸಹಾಯ, ಸಹಕಾರ ನೀಡಿದ ಪ್ರತಿಯೊಬ್ಬರನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ, ಸಂಸದ ಪಿ.ಸಿ. ಗದ್ದಿಗೌಡರ, ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಿಧ್ಧಾರ್ಥ ಗೊಯಲ್ರವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ. ಮನವಿ ಸ್ವೀಕರಿಸಿ ಮಾತನಾಡಿದ ಸಚಿವರು, ಪ್ರಕರಣದ ಮಾಹಿತಿ ಪಡೆದು ಸೂಕ್ತಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಗ್ರಾ.ಪಂ. ಮಾಜಿ ಅಧ್ಯಕ್ಷ ಶಂಕರ ಬಟಕುರ್ಕಿ, ಪರಪ್ಪಾ ಪಾಲಭಾವಿ, ಬೀರಪ್ಪ ಹಳೆಮನಿ, ಬಸವರಾಜ ಕುಂಚನೂರ, ವಿಜಯಕುಮಾರ ಪೂಜಾರಿ, ಮನೋಜ ಹಟ್ಟಿ, ಬಾಳೆಶ ಬ್ಯಾಕೋಡ, ಮಹಾಂತೇಶ ಜಾಲಿಕಟ್ಟಿ, ಸುರೇಶ ಪೂಜಾರಿ, ನಾಗಪ್ಪ ಆಲಕನೂರ, ಪ್ರಭು ಗೋವಿಂದಗೋಳ, ಯಮನಪ್ಪ ಮಾದರ, ಹಣಮಂತ ಬಜಂತ್ರಿ ಸೇರಿದಂತೆ ಹಲವಾರು ಜನ ಪ್ರಮುಖರು ಉಪಸ್ಥಿತರಿದ್ದರು.