Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇಶದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಪಾಲುದಾರಿಕೆ ಶೇ.೭೦ಕ್ಕೂ ಅಧಿಕ
(ರಾಜ್ಯ ) ಜಿಲ್ಲೆ

ದೇಶದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಪಾಲುದಾರಿಕೆ ಶೇ.೭೦ಕ್ಕೂ ಅಧಿಕ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಶಿಕ್ಷಕಿ ಶಿವಲೀಲಾ ಬಿರಾದಾರ ಮತ್ತು ಶಿಕ್ಷಕಿ ಸುಶ್ಮಿತಾ ನಿಗಡೆ ಗೆ ಶಿಕ್ಷಕರತ್ನ ಪ್ರಶಸ್ತಿ ಪ್ರದಾನ | ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಅಭಿಮತ

ಉದಯರಶ್ಮಿ ದಿನಪತ್ರಿಕೆ

ಚಡಚಣ: ತಾಲೂಕು ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಮಂಗಳವಾರ ಪಟ್ಟಣದ ಶ್ರೀ ಸಂಗಮೇಶ್ವರ ಮಂಗಲ ಕಾರ್ಯಾಲಯದಲ್ಲಿ ಗುರುವಂದನಾ ಹಾಗೂ ವಿಜಯಪುರ ಜಿಲ್ಲಾ ಹಾಗೂ ತಾಲೂಕ ಅತ್ಯುತ್ತಮ ಶಿಕ್ಷಕರತ್ನ ಪ್ರಶಸ್ತಿ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಹಾಗೂ ಶ್ರೀ ಅಮೃತಾನಂದ ಸ್ವಾಮಿಗಳು ಜ್ಯೋತಿಬೇಳಗಿಸುವದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮ ಕುರಿತು ಮಾತನಾಡಿದ ನಾಗಠಾಣ ಕ್ಷೇತ್ರದ ಶಾಸಕ ವಿಠ್ಠಲ ಕಟಕಧೋಂಡ ಅವರು, ವಿದ್ಯೆ ಕಲಿಸುವುದಷ್ಟೆ ಶಿಕ್ಷಣದ ಉದ್ದೇಶ ಅಲ್ಲ. ಸುಸಂಸ್ಕೃತರನ್ನಾಗಿ, ಒಳ್ಳೆಯ ಸತ್ಪ್ರಜೆಗಳನ್ನಾಗಿ ರೂಪಿಸುವುದಾಗಬೇಕು ಎಂದು ಹೇಳಿದರು.
ರಾಜ್ಯದಲ್ಲಿ ಅಷ್ಟೆ ಅಲ್ಲ ದೇಶದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಯ ಪಾಲುದಾರಿಕೆ ನೂರಕ್ಕೆ ೭೦ ರಿಂದ ೮೦ ಅಷ್ಟು ಇದೆ ಖಾಸಗಿ ಶಾಲೆ ಅಥವಾ ವಿದ್ಯಾಸಂಸ್ಥೆಯು ಇಂದು ಅತ್ಯುತ್ತಮ ಗುಣಮಟ್ಟದ ಶಿಕಣ ನೀಡುವಲ್ಲಿ ಪ್ರಥಮ ಸ್ಥಾನದಲ್ಲಿ ಇವೆ ಎಂದರೆ ತಪ್ಪಾಗಲಾರದು ಎಂದರು.
ದಿವ್ಯ ಸಾನಿದ್ಯ ವಹಿಸಿದ ಅಮೃತಾನಂದ ಸ್ವಾಮೀಜಿ ಆಶೀರ್ವಚನ ನೀಡಿ ಜಗತ್ತಿನ ಯಾವ ಅಧಿಕಾರಿಗಳಿಗೂ ಸಹ ಬ್ರಹ್ಮ ವಿಷ್ಣು ಮಹೇಶ್ವರ ಎಂದು ಕರೆದಿಲ್ಲ, ಗುರುವಿಗೆ ಮಾತ್ರ ಗುರು ಬ್ರಹ್ಮ, ಗುರು ವಿಷ್ಣು, ಗುರುದೇವೋ ಮಹೇಶ್ವರ ಎಂದು ಕರೆದು ಗುರುವಿಗೆ ಅಗ್ರ ಸ್ಥಾನದಲ್ಲಿ ಇರುವ ಹಾಗೆ ಪುರಾತನ ಕಾಲದಿಂದಲು ಗೌರವವಿದೆ. ಶಿಕ್ಷಕ ಸುಖಿಯಾಗಿದ್ದರೆ ಇಡಿ ಜಗತ್ತು ಸುಖಿಯಿಂದ ಇರಲು ಸಾಧ್ಯ ಆದ್ದರಿಂದ ಗುರುಗಳನ್ನು ಶಿಕ್ಷಣ ಸಂಸ್ಥೆಯವರು ಸುಖಿ ಇರುವ ಹಾಗೆ ನೋಡಿಕೊಂಡಿದ್ದಾರೆ ಎಂದರು.
ತಾಲೂಕ ಮಟ್ಟದ ಅತ್ಯುತ್ತಮ ಶಿಕ್ಷಕರತ್ನ ಪ್ರಶಸ್ತಿಗೆ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಾದ ಚಡಚಣದ ವಿಜಯ ವಿದ್ಯಾಪೀಠ ಸಂಸ್ಥೆಯ ಶಿಕ್ಷಕಿ ಶಿವಲೀಲಾ ಅನಿಲ ಬಿರಾದಾರ, ಪಟ್ಟಣದ ಸ್ವಾಮಿ ವಿವೇಕಾನಂದ ಪ್ರಾಥಮಿಕ ಶಾಲೆಯ ಶಿಕ್ಷಕಿ ಸುಶ್ಮಿತಾ ನಿಗಡೆ ಅವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು.
ಅರ್ಹ ಶಿಕ್ಷಕರನ್ನು ತಾಲೂಕಾ ಮಟ್ಟದಲ್ಲಿ ತಾಲೂಕಿಗೆ ಒಬ್ಬರಂತೆ ೧೧ ಶಿಕ್ಷಕರು ಅತ್ಯುತ್ತಮ ಶಿಕ್ಷಕರತ್ನ ಪ್ರಶಸ್ತಿಗೆ ಭಾಜನರಾಗಿದ್ದರು ಮತ್ತು ಚಡಚಣ ತಾಲೂಕಿನ ಸುಮಾರು ೩೦ ಶಿಕ್ಷಕರು ಅತ್ಯುತ್ತಮ ಶಿಕ್ಷಕರತ್ನ ಪ್ರಶಸ್ತಿಗೆ ಭಾಜನರಾದರು.ಭಾಜನರಾದ ಎಲ್ಲ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ವಿಜಯ ವಿದ್ಯಾಪೀಠ ಸಂಸ್ಥೆಯ ಅಧ್ಯಕ್ಷ ಕೆ.ಪಿ.ಬೋಳೆಗಾಂವ, ಸ್ವಾಮಿ ವಿವೇಕಾನಂದ ಪ್ರಾಥಮಿಕ ಶಾಲೆಯ ಅಧ್ಯಕ್ಷ ಎ.ಬಿ.ಪಾಟೀಲ,ಮಹಾಂತೇಶ ಹಿರೇಮಠ, ಸಿದ್ದಣ್ಣ ಬಿರಾದಾರ, ಚಡಚಣ ತಾಲೂಕು ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘದ ಅಧ್ಯಕ್ಷ ಎಸ್.ಎಸ್.ಹಾವಿನಾಳ, ರಮೇಶ ಜಿತ್ತಿ, ರವೀಂದ್ರ ಬಿರಾದಾರ, ಎ.ಆರ್.ಸೌದಿ, ಬಸವರಾಜ ಪೂಜಾರಿ, ಎಂ.ಆರ್.ತುಪ್ಪದ ಸೇರಿದಂತೆ ಖಾಸಗಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಶಿಕ್ಷಕರು, ಗಣ್ಯರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!
    In (ರಾಜ್ಯ ) ಜಿಲ್ಲೆ
  • ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ
    In (ರಾಜ್ಯ ) ಜಿಲ್ಲೆ
  • ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೀಳು ಮಟ್ಟದ ರಾಜಕೀಯಕ್ಕೆ ನಾಂದಿ ಹಾಡಿದ ಭೂಸನೂರ
    In (ರಾಜ್ಯ ) ಜಿಲ್ಲೆ
  • ಭಾರತ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿದ ಪ್ರಶಿಕ್ಷಣಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ನೆಚ್ಚಿನ ಶಿಕ್ಷಕಿಯ ವರ್ಗಾವಣೆಗೆ ಕಣ್ಣೀರಿಟ್ಟ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ರೈತರ ಬೇಡಿಕೆಯಂತೆ ಪರಿಹಾರ ದರ ನಿಗದಿಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಯಲ್ಲಿ ಮತ್ತೆ ಹೆಚ್ಚಾದ ಒಳ ಹರಿವು
    In (ರಾಜ್ಯ ) ಜಿಲ್ಲೆ
  • ಹಳ್ಳ ದಾಟಲು ಹರಸಾಹಸ ಪಟ್ಟ ಶಿಕ್ಷಕರು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.