ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಜ್ಯೋತಿ ಬಸ್ಸಿನಕರ್ ಅವರು ಸಲ್ಲಿಸಿದ್ದ “ಇಂಪ್ಯಾಕ್ಟ್ ಆಫ್ ಡಾ. ಬಿ.ಆರ್ ಅಂಬೇಡ್ಕರ್ ಡೆವಲಪ್ಮೆಂಟ್ ಕಾರ್ಪೋರೇಷನ್ ಆನ್ ವುಮನ್ ಎಂಪವರ್ಮೆಂಟ್ ಇನ್ ಕರ್ನಾಟಕ: ಅ ಸ್ಟಡಿ ಆಫ್ ಸೆಲ್ಫ ಎಂಪ್ಲಾಯಿಮೆಂಟ್ ಸ್ಲೀಮ್” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್ಡಿ ಪದವಿ ನೀಡಿದೆ.
ಜ್ಯೋತಿ ಬಸ್ಸಿನಕರ್ ಅವರು ಅರ್ಥಶಾಸ್ತ್ರ ವಿಭಾಗದ ಡಾ. ಸುರೇಶ ಕೆ.ಪಿ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ಜ್ಯೋತಿ ಬಸ್ಸಿನಕರ್ ಅವರನ್ನು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್ ಲಕ್ಕಣ್ಣನವರ ಅಭಿನಂದಿಸಿದ್ದಾರೆ.