ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ಪ್ರವಾಸೋದ್ಯಮ ನೀತಿ ೨೦೨೪-೨೯ನ್ನು ರೂಪಿಸಿ ಜಾರಿಗೊಳಿಸಲಾಗಿದ್ದು, ಜಿಲ್ಲೆಯ ೩೩ ಪ್ರವಾಸಿ ತಾಣಗಳನ್ನು ಪ್ರವಾಸೋದ್ಯಮ ನೀತಿಯಡಿ ಗುರುತಿಸಿ ಅನುಮೋದನೆ ನೀಡಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಪ್ರವಾಸೋದ್ಯಮ ಇಲಾಖೆಯಿಂದ ನೂತನ ಪ್ರವಾಸಿ ತಾಣಗಳನ್ನು ಗುರುತಿಸಲು ರಾಜ್ಯದ ಜಿಲ್ಲೆಗಳಿಗೆ ಸಂಬಂಧಿಸಿದ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ರಾಜ್ಯದ ೧೨೭೫ ಪ್ರವಾಸಿ ತಾಣಗಳನ್ನು ಪ್ರವಾಸೋದ್ಯಮ ನೀತಿ ೨೦೨೪-೨೯ರಡಿ ಸರ್ಕಾರ ಅನುಮೋದನೆ ನೀಡಿದೆ.
ಜಿಲ್ಲೆಯ ಪ್ರವಾಸಿ ತಾಣಗಳಾದ ಗೋಲಗುಮ್ಮಟ, ಇಬ್ರಾಹಿಂರೋಜಾ, ದ್ಯಾಬೇರಿ ಗ್ರಾಮದ ಶ್ರೀ ವಾಗ್ದೇವಿ ದೇವಸ್ಥಾನ, ಕುಮಟಗಿ ಬೇಸಿಗೆ ಅರಮನೆ, ಶಿವಗಿರಿ ಶಿವನಮೂರ್ತಿ, ಸಾರಿಪುತ್ರ ಬೋಧಿಧಮ್ಮ ಬೌದ್ಧ ವಿಹಾರ ಪ್ರವಾಸಿ ತಾಣ, ಕತಕನಹಳ್ಳಿಯ ಶ್ರೀ ಗುರು ಚಕ್ರವರ್ತಿ ಸದಾಶಿವ ಶಿವಯೋಗಿ ಮಠ, ತೊರಗಿ ಗ್ರಾಮದ ಶ್ರೀ ನರಸಿಂತಹ ದೇವಸ್ಥಾನ, ಸಂಗೀತ ಮಹಲ್, ತೊರವಿ ಶ್ರೀ ಲಕ್ಷ್ಮಿ ದೇವಸ್ಥಾನ, ಕನಮಡಿ ಗ್ರಾಮದ ಶ್ರೀ ದರಿದೇವರ ದೇವಸ್ಥಾನ, ಅರಕೇರಿಯ ಶ್ರೀ ಅಮೋಘಸಿದ್ದ ದೇವಸ್ಥಾನ, ತಿಕೋಟಾದ ಹಾಜಿಮಸ್ತಾನ ದರ್ಗಾ, ಉಪ್ಪಲದಿನ್ನಿಯ ಶ್ರೀ ಸಂಗಮನಾಥ ದೇವಸ್ಥಾನ, ಶೇಗುಣಸಿಯ ಹರಳಯ್ಯನ ಗುಂಡ, ಇಂಗೇಶ್ವರದ ಶ್ರೀ ಜಗಜ್ಯೋತಿ ಬಸವೇಶ್ವರ ರವರ ಜನ್ಮಸ್ಥಳ, ಬಸವನಬಾಗೇವಾಡಿಯ ಶ್ರೀ ಬಸವೇಶ್ವರ ದೇವಸ್ಥಾನ, ಆಲಮಟ್ಟಿ ಲಾಲ ಬಹಾದ್ದೂರ ಶಾಸ್ತ್ರಿ ಆಣೆಕಟ್ಟು, ಯಲಗೂರದ ಶ್ರೀ ಯಲಗೂರೇಶ್ವರ ಆಂಜನೇಯ ದೇವಸ್ಥಾನ, ತಂಗಡಗಿ ಗ್ರಾಮದ ಶ್ರೀ ನಿಲಾಂಬಿಕೆ ದೇವಸ್ಥಾನ, ಕೋಳೂರು ಗ್ರಾಮದ ಶ್ರೀ ಕೋಟ್ಟೂರು ಬಸವೇಶ್ವರ ದೇವಸ್ಥಾನ ಹಾಗೂ ಈಶ್ವರ ಲಿಂಗ ದೇವಸ್ಥಾನ, ಹೊರ್ತಿಯ ಶ್ರೀ ರೇವಣಸಿದ್ದೇಶ್ವರ ದೇವಸ್ಥಾನ, ಹಿರೇರೂಗಿ ಗ್ರಾಮದ ಶ್ರೀ ಜಟ್ಟಿಂಗೇಶ್ವರ ದೇವಸ್ಥಾನ, ಸಾಲೋಟಗಿ ಗ್ರಾಮದ ಶ್ರೀ ಶಿವಯೋಗೇಶ್ವರ ದೇವಸ್ಥಾನ, ಹಲಸಂಗಿ ಗ್ರಾಮದ ಶ್ರೀ ಪ್ರಭುಲಿಂಗೇಶ್ವರ ದೇವಸ್ಥಾನ, ಲಚ್ಯಾಣದ ಶ್ರೀ ಸಿದ್ದಲಿಂಗ ಮಹಾರಾಜರ ಮಠ, ಯಂಕಂಚಿಯ ಶ್ರೀ ದಾವಲ ಮಲೀಕ ದರ್ಗಾ, ಕಡ್ಲೇವಾಡ ಗ್ರಾಮದ ಶ್ರೀ ಸೋಮೇಶ್ವರ ದೇವಸ್ಥಾನ, ಚಟ್ಟರಕಿ ಗ್ರಾಮದ ಶ್ರೀ ದತ್ತಾತ್ರೇಯ ದೇವಸ್ಥಾನ, ದೇವರಹಿಪ್ಪರಗಿ ಪಟ್ಟಣದ ಶ್ರೀ ಮಲ್ಲಯ್ಯ ದೇವಸ್ಥಾನ ಶ್ರೀ ಮಡಿವಾಳ ಮಾಚಿದೇವರ ದೇವಸ್ಥಾನ ಮತ್ತು ಧೂಳಖೇಡ ಗ್ರಾಮದ ಶ್ರೀ ಶಂಕರಲಿಂಗ ದೇವಸ್ಥಾನವನ್ನು ಗುರುತಿಸಿ ಅನುಮೋದನೆ ನೀಡಲಾಗಿದೆ.
ಜಿಲ್ಲೆಯ ಪ್ರವಾಸಿ ತಾಣಗಳನ್ನು ಅಭಿವೃದ್ದಿಗೊಳಿಸಿ ಜಾಗತಿಕ ಪ್ರವಾಸಿ ತಾಣದ ರೂಪ ನೀಡುವುದು. ಉದ್ಯೋಗ ಸೃಷ್ಟಿಸುವುದು ಪ್ರವಾಸೋದ್ಯಮ ನೀತಿಯ ಉದ್ದೇಶವಾಗಿದೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ದಿಪಡಿಸಿ ಪ್ರವಾಸಿಗರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಣೆ ಮಾಡುವ ನಿಟ್ಟಿನಲ್ಲಿ ಪಾರಂಪರಿಕ ತಾಣಗಳನ್ನು, ಧಾರ್ಮಿಕ ಸ್ಥಳ, ಐತಿಹಾಸಿಕ ದೇವಸ್ಥಾನಗಳು, ದರ್ಗಾಗಳು, ನೈಸರ್ಗಿಕ ತಾಣಗಳನ್ನು ಗುರುತಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.