Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾನವೀಯತೆಯ ಗ್ರಂಥಾಲಯದಂತಿದ್ದ ಅಟಲ್ ಜೀ

ಲೋಕಾಯುಕ್ತ ಅಧಿಕಾರಿಗಳ ದಾಳಿ :ದಾಖಲೆಗಳ ಪರಿಶೀಲನೆ

ಮಕ್ಕಳ ಹಾಗೂ ಪತ್ರಕರ್ತರ ಓಟಕ್ಕೆ ಅದ್ಭುತ ಪ್ರತಿಕ್ರಿಯೆ ವ್ಯಕ್ತ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನೆಚ್ಚಿನ ಶಿಕ್ಷಕಿಯ ವರ್ಗಾವಣೆಗೆ ಕಣ್ಣೀರಿಟ್ಟ ವಿದ್ಯಾರ್ಥಿಗಳು
(ರಾಜ್ಯ ) ಜಿಲ್ಲೆ

ನೆಚ್ಚಿನ ಶಿಕ್ಷಕಿಯ ವರ್ಗಾವಣೆಗೆ ಕಣ್ಣೀರಿಟ್ಟ ವಿದ್ಯಾರ್ಥಿಗಳು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಪ್ಲೀಸ್ ನಮ್ಮನ್ನು ಬಿಟ್ಟು ಹೋಗ್ಬೇಡಿ, ನಿಮ್ಮನ್ನ ನಾವು ಬಿಟ್ಟಿರಲ್ಲ, ಅಪ್ಪಿಕೊಂಡು ಕಂಬನಿಯಿಟ್ಟು ನಮ್ಮನ್ನು ಬಿಟ್ಟು ಹೋಗ್ಬೇಡಿ, ಕಾಲು ಹಿಡಿದು ಹೀಗೆ ಮಕ್ಕಳು ಕಣ್ಣೀರಿಡುತ್ತಿದ್ದರೆ, ನೆರೆದವರ ಕಣ್ಣಾಲೆಗಳು ಒದ್ದೆಯಾಗುತ್ತಿತ್ತು. ಇಷ್ಟಕ್ಕೂ ಮಕ್ಕಳ ಈ ರೋಧನೆಗೆ ಕಾರಣ ಶಿಕ್ಷಕಿಯ ವರ್ಗಾವಣೆ.
ತಾಲೂಕಿನ ಕೂಡಗಿ ಗ್ರಾಮದ ಸರ್ಕಾರಿ ಕನ್ನಡ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯ ಬಹುಮುಖ ಪ್ರತಿಭೆಯ ಮಕ್ಕಳ ಅಚ್ಚುಮೆಚ್ಚಿನ ಶಿಕ್ಷಕಿ ಪ್ರತಿಭಾ ತೊರವಿ ಹಠಾತ್ ಬೇರೆ ಶಾಲೆಗೆ ವರ್ಗಾವಣೆ ಸುದ್ದಿ ತಿಳಿದು, ಬೆಳಗಿನ ಪ್ರಾರ್ಥನೆ ಸಮಯ ವರ್ಗಾವಣೆ ವಿಷಯ ಮಕ್ಕಳು ಕಣ್ಣೀರಿಡಲು ಶುರುಮಾಡಿದರು. ತಮ್ಮ ಪಾಠ ಹೇಳಿಕೊಡುವದಷ್ಟೇ ಅಲ್ಲದೆ ಬದುಕು ಹೇಗೆ ಸಾಗಿಸಬೇಕು ಎಂದು ಹೃದಯಸ್ಪರ್ಶಿ ಪಾಠಗಳನ್ನು ಕಲಿಸಿದ್ದ ಶಿಕ್ಷಕಿ ನಮ್ಮನ್ನು ಬಿಟ್ಟು ಬೇರೆ ಶಾಲೆಗೆ ಹೋಗುತ್ತಿದ್ದಾರೆಂಬ ಕಲ್ಪನೆಯೇ ಮಕ್ಕಳಿಗೆ ಸಹಿಸಲಾಗಲಿಲ್ಲ. ಸಣ್ಣಪುಟ್ಟ ಮಕ್ಕಳಿಂದ ಹಿಡಿದು ಹಿರಿಯ ತರಗತಿಯ ವಿದ್ಯಾರ್ಥಿಗಳವರೆಗೂ ಕಣ್ಣೀರಿನಲ್ಲಿ ತೇಲಿದರು. ತರಗತಿಗೆ ಬಂದು ತಾಯಿ ತರಹ ಮುದ್ದಾಡುತ್ತಿದ್ದ, ತಪ್ಪು ಮಾಡಿದಾಗ ಅಳುವ ಬದಲು ತಿದ್ದಿ ಪಾಠ ಕಲಿಸುತ್ತಿದ್ದ ಅಕ್ಕನಂತೆ ಕಾಣುತ್ತಿದ್ದ ಶಿಕ್ಷಕಿಯನ್ನು ವರ್ಗಾವಣೆ ವಿಷಯ ತಿಳಿದು ಮಕ್ಕಳು ನಾವು ನಾಳೆಯಿಂದ ಶಾಲೆಗೆ ಬರುವುದಿಲ್ಲವೆಂದು ಬ್ಯಾಗ್ ತರದೇ ಹಠ ಹಿಡಿದು ಕುಳಿತರು.
ವರ್ಗಾವಣೆ ವಿಚಾರ ತಿಳಿದ ಪೋಷಕರೂ ಶಾಲೆಗೆ ಆಗಮಿಸಿ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದರು.
ಮಕ್ಕಳು ಪಾಲಕರು, ಗ್ರಾಮಸ್ಥರು ಎಲ್ಲರೂ ಸೇರಿ ಶಾಲೆಯ ಆವರಣದಲ್ಲಿ ಪ್ರತಿಭಟಿಸಿ ಬೇರೆ ಶಾಲೆಗೆ ವರ್ಗಾವಣೆ ಮಾಡಲು ಬಿಡುವುದಿಲ್ಲಾ, ನಾಳೆಯಿಂದ ಶಾಲೆಗೆ ಬರುವುದಿಲ್ಲ, ನಾವು ಸಾಮೂಹಿಕವಾಗಿ ಬೇರೆ ಶಾಲೆಗೆ ಹೋಗುತ್ತೇವೆ ಎಂದು ಮಕ್ಕಳು ಹಠ ಹಿಡಿದರು.
ಪಾಲಕರು ಶಾಲೆಯ ಎಸ್ಡಿಎಂಸಿ ಸದಸ್ಯರು ಹಾಗೂ ಗ್ರಾಮದ ಮುಖಂಡರು ಸೇರಿ ಇಲಾಖೆಯ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ನೀವು ಶಾಲೆಗೆ ತಕ್ಷಣ ಬರಬೇಕು ಅಲ್ಲಿಯವರೆಗೆ ಮಕ್ಕಳು ಪಾಲಕರು ಶಾಲಾ ಆವರಣದಲ್ಲಿ ಖಂಡಿಸಿ ಕುಳಿತರು.
ಮಧ್ಯಾಹ್ನದ ವೇಳೆಗೆ ಶಿಕ್ಷಣ ಇಲಾಖೆಯ ಶಿಕ್ಷಣ ಸಂಯೋಜಕ ಪುರೋಹಿತ ಆಗಮಿಸಿ ವರ್ಗಾವಣೆ ಆನಲೈನ್ ಪ್ರಕ್ರಿಯೆಯಾಗಿದ್ದು ವರ್ಗಾವಣೆ ಕಡ್ಡಾಯವಾಗಿದ್ದು ವಿಷಯ ತಿಳಿಸಿ ಮೇಲಾಧಿಕಾರಿಗಳ ಗಮನಕ್ಕೆ ತಂದು ಪ್ರಯತ್ನಿಸಲಾಗುವುದು ಎಂದು ಹೇಳಿ ಮಕ್ಕಳು ಹಾಗೂ ಪಾಲಕರಿಗೆ ಮನವರಿಕೆ ಮಾಡಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾನವೀಯತೆಯ ಗ್ರಂಥಾಲಯದಂತಿದ್ದ ಅಟಲ್ ಜೀ

ಲೋಕಾಯುಕ್ತ ಅಧಿಕಾರಿಗಳ ದಾಳಿ :ದಾಖಲೆಗಳ ಪರಿಶೀಲನೆ

ಮಕ್ಕಳ ಹಾಗೂ ಪತ್ರಕರ್ತರ ಓಟಕ್ಕೆ ಅದ್ಭುತ ಪ್ರತಿಕ್ರಿಯೆ ವ್ಯಕ್ತ

ಗುರು ಎಂದು ಚೈತನ್ಯ ಸ್ವರೂಪ :ಶಿವಬಸಯ್ಯ ಸ್ವಾಮಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾನವೀಯತೆಯ ಗ್ರಂಥಾಲಯದಂತಿದ್ದ ಅಟಲ್ ಜೀ
    In ವಿಶೇಷ ಲೇಖನ
  • ಲೋಕಾಯುಕ್ತ ಅಧಿಕಾರಿಗಳ ದಾಳಿ :ದಾಖಲೆಗಳ ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಹಾಗೂ ಪತ್ರಕರ್ತರ ಓಟಕ್ಕೆ ಅದ್ಭುತ ಪ್ರತಿಕ್ರಿಯೆ ವ್ಯಕ್ತ
    In (ರಾಜ್ಯ ) ಜಿಲ್ಲೆ
  • ಗುರು ಎಂದು ಚೈತನ್ಯ ಸ್ವರೂಪ :ಶಿವಬಸಯ್ಯ ಸ್ವಾಮಿ
    In (ರಾಜ್ಯ ) ಜಿಲ್ಲೆ
  • ಪರಿಪೂರ್ಣ ವ್ಯಕ್ತಿತ್ವ ವಿಕಸನಕ್ಕೆ ಎನ್‌ಎಸ್‌ಎಸ್‌ ಶಿಬಿರ ಸಹಕಾರಿ
    In (ರಾಜ್ಯ ) ಜಿಲ್ಲೆ
  • ಅದ್ಧೂರಿ ಗುರುವೀರಘಂಟೈ ಮಡಿವಾಳೇಶ್ವರ ಜೋಡು ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಮಕ್ಕಳನ್ನು ಪ್ರಬುದ್ದ ನಾಗರಿಕರಾಗಿ ನಿರ್ಮಾಣ ಮಾಡಿ :ಬಿಇಓ‌ ತಳವಾರ
    In (ರಾಜ್ಯ ) ಜಿಲ್ಲೆ
  • ರಾಣಿ ಚೆನ್ನಮ್ಮ ವಿವಿ ಅಥ್ಲೇಟಿಕ್ಸ್ಕ್ರೀಡಾಕೂಟದಲ್ಲಿ ಸರ್ಕಾರಿ ಕಾಲೇಜ್ ಸಾಧನೆ
    In (ರಾಜ್ಯ ) ಜಿಲ್ಲೆ
  • ಭಯುತ್ಪಾದನೆ ವಿರುದ್ಧ ಭಾರತ-ರಷ್ಯಾ ಒಟ್ಟಾಗಿ ಹೋರಾಟ
    In (ರಾಜ್ಯ ) ಜಿಲ್ಲೆ
  • ಸೈಬರ್ ಅಪರಾಧ ಪ್ರಕರಣಗಳಲ್ಲಿ ಮಹಿಳೆಯರೇ ಹೆಚ್ಚು ಬಲಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.