Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಚಾರ-ವಿಚಾರಗಳು ಉಳಿಯಬೇಕಾದರೆ ನಾವೆಲ್ಲ ಒಗ್ಗೂಡಬೇಕು
(ರಾಜ್ಯ ) ಜಿಲ್ಲೆ

ಆಚಾರ-ವಿಚಾರಗಳು ಉಳಿಯಬೇಕಾದರೆ ನಾವೆಲ್ಲ ಒಗ್ಗೂಡಬೇಕು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಸರ್ವಸದಸ್ಯರ ವಾರ್ಷಿಕ ಸಭೆಯಲ್ಲಿ ಸಚಿವ ಶಿವಾನಂದ ಪಾಟೀಲ ಅಭಿಮತ

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಸಮಾಜದಲ್ಲಿ ಬಸವಾದಿ ಶರಣರ ಆಚಾರ-ವಿಚಾರಗಳು, ಧರ್ಮ ಉಳಿಯಬೇಕಾದರೆ ವೀರಶೈವ-ಲಿಂಗಾಯತ ಸಮಾಜ ಬಾಂಧವರು ಒಗ್ಗೂಡುವದು ತುಂಬಾ ಅಗತ್ಯವಿದೆ ಎಂದು ಸಕ್ಕರೆ, ಜವಳಿ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ಪಟ್ಟಣದ ಬಸವ ಭವನದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ಸಹಯೋಗದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪರಿಷತ್ತಿನ ಸರ್ವಸದಸ್ಯರ ಮೂವತ್ತೊಂದನೇ ವಾರ್ಷಿಕ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬರೂ ಉಪೇಕ್ಷೆ ಮಾಡದೇ ಬದುಕು ಕಟ್ಟಿಕೊಳ್ಳವುದು ಅನಿವಾರ್ಯ. ಮಾನವೀಯತೆ ಎತ್ತಿಹಿಡಿಯುವದೇ ಧರ್ಮವಾಗಿದೆ. ವೀರಶೈವ-ಲಿಂಗಾಯತ ಧರ್ಮವು ಮಾನವೀಯತೆ ಎತ್ತಿ ಹಿಡಿದ ಧರ್ಮವಾಗಿದೆ.ಇದು ಜಾತ್ಯಾತೀತವಾಗಿ ನಡೆದ ಧರ್ಮವಾಗಿದೆ. ನಮ್ಮಂತಹವರು ರಾಜಕೀಯವಾಗಿ ಬೆಳೆ ಬೇಯಿಸಿಕೊಳ್ಳಲು ಧರ್ಮವನ್ನು ಬಳಸಿಕೊಳ್ಳುತ್ತಾರೆ. ಸಂತರು-ಶರಣರು ಸಮಾಜವನ್ನು ಎಂದಿಗೂ ಒಡೆಯದೇ ಒಗ್ಗೂಡಿಸುವ ಕಾರ್ಯ ಮಾಡಿದ್ದಾರೆ ಎಂದರು.
ಬಸವಾದಿ ಶರಣರ ತತ್ವ ಸಂದೇಶಗಳನ್ನು ನಾಡಿನಲ್ಲಿ ಜನಮಾನಸಕ್ಕೆ ಮುಟ್ಟಿಸುವಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಕಾರ್ಯ ಶ್ಲಾಘನೀಯ. ಇಂತಹ ಪರಿಷತ್ತಿಗೆ ಸದಸ್ಯರ ಸಂಖ್ಯೆ ಕಡಿಮೆ ಇರುವದು ವಿಷಾದನೀಯ. ಜನರು ಇದರ ಸದಸ್ಯತ್ವ ಪಡೆದುಕೊಳ್ಳುವ ಮೂಲಕ ನಾಡಿನಲ್ಲಿ ಶರಣರ ಪ್ರಸಾರಕ್ಕೆ ಕೈಜೋಡಿಸಬೇಕಿದೆ ಎಂದರು.
ಯಾವದೇ ಕಾರಣಕ್ಕೂ ಪರಿಷತ್ತು ಸರ್ಕಾರದ ಮುಂದೆ ಕೈಒಡ್ಡುವ ಪ್ರಮೇಯ ಬರಬಾರದು. ನಾನು ಪರಿಷತ್ತಿಗೆ ಇಂದೇ ರೂ.೫ ಲಕ್ಷ ದತ್ತಿ ನಿಧಿ ಕಾಣಿಕೆ ನೀಡುವದಾಗಿ ಹೇಳಿ ಹಣವನ್ನು ಪರಿಷತ್ತಿನ ಗೌರವಾಧ್ಯಕ್ಷ ಡಾ.ತೋಂಟದ ಸಿದ್ದರಾಮ ಸ್ವಾಮೀಜಿ, ರಾಜ್ಯಾಧ್ತಕ್ಷ ಡಾ.ಸಿ.ಸೋಮಶೇಖರ ಅವರಿಗೆ ನೀಡಿದರು.
ಪರಿಷತ್ತಿನ ಗೌರವ ಸಲಹೆಗಾರ, ಹಿರಿಯ ವಿದ್ವಾಂಸ ಗೊರುಚ ಮಾತನಾಡಿ, ನಾಡಿನಲ್ಲಿ ಶರಣ ಸಾಹಿತ್ಯ ಪರಷತ್ತು ನಿರ್ದಿಷ್ಟ ಉದ್ದೇಶ ಹೊಂದಿ ಕಾರ್ಯನಿರ್ವಹಿಸುತ್ತಿದೆ. ನಾಡಿನಲ್ಲಿ ಶರಣ ಸಂಸ್ಕ್ರತಿ ಬಗ್ಗೆ ಜನರು ಬದ್ದತೆಯಿರಬೇಕು. ಯಾರೂ ತೋರಿಕೆ ಉಪದೇಶ ಹೊಂದಬಾರದು. ನಮ್ಮ ಜೀವನದ ಅನೇಕ ಸಮಸ್ಯೆಗಳಿಗೆ ಶರಣರ ವಿಚಾರಗಳು ಪರಿಹಾರ ನೀಡುತ್ತವೆ. ಇಂತಹ ಶರಣರ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಕಾರ್ಯ ಮಾಡುತ್ತಿರುವ ಪರಿಷತ್ತಿಗೆ ಸರ್ಕಾರದಿಂದ ಅನುದಾನದ ನೆರವು ಸಿಗುತ್ತಿಲ್ಲ ಎಂಬ ನೋವಿದೆ. ಅದೇ ಕನ್ನಡ ಸಾಹಿತ್ಯ ಪರಿಷತ್ತಿಗೆ ರೂ.೫ ಕೋಟಿ ಸರ್ಕಾರ ಅನುದಾನ ನೀಡುತ್ತದೆ. ಸಾಂಸ್ಕ್ರತಿಕ ನಾಯಕ ಬಸವಣ್ಣ ಎಂದು ಘೋಷಣೆಯಾದರೆ ಸಾಲದು. ಅವರ ತತ್ವಗಳು ಅನುಷ್ಠಾನಕ್ಕೆ ಬರುವಂತಾಗಬೇಕಿದೆ. ಈ ನಿಟ್ಟಿನಲ್ಲಿ ನಾನು ೨೫ ಅಂಶಗಳನ್ನು ಒಳಗೊಂಡಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯಲಾಗಿದೆ. ಇದರ ಬಗ್ಗೆ ಅವರು ಗಮನ ಹರಿಸುವ ವಿಶ್ವಾಸವಿದೆ ಎಂದರು.
ಮಾಜಿ ಸಚಿವೆ ಲೀಲಾವತಿ ಆರ್. ಪ್ರಸಾದ, ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಸಿ.ಸೋಮಶೇಖರ ಮಾತನಾಡಿದರು.
ಸಾನಿಧ್ಯ ವಹಿಸಿದ್ದ ಪರಿಷತ್ತಿನ ಗೌರವಾಧ್ಯಕ್ಷ ಡಾ. ತೋಂಟದ ಸಿದ್ದರಾಮ ಸ್ವಾಮೀಜಿ ಮಾತನಾಡಿ, ಸರ್ಕಾರವು ರೂ.೫೦೦ ಕೋಟಿ ಅನುದಾನದಲ್ಲಿ ಸರ್ಕಾರದಿಂದ ಶಾಶ್ವತ ಬಸವಾದಿ ಶರಣರ ಸಂಸ್ಥೆ ಆರಂಭಿಸಿ ಅದರ ಮೂಲಕ ನಿರಂತರ ಬಸವಾದಿ ಶರಣರ ಕುರಿತು ನಾಡಿನಲ್ಲಿ ಪ್ರಸಾರ ಕಾರ್ಯ ಸರ್ಕಾರ ಮಾಡಬೇಕೆಂದು ಸಿಎಂ ಅವರಿಗೆ ಮನವಿ ಸಲ್ಲಿಸಲಾಗಿದೆ. ಇದರ ಬಗ್ಗೆ ಅವರು ನಿರ್ಣಯ ಕೈಗೊಳ್ಳುವ ಆಶಾಭಾವನೆ ಇದೆ ಎಂದರು.
ಪರಿಷತ್ತಿನ ಪ್ರ.ಕಾರ್ಯದರ್ಶಿ ಸೋಮಶೇಖರ ಗಾಂಜಿ ಅವರು ಸಭೆಯ ತಿಳುವಳಿಕೆ ವಾಚಿಸಿದರು.
ಕೋಶಾಧಿಕಾರಿ ಎಸ್.ಎಂ.ಹಂಪಯ್ಯ ಅವರು ೨೦೨೪-೨೫ ನೇ ಸಾಲಿನ ಲೆಕ್ಕ-ಪತ್ರ, ೨೦೨೫-೨೬ ನೇ ಸಾಲಿನ ಆಯ-ವ್ಯಯ ಮಂಡಿಸಿದರು.
ವೇದಿಕೆಯಲ್ಲಿ ಸಿದ್ದಲಿಂಗಸ್ವಾಮೀಜಿ, ವೀರತೀಶಾನಂದ ಸ್ವಾಮೀಜಿ, ಪರಿಷತ್ತಿನ ರಾಜ್ಯ ಪದಾಧಿಕಾರಿಗಳಾದ ಅಪ್ಪಾರಾವ ಅಕ್ಕೋಣೆ, ಡಾ.ಸಿಂ.ರಾ.ಹೊನ್ನಲಿಂಗಯ್ಯ, ಕೆ.ಎಂ.ವೀರೇಶ, ಶ್ರೀಶೈಲ ಪಟ್ಟಣಶೆಟ್ಟಿ, ಸುಶೀಲಾ ಸೋಮಶೇಖರ, ಪ್ರಕಾಶ ಅಂಗಡಿ, ಜಿಲ್ಲಾಧ್ಯಕ್ಷ ಜಂಬುನಾಥ ಕಂಚ್ಯಾಣಿ, ನಾಟಕ ಅಕಾಡೆಮಿ ಅಧ್ಯಕ್ಷ ನಾಗರಾಜ, ಎಲ್ಲಾ ಜಿಲ್ಲೆಯ ಅಧ್ಯಕ್ಷರು, ಪುರಸಭೆ ಅಧ್ಯಕ್ಷೆ ಜಗದೇವಿ ಗುಂಡಳ್ಳಿ, ಜಿಲ್ಲೆಯ ಎಲ್ಲ ತಾಲೂಕು ಘಟಕದ ಅಧ್ಯಕ್ಷರು ಇತರರು ಇದ್ದರು.
ಕದಳಿ ವೇದಿಕೆ ಸಾವಿತ್ರಿ ಕಲ್ಯಾಣಶೆಟ್ಟಿ ಬಳಗ ವಚನ ಪ್ರಾರ್ಥನೆಗೈದರು. ತಾಲೂಕು ಘಟಕದ ಅಧ್ಯಕ್ಷ ವೀರಣ್ಣ ಮರ್ತುರ ಸ್ವಾಗತಿಸಿದರು. ವಿವೇಕಾನಂದ ಕಲ್ಯಾಣಶೆಟ್ಟಿ ಪ್ರಾಸ್ತವಿಕವಾಗಿ ಮಾತನಾಡಿದರು. ಡಾ.ಯುವರಾಜ ಮಾದನಶೆಟ್ಟಿ ನಿರೂಪಿಸಿದರು. ಆರ್.ಜಿ.ಅಳ್ಳಗಿ ವಂದಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಪರಿಷತ್ತಿನಲ್ಲಿ ಉತ್ತಮ ಸಾಧನೆ ಮಾಡಿದ ಬಸವನಬಾಗೇವಾಡಿ ಘಟಕದ ಅಧ್ತಕ್ಷ ವೀರಣ್ಣ ಮರ್ತುರ, ಮುದ್ದೇಬಿಹಾಳ ಕದಳಿ ವೇದಿಕೆ ಅಧ್ಯಕ್ಷೆ ಕಾಶೀಬಾಯಿ ರಾಂಪೂರ ಅವರಿಗೆ ಬಸವ ರಾಜೇಂದ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.

BIJAPUR NEWS bjp public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ
    In (ರಾಜ್ಯ ) ಜಿಲ್ಲೆ
  • 1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ
    In (ರಾಜ್ಯ ) ಜಿಲ್ಲೆ
  • ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು
    In (ರಾಜ್ಯ ) ಜಿಲ್ಲೆ
  • ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು
    In (ರಾಜ್ಯ ) ಜಿಲ್ಲೆ
  • ಇಬ್ರಾಹಿಂಪುರದಲ್ಲಿ ಜಯರಾಮೇಶ್ವರ ಮಹಾರಾಜರ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಭಕ್ತರ ಭವಭೀತಿ ಪರಿಹರಿಸುವ ದತ್ತನ ಸ್ಥಳ ಸುಕ್ಷೇತ್ರ ಗಾಣಗಾಪುರ
    In ವಿಶೇಷ ಲೇಖನ
  • “ಡಿ.೫ ರಿಂದ ಸುವರ್ಣ ಮಹೋತ್ಸವ ಕಾರ್ಯಕ್ರಮ :ಗೊಳಸಂಗಿ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರು ಆತ್ಮವಿಶ್ವಾಸದಿಂದ ಜೀವನ ನಡೆಸಲು ಅವಕಾಶ ನೀಡಿ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಧ್ವನಿ 98.6 ಎಫ್‌.ಎಂ ರೇಡಿಯೋ ಕೇಂದ್ರ ಆರಂಭ
    In (ರಾಜ್ಯ ) ಜಿಲ್ಲೆ
  • ೫೧ ವರ್ಷಗಳ ಹೋರಾಟಕ್ಕೆ ದೊರಕಿದ ನ್ಯಾಯ :ಪಟ್ಟಣಶೆಟ್ಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.