Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಸಹಕಾರಿ

ಅಕ್ರಮ ಪಡಿತರ ಸಾಗಾಟ: ಆಹಾರ ಇಲಾಖೆ ದಾಳಿ

ರಾಷ್ಟ್ರೀಯ ಲೋಕ ಅದಾಲತ್:೩೭೭೬ ಪ್ರಕರಣಗಳು ಇತ್ಯರ್ಥ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪೊಲೀಸ್ ವೈಫಲ್ಯ ಖಂಡಿಸಿ ಸೆ.೧೯ಕ್ಕೆ ಕಾಲ್ನಡಿಗೆ ಜಾಥಾ :ಕೂಚಬಾಳ
(ರಾಜ್ಯ ) ಜಿಲ್ಲೆ

ಪೊಲೀಸ್ ವೈಫಲ್ಯ ಖಂಡಿಸಿ ಸೆ.೧೯ಕ್ಕೆ ಕಾಲ್ನಡಿಗೆ ಜಾಥಾ :ಕೂಚಬಾಳ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಯಾವುದೇ ಅಪರಾಧ ಕೃತ್ಯಗಳು ಜರುಗಿದರೂ ೨೪ ಗಂಟೆಗಳ ಅವಧಿಯಲ್ಲಿ ಅಪಾರಾಧಿಗಳನ್ನು ಪತ್ತೆ ಹಚ್ಚುವ ಈ ತಾಂತ್ರಿಕ ಯುಗದಲ್ಲಿ ತಿಂಗಳುಗಳೇ ಗತಿಸಿದರೂ ಯಾವೊಬ್ಬ ಅಪರಾಧಿಯನ್ನು ತಂದು ಕಟಕಟೆಯಲ್ಲಿ ನಿಲ್ಲಿಸದಿರುವುದು ಪೊಲೀಸರ ಕಾರ್ಯದಕ್ಷತೆಯ ಮೇಲೆ ಸಂಶಯ ವ್ಯಕ್ತವಾಗುತ್ತದೆ ಎಂದು ಪುರಸಭೆ ಮಾಜಿ ಸದಸ್ಯ ರಾಜಶೇಖರ ಕೂಚಬಾಳ ಆಕ್ರೋಶ ವ್ಯಕ್ತಪಡಿಸಿದರು.
ಸಿಂದಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ದಲಿತ ಸಂಘರ್ಷ ಸಮಿತಿ ವತಿಯಿಂದ ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ತಾಲೂಕಿನ ಬನ್ನೆಟ್ಟಿ ಗ್ರಾಮದಲ್ಲಿ ಮಹಾದೇವಪ್ಪ ಪೂಜಾರಿ ಎಂಬ ದಲಿತ ವ್ಯಕ್ತಿಯ ಕೊಲೆಯಾಗಿ ನಾಲ್ಕು ತಿಂಗಳಾಗುತ್ತಾ ಬಂದರೂ ಕೊಲೆಗಾರರನ್ನು ಬಂದಿಸದೇ ಇರುವುದು ಪೊಲೀಸ್ ಇಲಾಖೆಯ ವೈಫಲ್ಯತೆಯನ್ನು ಎತ್ತಿ ತೋರಿಸುತ್ತದೆ. ಇಲಾಖೆ ಈ ರೀತಿ ನಿರ್ಲಿಪ್ತತೆ ತೋರುತ್ತಿರುವುದು ಯಾವ ಕಾರಣಕ್ಕೆ? ಇಲ್ಲಿ ಕೊಲೆಗಾರನ ರಕ್ಷಣೆ ಮಾಡಲಾಗುತ್ತಿದೆಯೇ ಅಥವಾ ಯಾವುದೋ ಆಮಿಷಕ್ಕೊಳಗಾಗಿ ತನಿಖೆಯ ದಿಕ್ಕು ತಪ್ಪಿಸಲಾಗುತ್ತಿದಯೇ ಎಂಬುದು ಮೊದಲು ದೃಢವಾಗಬೇಕು. ತನಿಖೆಯಲ್ಲಿನ ಈ ಎಲ್ಲ ವೈಫಲ್ಯಗಳನ್ನು ಖಂಡಿಸಿ ಬರುವ ಸೆ.೧೯ರಂದು ಬನ್ನೆಟ್ಟಿ ಗ್ರಾಮದಿಂದ ಕಾಲ್ನಡಿಗೆಯ ಜಾಥಾ ಪ್ರಾರಂಭಿಸಿ ಬ್ಯಾಕೋಡ ಮತ್ತು ಸಿಂದಗಿ ಮಾರ್ಗ ಮಧ್ಯದ ಜಲಧಾರೆ ಕಾಮಗಾರಿಯ ಸ್ಥಳದಲ್ಲಿ ವಾಸ್ಥವ್ಯ ಹೂಡಲಾಗುವುದು. ಸೆ.೨೦ರಂದು ಸಿಂದಗಿ ನಗರಕ್ಕೆ ಆಗಮಿಸಿ ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಹಾಗೂ ಅನಿರ್ದಿಷ್ಠಾವಧಿ ಸತ್ಯಾಗ್ರಹ ನಡೆಸಲಾಗುವುದು. ಪ್ರತಿಭಟನೆ ಪ್ರಾರಂಭ ಮಾಡುವ ಪೂರ್ವದಲ್ಲಿಯೇ ಅಪರಾಧಿಯನ್ನು ಬಂದಿಸುವ ಕಾರ್ಯ ಇಲಾಖೆ ಮಾಡಬೇಕು. ಪೊಲೀಸ್ ವರಿಷ್ಠಾಧಿಕಾರಿಯವರೇ ಸ್ಥಳಕ್ಕೆ ಬಂದು ಅಪರಾಧಿಗಳನ್ನು ಬಂಧಿಸುವ ಭರವಸೆ ಕೊಡಬೇಕು ಎಂದರು.
ಈ ವೇಳೆ ದಸಂಸ ಸಮಿತಿಯ ಚಂದ್ರಕಾಂತ ಸಿಂಗೆ, ಶರಣು ಶಿಂಧೆ, ಶ್ರೀನಿವಾಸ ಓಲೇಕಾರ, ಪರಶುರಾಮ ದಿಂಡವಾರ ಮಾತನಾಡಿ, ಮೃತ ವ್ಯಕ್ತಿ ಗಂಗರೆಡ್ಡಿ ಎನ್ನುವವರ ಜಮೀನನ್ನು ಸಾಗುವಳಿ ಮಾಡುತ್ತಿದ್ದ. ಅವರ ಹೊಲದ ವಿಚಾರವಾಗಿ ಇಬ್ಬರ ನಡುವೆ ತಕರಾರುಗಳಿದ್ದವು. ಇದೇ ತಕರಾರು ಮಹಾದೇವಪ್ಪನ ಕೊಲೆಯಲ್ಲಿ ಅಂತ್ಯವಾಗಿರಬಹುದು ಎಂಬ ಬಲವಾದ ಶಂಕೆಯ ಮೇಲೆ ಪ್ರಕರಣ ದಾಖಲಿಸಿದ್ದರೂ ಇದುವರೆಗೂ ಯಾರನ್ನು ಬಂಧಿಸಲಾಗಿಲ್ಲ. ಮೃತ ವ್ಯಕ್ತಿಯ ಚಪ್ಪಲಿಗಳು ಅದೇ ಹೊಲದಲಿದ್ದು, ಮೂರು ದಿನದ ನಂತರ ಕೊಳೆತ ಸ್ಥಿತಿಯಲ್ಲಿ ಸಿಕ್ಕಾಗ ಗಂಗರೆಡ್ಡಿ ಕುಟುಂಬದವರ ಹೇಳಿಕೆಗಳು ದ್ವಂದ್ವ ರೀತಿಯಲ್ಲಿ ಸಂಶಯ ಮೂಡಿಸುವಂತಿದ್ದವು. ವೈದ್ಯಕೀಯ ವರದಿಯಲ್ಲಿಯೂ ಕೊಲೆ ಎಂದೇ ಸಾಬೀತಾಗಿದೆ. ಇವೆಲ್ಲವನ್ನೂ ಪೊಲೀಸ್ ಇಲಾಖೆಗೆ ಮನವರಿಕೆ ಮಾಡಿಕೊಟ್ಟರೂ ಕನಿಷ್ಠ ಯಾರೊಬ್ಬರನ್ನು ಸಂಶಯಾಸ್ಪದವಾಗಿ ಬಂಧಿಸಿ ತನಿಖೆಗೆ ಒಳಪಡಿಸದಿರುವುದು ಇಲಾಖೆಯ ವೈಫಲ್ಯತೆಯನ್ನು ಮತ್ತಷ್ಟು ಪ್ರಭಲಗೊಳಿಸುವುದಲ್ಲದೇ ಇಲಾಖೆಯ ನಡೆ ಸಂಶಯಕ್ಕೆ ಎಡೆ ಮಾಡಿಕೊಡುತ್ತಿದೆ. ಈ ಕೂಡಲೇ ಅಧಿಕಾರಿಗಳು ಅಪರಾಧಿಗಳನ್ನು ಬಂಧಿಸಿ ಮೃತರ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡುವ ಕಾರ್ಯವಾಗಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ರವಿ ತಳಕೇರಿ, ಮತ್ತು ಸುಲ್ಪಿ, ಡಿ.ಕೆ.ಬಗಲೂರ, ಗುರು ಬಿದರಿ, ಪ್ರಕಾಶ ಗುಡಿಮನಿ ಸೇರಿದಂತೆ ದಲಿತ ಸಮಾಜ ಬಾಂಧವರು ಹಾಗೂ ಬನ್ನೆಟ್ಟಿ ಗ್ರಾಮಸ್ಥರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಸಹಕಾರಿ

ಅಕ್ರಮ ಪಡಿತರ ಸಾಗಾಟ: ಆಹಾರ ಇಲಾಖೆ ದಾಳಿ

ರಾಷ್ಟ್ರೀಯ ಲೋಕ ಅದಾಲತ್:೩೭೭೬ ಪ್ರಕರಣಗಳು ಇತ್ಯರ್ಥ

ಇಂದು ಪಠ್ಯಪೂರಕ ಚಟುವಟಿಕೆಗಳ ಉದ್ಘಾಟನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಸಹಕಾರಿ
    In (ರಾಜ್ಯ ) ಜಿಲ್ಲೆ
  • ಅಕ್ರಮ ಪಡಿತರ ಸಾಗಾಟ: ಆಹಾರ ಇಲಾಖೆ ದಾಳಿ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಲೋಕ ಅದಾಲತ್:೩೭೭೬ ಪ್ರಕರಣಗಳು ಇತ್ಯರ್ಥ
    In (ರಾಜ್ಯ ) ಜಿಲ್ಲೆ
  • ಪೊಲೀಸ್ ವೈಫಲ್ಯ ಖಂಡಿಸಿ ಸೆ.೧೯ಕ್ಕೆ ಕಾಲ್ನಡಿಗೆ ಜಾಥಾ :ಕೂಚಬಾಳ
    In (ರಾಜ್ಯ ) ಜಿಲ್ಲೆ
  • ಇಂದು ಪಠ್ಯಪೂರಕ ಚಟುವಟಿಕೆಗಳ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಮಳೆಯಿಂದ ಮನೆಯೊಳಗೆ ನೀರು ನುಗ್ಗಿ ವಸ್ತುಗಳ ಹಾನಿ!
    In (ರಾಜ್ಯ ) ಜಿಲ್ಲೆ
  • ಸಂಗೀತ ಲೋಕದ ಮೇರು ಶಿಖರ ಪಂ.ಪುಟ್ಟರಾಜ ಗವಾಯಿಗಳು
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಗೆ ಮತ್ತೆ ಅಪಾರ ಪ್ರಮಾಣದ ನೀರು!
    In (ರಾಜ್ಯ ) ಜಿಲ್ಲೆ
  • ಸಿದ್ದಸಿರಿ ಸೌಹಾರ್ದ ಸಹಕಾರಿಯಿಂದ ರೂ.25 ಲಕ್ಷ ದೇಣಿಗೆ
    In (ರಾಜ್ಯ ) ಜಿಲ್ಲೆ
  • ಮುಂಗಾರು ಬೆಳೆಹಾನಿಪುನಃ ಪರಿಶೀಲಿಸಿದ ಎಸಿ ವಸ್ತ್ರದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.