ವಿಜಯಪುರ ಜಿಪಂ ಸಿಇಓ ರಿಷಿ ಆನಂದ ಕರೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಹಿನ್ನೆಲೆಯಲ್ಲಿ ಅವರಿಗೆ ಗೌರವ ಸಲ್ಲಿಸಲು ಪ್ರತಿ ವರ್ಷ ಅಕ್ಟೋಬರ್ ೨ಅನ್ನು ಸ್ವಚ್ಛ ಭಾರತ ದಿನವನ್ನಾಗಿ ಆಚರಿಸುತ್ತಿದ್ದು, ಸ್ವಚ್ಛತೆಗಾಗಿ ಸ್ವಯಂ ಪ್ರೇರಣೆ ಮತ್ತು ಸಾಮೂಹಿಕ ಶ್ರಮದಾನ ಚಟುವಟಿಕೆಗಳನ್ನು ಹಮ್ಮಿಕೊಂಡು ಸಮುದಾಯದಲ್ಲಿ ಸ್ವಚ್ಛತೆಯ ಆಶಯಗಳನ್ನು ಬಲಪಡಿಸಲು ೨೦೧೭ ರಿಂದ ಈ ಸ್ವಚ್ಛತೆಯೇ ಸೇವೆ (SಊS-೨೦೨೫) ಪಾಕ್ಷಿಕ ಆಂದೋಲನವನ್ನು ಆಚರಿಸಲಾಗುತ್ತಿದೆ. ಅದರಂತೆ ಈ ವರ್ಷ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಜನರಲ್ಲಿ ನೈರ್ಮಲ್ಯ ಶುಚಿತ್ವದ ಕುರಿತು ಜಾಗೃತಿ ಮೂಡಿಸುವ ಉದ್ದೇಶದೊಂದಿಗೆ ಸ್ವಚ್ಛತೆಯೇ ಸೇವೆ ಪಾಕ್ಷಿಕ ಅಭಿಯಾನವನ್ನು ೧೭ನೇ ಸೆಪ್ಟೆಂಬರ್ ೨೦೨೫ ರಿಂದ ೨ನೇ ಅಕ್ಟೋಬರ್ ೨೦೨೫ರವರೆಗೆ ಜಿಲ್ಲೆಯಾದ್ಯಂತ ಆಯೋಜಿಲಾಗಿದ್ದು, ಅಭಿಯಾನದ ಯಶಸ್ವಿಗೆ ಎಲ್ಲ ಇಲಾಖೆಗಳ ಅಧಿಕಾರಿ, ಸಿಬ್ಬಂದಿ, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಕ್ರಿಯಾಶೀಲತೆಯಿಂದ ಭಾಗವಹಿಸಿ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕಣಾಧಿಕಾರಿಯಾದ ರಿಷಿ ಆನಂದ ಅವರು ಕರೆ ನೀಡಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರಸ್ತುತ ಸ್ವಚ್ಛ ಭಾರತ ಅಭಿಯಾನವು ೧೧ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ ಈ ಯೋಜನೆಯ ಸಾಧನೆ ಗೌರವಿಸಲು ಈ ಅಭಿಯಾನದ ಅವಧಿಯಲ್ಲಿ ಸ್ವಚ್ಛತೆಗಾಗಿ ಬೃಹತ್ ಪ್ರಮಾಣದಲ್ಲಿ ಸಾರ್ವಜನಿಕರ ಸಹಭಾಗಿತ್ವ ಮತ್ತು ಸಮುದಾಯದ ಭಾಗವಹಿಸುವಿಕೆಯ ಮೂಲಕ ಅನೈರ್ಮಲ್ಯ ಮತ್ತು ಸಮಸ್ಯಾತ್ಮಕ ಕಸದ ತಾಣಗಳನ್ನು (ಅಖಿU) ತೆರವುಗೊಳಿಸುವತ್ತ ಗಮನಹರಿಸುವ ಬೃಹತ್ ಸ್ವಚ್ಛತಾ ಅಭಿಯಾನಗಳು, ನೈರ್ಮಲ್ಯ ಕಾರ್ಮಿಕರ ಕೊಡುಗೆಯನ್ನು ಗುರುತಿಸುವುದು ಹಾಗೂ ಕಳೆದ ದಶಕದ ಸಾಧನೆಗಳ ಆಚರಣೆ ಮತ್ತು ಸಂಪೂರ್ಣ ಸ್ವಚ್ಛತೆಗೆ ನಮ್ಮ ಬದ್ಧತೆಯನ್ನು ತೊರಿಸುವ ಕಾರ್ಯವನ್ನು ಈ ಅಭಿಯಾನದಲ್ಲಿ ಮಾಡಲಾಗುತ್ತಿದೆ.
ಜೊತೆಗೆ ಈ ಅಭಿಯಾನದ ಭಾಗವಾಗಿ ಜನರ ಭಾಗವಹಿಸುವಿಕೆಯೊಂದಿಗೆ ನೈರ್ಮಲ್ಯಕ್ಕೆ ಪ್ರಾಶಸ್ತ್ಯ ನೀಡುವ ಮೂಲಕ ಎಲ್ಲಾ ನಾಗರೀಕರು ಗ್ರಾಮೀಣ ಪ್ರದೇಶದಲ್ಲಿ ಸಂಪೂರ್ಣ ನೈರ್ಮಲ್ಯ ಸಾಧಿಸಲು ಕೆಲ ಚಟುವಟಿಕೆಗಳನ್ನು ಆಯೋಜನೆ ಮಾಡಲಾಗುತ್ತಿದೆ.
೨೫ನೇ ಸೆಪ್ಟೆಂಬರ್ರಂದು ಸಾಮೂಹಿಕ ಶ್ರಮದಾನವನ್ನು ಏಕಕಾಲದಲ್ಲಿ ಹಮ್ಮಿಕೊಳ್ಳುವುದು. ಸ್ವಚ್ಛತೆಗಾಗಿ ನಾಗರಿಕರು ಕೈಜೋಡಿಸಲು ಇದು ಒಂದು ಸಹಕಾರಿಯಾಗಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸ್ವಚ್ಛತಾ ಅಭಿಯಾನದಲ್ಲಿ ನಾಗರಿಕರ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಲು ಸ್ಥಳೀಯ ಸಂಸ್ಥೆಗಳು, ಜಪ್ರತಿನಿಧಿಗಳನ್ನು, ಸೆಲೆಬ್ರಿಟಿಗಳು ಮತ್ತು ಆಧ್ಯಾತ್ಮಿಕ ನಾಯಕರನ್ನು ಈ ಅಭಿಯಾನದಲ್ಲಿ ತೊಡಗಿಸಿಕೊಳ್ಳುವುದು ಹಾಗೂ ಖಾಸಗಿ ವಲಯ, ಎನ್.ಜಿ.ಓಗಳು ಮತ್ತು ಇತರ ಪಾಲುದಾರರ ಸಹಭಾಗಿತ್ವವನ್ನು ಉತ್ತೇಜಿಸುವುದು.
ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜಿಸಿ ಸ್ವಚ್ಛತೆಯೇ ಸೇವೆ -೨೦೨೫ರ ಅಭಿಯಾನವನ್ನು ಯಶಸ್ವಿಗೊಳಿಸಲು ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದ್ದು, ಪ್ರಯುಕ್ತ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಅಭಿಯಾನದಲ್ಲಿ ಭಾಗವಹಿಸುವಂತೆ ಸಿಇಓ ರಿಷಿ ಆನಂದ್ ತಿಳಿಸಿದ್ದಾರೆ.

