Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬ್ಯಾಂಕ್ ಲೂಟಿಕೋರರ ಪತ್ತೆಗೆ ೮ ತನಿಖಾ ತಂಡಗಳ ರಚನೆ
(ರಾಜ್ಯ ) ಜಿಲ್ಲೆ

ಬ್ಯಾಂಕ್ ಲೂಟಿಕೋರರ ಪತ್ತೆಗೆ ೮ ತನಿಖಾ ತಂಡಗಳ ರಚನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಡಚಣ ಪಟ್ಟಣದಲ್ಲಿ ನಡೆದ ಎಸ್‌ಬಿಐ ಬ್ಯಾಂಕ್ ದರೋಡೆ | ರೂ.೨೧ ಕೋಟಿ ಮೌಲ್ಯದ ೨೦ ಕೆ.ಜಿ ಚಿನ್ನಾಭರಣ, ರೂ.೧.೫ ಕೋಟಿ ನಗದು ದೋಚಿದ ಬಂದೂಕು ಧಾರಿ ಗ್ಯಾಂಗ್ | ಎಸ್ಪಿ ಲಕ್ಷಣ ನಿಂಬರಗಿ ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ಚಡಚಣ: ಮಹಾರಾಷ್ಟ್ರದ ರಾಜ್ಯಕ್ಕೆ ಹೊಂದಿಕೊಂಡಿರುವ ಕರ್ನಾಟಕ ರಾಜ್ಯದ ಕೊನೆಯ ಪಟ್ಟಣ ಮತ್ತು ಭೀಮಾತೀರ ಎಂದು ಕುಖ್ಯಾತಿ ಪಡೆದಿರುವ ಚಡಚಣ ತಾಲೂಕಿನಲ್ಲಿ ರಾಜ್ಯಾದ್ಯಂತ ಬೆಚ್ಚಿ ಬೀಳಿಸುತ್ತಿರುವ ಬ್ಯಾಂಕ್ ದರೋಡೆ ಪ್ರಕರಣಗಳ ಸಾಲಿಗೆ ಇದೀಗ ಚಡಚಣ ಪಟ್ಟಣದ ಎಸ್.ಬಿ.ಐ. ಶಾಖೆ ಕೂಡ ಸೇರ್ಪಡೆಯಾಗಿದೆ.
ವಿಜಯಪುರ ಜಿಲ್ಲೆಯ ಮನಗೂಳಿಯ ಬ್ಯಾಂಕ್ ಲೂಟಿ ಮಾಸುವ ಮುನ್ನವೆ ಸಿನಿಮಿಯ ಮಾದರಿಯಲ್ಲಿ ಮಂಗಳವಾರ ಸಂಜೆ ೬.೩೦ರಿಂದ ೭.೩೦ರ ನಡುವೆ ಭೀಮಾತೀರದ ಚಡಚಣ ಪಟ್ಟಣದ ಎಸ್‌ಬಿಐ ಬ್ಯಾಂಕ್‌ನಲ್ಲಿ ನಡೆದ ಧಿಡೀರ್ ದರೋಡೆ ಪ್ರಕರಣ ರಾಜ್ಯವನ್ನೇ ಬೆಚ್ಚಿಬೀಳಿಸಿದೆ.


ಈ ಕುರಿತು ಬುದವಾರ ಎಸ್.ಪಿ ಲಕ್ಷಣ ನಿಂಬರಗಿ ಪತ್ರಿಕಾಗೋಷ್ಟೀಯಲ್ಲಿ ಮಾತನಾಡಿ, ಮಂಗಳವಾರ ಚಡಚಣ ಪಟ್ಟಣದ ಎಸ್.ಬಿ.ಐ.ಬ್ಯಾಂಕ್‌ನಲ್ಲಿ ಸಂಜೆ ೬.೩೦ ರಿಂದ ೭.೩೦ ರ ಸಮಯಕ್ಕೆ ಬ್ಯಾಂಕ್‌ಗೆ ಪ್ರವೇಶಿಸಿದ್ದ ೫ ಮಂದಿ ಮುಸುಕುಧಾರಿ ದರೋಡೆಕೋರರು, ಸಿಬ್ಬಂದಿ ಹಾಗೂ ಎಟಿಎಂ ಸೆಕ್ಯುರಿಟಿ ಗಾರ್ಡ್ ರನ್ನು ಪಿಸ್ತೂಲ್ ತೋರಿಸಿ ಬೆದರಿಸಿ, ಕೈ-ಕಾಲು ಕಟ್ಟಿ ಒಂದು ಕೊಠಡಿಯಲ್ಲಿ ಕೂಡಿಹಾಕಿ, ಸುಮಾರು ೨೦ ಕೆ.ಜಿ ಚಿನ್ನಾಭರಣ (೨೧ ಕೋಟಿ ಮೌಲ್ಯ) ಹಾಗೂ ರೂ.೧.೫ ಕೋಟಿ ನಗದು ಹಣ ದೋಚಿಕೊಂಡು ಪರಾರಿಯಾಗಿದ್ದಾರೆ ಎಂದು ಹೇಳಿದರು.
ಎಷ್ಟು ಲೂಟಿ ಮಾಡಿದ್ದಾರೆ ಎನ್ನುವುದು ಪೋಲಿಸ್ ತನಿಖೆಯಿಂದ ಗೊತ್ತಾಗುತ್ತದೆ. ಬ್ಯಾಂಕ ಸಿಬ್ಬಂಧಿ ನಿರ್ಧಿಷ್ಠ ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ಹೇಳಿದರು.
ಕಳೆದ ೩ ತಿಂಗಳಿಂದ ಬ್ಯಾಂಕ್‌ನಲ್ಲಿ ಶಾಶ್ವತ ಸೆಕ್ಯುರಿಟಿ ಗಾರ್ಡ್ ಇರಲಿಲ್ಲ. ದರೋಡೆಕೋರರು ಈ ಮೊದಲು ಮುಖಕ್ಕೆ ಮಾಸ್ಕ ಹಾಕಿಕೊಂಡು ಅನೇಕ ಬಾರಿ ಬ್ಯಾಂಕ್ ಸಿಬ್ಬಂದಿಯ ಚಲನ ವಲನ ನೋಡಿಕೊಂಡು ಹೋಗಿದ್ದಾರೆ ಎನ್ನಲಾಗಿದೆ, ಬ್ಯಾಂಕಿಗೆ ದರೋಡೆ ವೇಳೆ ಗುಂಡು ಹಾರಿಸಿದ ಶಂಕೆ ವ್ಯಕ್ತವಾಗಿದ್ದು, ಬ್ಯಾಂಕ್ ಒಳಗೆ ಬುಲೆಟ್ ಕ್ಯಾಪ್ ಪತ್ತೆಯಾಗಿದೆ. ಆದರೆ ಗುಂಡಿನಿಂದ ಯಾವುದೆ ಪ್ರಾಣಪಾಯವಾಗಿಲ್ಲ ಎಂದರು.
ಸ್ಥಳೀಯ ಗ್ರಾಹಕ ಶ್ರೀಶೈಲ್ ಎಂಬಾತನು ಎಟಿಎಮ್ ನಲ್ಲಿ ಹಣ ಬಾರದ್ದಕ್ಕೆ ಸಿಬ್ಬಂದಿ ಜೊತೆ ಮಾತಾಡುವ ಸಮಯದಲ್ಲಿ ದರೋಡೆಕೋರರು ಬಂದು ಆತನ ಮೊಬೈಲ್ ಕಸಿದುಕೊಳ್ಳಲ್ಪಟ್ಟಿದ್ದರೂ ಬಳಿಕ ಮರಳಿ ನೀಡಲಾಗಿದೆ ಎಂದರು.
ದರೋಡೆಕೋರರು ಬಳಸಿದ ಇಕೋ ವಾಹನ ಮಹಾರಾಷ್ಟ್ರದ ಹುಲಜಂತಿ ಗ್ರಾಮದಲ್ಲಿ ಪತ್ತೆಯಾಗಿದೆ. ಅದರಲ್ಲಿ ಸ್ವಲ್ಪ ನಗದು ಹಾಗೂ ಚಿನ್ನಾಭರಣ ಪ್ಯಾಕೆಟ್‌ಗಳು ದೊರೆತಿವೆ ಎಂದರು.
ಘಟನೆ ಕುರಿತು ೮ ತನಿಖಾ ತಂಡಗಳನ್ನು ರಚಿಸಲಾಗಿದೆ ಮತ್ತು ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು. ಮಹಾರಾಷ್ಟ್ರ ಹಾಗೂ ಕರ್ನಾಟಕದ ವಿವಿಧ ಭಾಗಗಳಲ್ಲಿ ಪೊಲೀಸರು ಜಾಲ ಬೀಸಿದ್ದು ಶೀಘ್ರದಲ್ಲೇ ಆರೋಪಿಗಳ ಪತ್ತೆ ಮಾಡಲಾಗುವುದು, ಸಾರ್ವಜನಿಕರು ಗಾಬರಿಯಾಗಬಾರದು ಎಂದು ವಿಜಯಪುರ ಎಸ್‌ಪಿ ಲಕ್ಷಣ ನಿಂಬರಗಿ ಪತ್ರಿಕಾಗೋಷ್ಟಿಯಲ್ಲಿ ಭರವಸೆ ನೀಡಿದರು.
ಸದ್ಯ ತನಿಖೆ ಮುಂದುವರಿದಿದ್ದು, ಕಳ್ಳತನವಾದ ನಗದು ಎಷ್ಟು? ಕೃತ್ಯ ಹೇಗಾಯಿತು? ಎಂಬಿತ್ಯಾದಿ ವಿವರ ತನಿಖೆ ಬಳಿಕವೇ ಗೊತ್ತಾಗಲಿದೆ. ಮಾಧ್ಯಮದವರು ಅನಾವಶ್ಯಕ ಬಿಂಬಿಸಿ ವರದಿ ಅಥವಾ ವಿಡಿಯೋ ಹರಿಬಿಡಬಾರದು ಎಂದರು.

ಎಸ್.ಬಿ.ಐ ಗ್ರಾಹಕರ ಪರದಾಟ

ಘಟನೆಯ ಬಳಿಕ ಬ್ಯಾಂಕ್ ಮುಂದೇನು ನಡೆಯುತ್ತದೆ ಎಂಬುದರ ಬಗ್ಗೆ ಆತಂಕಗೊಂಡ ಗ್ರಾಹಕರು, ಠೇವಣಿದಾರರು, ಚಿನ್ನಾಭರಣ ಒತ್ತೆಯಿಟ್ಟು ಹಣಪಡೆದವರು ಹಾಗೂ ಲಾಕರ್ ಹೊಂದಿದವರು ನೂರಾರು ಸಂಖ್ಯೆಯಲ್ಲಿ ಜಮಾಯಿಸಿ, ತಮ್ಮ ಚಿನ್ನಾಭರಣ ಸುರಕ್ಷಿತವಿದೆಯೇ ಎಂದು ವಿಚಾರಿಸುತ್ತಿದ್ದರು. ಆದರೆ ಪೋಲೀಸರ ಬಿಗಿ ಬಂದೋಬಸ್ತದಿಂದಾಗಿ ಬ್ಯಾಂಕ್ ಅಧಿಕಾರಿಗಳನ್ನು ಭೇಟಿಮಾಡಲು ಸಾಧ್ಯವಾಗಲಿಲ್ಲ. ಅಧಿಕಾರಿಗಳು ಮಾಧ್ಯಮಗಳಿಗೆ ಯಾವುದೇ ಮಾಹಿತಿ ನೀಡದೆ ಮೌನ ವಹಿಸಿದರು. ಇದರಿಂದ ಗ್ರಾಹಕರಲ್ಲಿ ಅಸಮಾಧಾನ ವ್ಯಕ್ತವಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.