Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನೋಬೆಲ್ ಪ್ರಶಸ್ತಿಗೆ ಅರ್ಹರಾಗಿದ್ದ ಪುಟ್ಟರಾಜರು :ಪ್ರೊ.ಅನ್ನದಾನಿ
(ರಾಜ್ಯ ) ಜಿಲ್ಲೆ

ನೋಬೆಲ್ ಪ್ರಶಸ್ತಿಗೆ ಅರ್ಹರಾಗಿದ್ದ ಪುಟ್ಟರಾಜರು :ಪ್ರೊ.ಅನ್ನದಾನಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಲಾವಿಕಾಸ ಪರಿಷತ್ ನಿಂದ ಪುಟ್ಟರಾಜರ ೧೫ ನೆಯ ಪುಣ್ಯಸ್ಮರಣೆ ಆಚರಣೆ

ಉದಯರಶ್ಮಿ ದಿನಪತ್ರಿಕೆ

ಗದಗ: ಕುರುಡರಾಗಿದ್ದರೂ ಕೂಡ ಅಂಧ, ಅನಾಥ ಮಕ್ಕಳಿಗೆ ತಂದೆಯಾಗಿ, ಪೋಷಕರಾಗಿ, ಸಂಗೀತದ ಗುರುವಾಗಿ, ಪುರಾಣ ಪ್ರವಚನಕ್ಕೆ ಪ್ರೇರಕರಾಗಿ ಶತಮಾನದ ಹತ್ತಿರದ ಇಡೀ ಬದುಕನ್ನು ದಿಕ್ಕಿಲ್ಲದ ಮಕ್ಕಳಿಗೆ ಬದುಕುವ ವಿದ್ಯೆ ನೀಡಿದ ಪಂಡಿತ ಪುಟ್ಟರಾಜ ಗವಾಯಿಗಳು ನೋಬೆಲ್ ಪ್ರಶಸ್ತಿಗೆ ಅರ್ಹರಾಗಿದ್ದರು. ಅವರ ಸಾಹಿತ್ಯ ಕಣ್ಣಿದ್ದವರನ್ನೂ ಬೆರಗುಗೊಳಿಸಿತ್ತು ಎಂದು ಅನ್ನದಾನಿ ಹಿರೇಮಠ ಅವರು ಹೇಳಿದರು. ಅವರು, ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ, ಉತ್ತರ ಕನಾರ್ಟಟಕ ಕಲಾವಿದರ ಹಾಗೂ ಕಲಾ ಪೋಷಕರ ಸಂಘಟನೆಯಾದ ಗದುಗಿನ ಕಲಾವಿಕಾಸ ಪರಿಷತ್ತಿನವರು ಏರ್ಪಡಿಸಿದ ಪಂಡಿತ ಪುಟ್ಟರಾಜ ಗವಾಯಿಗಳ ೧೫ ನೆ ಪುಣ್ಯ ಸ್ಮರಣೆಯನ್ನು ಸಸಿಗೆ ನೀರು ಎರೆಯುವ ಮೂಲಕ ಉದ್ಘಾಟಿಸಿ ಹೇಳಿದರು.
ಮುಖ್ಯ ಅತಿಥಿಯಾಗಿ ಭಾವಹಿಸಿದ್ದ ವಿಭೂತಿ ಪತ್ರಿಕೆ ಸಂಪಾದಕ ಹಿರಿಯ ಸಾಹಿತಿ ಅಂದಾನೆಪ್ಪ ವಿಭೂತಿ ಅವರು, ಪುಟ್ಟರಾಜ ಗವಾಯಿಗಳು ಲಿಂಗೈಕ್ಯರಾದ ಸಂದರ್ಭದಲ್ಲಿ ಗದಗ ಬೆಟಗೇರಿ ಜನರು ಜಾತ್ಯಾತೀತ ವಾಗಿ ಭಕ್ತಿಯಿಂದ ಪ್ರೀತಿಯಿಂದ ಅಭಿಮಾನದಿಂದ ಅಂತಿಮ ನಮನದಲ್ಲಿ ಸೇವೆ ಸಲ್ಲಿಸಿದ್ದನ್ನು ಸ್ಮರಿಸಿಕೊಂಡರು.
ಭಾರತೀಯ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ಪ್ರೊ. ಎಸ್ .ವಾಯ್. ಚಿಕ್ಕಟ್ಟಿ ಅವರು, ಸಮಾರಂಭದ ಅಧ್ಯಕ್ಷತೆವಹಿಸಿ, ಪುಟ್ಟರಾಜ ಗವಾಯಿಗಳೊಂದಿಗಿನ ಒಡನಾಟವನ್ನು ನೆನಪಿಸಿಕೊಳ್ಳುವುದರಂದಿಗೆ ಕಲಾ ವಿಕಾಸ ಪರಿಷತ್ ಸಿ. ಕೆ. ಹೆಚ್. ಶಾಸ್ತ್ರೀಯವರು ೧೫ ವರ್ಷಗಳಿಂದ ಪೂಜ್ಯರ ಪುಣ್ಯಸ್ಮರಣೆಯನ್ನು ನಮ್ಮ ಸಂಸ್ಥೆಯಲ್ಲಿ ಆಯೋಜಿಸುತ್ತಿರುವುದು ನಮ್ಮ ಸಂಸ್ಥೆಯ ಭಾಗ್ಯವಿಶೇಷವೆಂದು ಹೇಳಿದರು.
ಪ್ರಾರಂಭದಲ್ಲಿ ಚಿಕ್ಕಟ್ಟಿ ಸಿಬಿಎಸ್ ಶಾಲೆಯ ವಿದ್ಯಾರ್ಥಿಗಳಿಂದ ಪ್ರಾರ್ಥನೆ ನಡೆಯಿತು. ಡಾ. ಪಂಡಿತ ಪುಟ್ಟರಾಜ ಸೇವಾ ಸಮಿತಿಯ ಅಧ್ಯಕ್ಷ ವೇ. ಫಕ್ಕೀರೇಶ್ವರ ಶಾಸ್ತ್ರೀಗಳು ಹಿರೇಮಠ ಇವರು, ಸರ್ವರನ್ನು ಸ್ವಾಗತಿಸಿದರು. ಕಲಾವಿಕಾಸ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷರಾದ ಪಂ. ಸಿ.ಕೆ.ಎಚ್. ಶಾಸ್ತ್ರಿಗಳು (ಕಡಣಿ) ಪ್ರಾಸ್ತಾವಿಕವಾಗಿ ಮಾತನಾಡಿ, ಕಲಾವಿಕಾಸ ಪರಿಷತ್ತು ನಡೆದು ಬಂದ ದಾರಿಯನ್ನು ಸ್ಮರಿಸಿ ಪುಟ್ಟರಾಜ ಗವಾಯಿಗಳ ಸಂಗೀತ ಬದುಕಿನ ಹಲವಾರು ಸಾಧನೆಗಳನ್ನು ಮೆಲುಕು ಹಾಕಿದರು.
ವೇದ ಮಂತ್ರಗಳ ಪಠಣೆಯಂದಿಗೆ ಪೂಜ್ಯ ಗುರು ಪುಟ್ಟರಾಜರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಲಾಯಿತು. ಶಿಕ್ಷಕ ಸಾಹಿತಿ ಶ್ರೀಶೈಲ ಬಡಿಗೇರ ಇವರು ಪುಟ್ಟರಾಜ ಗುರುಗಳ ಕುರಿತು ಸ್ವರಚಿತ ಕವನಗಳ ವಾಚನ ಮಾಡಿದರು.
ಇದೇ ಸಂದರ್ಭದಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ನೇಮಕವಾದ ಜೆ.ಪಿ.ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರಾದ, ಡಾ. ಬಿ. ಬಿ. ಹೊಳಗುಂದಿ ಅವರನ್ನು ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಯ ಪರವಾಗಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ಸಿಬ್ಬಂದಿಯಿಂದ ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಬಿ.ಬಿ.ಎ. ಕಾಲೇಜಿನ ಪ್ರಾಚಾರ್ಯ ಬಿಪಿನ್ ಚಿಕ್ಕಟ್ಟಿ, ಪ್ರಾ. ಶೋಭಾ ಸ್ಥಾವರಮಠ, ಪ್ರಾ. ರಿಯಾನಾ ಮುಲ್ಲಾ, ವೇದಿಕೆಯಲ್ಲಿ ಇದ್ದರು.
ಶಿಕ್ಷಕಿ ರಜನಿ ಕುರಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಗಣೇಶ ಬಡ್ನಿ ವಂದಾರ್ಪಣೆ ಮಾಡಿದರು. ಸಿ. ಕೆ.ಹೆಚ್. ಶಾಸ್ತ್ರೀಯವರು ರಚಿಸಿದ ಪುಟ್ಟರಾಜ ಗುರುಗಳ ಗೀತೆಗಳಿಗೆ ಚಿತ್ರಿಕರಿಸಿದ ವಿಡಿಯೊ ಪ್ರದರ್ಶನಮಾಡುವುದರೊಂದಿಗೆ ಪುಣ್ಯಸ್ಮರಣೆಗೆ ಮಂಗಳ ಹಾಡಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.