Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಭಯುತ್ಪಾದನೆ ವಿರುದ್ಧ ಭಾರತ-ರಷ್ಯಾ ಒಟ್ಟಾಗಿ ಹೋರಾಟ

ಸೈಬರ್ ಅಪರಾಧ ಪ್ರಕರಣಗಳಲ್ಲಿ ಮಹಿಳೆಯರೇ ಹೆಚ್ಚು ಬಲಿ

ಫಲಿತಾಂಶ ಆಧಾರಿತ ಶಿಕ್ಷಣ ಅಗತ್ಯ :ಡಾ.ಬಿ.ವೈ.ಖಾಸ್ನಿಸ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಾಸಕ ಯತ್ನಾಳ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಶಾಸಕ ಯತ್ನಾಳ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರ ಬ್ಲಾಕ್ ಕಾಂಗ್ರೆಸ್ ಪ.ಜಾ. ಘಟಕ ಹಾಗೂ ಜಲನಗರ ಬ್ಲಾಕ್ ಕಾಂಗ್ರೆಸ್ ಘಟಕದ ವತಿಯಿಂದ ಕೊಪ್ಪಳದಲ್ಲಿ ವಿಜಯಪುರ ನಗರ ಶಾಸಕ ಬಸನಗೌಡ ಆರ್. ಪಾಟೀಲ (ಯತ್ನಾಳ) ರವರು ದಲಿತ ಮಹಿಳೆ ಕುರಿತು ನೀಡಿದ ಹೇಳಿಕೆಯನ್ನು ಖಂಡಿಸಿ ಗುರುವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಪ.ಜಾ. ಘಟಕದ ಅಧ್ಯಕ್ಷ ರಮೇಶ ಗುಬ್ಬೇವಾಡ ಅವರು, ಮುಸ್ಲಿಂ ಹೆಣ್ಣುಮಕ್ಕಳು ಅಷ್ಟೇ ಅಲ್ಲ, ದಲಿತ ಹೆಣ್ಣುಮಕ್ಕಳು ಕೂಡ ಚಾಮುಂಡೇಶ್ವರಿಗೆ ಹೂವನ್ನು ಮುಡಿಸಲು ಯೋಗ್ಯರಲ್ಲ ಎನ್ನುವುದರ ಮುಖಾಂತರ ಸಾಸಕ ಯತ್ನಾಳ ದಲಿತ ಮಹಿಳೆಯನ್ನು ಅವಮಾನಿಸಿದ್ದಾರೆ. ಅಲ್ಲದೆ ಹಲವಾರು ಕಾರ್ಯಕ್ರಮಗಳಲ್ಲಿ ಅವರು ಮಾತನಾಡುವಾಗ ಹಿಂದುಗಳು ನಾವೆಲ್ಲರೂ ಒಂದು, ದಲಿತರು ಮತ್ತು ಹಿಂದುಳಿದವರು ಎಲ್ಲ ಜಾತಿ ಸಮುದಾಯದವರನ್ನು ಒಂದು ಎಂದು ಹೇಳುವ ತಾವು ದಲಿತರನ್ನು ಅವಮಾನಿಸಿ ಮಾತನಾಡಿರುವದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದರು.
ಮಹಾನಗರ ಪಾಲಿಕೆ ಸದಸ್ಯರಾದ ಆರತಿ ಶಹಾಪೂರ ಮಾತನಾಡಿ, ಎಲ್ಲ ಹೆಣ್ಣುಮಕ್ಕಳಿಗೆ ಸಮಾನವಾದ ಹಕ್ಕನ್ನು ನೀಡಿರುವ ಬಾಬಾಸಾಹೇಬ ಅಂಬೇಡ್ಕರ ಅವರ ಸಂವಿಧಾನವನ್ನು ದಿಕ್ಕರಿಸಿ ಯತ್ನಾಳರು ಮಾತನಾಡಿದ್ದಾರೆ. ಅವರ ಮಾತುಗಳು ಹೆಣ್ಣು ಕುಲಕ್ಕೆ ಮಾಡಿರುವ ಅವಮಾನ ಎಂದು ಹೇಳಿದರು.
ನಗರ ಬ್ಲಾಕ್ ಕಾಂಗ್ರೆಸ್ ಪ.ಜಾ. ಘಟಕದ ಅಧ್ಯಕ್ಷ ಪರಶುರಾಮ ಹೊಸಮನಿ ಮಾತನಾಡಿ, ನಗರ ಶಾಸಕ ಬಸನಗೌಡ ಆರ್. ಪಾಟೀಲ (ಯತ್ನಾಳ) ಅವರು ಮೈಸೂರು ದಸರಾ ಉತ್ಸವದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಗೆ ಸನಾತನ ಧರ್ಮದವರು ಮಾತ್ರ ಹೂ ಮುಡಿಸಬೇಕು ಮತ್ತು ಪೂಜೆ ಸಲ್ಲಿಸಬೇಕು ಅಂತಾ ದಲಿತ ವಿರೋಧಿ ಹೇಳಿಕೆ ನೀಡಿ ದಲಿತ ಮಹಿಳೆಯರಿಗೆ ಅವಮಾನಿಸಿದ್ದಾರೆ. ಇವರು ಜಾತಿ ವಿರೋಧಿ ಚಟುವಟಿಕೆ ಮತ್ತು ಜಾತಿ ಜಾತಿಗಳ ನಡುವೆ ಕೋಮು ಗಲಬೆಗೆ ಕುಮ್ಮಕ್ಕು ನೀಡುತ್ತಿದ್ದು, ಇವರ ಮೇಲೆ ಸರಕಾರವು ಸೂಕ್ತ ಕಾನೂನು ಕ್ರಮ ಕೈಕೊಳ್ಳಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜಲನಗರ ಬ್ಲಾಕ್ ಪ.ಜಾ. ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣ ಛಲವಾದಿ, ಭಾರತಿ ಹೊಸಮನಿ, ತಿಪ್ಪಣ್ಣ (ವಕೀಲರು) ಮುಂತಾದವರು ಮಾತನಾಡಿದರು.
ಪ್ರತಿಭಟನೆಯಲ್ಲಿ ಡಿ.ಸಿ.ಸಿ. ಉಪಾಧ್ಯಕ್ಷ ಡಾ.ಗಂಗಾಧರ ಸಂಬಣ್ಣಿ, ಡಿ.ಸಿ.ಸಿ. ಪ್ರಧಾನ ಕಾರ್ಯದರ್ಶಿಗಳಾದ ವಸಂತ ಹೊನಮೊಡೆ, ಚನಬಸಪ್ಪ ನಂದರಗಿ, ಹಾಜಿಲಾಲ ದಳವಾಯಿ, ಸತೀಶ ಅಡವಿ, ಸರ್ಫರಾಜ ಮಿರ್ದೆ, ಯುವರಾಜ ಬಜಂತ್ರಿ, ಕೃಷ್ಣಾ ಲಮಾಣಿ, ಫಯಾಜ ಕಲಾದಗಿ, ಅಕ್ರಂ ಮಶಾಳಕರ, ಅಪ್ಪು ಪೂಜಾರಿ, ವಿರೇಶ ಕಲಾಲ, ಸಂತೋಷ ಶಹಾಪುರ, ಅಶ್ಫಾಕ ಮನಗೂಳಿ, ಮಹಾದೇವ ರಾವಜಿ, ಮಹಾದೇವ ಚಲವಾದಿ, ಶಬ್ಬೀರ ಪಾಟೀಲ, ತಾಜೋದ್ದೀನ ಖಲೀಫಾ, ಬಾಬು ಯಾಳವಾರ, ಅರುಣ ಬಜಂತ್ರಿ, ಕಲ್ಲಪ್ಪ ಕಲಶೆಟ್ಟಿ, ಗೌಸ ಮುಜಾವರ, ಮಹಾದೇವ ಲಿಂಗದಳ್ಳಿ, ಮಲ್ಲಿಕಾರ್ಜುನ ಸಿಂಗೆ, ಲಾಲಸಾಬ ಕೊರಬು, ಹಮೀದಾ ಪಟೇಲ, ಅಮಿನ ಸತ್ತಿಕರ, ದಸ್ತಗೀರ ಶಾನವಾಲೆ, ರಮೇಶ ಮುದಕಣ್ಣವರ, ಇಜಾಜ ಮುಕಬಿಲ್, ಸಂಜೀವ ಶಿವಪೂಜಿ, ಶಿವಕುಮಾರ ಪಿ. ವಗ್ಯಾನವರ, ಸಾಗರ ಎಂ. ಹದಗಲ್, ಸತೀಶ ಪಾಟೀಲ, ಸಂಜು ಗುನ್ನಾಪೂರ, ಸದು ಸಿದ್ದಾರ್ಥ, ರಾಜು ಭೂತನಾಳ, ರಾಕೇಶ ಗುನ್ನಾಪೂರ ಮುಂತಾದವರು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಭಯುತ್ಪಾದನೆ ವಿರುದ್ಧ ಭಾರತ-ರಷ್ಯಾ ಒಟ್ಟಾಗಿ ಹೋರಾಟ

ಸೈಬರ್ ಅಪರಾಧ ಪ್ರಕರಣಗಳಲ್ಲಿ ಮಹಿಳೆಯರೇ ಹೆಚ್ಚು ಬಲಿ

ಫಲಿತಾಂಶ ಆಧಾರಿತ ಶಿಕ್ಷಣ ಅಗತ್ಯ :ಡಾ.ಬಿ.ವೈ.ಖಾಸ್ನಿಸ್

ಡಿ.೬ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಭಯುತ್ಪಾದನೆ ವಿರುದ್ಧ ಭಾರತ-ರಷ್ಯಾ ಒಟ್ಟಾಗಿ ಹೋರಾಟ
    In (ರಾಜ್ಯ ) ಜಿಲ್ಲೆ
  • ಸೈಬರ್ ಅಪರಾಧ ಪ್ರಕರಣಗಳಲ್ಲಿ ಮಹಿಳೆಯರೇ ಹೆಚ್ಚು ಬಲಿ
    In (ರಾಜ್ಯ ) ಜಿಲ್ಲೆ
  • ಫಲಿತಾಂಶ ಆಧಾರಿತ ಶಿಕ್ಷಣ ಅಗತ್ಯ :ಡಾ.ಬಿ.ವೈ.ಖಾಸ್ನಿಸ್
    In (ರಾಜ್ಯ ) ಜಿಲ್ಲೆ
  • ಡಿ.೬ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ರಾಣಿ ಚೆನ್ನಮ್ಮ ವಿವಿ: ಎಂಸಿಎ ಕೋರ್ಸಿಗೆ ಪ್ರವೇಶಾತಿ
    In (ರಾಜ್ಯ ) ಜಿಲ್ಲೆ
  • ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ಶಿಷ್ಯವೇತನ ಕ್ಕಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಡಿ.೭ ರಂದು ಸಾರ್ವಜನಿಕ ರಸ್ತೆ ಸಂಚಾರ ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಭೈರವಾಡಗಿ ಪಿಕೆಪಿಎಸ್ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ: ರೈತರಲ್ಲಿ ಆತಂಕ ತಂದ ಅಕಾಲಿಕ ಮಳೆ
    In (ರಾಜ್ಯ ) ಜಿಲ್ಲೆ
  • ಗೋವಿನ ಜೋಳ & ತೊಗರಿ ಖರೀದಿ ಕೇಂದ್ರ ತೆರೆಯಲು ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.