ವಿಜಯಪುರ: ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ಅವರ ನೇತೃತ್ವದ ಕೇಂದ್ರ ಬರ ಅಧ್ಯಯನ ತಂಡ ಅಕ್ಟೋಬರ್ ೬ ರಂದು ವಿಜಯಪುರ ಜಿಲ್ಲೆಗೆ ಆಗಮಿಸಿ ಬಬಲೇಶ್ವರ ಹಾಗೂ ಇಂಡಿ ತಾಲೂಕಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಬರ ಅಧ್ಯಯನ ನಡೆಸಲಿದೆ.
ಕೇಂದ್ರ ತಂಡ ಅಕ್ಟೋಬರ್ ೬ ರಂದು ಮಧ್ಯಾಹ್ನ ೩ ಗಂಟೆಗೆ ಅರ್ಜುಣಗಿಗೆ ಆಗಮಿಸಿ ತೊಗರಿ ಹಾಗೂ ಮೆಕ್ಕೆಜೋಳ ಬೆಳೆಗಳನ್ನು ವೀಕ್ಷಿಸಲಿದ್ದಾರೆ. ಮಧ್ಯಾಹ್ನ ೩-೧೫ಕ್ಕೆ ಅರ್ಜುಣಗಿಯಿಂದ ಹೊರಟು ಮಧ್ಯಾಹ್ನ ೩-೩೦ಕ್ಕೆ ಯಕ್ಕುಂಡಿ ಗ್ರಾಮಕ್ಕೆ ಆಗಮಿಸಿ, ಯಕ್ಕುಂಡಿ ಗ್ರಾಮದಲ್ಲಿ ಕಬ್ಬು ಬೆಳೆ ಹಾಗೂ ಯಕ್ಕುಂಡಿ ಕೆರೆ ವೀಕ್ಷಣೆ ಮಾಡಲಿದ್ದಾರೆ. ಮಧ್ಯಾಹ್ನ ೩-೪೫ಕ್ಕೆ ಯಕ್ಕುಂಡಿಯಿಂದ ಹೊರಟು ಮಧ್ಯಾಹ್ನ ೪ ಗಂಟೆಗೆ ಬಬಲೇಶ್ವರಕ್ಕೆ ಆಗಮಿಸಿ, ಬಬಲೇಶ್ವರದಲ್ಲಿ ತೊಗರಿ ಬೆಳೆಗಳ ವೀಕ್ಷಣೆ ನಡೆಸಲಿದ್ದಾರೆ. ಸಂಜೆ ೪-೦೫ಕ್ಕೆ ಬಬಲೇಶ್ವರದಿಂದ ಹೊರಟು, ೪-೧೫ಕ್ಕೆ ಸಾರವಾಡ ಗ್ರಾಮದಲ್ಲಿ ಈರುಳ್ಳಿ ಹಾಗೂ ಮೆಣಸಿನಕಾಯಿ ಬೆಳೆಗಳ ವೀಕ್ಷಣೆ ಮಾಡಿ, ೪-೩೦ಕ್ಕೆ ಸಾರವಾಡದಿಂದ ಹೊರಟು ೪-೪೦ಕ್ಕೆ ವಿಜಯಪುರಕ್ಕೆ ಆಗಮಿಸಲಿದೆ.
ಸಂಜೆ ೫ ಗಂಟೆಗೆ ವಿಜಯಪುರದಿಂದ ಹೊರಟು ೫-೩೦ಕ್ಕೆ ಹೊರ್ತಿ ಗ್ರಾಮದಲ್ಲಿ ಲಿಂಬೆ ಬೆಳೆ, ಸಜ್ಜೆ ಹಾಗೂ ಮೆಕ್ಕೆ ಜೋಳ ಬೆಳೆಗಳ ವೀಕ್ಷಣೆ ನಡೆಸಿ, ಸಂಜೆ ೫-೪೫ಕ್ಕೆ ಹೊರ್ತಿಯಿಂದ ಹೊರಟು, ೫-೫೦ಕ್ಕೆ ಸಾವಳಸಂಗ ಗ್ರಾಮದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೈಗೊಂಡಿರುವ ಅಮೃತ ಸರೋವರ ಅರಣ್ಯ ಕಾಮಗಾರಿಗಳ ವೀಕ್ಷಣೆ ನಡೆಸಿ, ಸಂಜೆ ೬ ಗಂಟೆಗೆ ಸಾವಳಸಂಗದಿಂದ ಹೊರಟು ೬-೧೦ಕ್ಕೆ ಕಪನಿಂಬರಗಿ ಗ್ರಾಮದಲ್ಲಿ ಕಂಪನಿಂಬರಗಿ ಕೆರೆ ವೀಕ್ಷಣೆ, ಸಂಜೆ ೬-೧೫ಕ್ಕೆ ಕಪನಿಂಬರಗಿಯಿಂದ ಹೊರಟು ವಿಜಯಪುರಕ್ಕೆ ಆಗಮಿಸಿ ವಿಜಯಪುರದಲ್ಲಿ ವಾಸ್ತವ್ಯ ಮಾಡಲಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

