ಕಡಣಿ ಗ್ರಾಮದಲ್ಲಿ ತಾಯಿ ಮಗಳು ಅಪಾಯದಿಂದ ಪಾರು
ಉದಯರಶ್ಮಿ ದಿನಪತ್ರಿಕೆ
ಆಲಮೇಲ: ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಯ ಪರಿಣಾಮವಾಗಿ ಆಲಮೇಲ ತಾಲೂಕಿನ ಕಡಣಿ ಗ್ರಾಮದಲ್ಲಿ ಮನೆಯ ಮೇಲ್ಚಾವಣಿ ಕುಸಿದು ಬಿದ್ದು ತಾಯಿ ಮಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗುರುವಾರ ರಾತ್ರಿ 10.30 ರ ಸುಮಾರಿಗೆ ಕಡಿಮೆ ಗ್ರಾಮದ ಭೋರಮ್ಮ ಬೀರಪ್ಪ ಪೂಜಾರಿ ಅವರು ಮನೆಯಲ್ಲಿ ತಮ್ಮ ಮಕ್ಕಳೊಂದಿಗೆ ಮಲಗಿಕೊಂಡಿದ್ದಾಗ ಮನೆಯ ಮೇಲ್ಚಾವಣಿಯ ತುಂಡು ಬಿದ್ದ ಪರಿಣಾಮ ಭಯದಲ್ಲಿ ಹೊರಗೆ ಓಡಿ ಬಂದಿದ್ದಾರೆ. ಆ ಸಂದರ್ಭದಲ್ಲಿ ಮನೆಯ ಮೇಲ್ಚಾವಣಿ ಸಂಪೂರ್ಣ ಕುಸಿದು ಬಿದ್ದಿದೆ.
ತಾಯಿ ಮತ್ತು ಮಕ್ಕಳಿಗೆ ಸಣ್ಣ ಪ್ರಮಾಣದ ಪೆಟ್ಟುಗಳು ಆಗಿವೆ. ಅದೃಷ್ಟವಶಾತ್ ಸುರಿಯುವ ಮಳೆಯಲ್ಲಿ ಹೊರಗೆ ಓಡಿ ಬಂದಿದ್ದರ ಪರಿಣಾಮ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಆಲಮೇಲ ತಹಶಿಲ್ದಾರ್ ಧನಪಾಲ ಶೆಟ್ಟಿ ಅವರು ಭೇಟಿ ನೀಡಿ ಪರಿಶೀಲಿಸಿ ಸರ್ಕಾರದಿಂದ ದೊರೆಯುವ ಪರಿಹಾರವನ್ನು ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.
ಗ್ರಾಮ ಲೆಕ್ಕಾಧಿಕಾರಿ ವೈ ಎಸ್ ಗೊಂದಳಿ, ಶರಣು ವಾಲಿಕಾರ, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಮಲ್ಲಿಕಾರ್ಜುನ್ ಪ್ಯಾಟಿ, ಗ್ರಾಪಂ ಸದಸ್ಯ ಭೋಗಣ್ಣ ಬಿರಾದಾರ, ಭೋಗೇಶ ಕತ್ತಿ, ಅನಿಲ ಕತ್ತಿ ಇದ್ದರು.
