Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ನ್ಯಾ.ಕೌಶಿಕ್

ಮಾ.೨೪ ರಂದು ಪೂರ್ವಭಾವಿ ಸಭೆ

ಎಸ್.ಎಸ್.ಎಲ್.ಸಿ ಪರೀಕ್ಷೆ : ಪರೀಕ್ಷಾ ಕೇಂದ್ರ ಸುತ್ತ ನಿಷೇಧಾಜ್ಞೆ ಜಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಾಸಕ ಮನಗೂಳಿ ಮೇಲೆ ಇಲ್ಲಸಲ್ಲದ ಆರೋಪ ಸರಿಯಲ್ಲ
(ರಾಜ್ಯ ) ಜಿಲ್ಲೆ

ಶಾಸಕ ಮನಗೂಳಿ ಮೇಲೆ ಇಲ್ಲಸಲ್ಲದ ಆರೋಪ ಸರಿಯಲ್ಲ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿಜೆಪಿ ಪಕ್ಷದ ತಳವಾರ ಸಮಾಜದ ಮುಖಂಡರ ನಿಲುವಿಗೆ ತಳವಾರ ಮಹಾಸಭಾ ಖಂಡನೆ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಎಲ್ಲ ಸಮಾಜಗಳೊಟ್ಟಿಗೆ ತಳವಾರ ಸಮಾಜದೊಂದಿಗೂ ಅನ್ಯೋನ್ಯತೆಯಿಂದಿರುವ ಶಾಸಕರ ಮೇಲೆ ವಿನಾಕಾರಣ ಇಲ್ಲ ಸಲ್ಲದ ಆರೋಪ ಮಾಡುತ್ತಿರುವ ಬಿಜೆಪಿ ಪಕ್ಷದ ತಳವಾರ ಸಮಾಜದ ಮುಖಂಡರ ನಿಲುವು ಖಂಡನೀಯ ಎಂದು ಪುರಸಭೆ ಸದಸ್ಯ ಬಸವರಾಜ ಯರನಾಳ ಹರಿಹಾಯ್ದರು.
ಸಿಂದಗಿ ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ತಳವಾರ ಮಹಾಸಭಾ ವತಿಯಿಂದ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಳವಾರ ಸಮುದಾಯಕ್ಕೆ ಎಸ್‌ಟಿ ಪ್ರಮಾಣ ಪತ್ರ ದೊರಕಿರುವುದು ಸಂವಿಧಾನಾತ್ಮಕವಾಗಿಯೇ ಹೊರತು ಬಿಜೆಪಿ ಅವರ ಕೃಪಾ ಕಟಾಕ್ಷದಿಂದಲ್ಲ. ಶಾಸಕರ ಸಾಧನೆ ಏನು ಎಂದು ಪ್ರಶ್ನಿಸುವವ ನೀವು ಮಾಡಿದ ೧೨ವರ್ಷಗಳ ಸಾಧನೆಗಳಿಗಿಂತ ಹೆಚ್ಚಿನ ಅಭಿವೃದ್ಧಿಯನ್ನು ಅಶೋಕ ಮನಗೂಳಿ ಅವರು ಕೇವಲ ಎರಡೂವರೆ ವರ್ಷಗಳಲ್ಲಿ ಮಾಡಿದ್ದಾರೆ. ಅಭಿವೃದ್ಧಿಯನ್ನು ಪ್ರಶಂಸಿಸಬೇಕೆ ಹೊರತು ವಿರೋಧ ಪಕ್ಷವೆಂಬ ಒಂದೆ ಕಾರಣಕ್ಕೆ ಎಲ್ಲವನ್ನು ದ್ವೇಷಿಸುವುದು ಬಾಲಿಶತನವಾಗುತ್ತದೆ ಎಂದರು.
ಈ ವೇಳೆ ಎಪಿಎಂಸಿ ಮಾಜಿ ಅಧ್ಯಕ್ಷ ಪ್ರಭು ವಾಲೀಕಾರ ಮಾತನಾಡಿ, ಮಾಜಿ ಶಾಸಕರ ಕೊಡುಗೆ ಸಮಾಜಕ್ಕೆ ಶೂನ್ಯ. ಆದರೆ ತಳವಾರ ಸಮಾಜವನ್ನು ಹಾಲಿ ಶಾಸಕರು ಕಡೆಗಣಿಸುತ್ತಿದ್ದಾರೆ ಎಂಬುದು ಸತ್ಯಕ್ಕೆ ದೂರವಾದದ್ದು, ಕುಮಸಗಿ ಗ್ರಾಮದಲ್ಲಿ ಹತ್ತಾರುಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ತಳವಾರ ಸಮುದಾಯ ಭವನವನ್ನು ೩೦ಲಕ್ಷ ಅನುದಾನದಲ್ಲಿ ಕಾಮಗಾರಿ ಚಾಲ್ತಿಗೊಂಡಿದೆ. ಅಲಹಳ್ಳಿ, ಆಲಮೇಲ, ಶಂಬೇವಾಡ ಮುಂತಾದೆಡೆ ಸ್ವಂತ ಖರ್ಚಿನಲ್ಲಿ ಮೂರ್ತಿ ಸ್ಥಾಪನೆಗೆ ಹಣಕಾಸಿನ ನೆರವು ನೀಡಿದ್ದಾರೆ. ರಾಮನಹಳ್ಳಿಯಲ್ಲಿ ವೀರಯೋಧನ ಮೂರ್ತಿ ಸ್ಥಾಪನೆ, ಆಲಮೇಲ ಕೆರೆ ನಿರ್ಮಾಣ, ೨ಕಿಮೀ ಗಳಷ್ಟು ರಸ್ತೆ, ಬಿದಿ ದೀಪಗಳ ಅಳವಡಿಕೆ, ರಸ್ತೆ ಅಗಲಿಕರಣದಂತಹ ಹಲವಾರು ಕಾರ್ಯ ಮಾಡಿದ್ದಲ್ಲದೇ ಸಿಂದಗಿ ನಗರದಲ್ಲಿಯೂ ತಳವಾರ ಸಮಾಜಕ್ಕೆ ಭೂಮಿ ನೀಡುವುದರ ಜೊತೆಗೆ ಅನುದಾನವನ್ನು ನೀಡಿದ್ದು, ಸಮಾಜದ ಒಳಿತಿಗಲ್ಲದೆ ಮತ್ತೇನು? ಎಂದು ಪ್ರಶ್ನಿಸಿದರು.
ಈ ವೇಳೆ ಮಡಿವಾಳಪ್ಪ ನಾಯ್ಕೋಡಿ ಮಾತನಾಡಿ, ಶಾಸಕರು ಸರಕಾರಿ ನೌಕರರು ಅದರಲ್ಲೂ ತಳವಾರ ಸಮುದಾಯದ ನೌಕರರಿಗೆ ತೊಂದರೆ ನೀಡುತ್ತಿದ್ದಾರೆ ಎನ್ನುವುದನ್ನು ಸಾಬೀತು ಪಡಿಸಬೇಕು ಎಂದು ಸವಾಲು ಹಾಕಿದರು.
ಪತ್ರಿಕಾಗೋಷ್ಠಿಯಲ್ಲಿ ಶಿವಣ್ಣ ಕೋಟರಗಸ್ತಿ, ದವಲಪ್ಪ ಸೊನ್ನ, ಅನಿಲ ಉಡಚಣ, ಸಿದ್ದು ಮಾರದ, ಸಂಜೀವಕುಮಾರ ತಳವಾರ, ಪರಶುರಾಮ ನಾಯ್ಕೋಡಿ, ಸುರೇಶ ನಾಯ್ಕೋಡಿ, ವಿಜಯಕುಮಾರ ಯಳವಾರ, ಲಕ್ಕಪ್ಪ ಮೂಲಿ, ಭೋಗಪ್ಪ ನರಗೋದಿ, ಅನಿಲ ಕಡಕೋಳ ಸೇರಿದಂತೆ ತಳವಾರ ಸಮಾಜ ಬಾಂಧವರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ನ್ಯಾ.ಕೌಶಿಕ್

ಮಾ.೨೪ ರಂದು ಪೂರ್ವಭಾವಿ ಸಭೆ

ಎಸ್.ಎಸ್.ಎಲ್.ಸಿ ಪರೀಕ್ಷೆ : ಪರೀಕ್ಷಾ ಕೇಂದ್ರ ಸುತ್ತ ನಿಷೇಧಾಜ್ಞೆ ಜಾರಿ

ನೌಕರರ ಸಮರ್ಪಕ ಕೆಲಸದಿಂದ ದೇಶದ ಅಭಿವೃದ್ದಿ ಸಾಧ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ನ್ಯಾ.ಕೌಶಿಕ್
    In (ರಾಜ್ಯ ) ಜಿಲ್ಲೆ
  • ಮಾ.೨೪ ರಂದು ಪೂರ್ವಭಾವಿ ಸಭೆ
    In (ರಾಜ್ಯ ) ಜಿಲ್ಲೆ
  • ಎಸ್.ಎಸ್.ಎಲ್.ಸಿ ಪರೀಕ್ಷೆ : ಪರೀಕ್ಷಾ ಕೇಂದ್ರ ಸುತ್ತ ನಿಷೇಧಾಜ್ಞೆ ಜಾರಿ
    In (ರಾಜ್ಯ ) ಜಿಲ್ಲೆ
  • ನೌಕರರ ಸಮರ್ಪಕ ಕೆಲಸದಿಂದ ದೇಶದ ಅಭಿವೃದ್ದಿ ಸಾಧ್ಯ
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ದತೆ :ಬಿಇಓ ಸಯಿದಾ ಮುಜಾವರ
    In (ರಾಜ್ಯ ) ಜಿಲ್ಲೆ
  • ಮಾನವ-ಪ್ರಾಣಿ ಸಂಘರ್ಷ ತಡೆಗೆ ಸ್ಥಳೀಯರ ಸಹಕಾರ ಅತ್ಯಗತ್ಯ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಯಶಸ್ಸು ಕಂಡ ಲೋಕ ಅದಾಲತ್
    In (ರಾಜ್ಯ ) ಜಿಲ್ಲೆ
  • ಪ್ರಗತಿ ಹಂತದ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಿ
    In (ರಾಜ್ಯ ) ಜಿಲ್ಲೆ
  • ಮಾದರಿ ನೀತಿ ಸಂಹಿತೆ ಜಾರಿಗೆ ಕಾರ್ಯಪ್ರವೃತ್ತ :ಜ್ಯೋತಿಗಿರೀಶ
    In (ರಾಜ್ಯ ) ಜಿಲ್ಲೆ
  • ಚಡಚಣದಲ್ಲಿ 2 ತಿಂಗಳಿಂದ ಜಿಯೋ ನೆಟ್‌ವರ್ಕ್ ಸಮಸ್ಯೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.