Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಭಯುತ್ಪಾದನೆ ವಿರುದ್ಧ ಭಾರತ-ರಷ್ಯಾ ಒಟ್ಟಾಗಿ ಹೋರಾಟ

ಸೈಬರ್ ಅಪರಾಧ ಪ್ರಕರಣಗಳಲ್ಲಿ ಮಹಿಳೆಯರೇ ಹೆಚ್ಚು ಬಲಿ

ಫಲಿತಾಂಶ ಆಧಾರಿತ ಶಿಕ್ಷಣ ಅಗತ್ಯ :ಡಾ.ಬಿ.ವೈ.ಖಾಸ್ನಿಸ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಂತ್ರಸ್ತರಿಗೆ ಒಪ್ಪಿಗೆ ಸೂತ್ರದಡಿ ಪರಿಹಾರ ಘೋಷಣೆ
(ರಾಜ್ಯ ) ಜಿಲ್ಲೆ

ಸಂತ್ರಸ್ತರಿಗೆ ಒಪ್ಪಿಗೆ ಸೂತ್ರದಡಿ ಪರಿಹಾರ ಘೋಷಣೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಸಂತ್ರಸ್ತರಿಗೆ ಸರಕಾರದಿಂದ ಸಮರ್ಪಕ ಪರಿಹಾರ | ಯೋಜನಾ ಸಂತ್ರಸ್ತರು ಏರ್ಪಡಿಸಿದ್ದ ಅಭಿನಂದನೆ ಸಮಾರಂಭದಲ್ಲಿ ಸಚಿವ ಎಂ.ಬಿ.ಪಾಟೀಲ ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಸಂತ್ರಸ್ತರಿಗೆ ಸರಕಾರ ಒಪ್ಪಿಗೆ ಸೂತ್ರದಡಿ ಸಮರ್ಪಕ ಪರಿಹಾರ ಘೋಷಣೆ ಮಾಡಿದ್ದು, ಇದರಿಂದ ಆಲಮಟ್ಟಿ ಜಲಾಶಯದ ಎತ್ತರವನ್ನು ಹೆಚ್ಚಿಸಿ ವಿಜಯಪುರ, ಬಾಗಲಕೋಟೆ, ಕೊಪ್ಪಳ ಮತ್ತೀತರ ಜಿಲ್ಲೆಗಳ ಬಾಕಿ ಭೂಮಿಗೆ ನೀರಾವರಿ ಕಲ್ಪಿಸಲು ಅನುಕೂಲವಾಗಲಿದೆ ಎಂದು ಕೈಗಾರಿಕೆ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ.
ಸೋಮವಾರ ಮುಸ್ಸಂಜೆ ಬಬಲೇಶ್ವರ ತಾಲೂಕಿನ ದೇವರ ಗಣ್ಣೂರಿನಲ್ಲಿ ಕೃಷ್ಣ ಮೇಲ್ದಂಡೆ ಹಂತ-3ರ ಯೋಜನಾ ಸಂತ್ರಸ್ತರಿಗೆ ಯೋಗ್ಯ ದರ ನಿಗದಿ ಪಡಿಸಿದ ಅಂಗವಾಗಿ ಯೋಜನಾ ಸಂತ್ರಸ್ತರು ಏರ್ಪಡಿಸಿದ್ದ ಅಭಿನಂದನೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಹಿಂದೆ ಬೊಮ್ಮಾಯಿ ನೇತೃತ್ವದ ಸರಕಾರ ಅಧಿಕಾರದಲ್ಲಿದ್ದಾಗ ಭೂಸ್ವಾಧೀನದಡಿ ಭೂಮಿ ಕಳೆದುಕೊಳ್ಳುವ ರೈತರಿಗೆ ಹಕ್ಕಿನಂತೆ ಸಿಗಬೇಕಾದ ಪರಿಹಾರವನ್ನು ಕನ್ಸೆಂಟ್(ಒಪ್ಪಿಗೆ) ಅನ್ವಯ ನೀಡುವುದಾಗಿ ರೈತರನ್ನು ದಾರಿ ತಪ್ಪಿಸಲಾಗಿತ್ತು. ಆದರೇ, ಅಂದೇ ನಾನು ರೈತರಿಗೆ ಹಕ್ಕಿನಂತೆ ದೊರೆಯುವ ಪರಿಹಾರ ಮತ್ತು ಒಪ್ಪಂದದಂತೆ ಸಿಗುವ ಪರಿಹಾರದ ಮೊತ್ತದ ನಡುವಿನ ವ್ಯತ್ಯಾಸವನ್ನು ಬಿಡಿಸಿ ಹೇಳಿದ್ದೆ. ಅಲ್ಲದೇ, ಬೊಮ್ಮಾಯಿ ಸಮ್ಮುಖದಲ್ಲಿಯೇ ವೇದಿಕೆಯ ಮೇಲೆ ರೈತರು ಈ ಸೂತ್ರವನ್ನು ಒಪ್ಪಬೇಡಿ. ಮುಂದಿನ ಬಾರಿ ನಮ್ಮ ಸರಕಾರ ಅಧಿಕಾರಕ್ಕೆ ಬಂದ ನಂತರ ಈ ಅನ್ಯಾಯ ಸರಿಪಡಿಸುವುದಾಗಿ ನಾನು ಭರವಸೆ ನೀಡಿದ್ದೆ. ಇಂದು ನುಡಿದಂತೆ ನಡೆಯುತ್ತಿದ್ದೇವೆ. ಈಗ ಒಪ್ಪಂದದಂತೆ ಪರಿಹಾರ ನೀಡುತ್ತಿದ್ದೇವೆ ಎಂದು ಅವರು ಹೇಳಿದರು.
ಈ ಯೋಜನೆಗೆ ಒಟ್ಟು ರೂ. 2 ಲಕ್ಷ ಕೋ. ಹಣ ಬೇಕು ಎಂದು ಕೆಲವರು ಬಿಂಬಿಸಿದ್ದರು. ಆದರೆ, ನಾನು ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣಕ್ಕೆ ತಗಲುವ ವೆಚ್ಚವನ್ನು ಎಳೆಎಳೆಯಾಗಿ ಹೇಳಿದ್ದೆ. ಇದನ್ನು ಮುಂದೆ ಹಾಕಿದರೆ ಭವಿಷ್ಯದಲ್ಲಿ ಈ ಯೋಜನೆ ಮತ್ತೆ ನನೆಗುದಿಗೆ ಬೀಳಲಿದೆ ಎಂದು ಸಿಎಂ ಮತ್ತು ಡಿಸಿಎಂ ಅವರಿಗೆ ಇತ್ತೀಚೆಗೆ ಮನವರಿಕೆ ಮಾಡಿದ್ದೆ. ಇದನ್ನು ಬಾಗಲಕೋಟೆ ಮತ್ತು ಗದಗ ಜಿಲ್ಲೆಗಳ ಸಚಿವರೂ ಬೆಂಬಲಿಸಿದ್ದರು. ಈಗ ಮೂರು ಹಂತಗಳಲ್ಲಿ ಪ್ರತಿ ಎಕರೆ ನೀರಾವರಿ ಜಮೀನಿಗ ರೂ. 40 ಲಕ್ಷ ಮತ್ತು ಒಣಬೇಸಾಯ ಜಮೀನಿಗೆ ರೂ. 30 ಲಕ್ಷ ದರ ಪರಿಹಾರ ನಿಗದಿ ಪಡಿಸಲಾಗಿದೆ. ಈ ಯೋಜನೆ ಒಂದು ಹಂತಕ್ಕೆ ಬಂದಿದ್ದು, ಎಲ್ಲ ರೈತರೂ ಇದಕ್ಕೆ ಸಂಪೂರ್ಣ ಬೆಂಬಲ ನೀಡಬೇಕು. ಇದೊಂದು ಐತಿಹಾಸಿಕ ನಿರ್ಣಯವಾಗಿದೆ ಎಂದು ಅವರು ಹೇಳಿದರು.
ರೈತರು ಮಾಡುವ ತ್ಯಾಗದಿಂದ ಆಲಮಟ್ಟಿ ಜಲಾಷಯದ ಎತ್ತರವನ್ನು 519.60 ಮೀ. ನಿಂದ 524.256 ಮೀ. ಹೆಚ್ಚಿಸಲು ಸಾಧ್ಯವಾಗಲಿದೆ. ಜಿಲ್ಲೆಯ ಬಾಕಿ ಜಮೀನಿಗೆ ನೀರಾವರಿ ಸೌಲಭ್ಯ ಸಿಗಲಿದೆ. ರೈತರಿಗೆ ಕನ್ಸೆಂಟ್(ಒಪ್ಪಿಗೆ) ಸೂತ್ರದಡಿ ಸೂಕ್ತ ಪರಿಹಾರ ನೀಡಲು ಸಿಎಂ ಮತ್ತು ಡಿಸಿಎೞ ನೇತೃತ್ವದಲ್ಲಿ ಐತಿಹಾಸಿಕ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ ಸಚಿವರು ತಾವು ಜಲಸಂಪನ್ಮೂಲ ಸಚಿವರಾಗಿದ್ದಾಗ ಈ ಭಾಗದಲ್ಲಿ ಕೈಗೊಂಡ ನೀರಾವರಿ ಯೋಜನೆಗಳಿಗೆ ಎದುರಾದ ಅಡ್ಡಿ, ಆತಂಕಗಳು, ಅವುಗಳನ್ನು ಸಮರ್ಥವಾಗಿ ಎದುರಿಸಿದ ಘಟನೆಗಳನ್ನು ಎಳೆಎಳೆಯಾಗಿ ವಿವರಿಸಿದರು.
ಇದೇ ವೇಳೆ ಯೋಜನಾ ಸಂತ್ರಸ್ತ ನಾನಾ ಗ್ರಾಮಗಳ ರೈತರು ಸಚಿವ ಎಂ. ಬಿ. ಪಾಟೀಲ‌ ಅವರನ್ನು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಬಬಲಾದಿಯ ಅಪ್ಪಯ್ಯ ಹಿರೇಮಠ, ಅದೃಷ್ಯಪ್ಪ ವಾಸಣ್ಣ ದೇಸಾಯಿ, ವಿ. ವಿ. ಅರಕೇರಿ, ಕುಮಾರ ದೇಸಾಯಿ, ಬಸವರಾಜ ದೇಸಾಯಿ, ಡಾ. ಕೆ. ಎಚ್. ಮುಂಬಾತಡ್ಡಿ, ಉಮೇಶ ಮಲ್ಲಣ್ಣವರ, ಬಿ. ಡಿ. ಪಾಟೀಲ, ಎಚ್. ಬಿ. ಹರನಟ್ಟಿ, ರಮೇಶ ಯರಗಟ್ಟಿ, ಶಂಕರಗೌಡ ಪಾಟೀಲ, ಲಕ್ಷ್ಮಣ ಚಿಕದಾನಿ, ಕೆ. ಪಿ. ಶಿರಬೂರ, ಅಪ್ಪುಗೌಡ ಪಾಟೀಲ ಶೇಗುಣಸಿ, ವಿಠ್ಠಲ ಶೇಬಾನಿ, ಶಂಕ್ರೆಪ್ಪ ಜನವಾಡ, ದುಂಡಪ್ಪ ಹಂಗರಗಿ, ಸುಬ್ಬನಗೌಡ ಪಾಟೀಲ, ಭೀಮನಗೌಡ ಪಾಟೀಲ, ಪ್ರಶಾಂತ ದೇಸಾಯಿ, ವಾಸು ಗಿರೆವ್ವಗೋಳ, ರವಿ ಬಿರಾದಾರ, ಅಶೋಕ‌ ಕಬಾಡೆ, ನಾಗಪ್ಪ ದೇಸಾಯಿ, ರಾಮಸ್ವಾಮಿ ವಾಲಿಕಾರ ಮುಂತಾದವರು ಉಪಸ್ಥಿತರಿದ್ದರು.

“ನಂದಿ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಕಳುಹಿಸಲಾಗಿದ್ದ ಪ್ರಸ್ತಾವನೆಯನ್ನು ಎನ್.ಸಿ.ಡಿ.ಸಿಯಿಂದ ಮತ್ತೆ ರಾಜ್ಯಕ್ಕೆ ವಾಪಸ್ ಕಳುಹಿಸಿದೆ. ಈ ಕಾರ್ಖಾನೆ ಈ ಭಾಗದ ರೈತರಿಗೆ ಅಸ್ಮಿತೆಯಾಗಿದ್ದು, ರೈತರಿಗೆ ನೆರವಾಗಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತೇವೆ. ಕಾರ್ಖಾನೆಯ ಉಳಿವಿಗೆ ಎಲ್ಲರೂ ಕೈಜೋಡಿಸಿ ಉಳಿಸೋಣ.”

– ಎಂ.ಬಿ.ಪಾಟೀಲ
ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಭಯುತ್ಪಾದನೆ ವಿರುದ್ಧ ಭಾರತ-ರಷ್ಯಾ ಒಟ್ಟಾಗಿ ಹೋರಾಟ

ಸೈಬರ್ ಅಪರಾಧ ಪ್ರಕರಣಗಳಲ್ಲಿ ಮಹಿಳೆಯರೇ ಹೆಚ್ಚು ಬಲಿ

ಫಲಿತಾಂಶ ಆಧಾರಿತ ಶಿಕ್ಷಣ ಅಗತ್ಯ :ಡಾ.ಬಿ.ವೈ.ಖಾಸ್ನಿಸ್

ಡಿ.೬ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಭಯುತ್ಪಾದನೆ ವಿರುದ್ಧ ಭಾರತ-ರಷ್ಯಾ ಒಟ್ಟಾಗಿ ಹೋರಾಟ
    In (ರಾಜ್ಯ ) ಜಿಲ್ಲೆ
  • ಸೈಬರ್ ಅಪರಾಧ ಪ್ರಕರಣಗಳಲ್ಲಿ ಮಹಿಳೆಯರೇ ಹೆಚ್ಚು ಬಲಿ
    In (ರಾಜ್ಯ ) ಜಿಲ್ಲೆ
  • ಫಲಿತಾಂಶ ಆಧಾರಿತ ಶಿಕ್ಷಣ ಅಗತ್ಯ :ಡಾ.ಬಿ.ವೈ.ಖಾಸ್ನಿಸ್
    In (ರಾಜ್ಯ ) ಜಿಲ್ಲೆ
  • ಡಿ.೬ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ರಾಣಿ ಚೆನ್ನಮ್ಮ ವಿವಿ: ಎಂಸಿಎ ಕೋರ್ಸಿಗೆ ಪ್ರವೇಶಾತಿ
    In (ರಾಜ್ಯ ) ಜಿಲ್ಲೆ
  • ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ಶಿಷ್ಯವೇತನ ಕ್ಕಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಡಿ.೭ ರಂದು ಸಾರ್ವಜನಿಕ ರಸ್ತೆ ಸಂಚಾರ ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಭೈರವಾಡಗಿ ಪಿಕೆಪಿಎಸ್ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ: ರೈತರಲ್ಲಿ ಆತಂಕ ತಂದ ಅಕಾಲಿಕ ಮಳೆ
    In (ರಾಜ್ಯ ) ಜಿಲ್ಲೆ
  • ಗೋವಿನ ಜೋಳ & ತೊಗರಿ ಖರೀದಿ ಕೇಂದ್ರ ತೆರೆಯಲು ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.