Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಭಯುತ್ಪಾದನೆ ವಿರುದ್ಧ ಭಾರತ-ರಷ್ಯಾ ಒಟ್ಟಾಗಿ ಹೋರಾಟ

ಸೈಬರ್ ಅಪರಾಧ ಪ್ರಕರಣಗಳಲ್ಲಿ ಮಹಿಳೆಯರೇ ಹೆಚ್ಚು ಬಲಿ

ಫಲಿತಾಂಶ ಆಧಾರಿತ ಶಿಕ್ಷಣ ಅಗತ್ಯ :ಡಾ.ಬಿ.ವೈ.ಖಾಸ್ನಿಸ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಗ್ಗೋಡದಲ್ಲಿ ಸರ್ವಋತುವಿನ ಥೈಲ್ಯಾಂಡ್ ಮಾವು ಬೆಳೆದ ರೈತ
(ರಾಜ್ಯ ) ಜಿಲ್ಲೆ

ಕಗ್ಗೋಡದಲ್ಲಿ ಸರ್ವಋತುವಿನ ಥೈಲ್ಯಾಂಡ್ ಮಾವು ಬೆಳೆದ ರೈತ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp


ಪ್ರಗತಿಪರ ಯುವ ರೈತನನ್ನು ಸನ್ಮಾನಿಸಿ ಪ್ರೋತ್ಸಾಹಿಸಿದ ಸಚಿವ ಶಿವಾನಂದ ಪಾಟೀಲ | ಕಗ್ಗೋಡ ಪದವೀಧರ ಯುವರೈತ ನವೀನ ಮಂಗಾನವರ ಸಾಧನೆಗೆ ಮೆಚ್ಚುಗೆ

*ಉದಯರಶ್ಮಿ ದಿನಪತ್ರಿಕೆ*

ವಿಜಯಪುರ: ಜಿಲ್ಲೆಯ ಪದವೀಧರ ಯುವ ಪ್ರಗತಿಪರ ರೈತರೊಬ್ಬರು ಥೈಲ್ಯಾಂಡ್ ಮೂಲದ ಮಾವು ಬೆಳೆದು ಯಶಸ್ಸು ಸಾಧಿಸಿದ್ದಾರೆ. ಹಣ್ಣಿನ ಸ್ವಾದ ಸವಿದ ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಪ್ರಗತಿಪರ ಯುವರೈತ ನವೀನ್ ನನ್ನು ಸನ್ಮಾನಿಸಿ ಪ್ರೋತ್ಸಾಹಿಸಿದರು.
ವಿಜಯಪುರ ತಾಲೂಕಿನ ಕಗ್ಗೋಡ ಗ್ರಾಮದ ಪದವೀಧರ ಯುವ ಪ್ರಗತಿಪರ ರೈತ ನವೀನ ರಾವುತಪ್ಪ ಮಂಗಾನವರ ಮಂಗಳವಾರ ತಾವು ಬೆಳೆದ ಮಾವಿನೊಂದಿಗೆ ಸಚಿವ ಶಿವಾನಂದ ಪಾಟೀಲ ಅವರ ಭೇಟಿಗೆ ಬಂದಿದ್ದರು.
*ವಿಷಮುಕ್ತ ಥೈ ಮಾವು ಬೆಳೆ*
ನವೀನ್ ಶಿವಣಗಿ ಗ್ರಾಮದ ತಮ್ಮ 8 ರಲ್ಲಿ 7 ಎಕರೆ ಪ್ರದೇಶದಲ್ಲಿ ಸಂಪೂರ್ಣ ಸಾವಯವ ಪದ್ಧತಿಯಲ್ಲಿ ಥೈಲ್ಯಾಂಡ್ ಮೂಲದ ಮಾವು ಬೆಳೆದಿದ್ದಾರೆ. ಈ ಮಾವಿನ ವಿಶೇಷ ಏನೆಂದರೆ  ವರ್ಷಪೂರ್ತಿ ಹಣ್ಣು ಬಿಡುತ್ತದೆ ಎಂದು ಸಚಿವರಿಗೆ ವಿವರಿಸಿದರು.
2011 ಡಿಸೆಂಬರ್ ತಿಂಗಳಲ್ಲಿ ಥೈಲ್ಯಾಂಡ್ ಪ್ರವಾಸಕ್ಕೆ ಹೋಗಿದ್ದ ನವೀನ ಚಳಿಗಾಲದಲ್ಲಿ ವೈವಿಧ್ಯಮಯ ಗಾತ್ರ, ಬಣ್ಣ, ಸ್ವಾದಗಳ ಮಾವಿನ ಹಣ್ಣುಗಳನ್ನು ಕಂಡು ಅಚ್ಚರಿಗೊಂಡು, ಈ ಹಣ್ಣಿನ ಬಗ್ಗೆ ಕುತೂಹಲ ಬೆಳೆಸಿಕೊಂಡರು.
*ಸತತ 6 ಬಾರಿ ಥೈಲ್ಯಾಂಡಗೆ ಭೇಟಿ*
ಇದಕ್ಕಾಗಿ ಸತತ 6 ವರ್ಷಗಳ ಕಾಲ ಬೇರೆಬೇರೆ ಋತುಮಾನದಲ್ಲಿ ಥ್ಯೈಲೆಂಡಗೆ ಭೇಟಿ ನೀಡಿ, ವರ್ಷಪೂರ್ತಿ ಇಳುವರಿ ಕೊಡುವ ಮಾವಿನ ಅಸಲೀಯತ್ ಏನಿದೆ ಎಂಬ ಮಾಹಿತಿ ಸಂಗ್ರಹಿಸಿದರು.
ಅಂತಿಮವಾಗಿ 2021 ರಲ್ಲಿ ವರ್ಷಪೂರ್ತಿ ಇಳುವರಿ ಕೊಡುವ ಥೈಲ್ಯಾಂಡ್ ಮೂಲದ ವಿವಿಧ 20 ತಳಿಯ 5500 ಮಾವಿನ ಸಸಿಗಳನ್ನು ವಿಜಯಪುರದ ಶಿವಣಗಿ ತೋಟಕ್ಕೆ ತಂದು ನಾಟಿ ಮಾಡಿದರು.
ಒಂದೂವರೆ ವರ್ಷದಲ್ಲಿ ಇಳುವರಿ ಆರಂಭಗೊಂಡರೂ ಸಂತೃಪ್ತನಾಗದ ಪ್ರಯೋಗಶೀಲ ಯುವ ರೈತ, ಪ್ರತಿ ತಳಿಯ ಬಣ್ಣ, ಗಾತ್ರ, ಸ್ವಾದಗಳ ಅವಲೋಕನದಲ್ಲಿ ತೊಡಗಿದರು.
ಇದಕ್ಕಾಗಿ 5 ವರ್ಷ ಕಾಲ ಪ್ರತಿ ಗಿಡದ ಹಣ್ಣಿನ ಸ್ವಾದ ಪರೀಕ್ಷಿಸಿದ ಸಾವಯವ ಪ್ರಗತಿಪರ ರೈತ ನವೀನ ಗರಿಷ್ಠ ಗುಣಮಟ್ಟ ಹಾಗೂ ಗ್ರಾಹಕರ ಆಕರ್ಷಣೆಯ ತಳಿಯನ್ನು ಉಳಿಸಿಕೊಂಡು ಬಂದಿದ್ದಾಗಿ ಹಾಗೂ ಸ್ವಾದ ರಹಿತ ಗಿಡಗಳನ್ನು ಕಿತ್ತು ಹಾಕಿ ಗುಣಮಟ್ಟದ ಉತ್ಕೃಷ್ಟತೆಗೆ ಆದ್ಯತೆ ನೀಡಿದ್ದಾಗಿ ವಿವರ ನೀಡಿದರು.


*ಯುವ ರೈತ ನವೀನ ಕಾರ್ಯ ಅನುಕರಣೀಯ*

ಹತ್ತಾರು ಎಕರೆ ಜಮೀನು, ನೀರು ಇದ್ದರೂ ಯುವ ರೈತರು ಹಲವು ಕಾರಣಗಳಿಂದ ಸೋಲು ಎದುರಿಸಲಾಗದೇ ನಗರೀಕರಣದತ್ತ ವಲಸೆ ಹೊರಟಿದ್ದಾರೆ. ಆದರೆ ಬಿ.ಎ. ಪದವಿ ಪಡೆದಿರುವ ಯುವ ರೈತ ನವೀನ ವಿಷಮುಕ್ತ ತೋಟಗಾರಿಕೆಯಲ್ಲಿ ತೊಡಗಿದ್ದಾರೆ. ಕೃಷಿಯಿಂದ ವಿಮುಖರಾಗಿರುವ ರೈತರ ಮಧ್ಯೆ ಸಾಹಸಿ ಯುವಕೃಷಿಕ ನವೀನ ವಿಭಿನ್ನವಾಗಿ ಸಾಧನೆ ಮಾಡಿದ್ದಾರೆ. ಸಾವಯವ ಕೃಷಿಕ ಪ್ರಗತಿಪರ ಯುವ ರೈತ ನವೀನ ಮಾದರಿ ಹಾಗೂ ಅನುಕರಣೀಯ ಎನಿಸಿದ್ದಾರೆ ಎಂದು ಸಚಿವ ಶಿವಾನಂದ ಪಾಟೀಲ ಶ್ಲಾಘಿಸಿದರು.

*ವರ್ಷದುದ್ದಕ್ಕೂ 1200 ರೂ. ದರ!*

ವರ್ಷಪೂರ್ತಿ ಫಲ ನೀಡುವ ಈ ವಿದೇಶಿ ಹಣ್ಣಿಗೆ ವರ್ಷದುದ್ದಕ್ಕೂ 1200 ರೂ. ದರ ಇರಿಸಿದ್ದಾರೆ. ವಿಜಯಪುರ ಮಾತ್ರವಲ್ಲದೆ ಬೆಂಗಳೂರು, ಹೈದರಾಬಾದ್ ನಲ್ಲೂ ವಿಶಿಷ್ಟ ಸ್ವಾದದ ಮಾವಿನ ಹಣ್ಣಿಗೆ ಗ್ರಾಹಕರನ್ನು ಸೃಷ್ಟಿಸಿಕೊಂಡಿದ್ದಾಗಿ ಸಚಿವರಿಗೆ ಮಾಹಿತಿ ನೀಡಿದರು.
ಮೇಲು ಗೊಬ್ಬರವಾಗಿ ಎರೆಹುಳು ಗೊಬ್ಬರ, ತಾಪಮಾನ ತಡೆಯಲು ಪಾಚಿ ಮುಚ್ಚಿಗೆ, ಚಳಿ ತಡೆಯಲು ಪಾರಿವಾಳದ ಹಿಕ್ಕೆ, ಸಾವಯವ ಬೆಲ್ಲ, ಕಡಲೆ ಹಿಟ್ಟನ್ನು ಗೋಮೂತ್ರದಲ್ಲಿ ಬೆರೆಸಿ ನೀಡುತ್ತಿರುವ ಸಹೋದರ ನವೀನನ ಪ್ರಯೋಗಶೀಲತೆ, ವಿಶಿಷ್ಟ ಸಾವಯವ ಕೃಷಿ ವಿಧಾನದ ಕುರಿತು  ಶಿಕ್ಷಕರಾಗಿರುವ ಪ್ರಗತಿಪರ ರೈತ ಶಿವಾನಂದ ಮಂಗಾನವರ ಸಚಿವ ಶಿವಾನಂದ ಪಾಟೀಲ ಅವರ ಎದುರು ಬಿಚ್ಚಿಟ್ಟರು.

*ನೇರ ಮಾರುಕಟ್ಟೆ*

ವರ್ಷಪೂರ್ತಿ ಫಲ ನೀಡುವ ಥೈಲ್ಯಾಂಡ್ ಮಾವಿನ ಮಾರಾಟಕ್ಕೆ ಮಧ್ಯವರ್ತಿ ಬದಲಾಗಿ ತಾವೇ ನೇರ ಮಾರುಕಟ್ಟೆ ಕಂಡುಕೊಂಡಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಭಯುತ್ಪಾದನೆ ವಿರುದ್ಧ ಭಾರತ-ರಷ್ಯಾ ಒಟ್ಟಾಗಿ ಹೋರಾಟ

ಸೈಬರ್ ಅಪರಾಧ ಪ್ರಕರಣಗಳಲ್ಲಿ ಮಹಿಳೆಯರೇ ಹೆಚ್ಚು ಬಲಿ

ಫಲಿತಾಂಶ ಆಧಾರಿತ ಶಿಕ್ಷಣ ಅಗತ್ಯ :ಡಾ.ಬಿ.ವೈ.ಖಾಸ್ನಿಸ್

ಡಿ.೬ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಭಯುತ್ಪಾದನೆ ವಿರುದ್ಧ ಭಾರತ-ರಷ್ಯಾ ಒಟ್ಟಾಗಿ ಹೋರಾಟ
    In (ರಾಜ್ಯ ) ಜಿಲ್ಲೆ
  • ಸೈಬರ್ ಅಪರಾಧ ಪ್ರಕರಣಗಳಲ್ಲಿ ಮಹಿಳೆಯರೇ ಹೆಚ್ಚು ಬಲಿ
    In (ರಾಜ್ಯ ) ಜಿಲ್ಲೆ
  • ಫಲಿತಾಂಶ ಆಧಾರಿತ ಶಿಕ್ಷಣ ಅಗತ್ಯ :ಡಾ.ಬಿ.ವೈ.ಖಾಸ್ನಿಸ್
    In (ರಾಜ್ಯ ) ಜಿಲ್ಲೆ
  • ಡಿ.೬ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ರಾಣಿ ಚೆನ್ನಮ್ಮ ವಿವಿ: ಎಂಸಿಎ ಕೋರ್ಸಿಗೆ ಪ್ರವೇಶಾತಿ
    In (ರಾಜ್ಯ ) ಜಿಲ್ಲೆ
  • ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ಶಿಷ್ಯವೇತನ ಕ್ಕಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಡಿ.೭ ರಂದು ಸಾರ್ವಜನಿಕ ರಸ್ತೆ ಸಂಚಾರ ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಭೈರವಾಡಗಿ ಪಿಕೆಪಿಎಸ್ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ: ರೈತರಲ್ಲಿ ಆತಂಕ ತಂದ ಅಕಾಲಿಕ ಮಳೆ
    In (ರಾಜ್ಯ ) ಜಿಲ್ಲೆ
  • ಗೋವಿನ ಜೋಳ & ತೊಗರಿ ಖರೀದಿ ಕೇಂದ್ರ ತೆರೆಯಲು ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.