Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 06, 2026

ಬಸವನಾಡಿನ ಸಾಧಕ ಮಿಥುನ ಸುಸಲಾದಿ

ಬೇಡಿಕೆ ಈಡೇರಿಕೆಗೆ ಜಮಖಂಡಿಯಲ್ಲಿ ರೈತರ ಪ್ರತಿಭಟನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»ವಿಶೇಷ ಲೇಖನ»ಭಾವರಶ್ಮಿ»ನೈತಿಕ ಮೌಲ್ಯಗಳ ಮೇಲೆ ಸಾಮಾಜಿಕ ಜಾಲತಾಣಗಳ ಪ್ರಭಾವ
ಭಾವರಶ್ಮಿ

ನೈತಿಕ ಮೌಲ್ಯಗಳ ಮೇಲೆ ಸಾಮಾಜಿಕ ಜಾಲತಾಣಗಳ ಪ್ರಭಾವ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಲೇಖನ
– ರಶ್ಮಿ ಕೆ. ವಿಶ್ವನಾಥ್
ಮೈಸೂರು

ಉದಯರಶ್ಮಿ ದಿನಪತ್ರಿಕೆ

ಹೌದು ಹಿಂದಿನ ದಿನಗಳ ಮತ್ತು ಇಂದಿನ ದಿನಗಳ ವರ್ತನೆಯನ್ನು ತುಲನೆ ಮಾಡಿದರೆ ಆ ವ್ಯತ್ಯಾಸಗಳು ವೇದ್ಯವಾಗುತ್ತವೆ.
ಹೆಣ್ಣುಮಕ್ಕಳು 11 -12 ವರ್ಷಕ್ಕೇನೆ ಋತುಮತಿಯಾಗುವುದು, ಡೆಲಿವರಿ ದಿನಾಂಕಕ್ಕೆ 15- 20 ದಿನಗಳ ಮುಂಚೆಯೇ ಮಗು ಆಗುವುದು, ಮೆನೋಪಾಸ್ ಗೆ 10-12 ವರ್ಷಗಳ ಮುಂಚೆಯೇ ಋತುಸ್ರಾವ(ಮುಟ್ಟು) ನಿಲ್ಲುವುದು, ಇನ್ನು ಹುಡುಗರ ವಿಷಯಕ್ಕೆ ಬಂದರೆ, ಡಿಗ್ರಿಗೆ ಬರಬೇಕಾಗಿದ್ದ ಗಡ್ಡ – ಮೀಸೆ, ಇನ್ನೂ ಹೈಸ್ಕೂಲು ಪಿಯುಸಿಗೇನೆ ಬಂದುಬಿಡುವುದು, 4-5 ವರ್ಷಕ್ಕೇನೇ ಬಿಪಿ, ಶುಗರ್, ಹಾರ್ಟ್ ಅಟ್ಯಾಕ್ ಇವೆಲ್ಲವೂ ಇವಾಗಿನ ಆಹಾರದಿಂದ ಮತ್ತು ಜೀವನ ಕ್ರಮದಿಂದಾದ ಬದಲಾವಣೆಗಳು ಎಂದಿಟ್ಟುಕೊಳ್ಳೋಣ.
ಆದರೆ ಮಕ್ಕಳೆಂದರೆ ಮುಗ್ದರು, ಅವರು ದೇವರಿಗೆ ಸಮಾನ, ಅವರು ಸತ್ಯವನ್ನು ಬಿಟ್ಟು ಬೇರೇನನ್ನೂ ಹೇಳುವುದಿಲ್ಲ, ಹೇಳುವುದಕ್ಕೆ ತಿಳಿಯುವುದೂ ಇಲ್ಲ. ಎಂಬುದು ಸಾಮಾನ್ಯ ನಂಬಿಕೆ. ಆದರೆ ಕೆಲವು ಮಕ್ಕಳ ಉದ್ಧಟತನದ ಮಾತುಗಳನ್ನೂ ವರ್ತನೆಗಳನ್ನೂ ನೋಡಿದಾಗ ಆಶ್ಚರ್ಯವಾಗುತ್ತದೆ. ‘ಅರೇ ಹೀಗೂ ಹೇಳಬಹುದೆ? ದೊಡ್ಡವರಾದ ನಾವೇ ಇಷ್ಟು ಹದ್ದುಮೀರಿ ಮಾತನಾಡುವುದಿಲ್ಲವಲ್ಲ’ ಎನಿಸುತ್ತದೆ. ಅದ್ಯಾರಿಂದ ಇವರು ಹೀಗೆ ಮಾತನಾಡುವುದು ಕಲಿತರು, ಅದ್ಯಾರಿಂದ ಇವರು ಡ್ರಗ್ಸ್ ತೆಗೆದುಕೊಳ್ಳುವುದು ಕಲಿತರು, ಅದ್ಯಾರಿಂದ ಇವರು ಗರ್ಲ್ಫ್ ಫ್ರೆಂಡ್ಸ್/ ಬಾಯ್ ಫ್ರೆಂಡ್ಸ್ ಇಟ್ಟುಕೊಳ್ಳುವುದು ಕಲಿತರು, ಇವೇ ಮುಂತಾದ ಪ್ರಶ್ನೆಗಳು ನಮ್ಮನ್ನು ಕಾಡಹತ್ತಿದಾಗ, ಒಂದೊಂದಾಗೆ ತರಂಗಗಳು ತೆರೆದುಕೊಳ್ಳತೊಡಗುತ್ತವೆ.
ಈ ಹಿಂದಿನ ತಲೆಮಾರಿನಲ್ಲಿ ಸಿಟಿಯಲ್ಲಿ ಅಲ್ಲೊಂದು ಇಲ್ಲೊಂದು ಟಿವಿಗಳಾದರೂ ಇದ್ದವೇನೋ, ಆದರೆ ಹಳ್ಳಿಗಳಲ್ಲಿ, ಇಡೀ ಹಳ್ಳಿಗೆ 1-2 ಟಿವಿಗಳಿದ್ದರೆ ಅದೇ ದೊಡ್ಡ ವಿಷಯ. ಇನ್ನು ಫೋನು ಕನಸೇ ಬಿಡಿ. ಅದು ಆಮೇಲೆ ಬಂದದ್ದು ಕೀಪ್ಯಾಡು ಫೋನ್, ಅದನ್ನು ಆಪರೇಟ್ ಮಾಡಲೂ ಸಹ ಸರಿಯಾಗಿ ಬರುತ್ತಿದ್ದದ್ದಿಲ್ಲ. ಇನ್ನು ಹೇಗೆ ತಾನೆ ಮಕ್ಕಳು ಕೆಟ್ಟಾರು?!
ಈವಾಗಿನ ದಿನಗಳಲ್ಲಿ ಟಿವಿಯಲ್ಲೇ ರಾಜಾರೋಷವಾಗಿ ಧೂಮಪಾನ, ಮಧ್ಯಪಾನ ಮಾಡೋದು, ಧೈರ್ಯವಾಗಿ & ಸ್ಟೈಲ್ ಆಗಿ ಸಿಗರೇಟ್ ಸೇದೋದು(ಸ್ಮೋಕ್) ತೋರಿಸ್ತಾರೆ, ಹುಡುಗ ಹುಡುಗಿ ಮುದ್ದಾಡೋದರಿಂದ (ರೊಮ್ಯಾನ್ಸ್) ಹಿಡಿದು, ಆಸಿಡ್ ಹಾಕೋದರವರೆಗೆ, ಹೊಲಸು ಪದಗಳನ್ನು ಬಳಸಿ ಮಾತನಾಡೋದು, ಡ್ರಗ್ಸ್ ಬೆಳೆಯೋದು, ತರಿಸಿಕೊಳ್ಳೋದು, ಬಳಸೋದು ಎಲ್ಲವನ್ನೂ ತೋರಿಸ್ತಾರೆ.
ದೂರದರ್ಶನ ಎಂಬೋದು ಈವಾಗಿನ ದಿನಗಳಲ್ಲಿ ತೀರಾ ಬೇಸಿಕ್. ಅದಕ್ಕೂ ಮೀರಿದ ದೊಡ್ಡಪ್ಪಗಳು ತುಂಬಾ ಇವೆ. ಆಂಡ್ರಾಯಿಡ್ ಟಚ್ ಸ್ಕ್ರೀನ್ ಮೊಬೈಲ್ ಗಳು. ಟಚ್ ಮಾಡಿದರೆ ಸಾಕು, ಬೇಕಾದ್ದೆಲ್ಲ ಬೆರಳಲ್ಲೇ.
ಸಿಕ್ಕ ಸಿಕ್ಕ ಹುಡುಗ ಹುಡುಗಿಯರ ಜೊತೆ, ಮಾತು, ಕಥೆ, ಲಲ್ಲಾಟ ಚೆಲ್ಲಾಟ ಎಲ್ಲವೂ.. ವಾಟ್ಸಪ್ ನಲ್ಲಿ, ಇತರರಿಗೆ ಸಾಕ್ಷಿ ಉಳಿಯಬಾರದೆಂದರೆ, ಇನ್ಸ್ಟಾಗ್ರಾಮ್, ಸ್ನ್ಯಾಪ್ ಚಾಟ್, ಟೆಲಿಗ್ರಾಂ, ಫೇಸ್ಬುಕ್… ಹೀಗೆ ಇನ್ನು ಏನೇನು ಇವೆಯೋ ಬಲ್ಲವರಾರು. ಆ ತರಹದ ವಿಷಯಗಳಲ್ಲಿ ಅವರು ಪಿ ಹೆಚ್ ಡಿ ಮಾಡಿಬಿಟ್ಟಿರುತ್ತಾರೆ. ಪೋಷಕರಿಗೆ ಕಾಡಿ ಬೇಡಿ ತೆಗೆಸಿಕೊಂಡ ಫೋನ್, ಗಾಡಿ. ಇವೆರಡು ಇದ್ದ ಮೇಲೆ ಬೇರೇನು ಬೇಕು? ‘ಅಂಗೈಲೆ ಪ್ರಪಂಚ’ ಒಬ್ಬರಿಗೆ ಉಪಾಯ ಹೇಳಿಕೊಡಲು ಒಂದು ಫ್ರೆಂಡ್, ಮತ್ತೊಬ್ಬರಿಗೆ ಐಡಿಯಾ ಹೇಳಿಕೊಡಲು ಮತ್ತೊಂದು ಪ್ರೆಂಡ್. ಆಯ್ತಲ್ಲ ಅಲ್ಲಿಗೆ ‘ಹಾಗಲಿಕಾಯಿಗೆ ಬೇವಿನಕಾಯಿ ಸಾಕ್ಷಿ’.
ಇರುವುದೊಂದೋ ಎರಡೋ ಮಕ್ಕಳು. ಗಂಡ ಹೆಂಡತಿ ಇಬ್ಬರೂ ದುಡಿಯುವುದು ಮಕ್ಕಳ ಐಷಾರಾಮಿ ಜೀವನಕ್ಕೆ. ಕಷ್ಟದ ಕಷ್ಟ ಗೊತ್ತಿಲ್ಲ, ನಿಜವಾದ ಸುಖದ ಅರ್ಥವೂ ತಿಳಿದಿಲ್ಲ. ಕ್ಷಣಿಕ ಆಕರ್ಷಣೆಯ ಗುಂಗಿನಲ್ಲಿ ಗುಲಾಮರಾದ ಮಕ್ಕಳಿಗೆ, ಬೇರೆ ಪ್ರಪಂಚ ಎಲ್ಲಿ ಕಾಣಿಸೀತು. ಮತ್ತೊಂದು ಮುಖ್ಯ ವಿಷಯವೆಂದರೇ ಇವಾಗ ಹಣದ ಬವಣೆಯೂ ಇಲ್ಲ. ಈಗೆಂದರೆ ಈಗ ದುಡಿದು ನಾಲ್ಕು ಕಾಸು ಸಂಪಾದನೆ ಮಾಡಿ ಸಧ್ಯದ ಬವಣೆ ತೀರುವಷ್ಟು ಹಣ ಸಂಪಾದಿಸುವ ನೂರಾರು ದಾರಿಗಳಿವೆ. ಕಂಪ್ಯೂಟರ್ ಅಥವಾ ಫೋನಿನ ಮೇಲೆ ಜಸ್ಟ್ ಒಂದು ಟಚ್ ಮಾಡಿದರೆ, ತಮಗೆ ಬೇಕಾದ ಎಲ್ಲಾ ಮಾಹಿತಿ, ದಾರಿಗಳು ಸಿಗಬೇಕಾದರೆ, ಅವನ್ನೆಲ್ಲ ದಕ್ಕಿಸಿಕೊಳ್ಳಬಲ್ಲ ಅವರು ಇನ್ನಾವ ಶಿಕ್ಷಕರಿಗೆ, ಪೋಷಕರಿಗೆ ಅಥವಾ ಸಮಾಜಕ್ಕೆ ಹೆದರಿಯಾರು? ಕೆಟ್ಟುಹೋದ ಒಂದೇ ಒಂದು ಟಮೋಟ ಜೊತೆ ಇದ್ದ ಉಳಿದ ಟಮೋಟಗಳೂ ಸಹ ಕೆಡುತ್ತಾ ಹೋಗುವಂತೆ, ಸ್ನೇಹಿತರನ್ನೂ ಕೆಡಿಸುತ್ತಾ ಹೋಗುತ್ತಾರೆ.
ನೈತಿಕ ಮೌಲ್ಯವೇ? ಹಾಗೆಂದರೇನು ಎಂದು ಕೇಳುವಂತೆ ಈ ಸಾಮಾಜಿಕ ಜಾಲತಾಣಗಳು ಯುವ ಪೀಳಿಗೆಯನ್ನು ಕೆಡಿಸಿ, ತಮ್ಮ ಗುಲಾಮರನ್ನಾಗಿ ಮಾಡಿಕೊಂಡುಬಿಟ್ಟಿವೆ ಎಂಬುದೇ ಶೋಷನಿಯ ಸಂಗತಿ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 06, 2026

ಬಸವನಾಡಿನ ಸಾಧಕ ಮಿಥುನ ಸುಸಲಾದಿ

ಬೇಡಿಕೆ ಈಡೇರಿಕೆಗೆ ಜಮಖಂಡಿಯಲ್ಲಿ ರೈತರ ಪ್ರತಿಭಟನೆ

5E ಮಾದರಿ ಪಾಠ ಯೋಜನೆ ಕಾರ್ಯಗಾರಕ್ಕೆ ಚಾಲನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 06, 2026
    In ದಿನಪತ್ರಿಕೆ
  • ಬಸವನಾಡಿನ ಸಾಧಕ ಮಿಥುನ ಸುಸಲಾದಿ
    In (ರಾಜ್ಯ ) ಜಿಲ್ಲೆ
  • ಬೇಡಿಕೆ ಈಡೇರಿಕೆಗೆ ಜಮಖಂಡಿಯಲ್ಲಿ ರೈತರ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • 5E ಮಾದರಿ ಪಾಠ ಯೋಜನೆ ಕಾರ್ಯಗಾರಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಗೋವುಗಳ ಸಾಗಾಟಕ್ಕೆ ತಡೆ: ವಾಹನ ವಶಕ್ಕೆ ಪಡೆದ ಪೊಲೀಸರು
    In (ರಾಜ್ಯ ) ಜಿಲ್ಲೆ
  • ರಾಜೀನಾಮೆ ಹಿಂಪಡೆದ ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ದಲಿತರ ಮೇಲಿನ ದೌರ್ಜನ್ಯ ತಡೆಯಲು ಅಪ್ಪುರಾಜ್ ಆಗ್ರಹ
    In (ರಾಜ್ಯ ) ಜಿಲ್ಲೆ
  • ಆ.೮ ರಂದು ವಿಜಯಪುರದಲ್ಲಿ ಕ್ರಿಯೋಸ್ಫಿಯರ್ ಶೃಂಗಸಭೆ
    In (ರಾಜ್ಯ ) ಜಿಲ್ಲೆ
  • ನಿಡಗುಂದಿ ತಾಲ್ಲೂಕಿನ ಶಾಲೆಗಳಿಗೆ ೧೫,೦೦೦ ನೋಟ್‌ಬುಕ್ ವಿತರಣೆ
    In (ರಾಜ್ಯ ) ಜಿಲ್ಲೆ
  • ಅಂಗನವಾಡಿಗಳಲ್ಲಿ ಕ್ಷೀಣಿಸುತ್ತಿರುವ ಮಕ್ಕಳ ಸಂಖ್ಯೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.