Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಿ.೬ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ರಾಣಿ ಚೆನ್ನಮ್ಮ ವಿವಿ: ಎಂಸಿಎ ಕೋರ್ಸಿಗೆ ಪ್ರವೇಶಾತಿ

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ಶಿಷ್ಯವೇತನ ಕ್ಕಾಗಿ ಅರ್ಜಿ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮತ್ತಷ್ಟು ಉಕ್ಕೇರಿದ ಭೀಮಾ ನದಿ ಪ್ರವಾಹ :ನೆರೆ ಭೀತಿ
(ರಾಜ್ಯ ) ಜಿಲ್ಲೆ

ಮತ್ತಷ್ಟು ಉಕ್ಕೇರಿದ ಭೀಮಾ ನದಿ ಪ್ರವಾಹ :ನೆರೆ ಭೀತಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ಕಳೆದ ನಾಲ್ಕೈದು ದಿನಗಳಿಂದ ಏರು ಮಟ್ಟದಲ್ಲಿ ಸಾಗುತ್ತಿರುವ ಭೀಮಾನದಿಯ ಪ್ರವಾಹ ಪರಿಸ್ಥಿತಿ ಇಂದು ಮತ್ತಷ್ಟು ರುದ್ರ ರೂಪ ತಾಳಿದೆ
ಗುರುವಾರ ಬೆಳಿಗ್ಗೆಯಿಂದಲೇ ಏರುತ್ತಾ ಸಾಗಿರುವ ನೀರಿನ ಮಟ್ಟ ಸಾಯಂಕಾಲದವರೆಗೂ ಇರುತ್ತಲೇ ಇತ್ತು. ಇಂದು ನದಿಯ ರುದ್ರಾವತಾರ ಹೆಚ್ಚಾಗಿತ್ತು. ಎಲ್ಲೆಂದರಲ್ಲಿ ತಗ್ಗು ಪ್ರದೇಶಗಳಿಗೆ ನುಗುವ ಮೂಲಕ ಬೆಳೆಗಳಲ್ಲಿ ನುಗ್ಗಿ ಅವಾಂತರ ಸೃಷ್ಟಿಸಿದೆ ಗ್ರಾಮಗಳ ಅಂಚಿನಲ್ಲಿರುವ ಮನೆಗಳಲ್ಲಿ ನುಗ್ಗಿ ಜನರನ್ನು ನಿರಾಶ್ರಿತರನ್ನಾಗಿ ಮಾಡಿದೆ.
ಬುಧವಾರ ದಿವಸ 2 ಲಕ್ಷ 90 ಸಾವಿರ ಕ್ಯೂಸೆಕ್ಸ್ ಇದ್ದ ನೀರಿನ ಹರಿವಿನ ಪ್ರಮಾಣ ರಾತ್ರಿ ಇಡಿ ಏರು ಮಟ್ಟದಲ್ಲಿ ಸಾಗಿ ಗುರುವಾರ ಇಡೀ ದಿವಸ ಏರು ಮಟ್ಟದಲ್ಲಿಯೇ ಸಾಗಿದೆ
ಗುರುವಾರ ದಿವಸ ದೇವಣಗಾಂವ ಸಮೀಪದ ಸೊನ್ನ ಬ್ಯಾರೇಜ್ ನಲ್ಲಿ 3 ಲಕ್ಷ 50 ಸಾವಿರ ಒಳಹರಿವು ಮತ್ತು28 ಗೇಟ್ ಗಳ ಮೂಲಕ ಅಷ್ಟೇ ಪ್ರಮಾಣದ ಹೊರಹರಿವು ಇದೆ ಎಂದು ಅಫಜಲಪುರದ ಕೆಎನ್ಎನ್ಎಲ್ ಎ ಇ ಇ ಸಂತೋಷ ಕುಮಾರ ಸಜ್ಜನ ತಿಳಿಸಿದ್ದಾರೆ
ಕರ್ನಾಟಕದಲ್ಲಿ ಎರಡು ದಿನಗಳಿಂದ ಮಳೆಯ ಪ್ರಮಾಣ ತಗ್ಗಿದೆ ಮಹಾರಾಷ್ಟ್ರದಲ್ಲಿಯೂ ಕಡಿಮೆಯಾಗಿದೆ ಎಂಬ ಮಾಹಿತಿ ಇದೆ, ಆದ್ದರಿಂದ ನಾಳೆಯಿಂದ ನೀರು ಹರಿವಿನ ಪ್ರಮಾಣದಲ್ಲಿ ಸ್ವಲ್ಪ ಕಡಿಮೆಯಾಗಬಹುದು ಎಂದು ಅವರು ತಿಳಿಸಿದ್ದಾರೆ
ದಿನವಿಡೀ ಏರು ಮಟ್ಟದಲ್ಲಿ ಸಾಗಿದ್ದರಿಂದ ಗ್ರಾಮದ ಅಂಚಿನಲ್ಲಿರುವ ಮನೆಗಳ ಜನರು ತಮ್ಮ ತಮ್ಮ ಸಾಮಾನು ಸರಂಜಾಮುಗಳನ್ನು ಸುರಕ್ಷಿತ ಸ್ಥಳಗಳಿಗೆ ತೆಗೆದುಕೊಂಡು ಹೋಗುತ್ತಿರುವುದು ಕಂಡುಬಂದಿವೆ
ತಾರಾಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಗೆ ನೀರು ತುಂಬಿರುವ ಪರಿಣಾಮ ಸಂಪೂರ್ಣ ನಡುಗಟ್ಟೇಯಾಗಿ ಮಾರ್ಪಡಾಆಗಿತ್ತು.
ಕಡ್ಲೆವಾಡ, ಶಂಬೆವಾಡ, ತಾವರಖೇಡ, ಬ್ಯಾಡಗಿಹಾಳ ಗ್ರಾಮಗಳ ಮುಖ್ಯರಸ್ತೆಯ ಮೇಲೆ ಬಹಳಷ್ಟು ನೀರು ನುಗ್ಗಿರುವುದರಿಂದ ಸಂಪರ್ಕ ಕಡಿತಗೊಂಡಿದೆ
ದೇವಣಗಾಂವ ಗ್ರಾಮದಲ್ಲಿ ಹನುಮಾನ್ ದೇವಸ್ಥಾನ, ಅಂಬಿಗರ ಚೌಡಯ್ಯ ದೇವಸ್ಥಾನ, ಶಾಂತೇಶ್ವರ ದೇವಸ್ಥಾನ ಸೇರಿದಂತೆ ಅನೇಕ ಮನೆಗಳು ನೀರಿನಲ್ಲಿ ಮುಳುಗಿವೆ.
ದೇವಣಗಾಂವ ಆಲಮೇಲ ರಸ್ತೆ ಸಂಪರ್ಕಿಸುವ ಮುಖ್ಯರಸ್ತೆಯ ಪಕ್ಕದಲ್ಲಿ ನೀರು ಎರಡು ಬದಿಗೆ ತುಂಬಿ ನಿಂತಿದ್ದು ಒಂದು ಅರ್ಧ ಅಡಿ ಎಷ್ಟು ನೀರು ಹೆಚ್ಚಾದರೆ ಸಾಕು ರಾಜ್ಯ ಹೆದ್ದಾರಿಯ ಕಲಬುರಗಿ ವಿಜಯಪುರ ಮುಖ್ಯ ರಸ್ತೆ ಸಂಪರ್ಕ ಕಡಿತಗೊಳ್ಳುವ ಭೀತಿ ಎದುರಾಗಿದೆ.
ಕುಮಸಗಿ ಗ್ರಾಮದ ಅಂಚಿನಲ್ಲಿರುವ ಮನೆಗಳಿಗೆ ನೀರು ನುಗ್ಗಿವೆ.
ಫೋಟೋದ ವಸ್ತುಗಳಲ್ಲಿರುವ ಜನರ ಬದುಕು ಅಯೋಮಯವಾಗಿದೆ
ತಗ್ಗು ಹಾಗೂ ಹಳ್ಳ ಪ್ರದೇಶಗಳಲ್ಲಿ ಎಲ್ಲೆಂದರಲ್ಲಿ ನೀರು ನುಗ್ಗಿ ಹತ್ತಿ ತೊಗರಿ ಕಬ್ಬು ಬೆಳೆಗಳು ನೀರಿನಲ್ಲಿ ನಿಂತಿವೆ.
ಭೀಮಾ ತೀರದ ಆಲಮೇಲ ತಾಲೂಕಿನ ಗ್ರಾಮಗಳಾದ ಕಡಣಿ,ಕುರುಬತಹಳ್ಳಿ ,ಮಡ್ನಳ್ಳಿ, ಬಗಲೂರ, ಚಿಕ್ಕಹಾವಳಗಿ, ಕಕ್ಕಳಮೇಲಿ, ಶಿರಸಗಿ, ಕುಳೆಕುಮಟಗಿ ಸೇರಿದಂತೆ ಅನೇಕ ಗ್ರಾಮಗಳ ಜನರ ಜಮೀನುಗಳಲ್ಲಿ ನೀರು ನುಗ್ಗಿದ್ದು ಬೆಳೆಗಳು ಆಹುತಿಯಾಗಿವೆ.

ಆಲಮೇಲ ತಹಶೀಲ್ದಾರ್ ಧನಪಾಲ ಶೆಟ್ಟಿ ಪ್ರವಾಪಿಡಿತ ಸ್ಥಳಗಳಿಗೆ ಭೇಟಿ ನೀಡಿ ಸಂತ್ರಸ್ತರಲ್ಲಿ ಧೈರ್ಯ ತುಂಬಿದರು. ದೇವಣಗಾಂವ ಪಿಡಿಒ ಸಂಜೀವಕುಮಾರ ದೊಡ್ಡಮನಿ, ಗ್ರಾಮ ಲೆಕ್ಕಾಧಿಕಾರಿ ಎಂ ಕೆ ಪೂಜಾರಿ ಇದ್ದ

“ದೇವಣಗಾಂವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ದೇವಣಗಾಂವ, ಬ್ಯಾಡಗಿಹಾಳ, ಕುರುಬತಹಳ್ಳಿ, ಶಂಭೇವಾಡ , ಕಡ್ಲೆವಾಡ ಗ್ರಾಮಗಳಲ್ಲಿ ನದಿತೀರದ ಅಂಚಿನಲ್ಲಿರುವ ಕುಟುಂಬಗಳಿಗೆ ಭೇಟಿ ನೀಡಿ ಸುರಕ್ಷಿತವಾಗಿರುವಂತೆ ತಿಳಿಸಿದ್ದೇನೆ. ಅಲ್ಲದೆ ಅಗತ್ಯ ಬಿದ್ದರೆ ಕಾಳಜಿ ಕೇಂದ್ರ ತೆರೆಯುವ ಎಲ್ಲ ವ್ಯವಸ್ಥೆಯನ್ನು ಮಾಡಿಕೊಂಡಿದ್ದೇವೆ. ಎರಡು ದಿನಗಳಿಂದ ಮಳೆ ಕಡಿಮೆಯಾಗಿದ್ದು ಪ್ರವಾಹ ಕಡಿಮೆಯಾಗಬಹುದು, ಎಲ್ಲರೂ ಧೈರ್ಯದಿಂದ ಇರಬೇಕು. ನಾವು ತಮ್ಮ ಜೊತೆಗಿದ್ದೇವೆ ಎಂದು ಧೈರ್ಯ ತುಂಬಿದ್ದೇನೆ.”

– ಸಂಜೀವಕುಮಾರ ದೊಡ್ಡಮನಿ
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಿ.೬ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ರಾಣಿ ಚೆನ್ನಮ್ಮ ವಿವಿ: ಎಂಸಿಎ ಕೋರ್ಸಿಗೆ ಪ್ರವೇಶಾತಿ

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ಶಿಷ್ಯವೇತನ ಕ್ಕಾಗಿ ಅರ್ಜಿ ಆಹ್ವಾನ

ಡಿ.೭ ರಂದು ಸಾರ್ವಜನಿಕ ರಸ್ತೆ ಸಂಚಾರ ಮಾರ್ಗ ಬದಲಾವಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಿ.೬ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ರಾಣಿ ಚೆನ್ನಮ್ಮ ವಿವಿ: ಎಂಸಿಎ ಕೋರ್ಸಿಗೆ ಪ್ರವೇಶಾತಿ
    In (ರಾಜ್ಯ ) ಜಿಲ್ಲೆ
  • ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ಶಿಷ್ಯವೇತನ ಕ್ಕಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಡಿ.೭ ರಂದು ಸಾರ್ವಜನಿಕ ರಸ್ತೆ ಸಂಚಾರ ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಭೈರವಾಡಗಿ ಪಿಕೆಪಿಎಸ್ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ: ರೈತರಲ್ಲಿ ಆತಂಕ ತಂದ ಅಕಾಲಿಕ ಮಳೆ
    In (ರಾಜ್ಯ ) ಜಿಲ್ಲೆ
  • ಗೋವಿನ ಜೋಳ & ತೊಗರಿ ಖರೀದಿ ಕೇಂದ್ರ ತೆರೆಯಲು ಮನವಿ
    In (ರಾಜ್ಯ ) ಜಿಲ್ಲೆ
  • ಕೃತಜ್ಞತೆಯ ಅರಿವು
    In ವಿಶೇಷ ಲೇಖನ
  • ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರಕಾರ್ಮಿಕರ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರದ ನಿರ್ದೇಶನದಂತೆ ನಡೆಯದ ಜಲಧಾರೆ ಕಾಮಗಾರಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.