Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಿ.೬ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ರಾಣಿ ಚೆನ್ನಮ್ಮ ವಿವಿ: ಎಂಸಿಎ ಕೋರ್ಸಿಗೆ ಪ್ರವೇಶಾತಿ

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ಶಿಷ್ಯವೇತನ ಕ್ಕಾಗಿ ಅರ್ಜಿ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಉದ್ಯೋಗ ಮೇಳ: 600 ಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಭಾಗಿ
(ರಾಜ್ಯ ) ಜಿಲ್ಲೆ

ಉದ್ಯೋಗ ಮೇಳ: 600 ಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಭಾಗಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿಶ್ವಶ್ರೇಷ್ಠ ಕಂಪನಿಗಳಲ್ಲಿ ಉತ್ತರ ಕರ್ನಾಟಕದ ಎಂಜಿನಿಯರಿಂಗ್ ಪದವೀಧರರಿಗೆ ಅವಕಾಶ ಒದಗಿಸಲು ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ರಜಿಸ್ಟ್ರಾರ್ ಡಾ. ರಾಘವೇಂದ್ರ ಕುಲಕರ್ಣಿ ಹೇಳಿದ್ದಾರೆ.
ಶುಕ್ರವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಐಫೋನ್ ತಯಾರಿಸುವ ಅಂತಾರಾಷ್ಟ್ರೀಯ ದೈತ್ಯ ಕಂಪನಿ ಫಾಕ್ಸ್‌ಕಾನ್-ಹಾನ್ ಹೈ ಟೆಕ್ನಾಲಜಿ ಕಂಪನಿ 2024 ಮತ್ತು 2025ನೇ ಶೈಕ್ಷಣಿಕ ವರ್ಷದಲ್ಲಿ ಬಿ.ಇ ಮತ್ತು ಡಿಪ್ಲೊಮಾ ಕೋರ್ಸುಗಳಲ್ಲಿ ಮೆಕ್ಯಾನಿಕಲ್, ಎಲೇಕ್ಟ್ರಾನಿಕ್ಸ್ ಕಮ್ಯೂನಿಕೇಶನ್ ಮತ್ತು ಎಲೇಕ್ಟ್ರಾನಿಕ್ಸ್ ಎಲೆಕ್ಟ್ರೀಕಲ್ಸ್ ವಿಭಾಗಗಳಲ್ಲಿ ಉತ್ತೀರ್ಣರಾದ ವಿಜಯಪುರ, ಬಾಗಲಕೋಟೆ, ಬೆಳಗಾವಿ ಹಾಗೂ ಕಲಬುರಗಿ ಜಿಲ್ಲೆಗಳ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ ಪಾಲ್ಗೋಂಡು ಅವರು ಮಾತನಾಡಿದರು.
ಉತ್ತರ ಕರ್ನಾಟಕದ ಎಂಜಿನಿಯರಿಂಗ್ ಪದವಿಧರರು ಅಂತಾರಾಷ್ಟ್ರೀಯ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ಪಡೆಯಬೇಕು ಎಂಬುದು ಕೈಗಾರಿಕೆ, ಮೂಲಸೌಲಭ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಕನಸಾಗಿದೆ. ಅವರ ಪ್ರಯತ್ನದ ಫಲವಾಗಿ ಈಗ ಫಾಕ್ಸಕಾನ್ ಕಂಪನಿ ಅಧಿಕಾರಿಗಳು ಇಲ್ಲಿಗೆ ಬಂದು ಉದ್ಯೋಗ ಮೇಳ ನಡೆಸಿದ್ದಾರೆ. ಅಲ್ಲದೇ, ಬಿ.ಎಲ್.ಡಿ.ಇ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಪಡೆಯುವ ಯುವಕರಿಗೆ ನಾನಾ ಕಂಪನಿಗಳಲ್ಲಿ ಉದ್ಯೋಗಾವಕಾಶ ಕಲ್ಪಿಸಲಾಗುತ್ತಿದೆ. ಈ ಭಾಗದಲ್ಲಿ ಸಾಕಷ್ಟು ಜನ ಪ್ರತಿಭಾವಂತ ಮತ್ತು ಅರ್ಹ ಪದವಿಧರ ಯುವಕರಿದ್ದಾರೆ. ಈ ಯುವಕರಿಗೆ ಸೂಕ್ತ ಮಾರ್ಗದರ್ಶನ ಮಾಡುವ ಮೂಲಕ ಉದ್ಯೋಗ ಪಡೆಯಲು ಉತ್ತಮ ವಾತಾವರಣ ಸೃಷ್ಠಿಸಲಾಗುತ್ತಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಸುಮಾರು ರೂ. 10 ಲಕ್ಷ ಕೋ. ಬಂಡವಾಳ ಹೂಡಿಕೆ ಮಾಡಲು ಒಪ್ಪಂದವಾಗಿದೆ. ಇದರಲ್ಲಿ ಶೇ. 70ಕ್ಕೂ ಹೆಚ್ಚು ಕಂಪನಿಗಳು ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಹೂಡಿಕೆ ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ಸಚಿವ ಎಂ. ಬಿ. ಪಾಟೀಲ ಅವರ ದೂರದೃಷ್ಠಿಯ ಫಲವಾಗಿ ಈ ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಈ ಬೃಹತ್ ಉದ್ಯೋಗ ಮೇಳದಲ್ಲಿ 600 ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಫಾಕ್ಸ್‌ ಕಾನ್ ಕಂಪನಿಯ ಹಿರಿಯ ಕಾರ್ಯ ನಿರ್ವಾಹಕರಾದ ಸತೀಶಕುಮಾರ ಆರ್., ಗುಡೂರು ವೆಂಕಟೇಶಸ ಕಾರ್ಯ ನಿರ್ವಾಹಕ ಪೃಥ್ವಿಕುಮಾರ ಬಿ. ಕೆ. ಹಾಗೂ ಮತ್ತು ಮಾನವ ಸಂಪನ್ಮೂಲ ವಿಭಾಗದ ಅಧಿಕಾರಿಗಳು, ಕಾಲೇಜಿನ ಉದ್ಯೋಗಾಧಿಕಾರಿ ಪ್ರೊ. ಪ್ರಶಾಂತ ಪಾಟೀಲ ಮತ್ತು ಅವರ ತಂಡ, ಡಾ. ಲೀನಾ ರಾಘಾ, ಡಾ. ಪ್ರದೀಪ ಮಾಳಜಿ ಮತ್ತು ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯ ಪ್ರೊ. ಪ್ರಭುದೇವ ಕಳಸಗೊಂಡ ಉಪಸ್ಥಿತರಿದ್ದರು.
ಕಾಲೇಜಿನ ನಿರ್ದೇಶಕ ಡಾ. ವಿ. ಜಿ. ಸಂಗಮ ಸ್ವಾಗತಿಸಿದರು. ಪ್ರಾಚಾರ್ಯ ಡಾ. ಮಂಜುನಾಥ ಪಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಅನುರಾಧಾ ಟಂಕಸಾಲಿ ನಿರೂಪಿಸಿದರು. ಡಾ. ಲೀನಾ ರಾಘಾ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಿ.೬ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ರಾಣಿ ಚೆನ್ನಮ್ಮ ವಿವಿ: ಎಂಸಿಎ ಕೋರ್ಸಿಗೆ ಪ್ರವೇಶಾತಿ

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ಶಿಷ್ಯವೇತನ ಕ್ಕಾಗಿ ಅರ್ಜಿ ಆಹ್ವಾನ

ಡಿ.೭ ರಂದು ಸಾರ್ವಜನಿಕ ರಸ್ತೆ ಸಂಚಾರ ಮಾರ್ಗ ಬದಲಾವಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಿ.೬ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ರಾಣಿ ಚೆನ್ನಮ್ಮ ವಿವಿ: ಎಂಸಿಎ ಕೋರ್ಸಿಗೆ ಪ್ರವೇಶಾತಿ
    In (ರಾಜ್ಯ ) ಜಿಲ್ಲೆ
  • ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ಶಿಷ್ಯವೇತನ ಕ್ಕಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಡಿ.೭ ರಂದು ಸಾರ್ವಜನಿಕ ರಸ್ತೆ ಸಂಚಾರ ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಭೈರವಾಡಗಿ ಪಿಕೆಪಿಎಸ್ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ: ರೈತರಲ್ಲಿ ಆತಂಕ ತಂದ ಅಕಾಲಿಕ ಮಳೆ
    In (ರಾಜ್ಯ ) ಜಿಲ್ಲೆ
  • ಗೋವಿನ ಜೋಳ & ತೊಗರಿ ಖರೀದಿ ಕೇಂದ್ರ ತೆರೆಯಲು ಮನವಿ
    In (ರಾಜ್ಯ ) ಜಿಲ್ಲೆ
  • ಕೃತಜ್ಞತೆಯ ಅರಿವು
    In ವಿಶೇಷ ಲೇಖನ
  • ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರಕಾರ್ಮಿಕರ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರದ ನಿರ್ದೇಶನದಂತೆ ನಡೆಯದ ಜಲಧಾರೆ ಕಾಮಗಾರಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.