Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಿ.೬ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ರಾಣಿ ಚೆನ್ನಮ್ಮ ವಿವಿ: ಎಂಸಿಎ ಕೋರ್ಸಿಗೆ ಪ್ರವೇಶಾತಿ

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ಶಿಷ್ಯವೇತನ ಕ್ಕಾಗಿ ಅರ್ಜಿ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮನುಕುಲಕ್ಕೆ ವರದಾನವಾಗಿರುವ ವೈದ್ಯರು :ಸುನೀಲಗೌಡ
(ರಾಜ್ಯ ) ಜಿಲ್ಲೆ

ಮನುಕುಲಕ್ಕೆ ವರದಾನವಾಗಿರುವ ವೈದ್ಯರು :ಸುನೀಲಗೌಡ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕಾಯಿಲೆಗಳನ್ನು ಗುಣಪಡಿಸಿ ನೋವುಗಳಿಂದ ಮುಕ್ತರನ್ನಾಗಿ ಮಾಡುವ ವೈದ್ಯರನ್ನು ದೇವರು ಮನುಕುಲಕ್ಕೆ ವರದಾನವಾಗಿ ನೀಡಿದ್ದಾನೆ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.
ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರ ಆಯೋಜಿಸಿದ್ದ ಹಿರಿಯ ಪ್ರಾಧ್ಯಾಪಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದೇವರು ಮಾನವನಿಗೆ ಆರೋಗ್ಯವೆಂಬ ಅಮೂಲ್ಯ ಸಂಪತ್ತನ್ನು ನೀಡಿದ್ದಾನೆ. ಈ ಸಂಪತ್ತನ್ನು ಬಾಧಿಸುವ ರೋಗಗಳನ್ನು ಗುಣಪಡಿಸಲು ವೈದ್ಯರ ರೂಪದಲ್ಲಿ ವರವನ್ನೂ ಕೊಟ್ಟಿದ್ದಾನೆ. ಕೊರೊನಾ ಸಂಕಷ್ಟ ಸಂದರ್ಭದಲ್ಲಂತೂ ವೈದ್ಯರು ತಮ್ಮ ಕುಟುಂಬಗಳನ್ನೂ ಲೆಕ್ಕಿಸದೇ ರೋಗಿಗಳಿಗೆ ನೀಡಿರುವ ಸೇವೆ ಸದಾ ಸ್ಮರಣೀಯವಾಗಿದೆ ಎಂದು ಅವರು ಹೇಳಿದರು.
ಬಿ.ಎಲ್.ಡಿ.ಇ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರ ಇಂದು ಹೆಮ್ಮರವಾಗಿ ಬೆಳೆಯಲು ಸಂಸ್ಥೆಯನ್ನು ಕಟ್ಟಿ ಬೆಳೆಸಿದ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ, ಬಂಥನಾಳ ಶ್ರೀಗಳು, ಶ್ರೀಮತಿ ಬಂಗಾರಮ್ಮ ಸಜ್ಜನ, ಬಿ. ಎಂ. ಪಾಟೀಲ ಹಾಗೂ ಇಂದಿನ ಅಧ್ಯಕ್ಷ ಎಂ. ಬಿ.ಪಾಟೀಲ ಅವರು ವಾರ್ಗದರ್ಶನ ಮತ್ತು ಹಿಂದಿನ ಹಾಗೂ ಇಂದಿನ ವೈದ್ಯರ ಸೇವೆ ಪ್ರಮುಖ ಕಾರಣವಾಗಿದೆ. ಇಲ್ಲಿನ ವೈದ್ಯರ ಸಮರ್ಪಣೆ ಭಾವನೆಯಿಂದಾಗಿ ಬಸವನಾಡಿನ ಆರೋಗ್ಯ ಸೇವೆಗಳಿಗಾಗಿ ನೆರೆಯ ಮಹಾರಾಷ್ಟ್ರಕ್ಕೆ ಅಲೆದಾಡುವುದು ತಪ್ಪಿದೆ. ವಿಜಯಪುರ ಈಗ ಆರೋಗ್ಯ ಸೇವೆಗಳ ಹಬ್ ಆಗಿದೆ. ಮಹಿಳೆಯರಿಗೆ ಉಚಿತ ಹೆರಿಗೆ, ತಾಯಿ ಎದೆಹಾಲು ಬ್ಯಾಂಕ್, ಸರಕಾರಿ ಆರೋಗ್ಯ ವಿಮೆ ಸೇವೆಗಳಿಂದಾಗಿ ಈ ಬಾರಿ ಎಂ.ಬಿ.ಬಿ.ಎಸ್ ಕೋರ್ಸಿಗೆ 50 ಹೆಚ್ಚುವರಿಯಾಗಿ ಸೀಟುಗಳು ಲಭ್ಯವಾಗಿವೆ. ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಡೀಮ್ಡ್ ವಿವಿ ದೇಶದ ಟಾಪ್ 10 ಸಂಸ್ಥೆಗಳಲ್ಲಿ ಒಂದು ಎಂದು ಸ್ಥಾನ ಪಡೆದಿವೆ. ಇದು ಎಲ್ಲರಿಗೂ ಹೆಮ್ಮೆಯ ವಿಷಯ ಎಂದು ಅವರು ಹೇಳಿದರು.
ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಮಾತನಾಡಿ, ಬಿ.ಎಲ್.ಡಿ.ಇ ಸಂಸ್ಥೆಯ ವ್ಯಾಪ್ತಿ ಈಗ ದೇಶಕ್ಕೆ ವಿಸ್ತರಿಸಿದೆ. ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ, ಡೀಮ್ಡ್ ವಿವಿ ಕುಲಾಧಿಪತಿ ಬಿ. ಎಂ. ಪಾಟೀಲ, ಪ್ರಧಾನ ಕಾರ್ಯದರ್ಶಿ ಸುನೀಲಗೌಡ ಪಾಟೀಲ ಅವರ ದೂರದೃಷ್ಠಿಯ ಫಲವಾಗಿ ಉತ್ತರೋತ್ತರವಾಗಿ ಅಭಿವೃದ್ಧಿಯಾಗುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಹಿರಿಯ ವೈದ್ಯರು ಮತ್ತು ಪ್ರಾಧ್ಯಾಪಕರಾದ ಡಾ. ಆರ್. ಸಿ. ಬಿದರಿ, ಡಾ. ತೇಜಶ್ವಿನಿ ವಲ್ಲಭ, ಡಾ. ಎಸ್. ಎಸ್. ದೇವರಮನಿ, ಡಾ. ವಿಜಯಕುಮರಾ ಟಿ. ಕಲ್ಯಾಣಪ್ಪಗೋಳ, ಡಾ. ಶೈಲಜಾ ಬಿದರಿ, ಡಾ. ಎಸ್. ಎನ್. ಬೆಂತೂರ, ಡಾ. ಎಸ್. ಆರ್. ಮುದನೂರ, ಡಾ. ಎಂ. ಎಸ್. ಮೂಲಿಮನಿ, ಡಾ. ಕುಸಾಲ ಕೆ. ದಾಸ, ಡಾ. ವಲ್ಲಭ, ಡಾ. ಎಸ್. ಪಿ. ಚೌಕಿಮಠ, ಡಾ. ಅಶೋಕ ನಾಯಕ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ, ಆಯುರ್ವೇದ ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ, ಕಾನೂನು ಕಾಲೇಜಿನ ಪ್ರಾಚಾರ್ಯ ರಘುವೀರ ಕುಲಕರ್ಣಿ ಸೇರಿದಂತೆ ನಾನಾ ಕಾಲೇಜುಗಳ ಪ್ರಾಚಾರ್ಯರು, ನಾನಾ ವಿಭಾಗಗಳ ಮುಖ್ಯಸ್ಥರು, ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಡೀಮ್ಡ್ ವಿವಿ ಕುಲಪತಿ ಡಾ. ಅರುಣ ಚಂ. ಇನಾಮದಾರ ಸ್ವಾಗತಿಸಿದರು. ಡಾ. ಉದಯಕುಮಾರ ಸಿ, ನುಚ್ಚಿ ಪರಿಚಯಿಸಿದರು. ಡಾ. ತನುಜಾ ಪಠನಕರ, ಡಾ. ಲತಾ ಮುಲ್ಲೂರ, ಡಾ. ಚಂದ್ರಿಕಾ ದೂಡಿಹಾಳ, ಡಾ. ಶ್ರೀಲಕ್ಷ್ಮಿ ಬಗಲಿ, ಡಾ. ಅಶ್ವಿನಿ ನುಚ್ಚಿ ನಿರೂಪಿಸಿದರು. ಡಾ. ಗಿರೀಶ ಕುಲ್ಲೊಳ್ಳಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಿ.೬ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ರಾಣಿ ಚೆನ್ನಮ್ಮ ವಿವಿ: ಎಂಸಿಎ ಕೋರ್ಸಿಗೆ ಪ್ರವೇಶಾತಿ

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ಶಿಷ್ಯವೇತನ ಕ್ಕಾಗಿ ಅರ್ಜಿ ಆಹ್ವಾನ

ಡಿ.೭ ರಂದು ಸಾರ್ವಜನಿಕ ರಸ್ತೆ ಸಂಚಾರ ಮಾರ್ಗ ಬದಲಾವಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಿ.೬ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ರಾಣಿ ಚೆನ್ನಮ್ಮ ವಿವಿ: ಎಂಸಿಎ ಕೋರ್ಸಿಗೆ ಪ್ರವೇಶಾತಿ
    In (ರಾಜ್ಯ ) ಜಿಲ್ಲೆ
  • ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ಶಿಷ್ಯವೇತನ ಕ್ಕಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಡಿ.೭ ರಂದು ಸಾರ್ವಜನಿಕ ರಸ್ತೆ ಸಂಚಾರ ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಭೈರವಾಡಗಿ ಪಿಕೆಪಿಎಸ್ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ: ರೈತರಲ್ಲಿ ಆತಂಕ ತಂದ ಅಕಾಲಿಕ ಮಳೆ
    In (ರಾಜ್ಯ ) ಜಿಲ್ಲೆ
  • ಗೋವಿನ ಜೋಳ & ತೊಗರಿ ಖರೀದಿ ಕೇಂದ್ರ ತೆರೆಯಲು ಮನವಿ
    In (ರಾಜ್ಯ ) ಜಿಲ್ಲೆ
  • ಕೃತಜ್ಞತೆಯ ಅರಿವು
    In ವಿಶೇಷ ಲೇಖನ
  • ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರಕಾರ್ಮಿಕರ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರದ ನಿರ್ದೇಶನದಂತೆ ನಡೆಯದ ಜಲಧಾರೆ ಕಾಮಗಾರಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.