Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆರೋಪಿ ಎಷ್ಟೇ ಪ್ರಭಾವಿಯಾಗಿರಲಿ ಬಂಧನ ಖಚಿತ
(ರಾಜ್ಯ ) ಜಿಲ್ಲೆ

ಆರೋಪಿ ಎಷ್ಟೇ ಪ್ರಭಾವಿಯಾಗಿರಲಿ ಬಂಧನ ಖಚಿತ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿಯಲ್ಲಿ ವಿಜಯಪುರ ಎಸ್ಪಿ ಲಕ್ಷ್ಮಣ ನಿಂಬರಗಿ ಭರವಸೆ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಬನ್ನೆಟ್ಟಿ ಪಿಎ ಗ್ರಾಮದ ಪರಿಶಿಷ್ಟ ಜಾತಿಯ ಮಹಾದೇವಪ್ಪ ಪೂಜಾರಿ (ಹರಿಜನ) ಕೊಲೆಗೆ ಸಂಬಂಧಿಸಿದಂತೆ ಆರೋಪಿ ಯಾರೆ ಆಗಿರಲಿ, ಎಷ್ಟೇ ಪ್ರಭಾವಿಯಾಗಿರಲಿ ತೀವ್ರ ಗತಿಯಲ್ಲಿ ಬಂಧಿಸಿ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ವಿಜಯಪುರ ಎಸ್ಪಿ ಲಕ್ಷ್ಮಣ ನಿಂಬರಗಿ ಭರವಸೆ ನೀಡಿದರು.
ಸಿಂದಗಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬನ್ನೆಟ್ಟಿ ಪಿಎ ಗ್ರಾಮದ ಪರಿಶಿಷ್ಟ ಜಾತಿಯ ವ್ಯಕ್ತಿಯ ಕೊಲೆ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಈಗಾಗಲೇ ಪ್ರಕರಣವು ತನಿಖೆಯ ಹಂತದಲ್ಲಿದೆ. ಹೋರಾಟಗಾರರು ಆರೋಪಿಸುತ್ತಿರುವಂತೆ ಇಲ್ಲಿ ಯಾವುದೇ ಪ್ರಭಾವಕ್ಕೆ ಒಳಗಾಗದೇ ನ್ಯಾಯ ಸಮ್ಮತವಾದ ತನಿಖೆ ನಡೆಸಲಾಗುತ್ತಿದೆ. ಮೃತ ವ್ಯಕ್ತಿಯ ಶವವು ಕೊಳೆತ ಸ್ಥಿತಿಯಲ್ಲಿ ದೊರಕಿದಾಗ ವೈಜ್ಞಾನಿಕ ಪರೀಕ್ಷೆಗೊಳಪಡಿಸಿದಾಗ ತಲೆಗೆ ಬಲವಾದ ಗಾಯ ಹಾಗೂ ಶರೀರದ ಮೇಲೂ ಗಾಯವಾಗಿರುವುದು ಗಮನಕ್ಕೆ ಬಂದಾಗ ಇದೊಂದು ಕೊಲೆ ಪ್ರಕರಣವೆಂದು ದಾಖಲಿಸಿಕೊಳ್ಳಲಾಯಿತು.
ಎಲ್ಲ ಕೊಲೆ ಪ್ರಕರಣಗಳು ಒಂದೆ ತೆರನಾಗಿ ಇರುವುದಿಲ್ಲ, ಪ್ರತಿಯೊಂದಕ್ಕೂ ವಿವಿಧ ಆಯಾಮಗಳಿರುತ್ತವೆ. ಅವುಗಳ ಆಧಾರದ ಮೇಲೆ ತನಿಖೆ ಮಾಡುವಾಗ ವಿಳಂಬವಾಗುವುದು ಸಹಜ. ನ್ಯಾಯಾಲಯ ನೀಡಿದ ದಿನಾಂಕ ಮತ್ತು ಅವಧಿಗಳು ಎಫ್‌ಎಸ್‌ಎಲ್ ವರದಿಗಳು ನೀಡಲು ತೆಗೆದುಕೊಂಡ ಕಾಲಾವಕಾಶದ ಮೇಲೆ ಒಂದು ಪ್ರಕರಣ ಇತ್ಯರ್ಥವಾಗುವ ಕಾಲಾವಕಾಶ ನಿರ್ಧಾರವಾಗುತ್ತದೆ. ಹಾಗಾಗಿ ಈ ಪ್ರಕರಣ ಒಂದು ಹಂತಕ್ಕೆ ಬರಲು ೧೫ ದಿವಸಗಳಾಗಬಹುದು ಅಥವಾ ನಾಲ್ಕಾರು ತಿಂಗಳುಗಳಷ್ಟು ಸಮಯವನ್ನಾದರು ತೆಗೆದುಕೊಳ್ಳಬಹುದು. ಹೋರಾಟ ಮಾಡಿದರೇನೆ ನ್ಯಾಯ ಸಿಗುತ್ತದೆ ಎನ್ನುವ ಭಾವನೆ ಇಟ್ಟುಕೊಳ್ಳದೇ ಪೊಲೀಸ್ ಇಲಾಖೆಯ ಮೇಲೆ ಭರವಸೆ ಇಟ್ಟು ಹೋರಾಟವನ್ನು ಹಿಂಪಡೆಯುವಂತೆ ಪ್ರತಿಭಟನಾಕಾರರಲ್ಲಿ ಮನವಿ ಮಾಡಿದರು.
ಈ ವೇಳೆ ರಾಜ್ಯ ಸಂಚಾಲಕ ರಮೇಶ ಆಸಂಗಿ, ಜಿಲ್ಲಾ ಸಂಚಾಲಕ ವಿನಾಯಕ ಗುಣಸಾಗರ, ಚಂದ್ರಕಾಂತ ಸಿಂಗೆ, ಶರಣು ಸಿಂಧೆ, ಅಶೋಕ ಛಲವಾದಿ, ಶ್ರೀನಿವಾಸ ಓಲೇಕಾರ, ಪ್ರಕಾಶ ಗುಡಿಮನಿ, ಸುಭದ್ರಾ ಮೇಲಿನಮನಿ ಮಾತನಾಡಿ, ಹಲವಾರು ಬಾರಿ ಸಂಶಯಾಸ್ಪದ ವ್ಯಕ್ತಿಗಳ ಹೆಸರುಗಳನ್ನು ಇಲಾಖೆಗೆ ತಿಳಿಯ ಪಡಿಸಲಾಗಿದ್ದರೂ ಇಲಾಖೆ ಕ್ರಮಕೈಗೊಂಡಿಲ್ಲ. ಇಲಾಖೆಯ ಮೇಲೆ ಅಥವಾ ಇನ್ನಾರನ್ನು ಗುರಿಯಾಗಿಟ್ಟುಕೊಂಡು ಹೋರಾಟ ಮಾಡುತ್ತಿಲ್ಲ. ಬಡ ದಲಿತ ನಿರ್ಗತಿಕ ಕುಟುಂಬಕ್ಕೆ ನ್ಯಾಯ ಸಿಗಬೇಕು ಅಪರಾಧಿ ಪತ್ತೆಯಾಗಿ ಶಿಕ್ಷಗೊಳಪಡಬೇಕು ಹಾಗೂ ಭಯ ಮತ್ತು ಪ್ರಾಣ ಭೀತಿಯಿಂದ ತತ್ತರಿಸಿ ಹೋಗಿರುವ ಸಂತ್ರಸ್ತ ಕುಟುಂಬಕ್ಕೆ ಸೂಕ್ತ ರಕ್ಷಣೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಈ ವೇಳೆ ರವಿ ಹೊಳಿ, ರವಿ ತಳಕೇರಿ, ರವಿ ಅಲಹಳ್ಳಿ, ಮುತ್ತು ಸುಲ್ಪಿ, ಸಾಗರ ಹೊಸಮನಿ, ಶ್ರೀಕಾಂತ ಸೋಮಜ್ಯಾಳ, ಲಕ್ಷ್ಮಣ ಬನ್ನೆಟ್ಟಿ, ಗುರು ಬಿದರಿ ಸೇರಿದಂತೆ ಬನ್ನೆಟ್ಟಿ ಗ್ರಾಮಸ್ಥರು, ಮಹಿಳೆಯರು ಧರಣಿಯಲ್ಲಿ ಪಾಲ್ಗೊಂಡಿದ್ದ

“ಈ ಪ್ರಕರಣ ತಾಲೂಕಾ ಮಟ್ಟದಿಂದ ಜಿಲ್ಲಾ ಮಟ್ಟದವರೆಗೆ ಬಂದಿದೆ ಎಂದರೆ ಅದು ಪಿಎಸ್‌ಐ, ಸಿಪಿಐ ಮಟ್ಟದಿಂದ ಮುಂದುವರೆದು ಎಸ್ಪಿವರೆಗೆ ಬಂದಿದ್ದು, ಈಗ ಅದು ಎಸ್ಪಿ ಪ್ರಕರಣ ಅಂತ ಪರಿಗಣಿಸಿ ನ್ಯಾಯಾಲಯ ಮತ್ತು ಎಫ್‌ಎಸ್‌ಎಲ್ ಪರಿವಿಡಿಯಲ್ಲಿ ಬರುವುದರಿಂದ ಎಫ್‌ಎಸ್‌ಎಲ್ ವರದಿ ಕೊಟ್ಟು ನ್ಯಾಯಾಲಯ ದಿನಾಂಕ ನಿಗದಿಪಡಿಸಿ ವರದಿ ಸಲ್ಲಿಸಿದ ನಂತರ ಪೊಲೀಸ್ ಇಲಾಖೆ ತನಿಖೆ ಪ್ರಾರಂಭಿಸಿದ ನಂತರ ಸಮಯಾವಕಾಶ ಬೇಕಾಗುತ್ತದೆ. ಕಾರಣ ಕೂಲಂಕುಶ ತನಿಖೆಗೆ ಹೋರಾಟಗಾರರು ಸಹಕರಿಸಬೇಕು.”

– ಲಕ್ಷ್ಮಣ ನಿಂಬರಗಿ
ವಿಜಯಪುರ ಎಸ್ಪಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ

ಬಿಸಿಲು ತಣಿಸಲು ಎಳನೀರು, ಕಲ್ಲಂಗಡಿಗೆ ಮೊರೆ ಹೋದ ಜನತೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ
    In (ರಾಜ್ಯ ) ಜಿಲ್ಲೆ
  • ಬಿಸಿಲು ತಣಿಸಲು ಎಳನೀರು, ಕಲ್ಲಂಗಡಿಗೆ ಮೊರೆ ಹೋದ ಜನತೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಆಸ್ಪತ್ರೆಗಳಲ್ಲಿ ಎಚ್‌ಪಿವಿ ಲಸಿಕೆ ಲಭ್ಯ :ಡಾ.ಮುಕುಂದ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡಿ :ಮಹಾಲಿಂಗ ಶ್ರೀ
    In (ರಾಜ್ಯ ) ಜಿಲ್ಲೆ
  • ನೂತನ ತರಕಾರಿ ಮಾರುಕಟ್ಟೆ ನಿರ್ಮಿಸುವಂತೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಖೋಖೊ ದೈಹಿಕ ಸದೃಡತೆಯನ್ನು ಉತ್ತೇಜಿಸುವ ಸಾಂಪ್ರದಾಯಿಕ ಕ್ರೀಡೆ
    In (ರಾಜ್ಯ ) ಜಿಲ್ಲೆ
  • ಮಹಿಳೆ ಎಂದರೆ ತನ್ನದೇ ಆದ ಹೆಜ್ಜೆಯಲ್ಲಿ ನಡೆಯುವವಳು :ಭಾಗ್ಯಶ್ರೀ
    In (ರಾಜ್ಯ ) ಜಿಲ್ಲೆ
  • ಪಪೂ ಕಾಲೇಜು ಮಂಜೂರಾತಿಗೆ ಸಚಿವರಿಗೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.