Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರಕಾರ್ಮಿಕರ ಮನವಿ

ಸರ್ಕಾರದ ನಿರ್ದೇಶನದಂತೆ ನಡೆಯದ ಜಲಧಾರೆ ಕಾಮಗಾರಿ

ಆಲಮಟ್ಟಿಡ್ಯಾಂಸೈಟ್ ಪ್ರದೇಶದಲ್ಲಿ ಒಣಗುತ್ತಿರುವ ಬೇವಿನ ಮರಗಳು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಲಸಂಗಿ ಗೆಳೆಯರ ಬಳಗದಿಂದ ಸಾಹಿತ್ಯ ಕ್ಷೇತ್ರಕ್ಕೆ ವಿಶೇಷ ಕೊಡುಗೆ
(ರಾಜ್ಯ ) ಜಿಲ್ಲೆ

ಹಲಸಂಗಿ ಗೆಳೆಯರ ಬಳಗದಿಂದ ಸಾಹಿತ್ಯ ಕ್ಷೇತ್ರಕ್ಕೆ ವಿಶೇಷ ಕೊಡುಗೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬೆಂಗಳೂರಿನಲ್ಲಿ ಹಿರಿಯ ಸಾಹಿತಿ ಪ್ರೊ:ಎಸ್.ಜಿ.ಸಿದ್ಧರಾಮಯ್ಯ ಅಬಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಜಯಪುರ, ಹಲಸಂಗಿ ಗೆಳೆಯರ ಪ್ರತಿಷ್ಠಾನ ವಿಜಯಪುರ ಹಾಗೂ ಜೈನ್ (ಡೀಮ್ಡ್ ಟು ಬಿ ಯೂನಿವರ್ಸಿಟಿ)ಯ ಕನ್ನಡ ಭಾಷಾ ವಿಭಾಗದ ಸಹಯೋಗದಲ್ಲಿ ಬೆಂಗಳೂರಿನ ಜಯನಗರದ ೯ ನೇ ಬಡಾವಣೆಯಲ್ಲಿರುವ ಜೆ ಜಿ ಐ ನಾಲೆಡ್ಜ್ ಕ್ಯಾಂಪಸ್ ನಲ್ಲಿ ಹಲಸಂಗಿ ಗೆಳಯರ ಬದುಕು ಮತ್ತು ಬರಹ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಜರುಗಿತು.
ಈ ಕಾರ್ಯಕ್ರಮವನ್ನು ನಾಡಿನ ಹಿರಿಯ ಸಾಹಿತಿ ಪ್ರೊ.ಎಸ್ ಜಿ ಸಿದ್ದರಾಮಯ್ಯನವರು ಉದ್ಘಾಟಿಸಿ ಮಾತನಾಡಿ, ಹಲಸಂಗಿ ಗೆಳೆಯರ ಬಳಗವು ಕನ್ನಡ ನವೋದಯ ಸಾಹಿತ್ಯ ಕ್ಷೇತ್ರಕ್ಕೆ ತನ್ನದೇಯಾದ ವಿಶೇಷ ಕೊಡುಗೆ ನೀಡಿದ್ದು, ಜನಪದ ಸಾಹಿತ್ಯ ಮತ್ತು ದೇಸಿ ಸಾಹಿತ್ಯದ ಪ್ರಭಾವಕ್ಕೆ ಒಳಗಾದ ಹಲಸಂಗಿ ಗೆಳೆಯರು ಅದರಲ್ಲೇ ಸಾಹಿತ್ಯ ಕೃಷಿ ಮಾಡಿದವರು. ಇನ್ನು ಗೆಳೆಯರ ಬಳಗದ ಅತ್ಯದ್ಭುತ ಕೆಲಸವೆಂದರೇ ಅದು ಜನಪದ ಗೀತೆಗಳ ಸಂಗ್ರಹ.ಅದರಲ್ಲೂ ಗರತಿಯ ಹಾಡುಗಳು ಅದ್ವಿತೀಯ ಸಂಗ್ರಹವಾಗಿದೆ ಎಂದು ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕಲೆ, ಸಾಹಿತ್ಯ, ಜಾನಪದ ಹಾಗೂ ರಂಗಭೂಮಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮಹನೀಯರ ಹೆಸರಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನದಲ್ಲಿ ಟ್ರಸ್ಟ್ಗಳನ್ನು ರಚನೆ ಮಾಡಿದೆ, ಆದರೆ ಗೆಳೆಯರ ಬಳಗದ ಹೆಸರಿನಲ್ಲಿರುವ ಸ್ಥಾಪಿಸಿರುವ ಏಕಮಾತ್ರ ಟ್ರಸ್ಟ್ ಹಲಸಂಗಿ ಗೆಳೆಯರ ಪ್ರತಿಷ್ಠಾನವಾಗಿದ್ದು, ಇದು ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಜೈನ್ (ಡೀಮ್ಡ್ -ಟು -ಬಿ ಯೂನಿವರ್ಸಿಟಿ)ಯ ಪ್ರಾಧ್ಯಾಪಕರಾದ ಡಾ.ರಾಜಕುಮಾರ ಬಡಿಗೇರ ಉಪನ್ಯಾಸ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಭಾಷಾ ವಿಭಾಗದ ಮುಖ್ಯಸ್ಥ ಪ್ರೊ.ಎಂ ಕೆ ಶ್ರೀಧರ್ ಮಾತನಾಡಿದರು.

ವಿಜಯಪುರ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ ಸ್ವಾಗತಿಸಿದರು.
ಪ್ರತಿಷ್ಠಾನದ ಸದಸ್ಯೆ ಶ್ರೀಮತಿ ದಾಕ್ಷಾಯಣಿ ಬಿರಾದಾರ ಪ್ರಾಸ್ತವಿಕವಾಗಿ ಮಾತನಾಡಿದರು.
ಕನ್ನಡ ಭಾಷಾ ವಿಭಾಗದ ಮುಖ್ಯಸ್ಥ ಶ್ರೀಮತಿ ರಾಜೇಶ್ವರಿ ವೈ ಎಂ,ಮಧುರ ಚೆನ್ನರ ಮೊಮ್ಮಕ್ಕಳಾದ ಜಯಶ್ರೀ ಗಲಗಲಿ, ಸತ್ಯವತಿ ಗಲಗಲಿ ಹಾಗೂ ಸಿಂಪಿ ಲಿಂಗಣ್ಣನವರ ಮೊಮ್ಮಕ್ಕಳಾದ ಸ್ನೇಹಲತಾ, ಮರಿ ಮೊಮ್ಮಗಳಾದ ರೋಹಿಣಿ ,ಕೆ ಎಸ್ ನರಸಿಂಹಸ್ವಾಮಿಯವರ ಮೊಮ್ಮಗಳಾದ ಡಾ.ಮೆಖಲಾ ವೆಂಕಟೇಶ್ ಮತ್ತು ಕುಟುಂಬದವರು ಹಾಗೂ ವಿಶ್ವ ವಿದ್ಯಾಲಯದ ವಿವಿಧ ವಿಭಾಗದ ಪ್ರಾಧ್ಯಾಪಕರು,
ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ತ್ರಿಷಾ ಹಾಗೂ ಶ್ರಾವ್ಯ ಕಾರ್ಯಕ್ರಮ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರಕಾರ್ಮಿಕರ ಮನವಿ

ಸರ್ಕಾರದ ನಿರ್ದೇಶನದಂತೆ ನಡೆಯದ ಜಲಧಾರೆ ಕಾಮಗಾರಿ

ಆಲಮಟ್ಟಿಡ್ಯಾಂಸೈಟ್ ಪ್ರದೇಶದಲ್ಲಿ ಒಣಗುತ್ತಿರುವ ಬೇವಿನ ಮರಗಳು

ಅಂಗವಿಕಲ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಿಸಿದ ಶಾಸಕ ಮನಗೂಳಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರಕಾರ್ಮಿಕರ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರದ ನಿರ್ದೇಶನದಂತೆ ನಡೆಯದ ಜಲಧಾರೆ ಕಾಮಗಾರಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಡ್ಯಾಂಸೈಟ್ ಪ್ರದೇಶದಲ್ಲಿ ಒಣಗುತ್ತಿರುವ ಬೇವಿನ ಮರಗಳು
    In (ರಾಜ್ಯ ) ಜಿಲ್ಲೆ
  • ಅಂಗವಿಕಲ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಿಸಿದ ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಆರ್‌ಎಂಎಸ್‌ಎ ಶಾಲೆಗೆ ಶಿಕ್ಷಕರ ಕೊರತೆ :ಧರಣಿ ಸತ್ಯಾಗ್ರಹ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ರಾಜ್ಯ ಸರ್ಕಾರದಿಂದ ರೈತರ ಬಾಯಿಗೆ ಮಣ್ಣು ಹಾಕುವ ಕೆಲಸ
    In (ರಾಜ್ಯ ) ಜಿಲ್ಲೆ
  • ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಟ್ರ್ಯಾಕ್ಟರ್ ರ‍್ಯಾಲಿ
    In (ರಾಜ್ಯ ) ಜಿಲ್ಲೆ
  • ಉತ್ತಮ ಸಂವಹನ ಕಲೆಯೇ ಯಶಸ್ಸಿನ ಮೆಟ್ಟಿಲು :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಡಾ.ಯಲಿಗಾರ :ಎಸ್ಪಿ ನಿಂಬರಗಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಜಾಗೆ ಒತ್ತುವರಿ ತೆರವಿಗೆ ಪ.ಪಂ. ಸದಸ್ಯರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.