Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರಕಾರ್ಮಿಕರ ಮನವಿ

ಸರ್ಕಾರದ ನಿರ್ದೇಶನದಂತೆ ನಡೆಯದ ಜಲಧಾರೆ ಕಾಮಗಾರಿ

ಆಲಮಟ್ಟಿಡ್ಯಾಂಸೈಟ್ ಪ್ರದೇಶದಲ್ಲಿ ಒಣಗುತ್ತಿರುವ ಬೇವಿನ ಮರಗಳು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»೨೦೪೭ ವರೆಗೂ ಮೋದಿಯವರೇ ಪ್ರಧಾನಿ :ಸಂಸದ ಶೆಟ್ಟರ್
(ರಾಜ್ಯ ) ಜಿಲ್ಲೆ

೨೦೪೭ ವರೆಗೂ ಮೋದಿಯವರೇ ಪ್ರಧಾನಿ :ಸಂಸದ ಶೆಟ್ಟರ್

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಆಡಳಿತ ಸಂಪೂರ್ಣ ಹದಗೆಟ್ಟಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣ ಕೆಟ್ಟಿದೆ, ಅಂದಾದುಂದಿ ಸರ್ಕಾರ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಜಗದೀಶ ಶೆಟ್ಟರ ಹೇಳಿದರು.
ಭಾನುವಾರ, ಆಲಮಟ್ಟಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ರಾಜ್ಯಾದ್ಯಂತ ರಸ್ತೆಗಳು ಸಂಪೂರ್ಣ ಹದಗೆಟ್ಟು ಹೋಗಿದೆ. ಬೆಂಗಳೂರಿನ ಹದಗೆಟ್ಟ ರಸ್ತೆ ಸಮಸ್ಯೆ ವಿಶ್ವದಾದ್ಯಂತ ಚರ್ಚೆಯಾಗುತ್ತಿದೆ. ಬಾಗಲಕೋಟೆಯಿಂದ ಆಲಮಟ್ಟಿಗೆ ಬರಬೇಕಾದರೂ ರಸ್ತೆ ತುಂಬಾ ತಗ್ಗು ದಿನ್ನೆಗಳು ಎಂದು ಶೆಟ್ಟರ್ ಆರೋಪಿಸಿದರು.
ಗುತ್ತಿಗೆದಾರ ಸಂಘದವರು ಬಿಜೆಪಿ ಸರ್ಕಾರವಿದ್ದಾಗಕ್ಕಿಂತಲೂ ಎರಡು ಪಟ್ಟು ಹೆಚ್ಚು ಭ್ರಷ್ಟಾಚಾರ ಕಾಂಗ್ರೆಸ್ ಸರ್ಕಾರದಲ್ಲಿದೆ ಎಂದು ಆರೋಪಿಸಿದೆ. ಕಳೆದ ಮೂರು ವರ್ಷಗಳ ಹಿಂದೆ ಬಿಜೆಪಿ ಸರ್ಕಾರದಲ್ಲಿ ಶೇ ೪೦ ರಷ್ಟು ಭ್ರಷ್ಟಾಚಾರ ಇದೆ ಎಂದು ಹೇಳಿ, ಅದಕ್ಕೆ ಹೋರಾಟ ರೂಪಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಈಗ ಇಂತಹ ಆರೋಪ ಕಾಂಗ್ರೆಸ್ ಸರ್ಕಾರಕ್ಕೂ ಬಂದಿದೆ. ಬಿಜೆಪಿ ಸರ್ಕಾರದಲ್ಲಿ ಮಾಡಿದ ಆರೋಪದ ತನಿಖೆ ಕಾಂಗ್ರೆಸ್ ಸರ್ಕಾರ ಕೈಗೊಂಡರೂ ಅದು ಸಾಬಿತಾಗಲಿಲ್ಲ ಎಂದರು.
ಈಗ ಗುತ್ತಿಗೆದಾರರಿಗೆ ಬಿಲ್ ಪಾವತಿಯಾಗದೇ ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿಗೆ ಬಂದಿದ್ದಾರೆ ಎಂದು ಹೇಳುತ್ತಿರುವುದು ಈ ಸರ್ಕಾರದ ಆರ್ಥಿಕ ದಿವಾಳಿತನಕ್ಕೆ ಉದಾಹರಣೆ ಎಂದರು.
ಸಾಕಷ್ಟು ಕಡೆ ವ್ಯಾಪಕ ಮಳೆಯಾಗಿ ನೆರೆ ಹಾವಳಿ ಸಂಭವಿಸಿ, ನೂರಾರು ಮನೆಗಳು ಬಿದ್ದು, ಸಹಸ್ರಾರು ಎಕರೆ ಭೂಮಿ ಜಲಾವೃತಗೊಂಡಿದೆ. ಇಂತಹ ಸ್ಥಿತಿಯಲ್ಲಿಯೂ ಜಿಲ್ಲಾ ಉಸ್ತುವಾರಿ ಸಚಿವರು ಆಯಾ ಜಿಲ್ಲೆಯ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ರೈತರ, ಸಂತ್ರಸ್ತರ ಕಣ್ಣೊರೆಸುವ ಪ್ರಯತ್ನ ಮಾಡಿಲ್ಲ, ಸರ್ಕಾರದಿಂದ ಪರಿಹಾರವನ್ನು ನೀಡಿಲ್ಲ ಎಂದರು.
೨೦೨೬ ರಲ್ಲಿ ಕೇಂದ್ರ ಸರ್ಕಾರ ಜನಗಣತಿಯ ಜತೆಗೆ ಜಾತಿ ಗಣತಿಯೂ ಮಾಡುತ್ತದೆ ಎಂದು ಘೋಷಿಸಿದರೂ, ರಾಜ್ಯ ಸರ್ಕಾರ ಸಾಮಾಜಿಕ, ಆರ್ಥಿಕ ಸಮೀಕ್ಷೆಯ ಹೆಸರಲ್ಲಿ ಜಾತಿ ಗಣತಿ ಮಾಡುತ್ತಿದೆ, ಇದು ಹಿಂದೂಗಳನ್ನು ಒಡೆಯುವ ಹುನ್ನಾರವಾಗಿದ್ದು, ಅದಕ್ಕಾಗಿ ಜನರ ೪೫೦ ಕೋಟಿ ರೂ ತೆರಿಗೆ ಹಣವನ್ನು ಸರ್ಕಾರ ಖರ್ಚು ಮಾಡುತ್ತಿದೆ ಎಂದರು.
ಗಣತಿ ಮಾಡುವವರಿಗೆ ಸೂಕ್ತ ಸೌಲಭ್ಯ ಒದಗಿಸಿಲ್ಲ, ಸಾಕಷ್ಟು ತಾಂತ್ರಿಕ ತೊಂದರೆಯಿಂದಾಗಿ ಗಣತಿ ಮಾಡುವ ಶಿಕ್ಷಕರು ಪರಿತಪಿಸುತ್ತಿದ್ದಾರೆ. ಪೂರ್ಣಗೊಂಡಿರುವ ಆಲಮಟ್ಟಿಯ ವಾಟರ್ ಪಾರ್ಕ್ ಉದ್ಘಾಟನೆಗೂ ಸಂಬಂಧಿಸಿದ ಸಚಿವರಿಗೆ ಸಮಯ ಸಿಕ್ತಾಯಿಲ್ಲ ಎಂದು ಆರೋಪಿಸಿದರು.
೭೫ ವರ್ಷ ವಯಸ್ಸಿನವರು ರಾಜಕೀಯ ನಿವೃತ್ತಿಗೊಳ್ಳಲಿದ್ದಾರೆ ಎಂದು ಬಿಜೆಪಿಯ ಸಂವಿಧಾನದಲ್ಲಿ ಉಲ್ಲೇಖವಿಲ್ಲ, ಪ್ರಧಾನಿಗಳು ಯಾವುದೇ ಕಾರಣಕ್ಕೂ ನಿವೃತ್ತಿಯಾಗುವುದಿಲ್ಲ. ೨೦೪೭ ಕ್ಕೆ ವಿಕಸಿತ ಭಾರತ ಎಂದು ಘೋಷಣೆಯಾಗಿದೆ. ಅಲ್ಲಿಯವರೆಗೂ ದೇಶದಲ್ಲಿ ಮೋದಿಯವರೇ ಪ್ರಧಾನಿಯಾಗಿರಲಿದ್ದಾರೆ ಎಂದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರಕಾರ್ಮಿಕರ ಮನವಿ

ಸರ್ಕಾರದ ನಿರ್ದೇಶನದಂತೆ ನಡೆಯದ ಜಲಧಾರೆ ಕಾಮಗಾರಿ

ಆಲಮಟ್ಟಿಡ್ಯಾಂಸೈಟ್ ಪ್ರದೇಶದಲ್ಲಿ ಒಣಗುತ್ತಿರುವ ಬೇವಿನ ಮರಗಳು

ಅಂಗವಿಕಲ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಿಸಿದ ಶಾಸಕ ಮನಗೂಳಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರಕಾರ್ಮಿಕರ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರದ ನಿರ್ದೇಶನದಂತೆ ನಡೆಯದ ಜಲಧಾರೆ ಕಾಮಗಾರಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಡ್ಯಾಂಸೈಟ್ ಪ್ರದೇಶದಲ್ಲಿ ಒಣಗುತ್ತಿರುವ ಬೇವಿನ ಮರಗಳು
    In (ರಾಜ್ಯ ) ಜಿಲ್ಲೆ
  • ಅಂಗವಿಕಲ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಿಸಿದ ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಆರ್‌ಎಂಎಸ್‌ಎ ಶಾಲೆಗೆ ಶಿಕ್ಷಕರ ಕೊರತೆ :ಧರಣಿ ಸತ್ಯಾಗ್ರಹ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ರಾಜ್ಯ ಸರ್ಕಾರದಿಂದ ರೈತರ ಬಾಯಿಗೆ ಮಣ್ಣು ಹಾಕುವ ಕೆಲಸ
    In (ರಾಜ್ಯ ) ಜಿಲ್ಲೆ
  • ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಟ್ರ್ಯಾಕ್ಟರ್ ರ‍್ಯಾಲಿ
    In (ರಾಜ್ಯ ) ಜಿಲ್ಲೆ
  • ಉತ್ತಮ ಸಂವಹನ ಕಲೆಯೇ ಯಶಸ್ಸಿನ ಮೆಟ್ಟಿಲು :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಡಾ.ಯಲಿಗಾರ :ಎಸ್ಪಿ ನಿಂಬರಗಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಜಾಗೆ ಒತ್ತುವರಿ ತೆರವಿಗೆ ಪ.ಪಂ. ಸದಸ್ಯರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.