ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ಪ್ರತಿಯೊಬ್ಬ ಭಾರತೀಯ ಪ್ರಜೆಗೂ ಸಮಾನತೆ, ಜಾತಿ ಧರ್ಮಗಳಿಂದ ಮುಕ್ತವಾದ ಯುವ ಭಾರತದ ಪರಿಕಲ್ಪನೆಯ ಸ್ವಾತಂತ್ರ್ಯವನ್ನು ಕ್ರಾಂತಿಕಾರಿ ಭಗತ್ ಸಿಂಗ್ ಹೊಂದಿದ್ದರು. ಇಂತಹ ಕ್ರಾಂತಿಕಾರಿ ವಿಚಾರಗಳು, ಆದರ್ಶಗಳು ಇಂದಿನ ಯುವ ಜನತೆಗೆ ದಾರಿ ದೀಪವಾಗಬೇಕೆಂದು ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಹೇಳಿದರು
ಪಟ್ಟಣದ ವೀರರಾಣಿ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ರಾಷ್ಟ್ರೀಯ ಬಸವ ಸೈನ್ಯ ಸಂಘಟನೆ ಭಾನುವಾರ ಹಮ್ಮಿಕೊಂಡಿದ್ದ ಕ್ರಾಂತಿಕಾರಿ ಭಗತ್ ಸಿಂಗ್ ಅವರ 117 ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಸಮಾನತೆಯ ವ್ಯವಸ್ಥೆಯನ್ನು ಹೋಗಲಾಡಿಸಿ ಬದಲಾವಣೆ ತರಲು ಹೋರಾಡಿದ ಮಹಾನ್ ಕ್ರಾಂತಿಕಾರಿ ಭಗತ್ ಸಿಂಗ್. ದೇಶಭಕ್ತ ಭಗತ್ ಸಿಂಗ್ ಅವರ ಜೀವನ ರಾಷ್ಟ್ರ ನಿರ್ಮಾಣಕ್ಕೆ ಪ್ರೇರಣೆಯಾಗಿದೆ ಎಂದರು.
ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ಸಣ್ಣ ವಯಸ್ಸಿನಲ್ಲೇ ನೇಣುಕಂಬಕ್ಕೆ ಏರಿದವರು. ಜಲಿಯನ್ ವಾಲಾಬಾಗ್ ದುರಂತದ ನಂತರದಲ್ಲಿ ಭಗತ್ ಸಿಂಗ್ ಒಬ್ಬ ಕ್ರಾಂತಿಕಾರಿಯಾಗಿ ಬದಲಾಗುತ್ತಾರೆ. ಭಗತ್ ಸಿಂಗ್ ಅವರು ಬ್ರಿಟಿಷರಿಗೆ ಸಿಂಹಸ್ವಪ್ನರಾಗಿದ್ದರು. ಭಗತ್ ಸಿಂಗ್, ರಾಜಗುರು ಸುಖದೇವ್ ಮೂವರು ಕೇವಲ 24 ವರ್ಷದ ಪ್ರಾಯದಲ್ಲಿ ದೇಶಕ್ಕಾಗಿ ಜೀವವನ್ನು ತ್ಯಾಗ ಮಾಡಿದ್ದಾರೆ ಎಂದ ಅವರು, ಯುವ ಜನರು ಕ್ರಾಂತಿಕಾರಿ ವಿಚಾರಗಳಿಂದ ದೂರವಾಗುತ್ತಿದ್ದಾರೆ. ಭಗತ್ ಸಿಂಗ್ ಕಂಡಂತಹ ಕನಸು ನನಸಾಗದೆ ಉಳಿದಿದೆ ಎಂದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಬಸವಸೈನ್ಯದ ಸಂಚಾಲಕ ಶ್ರೀಕಾಂತ ಕೊಟ್ರಶೆಟ್ಟಿ, ಮುಖಂಡರಾದ ಮನ್ನಾನ ಶಾಬಾದಿ, ಸಂಗಮೇಶ ಜಾಲಗೇರಿ, ಪ್ರಶಾಂತ ಮುಂಜಾನೆ, ಜಟ್ಟಿಂಗರಾಯ ಮಾಲಗಾರ, ಮುತ್ತುರಾಜ ಡಂಬಳ, ಶಂಕರಗುರು ರಜಪೂತ, ಮಹಾಂತೇಶ ಹೆಬ್ಬಾಳ, ಅಮೀನ ಚೌದರಿ, ಶ್ರೀಶೈಲ ಚೌರಿ, ಅಣ್ಣು ಪಾತಂಗಿ, ಬಸಲಿಂಗ ನಂದಿ, ವಿಠ್ಠಲ ಲಮಾಣಿ, ಸುನೀಲ ಬೇದರಕರ, ಶಾಂತು ಚೌರಿ ಇತರರು ಇದ್ದರು.

