Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 02, 2026

ಅರಣ್ಯ ಕಾರ್ಮಿಕರಿಗೆ ಪಿಎಫ್, ವಿಮೆ ಒದಗಿಸಲು ಕ್ರಮ :ಮಹೇಶ

ಗ್ರಾಮೀಣ ಜನತೆ ಕಾನೂನಿನ ಜ್ಞಾನ ಹೊಂದಬೇಕು :ನ್ಯಾ. ನಾಗೇಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೈಸೂರು ದಸರಾ ಉತ್ಸವ ಭಾವೈಕ್ಯತೆಯ ಬೆಸುಗೆ :ಲಿಂಗನಗೌಡ
(ರಾಜ್ಯ ) ಜಿಲ್ಲೆ

ಮೈಸೂರು ದಸರಾ ಉತ್ಸವ ಭಾವೈಕ್ಯತೆಯ ಬೆಸುಗೆ :ಲಿಂಗನಗೌಡ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೆಂಭಾವಿ: ವಿಜಯನಗರ ಅರಸರು ಆಚರಣೆಗೆ ತಂದ ವಿಜಯದಶಮಿ ಆಚರಣೆಯೇ ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವ ಭಾವೈಕ್ಯತೆಯ ಬೆಸುಗೆ, ಜಾತಿ, ಮತ, ಪಂಥಗಳ ಎಲ್ಲೆ ಮೀರಿದ್ದು ಎಂದು ಹಿರಿಯ ಸಾಹಿತಿ ಲಿಂಗನಗೌಡ ಮಾಲಿ ಪಾಟೀಲ್ ಹೇಳಿದರು.
ಪಟ್ಟಣದ ಪುರಸಭೆ ಆವರಣದಲ್ಲಿ ಮಂಗಳವಾರ ದಸರಾ ಉತ್ಸವ ಸಮಿತಿ ಆಯೋಜಿಸಿದ್ದ ದಸರಾ ಉತ್ಸವದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಕಳೆದ ನಾಲ್ಕೈದು ವರ್ಷಗಳಿಂದ ನಾಡ ಹಬ್ಬ ದಸರಾ ಉತ್ಸವದ ಕಳೆ ನಮ್ಮೂರಲ್ಲಿ ಮೊಳಗಲಿ, ಸಾಂಸ್ಕೃತಿಕ ಮನಸ್ಸುಗಳು ಬೆಸೆಯಲಿ, ಎಂದು ಉತ್ಸಾಹಿ ಯುವಕರು ಸೇರಿಕೊಂಡು ವಿದ್ಯಾರ್ಥಿಗಳಿಗೆ ರೈತರಿಗೆ, ಯುವಕರಿಗೆ, ಮಹಿಳೆಯರಿಗೆ, ಆತ್ಮವಿಶ್ವಾಸ ತುಂಬುವ ಸದುದ್ದೇಶದೊಂದಿಗೆ, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಮೂಲಕ ಎಲ್ಲರೂ ಒಟ್ಟಾಗಿ ವೈವಿಧ್ಯಮಯವಾಗಿ ಆಚರಿಸುವ ಕಾರ್ಯ ಶ್ಲಾಘನೀಯ ಎಂದರು.
ಕೆವೈಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುರೇಶ ಸಜ್ಜನ, ಕೆವೈಡಿಸಿಸಿ ಬ್ಯಾಂಕ್ ನಿರ್ದೇಶಕ ಬಾಪುಗೌಡ ಪಾಟೀಲ್ ಮಾತನಾಡಿದರು. ನಿಕಟಪೂರ್ವ ಅಧ್ಯಕ್ಷ ಡಿ ಸಿ ಪಾಟೀಲ್ ಪ್ರಾಸ್ತಾವಿಕ ಮಾತನಾಡಿದರು.
ಇದೇ ವೇಳೆ ಸಂಗಣ್ಣ ಸಿದ್ರಾಮಪ್ಪ ಸಾಹು ತುಂಬಗಿ(ವರ್ಷದ ವ್ಯಕ್ತಿ ಪ್ರಶಸ್ತಿ). ರಾಜಅಹ್ಮದ್ ಬಡಿಗೇರ, ನಾಗರತ್ನ ಹೆಚ್ಚ್ ಕುಲ್ಕರ್ಣಿ, ರಮಾಬಾಯಿ ಎಂ ಕುಲ್ಕರ್ಣಿ, ರಾಮಕೃಷ್ಣ ಹುಜರತ್ತಿ(ಆದರ್ಶ ಶಿಕ್ಷಕ/ಶಿಕ್ಷಕಿ ರತ್ನ ಪ್ರಶಸ್ತಿ). ಶಿವಶರಣರಡ್ಡಿ ಜಿ ಡಿಗ್ಗಾವಿ(ಉತ್ತಮ ಕೃಷಿಕ ಪ್ರಶಸ್ತಿ). ಅರುಣ ಚೌವ್ಹಾಣ್( ಸೇವಾ ಸರ್ವೋತ್ತಮ ಪ್ರಶಸ್ತಿ). ಪರುಶುರಾಮ ಎಂಟಮಾನಿ(ಕಲಾ ರತ್ನ ಪ್ರಶಸ್ತಿ). ಪುರಸ್ಕಾರ ನೀಡಿ ಗೌರವಿಸಲಾಯಿತು, ಕಾಲ್ನಡಿಗೆಯಲ್ಲಿ ಹಜ್ ಯಾತ್ರೆ ಮಾಡಿದ ಸೈಯದ್ ಜಿಲಾನಿ ಹಳಿಸಗರ ಇವರಿಗೆ ವಿಶೇಷವಾಗಿ ಸನ್ಮಾನಿಸಲಾಯಿತು.
ಹಿರೇಮಠದ ಪೀಠಾಧಿಪತಿ ಚನ್ನಬಸವ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು, ಸಮಿತಿ ಗೌರವಾಧ್ಯಕ್ಷ ಮುದಿಗೌಡ ಮಾಲಿ ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು , ಮಾಜಿ ಜಿಪಂ ಅಧ್ಯಕ್ಷೆ ಸಿದ್ದನಗೌಡ ಪೊಲೀಸ್ ಪಾಟೀಲ ನಾಡ ದೇವಿಗೆ ಪುಷ್ಪಾರ್ಚನೆ ಮಾಡಿದರು. ವಿಶೇಷ ಆಹ್ವಾನಿತರಾಗಿ ಅಪ್ಪುಗೌಡ ಪಾಟೀಲ ಯಾಳಗಿ, ಪುರಸಭೆ ಅಧ್ಯಕ್ಷ ರಹಿಮಾನ್ ಪಟೇಲ್ ಯಲ್ಗೋಡ್, ಉಪಾಧ್ಯಕ್ಷೆ ಲಕ್ಷ್ಮೀಬಾಯಿ ಕಂಬಾರ, ಪಿಎಲ್ ಡಿ ಬ್ಯಾಂಕ್ ನಿರ್ದೇಶಕ ವಾಮನರಾವ್ ದೇಶಪಾಂಡೆ, ನಿವೃತ್ತ ಶಿಕ್ಷಕ ಅಬ್ದುಲ್ ರಜಾಕ್ ನಾಲತವಾಡ, ನೀಲಕಂಠರಾಯಗೌಡ ಪಾಟೀಲ, ಸಮಿತಿಯ ಅಧ್ಯಕ್ಷ ಮಹಿಪಾಲರಡ್ಡಿ ಡಿಗ್ಗಾವಿ, ಸಮಿತಿಯ ಉಪಾಧ್ಯಕ್ಷ ಇಲಿಯಾಸ್ ವಡಿಕೇರಿ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಬಂದೇನವಾಜ ನಾಲತವಾಡ ನಿರೂಪಿಸಿದರು, ಸೂಗುರಯ್ಯ ಇಂಡಿ ಸ್ವಾಗತಿಸಿದರು, ಪರುಶುರಾಮ ನಾರಾಯಣಕರ್ ವಂದಿಸಿದರು. ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ಕಣ್ಮನ ಸೆಳೆದು, ಮನಸೂರೆಗೊಂಡಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 02, 2026

ಅರಣ್ಯ ಕಾರ್ಮಿಕರಿಗೆ ಪಿಎಫ್, ವಿಮೆ ಒದಗಿಸಲು ಕ್ರಮ :ಮಹೇಶ

ಗ್ರಾಮೀಣ ಜನತೆ ಕಾನೂನಿನ ಜ್ಞಾನ ಹೊಂದಬೇಕು :ನ್ಯಾ. ನಾಗೇಶ

ನಿಷ್ಕಳಂಕ ಸೇವೆ ಸಲ್ಲಿಸುವುದು ಇತರರಿಗೆ ಮಾದರಿ :ಮಹಾಂತೇಶ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 02, 2026
    In ದಿನಪತ್ರಿಕೆ
  • ಅರಣ್ಯ ಕಾರ್ಮಿಕರಿಗೆ ಪಿಎಫ್, ವಿಮೆ ಒದಗಿಸಲು ಕ್ರಮ :ಮಹೇಶ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಜನತೆ ಕಾನೂನಿನ ಜ್ಞಾನ ಹೊಂದಬೇಕು :ನ್ಯಾ. ನಾಗೇಶ
    In (ರಾಜ್ಯ ) ಜಿಲ್ಲೆ
  • ನಿಷ್ಕಳಂಕ ಸೇವೆ ಸಲ್ಲಿಸುವುದು ಇತರರಿಗೆ ಮಾದರಿ :ಮಹಾಂತೇಶ
    In (ರಾಜ್ಯ ) ಜಿಲ್ಲೆ
  • ಕನ್ನಡ ಸಾಹಿತ್ಯ ಲೋಕಕ್ಕೆ ಡಾ.ಚನ್ನಪ್ಪ ಕಟ್ಟಿ ಕೊಡುಗೆ ಅನನ್ಯ
    In (ರಾಜ್ಯ ) ಜಿಲ್ಲೆ
  • ಮೌಲ್ಯಮಾಪನ ಎಡವಟ್ಟು ಪಾಸ್‌ ಆಗಿದ್ದ ವಿದ್ಯಾರ್ಥಿನಿ ಫೇಲ್‌!
    In (ರಾಜ್ಯ ) ಜಿಲ್ಲೆ
  • ಪ್ರಗತಿಯಲ್ಲಿರುವ ನೀರಾವರಿ ಯೋಜನೆಗಳು ಬೇಗ ಪೂರ್ಣಗೊಳಿಸಲು ಸೂಚನೆ
    In (ರಾಜ್ಯ ) ಜಿಲ್ಲೆ
  • ಹಳ್ಳಗಳಿಗೆ ನೀರು ತುಂಬಿಸುವ ಯೋಜನೆ ಇಡೀ ದೇಶಕ್ಕೆ ಮಾದರಿ
    In (ರಾಜ್ಯ ) ಜಿಲ್ಲೆ
  • ಶ್ರೀ ಬಿ.ಎಂ.ಪಾಟೀಲ ಪಬ್ಲಿಕ್ ಸ್ಕೂಲ್ ಗೆ ಮೊದಲ ಮೂರು ರ‌್ಯಾಂಕ್
    In (ರಾಜ್ಯ ) ಜಿಲ್ಲೆ
  • ಬರಿದಾಗುತ್ತಿರುವ ಕೃಷ್ಣಾ ನದಿ :ಕೃಷಿಗೆ ತೀವ್ರ ಸಂಕಷ್ಟ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.