Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 02, 2026

ಅರಣ್ಯ ಕಾರ್ಮಿಕರಿಗೆ ಪಿಎಫ್, ವಿಮೆ ಒದಗಿಸಲು ಕ್ರಮ :ಮಹೇಶ

ಗ್ರಾಮೀಣ ಜನತೆ ಕಾನೂನಿನ ಜ್ಞಾನ ಹೊಂದಬೇಕು :ನ್ಯಾ. ನಾಗೇಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸ್ವಾವಲಂಭಿ ಸಾಲಮುಕ್ತ ರೈತರಾಗಬೇಕೆನ್ನುವುದೇ ರೈತ ಸಂಘದ ಸಿದ್ದಾಂತ
(ರಾಜ್ಯ ) ಜಿಲ್ಲೆ

ಸ್ವಾವಲಂಭಿ ಸಾಲಮುಕ್ತ ರೈತರಾಗಬೇಕೆನ್ನುವುದೇ ರೈತ ಸಂಘದ ಸಿದ್ದಾಂತ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಸಂಗಮೆಶ ಸಗರ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಈ ನಾಡಿನಲ್ಲಿ ಎಲ್ಲರೂ ರೈತರನ್ನು ಬಡೆದು ತಿನ್ನುತ್ತಿದ್ದಾರೆ, ಚುನಾವಣಾ ಸಂದರ್ಭದಲ್ಲಿ ನಾನು ರೈತರ ಮಗ ಎಂದು ಮತ ಪಡೆದು ಆರೆಸಿ ಬಂದು ನಂತರ ಹಣ ಮಾಡುವುದು ಅಷ್ಟೇ ಮೂಲ ಉದ್ದೇಶವಿಟ್ಟು ರೈತರನ್ನು ಸುಲಿಗೆ ಮಾಡುವುದು ನಮ್ಮ ಚುನಾಯಿತ ಪ್ರತಿನಿಧಿಗಳ ಕೆಲಸವಾಗಿದೆ, ಆದ್ದರಿಂದ ರೈತರೆಲ್ಲರು ಜಾತಿ, ಮತ, ಪಕ್ಷ, ಬಡವ, ಶ್ರೀಮಂತ ಎನ್ನುವ ಬೇಧಬಾವ ಮಾಡದೇ ಒಂದಾಗಬೇಕು ಅಂದಾಗ ಮಾತ್ರ ರೈತ ಆತ್ಮಹತ್ಯೆಯನ್ನು ತಡೆಯಬಹುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಸಂಗಮೆಶ ಸಗರ ಅವರು ಹೇಳಿದರು.
ವಿಜಯಪುರ ತಾಲೂಕಿನ ಆಹೇರಿ ತಾಂಡಾ ನಂಬರ ೧ ರಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಚುನ್ನಪ್ಪಾ ಪೂಜೇರಿ ಬಣದ ಗ್ರಾಮಘಟಕ ಉದ್ಘಾಟನೆ, ಶಾಲು ದೀಕ್ಷೆ ಹಾಗೂ ಗುರುತಿನ ಚೀಟಿ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಈಗಾಗಲೇ ಜಿಲ್ಲೆಯಲ್ಲಿ ಆಲಿಮಟ್ಟಿ ಜಲಾಶಯಕ್ಕೆ, ಕುಡಗಿ-ಎನ್.ಟಿ.ಪಿ.ಸಿ, ಮುಳವಾಡ ಕೈಗಾರಿಕಾ ಪ್ರದೇಶಕ್ಕೆ, ಸಾವಿರಾರು ವಿಂಡ್ ಪ್ಯಾನ್, ಸಾವಿರಾರು ಎಕರೆ ಸೋಲಾರ ವಿದ್ಯುತ್ ಘಟಕ, ಸೇರಿದಂತೆ ೨೦ ಕ್ಕೂ ಅಧಿಕ ಏತನೀರಾವರಿ ಕಾಲುವೆಗಳಿಗೆ ಹಾಗೂ ವಿಮಾನ ನಿಲ್ದಾಣಕ್ಕೆ, ವೈನ್ ಪಾರ್ಕಗೆ, ಪುಡ್ ಪಾರ್ಕ ಸೇರಿದಂತೆ ಇನ್ನು ಹಲವಾರು ಯೋಜನೆಗಳಿಗೆ ಲಕ್ಷಾಂತರ ಎಕರೆ ಫಲವತ್ತಾದ ಕೃಷಿ ಭೂಮಿ ಕಳೆದುಕೊಂಡು ನಮ್ಮ ಪೂರ್ವಿಕರ ಸಮಾಧಿ, ಮಠ ಮಾನ್ಯಗಳು ಹಾಗೂ ನಮ್ಮ ಮನೆಗಳನ್ನು ಕಳೆದುಕೊಂಡಿದ್ದೇವೆ, ಮುಂದೆ ಒಂದು ಎಕರೆ ಭೂಮಿ ಕೋಟಿಗೂ ಅಧಿಕ ಬೆಲೆ ಬಾಳುತ್ತದೆ, ಆದ್ದರಿಂದ ಯಾವ ರೈತರು ಭೂಮಿ ಮಾರಿಕೊಳ್ಳಬೇಡಿ, ಎಲ್ಲರೂ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಹಲವಾರು ಯೋಜನೆಗಳನ್ನು ಉಪಯೋಗ ಪಡೆದುಕೊಂಡು ಕಡಿಮೆ ಭೂಮಿಯಲ್ಲಿ ಹೆಚ್ಚು ಆದಾಯ ಪಡೆಯುವುದರ ಜೊತೆಗೆ ಸಂಘಟಿತರಾಗಿ ಸಮಗ್ರ ಕೃಷಿ ಮಾಡಿ ರೈತರೆಲ್ಲರೂ ಶ್ರೀಮಂತರಾಗಬೇಕು ಇದಕ್ಕಾಗಿ ರೈತ ಸಂಘ ನಿರಂತರ ಪ್ರಯತ್ನ ಮಾಡುತ್ತಾ ಹಲವಾರು ಕಾರ್ಯಾಗಾರ ತರಬೇತಿ ಹಮ್ಮಿಕೊಂಡು ರೈತರನ್ನು ಜಾಗೃತ ಮಾಡುತ್ತಿದ್ದೇವೆ. ಇದರ ಲಾಭವನ್ನು ಎಲ್ಲ ರೈತರು ಪಡೆದುಕೊಳ್ಳಬೇಕು ಎಂದರು.
ಕಾರ್ಯಕ್ರಮದ ಸಾನಿಧ್ಯ ವಹಿಸಿದ ಸಂಜು ಮಹಾರಾಜರು ಆಶಿರ್ವಚನ ನೀಡಿದರು.
ಈ ವೇಳೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮನಗೌಡ ಪಾಟೀಲ, ಕಾರ್ಯಾಧ್ಯಕ್ಷ ಪ್ರಕಾಶ ತೇಲಿ, ತಾಲೂಕಾ ಅಧ್ಯಕ್ಷ ಅನಮೇಶ ಜಮಖಂಡಿ, ತಾಲೂಕಾ ಉಪಾಧ್ಯಕ್ಷರಾದ ಬಸಗೊಂಡಪ್ಪ ತೇಲಿ, ನಾಗಠಾಣ ಹೋಬಳಿ ಅದ್ಯಕ್ಷರಾದ ರಾಮಸಿಂಗ ರಜಪೂತ, ಆಹೇರಿ ಗ್ರಾಮ ಘಟಕದ ಅಧ್ಯಕ್ಷ ಶಂಕರಗೌಡ ಬಿರಾದಾರ, ಮಾತನಾಡಿದರು.
ಈ ವೇಳೆ ೭೦ ಕ್ಕೂ ಅಧಿಕ ನೂತನ ರೈತ ಸಂಘದ ಪದಾಧಿಕಾರಿಗಳಿಗೆ ಶಾಲುದೀಕ್ಷೆ ಮಾಡಿ ಗುರುತಿನ ಚೀಟಿ ವಿತರಣೆ ಮಾಡಿ ಪ್ರಸಾದ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಯೇಸು ಪೂಜಾರಿ, ತಿಪ್ಪಣ್ಣ ನಾಟಿಕಾರ, ಬಸವರಾಜ ಮಸೂತಿ, ತಿಪ್ಪರಾಯ ಬೈರೊಡಗಿ, ಆತ್ಮಾನಂದ ಬೈರೋಡಗಿ, ಶೆಟ್ಟು ಜಾಧವ, ರಾಜಕುಮಾರ ಜಾಧವ, ಬಾವುಸಿಂಗ ಜಾಧವ, ರಾಜು ಜಾಧವ, ರವಿ ರಾಠೋಡ, ಗಣೇಶ ಜಾಧವ, ಅನೀಲ ಜಾಧವ, ಅಶೋಕ ಜಾಧವ, ಸೇರಿದಂತೆ ನೂರಾರು ಪದಾಧಿಕಾರಿಗಳು ಹಾಗೂ ಅನೆಕ ರೈತರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 02, 2026

ಅರಣ್ಯ ಕಾರ್ಮಿಕರಿಗೆ ಪಿಎಫ್, ವಿಮೆ ಒದಗಿಸಲು ಕ್ರಮ :ಮಹೇಶ

ಗ್ರಾಮೀಣ ಜನತೆ ಕಾನೂನಿನ ಜ್ಞಾನ ಹೊಂದಬೇಕು :ನ್ಯಾ. ನಾಗೇಶ

ನಿಷ್ಕಳಂಕ ಸೇವೆ ಸಲ್ಲಿಸುವುದು ಇತರರಿಗೆ ಮಾದರಿ :ಮಹಾಂತೇಶ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 02, 2026
    In ದಿನಪತ್ರಿಕೆ
  • ಅರಣ್ಯ ಕಾರ್ಮಿಕರಿಗೆ ಪಿಎಫ್, ವಿಮೆ ಒದಗಿಸಲು ಕ್ರಮ :ಮಹೇಶ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಜನತೆ ಕಾನೂನಿನ ಜ್ಞಾನ ಹೊಂದಬೇಕು :ನ್ಯಾ. ನಾಗೇಶ
    In (ರಾಜ್ಯ ) ಜಿಲ್ಲೆ
  • ನಿಷ್ಕಳಂಕ ಸೇವೆ ಸಲ್ಲಿಸುವುದು ಇತರರಿಗೆ ಮಾದರಿ :ಮಹಾಂತೇಶ
    In (ರಾಜ್ಯ ) ಜಿಲ್ಲೆ
  • ಕನ್ನಡ ಸಾಹಿತ್ಯ ಲೋಕಕ್ಕೆ ಡಾ.ಚನ್ನಪ್ಪ ಕಟ್ಟಿ ಕೊಡುಗೆ ಅನನ್ಯ
    In (ರಾಜ್ಯ ) ಜಿಲ್ಲೆ
  • ಮೌಲ್ಯಮಾಪನ ಎಡವಟ್ಟು ಪಾಸ್‌ ಆಗಿದ್ದ ವಿದ್ಯಾರ್ಥಿನಿ ಫೇಲ್‌!
    In (ರಾಜ್ಯ ) ಜಿಲ್ಲೆ
  • ಪ್ರಗತಿಯಲ್ಲಿರುವ ನೀರಾವರಿ ಯೋಜನೆಗಳು ಬೇಗ ಪೂರ್ಣಗೊಳಿಸಲು ಸೂಚನೆ
    In (ರಾಜ್ಯ ) ಜಿಲ್ಲೆ
  • ಹಳ್ಳಗಳಿಗೆ ನೀರು ತುಂಬಿಸುವ ಯೋಜನೆ ಇಡೀ ದೇಶಕ್ಕೆ ಮಾದರಿ
    In (ರಾಜ್ಯ ) ಜಿಲ್ಲೆ
  • ಶ್ರೀ ಬಿ.ಎಂ.ಪಾಟೀಲ ಪಬ್ಲಿಕ್ ಸ್ಕೂಲ್ ಗೆ ಮೊದಲ ಮೂರು ರ‌್ಯಾಂಕ್
    In (ರಾಜ್ಯ ) ಜಿಲ್ಲೆ
  • ಬರಿದಾಗುತ್ತಿರುವ ಕೃಷ್ಣಾ ನದಿ :ಕೃಷಿಗೆ ತೀವ್ರ ಸಂಕಷ್ಟ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.